• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ 1.5 ಲಕ್ಷ ಮೌಲ್ಯದ ತಾಳಿ ಸರ ಕಳವು ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Any Mind by Any Mind
May 25, 2021
in ಕರ್ನಾಟಕ
0
ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ 1.5 ಲಕ್ಷ ಮೌಲ್ಯದ ತಾಳಿ ಸರ ಕಳವು ; ಪೊಲೀಸ್ ಠಾಣೆಯಲ್ಲಿ  ದೂರು ದಾಖಲು
Share on WhatsAppShare on FacebookShare on Telegram

ADVERTISEMENT

ಪುಟ್ಟ ಪ್ರವಾಸೀ ಜಿಲ್ಲೆ ಕೊಡಗಿನ ಏಕೈಕ  ಉನ್ನತ ಆಸ್ಪತ್ರೆ ಆಗಿರುವ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ  ಕೋವಿಡ್ ರೋಗಿಗಳ ದೂರು ಇನ್ನೂ ಮುಗಿಯುತ್ತಿಲ್ಲ. ಕಳೆದ ವಾರವಷ್ಟೆ ಇಲ್ಲಿನ ಧನಗಾಹಿ ವೈದ್ಯ ಡಾ ಶಿವ ಕುಮಾರ್  ರೋಗಿಗಳ ಸಂಬಂಧಿಕರಿಂದ  ಚೆನ್ನಾಗಿ ಚಿಕಿತ್ಸೆ ನೀಡಲು ಲಂಚಕ್ಕಾಗಿ ಒತ್ತಾಯಿಸಿ ಪಡೆದುಕೊಂಡಿದ್ದು ಸ್ಟಿಂಗ್ ಆಪರೇಷನ್ ನಲ್ಲಿ ಬಯಲಾಗಿತ್ತು. ಜಿಲ್ಲಾಧಿಕಾರಿಯವರು ತಡ ಮಾಡದೆ ಆತನನ್ನು ಅಮಾನತ್ತುಗೊಳಿಸಿ ಮನೆಗೆ ಕಳಿಸಿದ್ದರು. ಆದರೆ ಇಷ್ಟಾಗಿಯೂ ಇಲ್ಲಿನ ಸಮಸ್ಯೆ ಬಗೆ ಹರಿದಿಲ್ಲ. ಇಲ್ಲಿ ಆಸ್ಪತ್ರೆ ಸಿಬ್ಬಂದಿಗಳ ಬಗ್ಗೆ ಕೇಳಿ ಬಂದಿರುವುದು  ಗಂಭೀರ ಆರೋಪವಾದ ನಿರ್ಲಕ್ಷ್ಯತೆಯಿಂದ  ರೋಗಿ ಸಾವನ್ನಪ್ಪಿರುವ ಘಟನೆ ಮತ್ತು ಮೃತರ ಬೆಲೆ ಬಾಳುವ ವಸ್ತುಗಳ ಕಳ್ಳತನ.  ಈಗಾಗಲೇ ಜಿಲ್ಲೆಯಲ್ಲಿ   298  ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಅದರಲ್ಲೂ  ರಾತ್ರಿ ವೇಳೆಯೇ ಮಡಿಕೇರಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳು ಮೃತಪಟ್ಟಿರುವ ಬಗ್ಗೆ  ಅಮೂಲಾಗ್ರ ತನಿಖೆ ನಡೆಯಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸುತ್ತಿವೆ.

“ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್

ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಫೋನ್ ಕಳ್ಳತನವಾಗಿದ್ದ ಪ್ರಕರಣ ಆಕೆಯ ಮಗಳ ಮನವಿಯಿಂದಾಗಿ ರಾಜ್ಯಾದ್ಯಂತ ಪ್ರಚಾರವಾದ ಬೆನ್ನಲ್ಲೇ  ಇದೇ ಆಸ್ಪತ್ರೆಯಲ್ಲಿ   ಮೃತ ವೃದ್ಧೆಯ ಚಿನ್ನದ ತಾಳಿಯ ಸರವನ್ನೇ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋವಿಡ್ ನಿಂದ ಮೃತಪಟ್ಟ ಕಮಲ ಎಂಬ ವೃದ್ಧೆಯ ಅಂದಾಜು ಒಂದುವರೆ ಲಕ್ಷ ಮೌಲ್ಯದ 25 ಗ್ರಾಂ ತೂಕದ ಚಿನ್ನದ ಸರವನ್ನೇ ದಾದಿಯರು ಕಳ್ಳತನ ಮಾಡಿರುವ ಆರೋಪ ಕೇಳಿ ಬಂದಿದ್ದು ಈ ಕುರಿತು ಸೋಮವಾರ ಪೋಲೀಸ್ ದೂರು ದಾಖಲಾಗಿದೆ.   ಸೋಮವಾರಪೇಟೆ ತಾಲೂಕಿನ ರಸೂಲ್ ಪುರ ಗ್ರಾಮದ ಕಮಲಾ ಅವರನ್ನು  ಕಳೆದ  ಮೇ 1 ರಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ಸಾಮಾನ್ಯ ವಾರ್ಡಿನಲ್ಲೇ ದಾಖಲಾಗಿದ್ದ ಕಮಲ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದರಿಂದ, ಮೇ 2 ರಂದು ಐಸಿಯು ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ದಾದಿಯರು ಕಮಲ ಅವರ ಕೊರಳಿನಲ್ಲಿದ್ದ ಚಿನ್ನದ ತಾಳಿ ಸರವನ್ನು ತೆಗೆದುಕೊಂಡಿದ್ದರು. ಐಸಿಯು ವಾರ್ಡಿನಲ್ಲಿ ಸ್ವಲ್ಪ ಚೇತರಿಸಿಕೊಂಡಿದ್ದ ವೃದ್ಧೆ ಕಮಲ ತನ್ನ ಮಗ ಮೊಣ್ಣಪ್ಪ ಅವರಿಗೆ ಕರೆ ಮಾಡಿ  ತಾಳಿ ಸರವನ್ನು  ದಾದಿಯರು ಪಡೆದುಕೊಂಡಿರುವ ಬಗ್ಗೆ  ತಿಳಿಸಿದ್ದರು.

 ಚಿಕಿತ್ಸೆ ಫಲಕಾರಿ ಆಗದೆ  ಮೇ 19 ರಂದು    ಕಮಲ ಮೃತಪಟ್ಟಿದ್ದರು. 20 ರಂದು ಅಂತ್ಯಕ್ರಿಯೆ ನೆರವೇರಿಸಿದ ಮೊಣ್ಣಪ್ಪ 21 ರಂದು ಮಡಿಕೇರಿ ಆಸ್ಪತ್ರೆಗೆ ಬಂದು ತನ್ನ ತಾಯಿಯ ವಸ್ತುಗಳನ್ನು ಕೇಳಿದ್ದಾರೆ. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಕೇವಲ ಬ್ಯಾಗನ್ನು ಮಾತ್ರ ನೀಡಿದರು. ತನ್ನ ತಾಯಿಯ ಚಿನ್ನದ ಸರವನ್ನು ಕೊಟ್ಟಿಲ್ಲ ಎಂದು ಮೊಣ್ಣಪ್ಪ ಕೋವಿಡ್ ಆಸ್ಪತ್ರೆ ಡೀನ್ ಮತ್ತು ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ನಮ್ಮ ಸಂಪ್ರದಾಯದ ಪ್ರಕಾರ ಗಂಡ ಇರುವಾಗಲೇ ಹೆಂಡತಿ ಕೊರಳಿನಿಂದ ತಾಳಿಯನ್ನು ತೆಗೆಯುವುದಿಲ್ಲ. ಹೀಗಾಗಿ ತಾಯಿಯನ್ನು ಆಸ್ಪತ್ರೆಗೆ ಕಳುಹಿಸುವಾಗ ಚೈನ್ ತೆಗೆಯದೆ ಆಸ್ಪತ್ರೆಗೆ ಕಳುಹಿಸಿದೆವು. ಆದರೆ ಈಗ ತಾಯಿಯ ಚಿನ್ನದ ತಾಳಿಯ ಸರವನ್ನೇ ಕೊಟ್ಟಿಲ್ಲ. ಈಗ ಧಾರ್ಮಿಕ ಕಾರ್ಯಗಳನ್ನು ಮಾಡಲು ತಾಳಿ ಬೇಕಾಗಿದೆ. ಅದನ್ನು ದಯಮಾಡಿ ಕೊಡಿಸಿ ಎಂದು ಅಂಗಲಾಚುತ್ತಿದ್ದಾರೆ.  ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು  ಆಸ್ಪತ್ರೆಯಲ್ಲಿ ಈ ರೀತಿ ಆಗಬಾರದಿತ್ತು. ಇದು ಅತ್ಯಂತ ಅಮಾನವೀಯ ಘಟನೆ. ಈ ಕುರಿತು ಈಗಾಗಲೇ ಆಸ್ಪತ್ರೆಯಲ್ಲಿ ತನಿಖೆ ನಡೆಯುತ್ತಿದೆ. ಎಲ್ಲಾ ವಾರ್ಡುಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. ಒಟ್ಟಿನಲ್ಲಿ ಕೊವಿಡ್ ನಿಂದ ಮೃತಪಟ್ಟವರ ಬೆಲೆ ಬಾಳುವ ವಸ್ತುಗಳು ಕೊವಿಡ್ ಆಸ್ಪತ್ರೆಯಲ್ಲಿ ನಾಪತ್ತೆಯಾಗುತ್ತಿರುವುದು ಎಲ್ಲರೂ ತಲೆತಗ್ಗಿಸುವಂತೆ ಆಗಿದೆ.

 .ಇದರ ಜತೆಗೇ ಇಂದು ಮತ್ತೋರ್ವ ರೋಗಿಯ ಸಂಬಂದಿಕರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಗಂಭೀರ  ಆರೋಪ ಮಾಡಿದ್ದಾರೆ.  ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದರೂ ನಮ್ಮ ಅಣ್ಣನನ್ನು ವೈದ್ಯರೇ ಏನೋ ಮಾಡಿ ಕೊಂದಿದ್ದಾರೆ ಎಂದು ಮೃತ ಸೋಂಕಿತನ ಸಹೋದರ ಮತ್ತು ಆತನ ತಂದೆ ಗಂಭೀರ ಆರೋಪ ಮಾಡಿದ್ದಾರೆ.ತಮ್ಮ ಅಣ್ಣನ ಸಾವಿನ ಸುದ್ದಿ ತಿಳಿದು   ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಗ್ರಾಮದಿಂದ, ಮಡಿಕೇರಿ ಕೋವಿಡ್ ಆಸ್ಪತ್ರೆ ಬಳಿಗೆ ಬಂದಿದ್ದ ಮೃತನ ಸಹೋದರ ಚಂದ್ರು ಮತ್ತು ಆತನ ತಂದೆ ಮಹದೇವ ಬಿಕ್ಕಿ ಬಿಕ್ಕಿ ಅತ್ತು ತಮ್ಮ ಮಗನನ್ನು ಉಳಿಸಿಕೊಡಿ, ತಮ್ಮ ಅಣ್ಣನನ್ನು ಉಳಿಸಿಕೊಡಿ ಎಂದು ಕಣ್ಣೀರು ಸುರಿಸಿದರು.

ಮಡಿಕೇರಿ ಜಿಲ್ಲಾಸ್ಪತ್ರೆಯ ವೈದ್ಯನ ಲಂಚಾವತಾರ ಸ್ಟಿಂಗ್ಆಪರೇಷನ್ನಲ್ಲಿ ಬಯಲು: ವೈದ್ಯನನ್ನು ಅಮಾನತ್ತು ಮಾಡಿದ ಜಿಲ್ಲಾಧಿಕಾರಿ

ಕಳೆದ ಸೋಮವಾರವಷ್ಟೇ ಮಗ ಮಂಜುವಿಗೆ ಜ್ವರ ತೀವ್ರವಾಗಿದೆ ಎಂದು ಕೂಡಿಗೆ ಆಸ್ಪತ್ರೆಯಿಂದ ನೇರವಾಗಿ ಮಡಿಕೇರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಬಳಿಕ ನನ್ನ ಮಗ ಚೇತರಿಸಿಕೊಂಡಿದ್ದ. ನಿತ್ಯವೂ ನಾನು ಆಸ್ಪತ್ರೆ ಬಳಿಗೆ ಬಂದು ನೀರು ಮತ್ತಿತರೆ ಅಗತ್ಯ ವಸ್ತುಗಳನ್ನು ಕೊಟ್ಟು ಹೋಗುತ್ತಿದ್ದೆ. ಆದರೆ ಇದ್ದಕ್ಕಿದ್ದ ಹಾಗೆ ನನ್ನ ಮಗ ಸತ್ತು ಹೋಗಿರುವುದಾಗಿ ವೈದ್ಯರು ಹೇಳುತ್ತಿದ್ದಾರೆ ಎಂದು ಮೃತ ಮಂಜು ಅವರ ತಂದೆ ಮಹದೇವ್ ಗಂಭೀರ ಆರೋಪ ಮಾಡಿದ್ದಾರೆ.ಸಹೋದರ ಚಂದ್ರು ಮಾತನಾಡಿ, ನಮ್ಮ ಅಣ್ಣ ಸಂಪೂರ್ಣ ಗುಣಮುಖನಾಗಿದ್ದ. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ವೈದ್ಯರೇ ನಿನ್ನೆ ಸಂಜೆ ಹೇಳಿದ್ದರು. ಆದರೆ ರಾತ್ರಿ 12 ಗಂಟೆಗೆ ಫೋನ್ ಮಾಡಿ ನಿಮ್ಮ ಅಣ್ಣ ಸತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಆರೋಗ್ಯವಾಗಿದ್ದವರು ಹೇಗೆ ಇದ್ದಕ್ಕಿದ್ದ ಹಾಗೆ ಸಾವನ್ನಪ್ಪುವುದಕ್ಕೆ ಸಾಧ್ಯ. ಆತ ಆರೋಗ್ಯವಾಗಿದ್ದರು, ನಿನಗೆ ಉಸಿರಾಟದ ತೊಂದರೆ ಇದೆ ಎಂದು ನನ್ನನ್ನು ಐಸಿಯು ವಾರ್ಡ್ಗೆ ಹಾಕುತ್ತಿದ್ದಾರೆ ಎಂದು ಅಣ್ಣನೇ ಫೋನ್ ಮಾಡಿ ಹೇಳಿದ್ದ. ಹೀಗಾಗಿ ಅವನ ಸಾವು ಸಹಜ ಸಾವಲ್ಲ ವೈದ್ಯರು ಏನೋ ಮಾಡಿದ್ದಾರೆ ಎಂದು ಅಳಲು ತೋಡಿಕೊಂಡರು.

ಇಲ್ಲಿ ಈಗಾಗಲೇ 10 ಕ್ಕೂ ಹೆಚ್ಚು ಮೃತ ರೋಗಿಗಳ ಮೊಬೈಲ್ ಗಳು ಕಳ್ಳತನವಾಗಿದ್ದು  ಪೋಲೀಸರಿಗೆ ದೂರು ನೀಡಿದ ನಂತರ  ಮಂಗಳವಾರ ಓರ್ವ ಮೊಬೈಲ್ ಕಳ್ಳನನ್ನು ಬಂಧಿಸಿದ್ದು ಒಂದು ಮೊಬೈಲ್ ನ್ನೂ ವಶಪಡಿಸಿಕೊಂಡಿದ್ದಾರೆ.  ಬಂಧಿತನು ಆಸ್ಪತ್ರೆಗೆ ಊಟ ಕೊಡಲು ಬರುತ್ತಿದ್ದು ಮೊಬೈಲ್  ನ್ನು ಕಳ್ಳತನ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ. ಆಸ್ಪತ್ರೆಯ ಬಗ್ಗೆ  ಆಳವಾದ ತನಿಖೆ ನಡೆದರೆ ಇನ್ನಷ್ಟು ಸತ್ಯ ಹೊರಬೀಳಲಿದೆ.

Previous Post

ವ್ಯಾಕ್ಸಿನೇಷನ್: ಬದ್ಧತೆ ಮರೆತ ಮೋದಿ ಸರ್ಕಾರದ ಮಾನ ಉಳಿಸಲು ಹೋಗಿ ಆರ್ಥಿಕ ಹೊರೆ ಹೊತ್ತ ರಾಜ್ಯ ಸರ್ಕಾರ!

Next Post

ಬಲಪಂಥೀಯ ವಿಚಾರಧಾರೆ ಶೇರ್ ಮಾಡಿದ ಗ್ರಾಮೀಣ ವಿಶ್ವವಿದ್ಯಾಲಯ ವಾಟ್ಸ್ ಆಪ್ ಗ್ರೂಪ್ ಸಂದೇಶ -ತಮಗೆ ಸಂಬಂಧಿಸಿಲ್ಲ – ವಿಷ್ಣುಕಾಂತ ಎಸ್. ಚಟಪಲ್ಲಿ ಕುಲಪತಿ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಬಲಪಂಥೀಯ ವಿಚಾರಧಾರೆ ಶೇರ್ ಮಾಡಿದ ಗ್ರಾಮೀಣ ವಿಶ್ವವಿದ್ಯಾಲಯ ವಾಟ್ಸ್ ಆಪ್ ಗ್ರೂಪ್ ಸಂದೇಶ -ತಮಗೆ ಸಂಬಂಧಿಸಿಲ್ಲ  – ವಿಷ್ಣುಕಾಂತ ಎಸ್. ಚಟಪಲ್ಲಿ ಕುಲಪತಿ

ಬಲಪಂಥೀಯ ವಿಚಾರಧಾರೆ ಶೇರ್ ಮಾಡಿದ ಗ್ರಾಮೀಣ ವಿಶ್ವವಿದ್ಯಾಲಯ ವಾಟ್ಸ್ ಆಪ್ ಗ್ರೂಪ್ ಸಂದೇಶ -ತಮಗೆ ಸಂಬಂಧಿಸಿಲ್ಲ - ವಿಷ್ಣುಕಾಂತ ಎಸ್. ಚಟಪಲ್ಲಿ ಕುಲಪತಿ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada