• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಾರದ ಪ್ರಕರಣ: ಟಿಎಂಸಿಯ ನಾಯಕರಿಗೆ ಮಧ್ಯಂತರ ಜಾಮೀನು ನೀಡಿದ ಕಲ್ಕತ್ತಾ ಹೈಕೋರ್ಟ್

Any Mind by Any Mind
May 28, 2021
in ದೇಶ
0
ನಾರದ ಪ್ರಕರಣ: ಟಿಎಂಸಿಯ ನಾಯಕರಿಗೆ ಮಧ್ಯಂತರ ಜಾಮೀನು ನೀಡಿದ ಕಲ್ಕತ್ತಾ ಹೈಕೋರ್ಟ್
Share on WhatsAppShare on FacebookShare on Telegram

ಕಲ್ಕತ್ತಾ ಹೈಕೋರ್ಟ್’ನ ಐದು ಸದಸ್ಯರ ಪೀಠವು ವಿವಾದಿತ ನಾರದ ಪ್ರಕರಣಕ್ಕೆ ಸಂಬಂಧಪಟ್ಟ ಟಿಎಂಸಿಯ ಪ್ರಮುಖ ನಾಲ್ಕು ನಾಯಕರಿಗೆ ಮಧ್ಯಂತರ ಜಾಮೀನು ನೀಡಿದೆ. ಜಮೀನು ಪಡೆದವರಲ್ಲಿ ಇಬ್ಬರು ಪಶ್ಚಿಮ ಬಂಗಾಳದ ಸಚಿವರು, ಒಬ್ಬ ಶಾಸಕ ಹಾಗೂ ಕೊಲ್ಕತ್ತಾದ ಮಾಜಿ ಮೇಯರ್ ಸೇರಿದ್ದಾರೆ.

ADVERTISEMENT

ರೂ. ಎರಡು ಲಕ್ಷ ಮೌಲ್ಯದ ಖಾಸಗಿ ಬಾಂಡ್ ನೀಡಿ ಜಾಮೀನು ಪಡೆಯಲು ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿದೆ. ಇನ್ನು ಈ ಪ್ರಕರಣದ ಕುರಿತಾಗಿ ಸಿಬಿಐ ತನ್ನ ತನಿಖೆ ಮುಂದುವರೆಸಿದ್ದು, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಟಿಎಂಸಿ ನಾಯಕರು ಹಾಜರಾಗಲಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆಯನ್ನು ಕೊಡುವುದರಿಂದ ನಿರ್ಬಂಧವನ್ನೂ ಹೇರಲಾಗಿದೆ.

ಮೇ 17ರಂದು ನಾರದ ಸ್ಟಿಂಗ್ ಟೇಪ್ ಪ್ರಕರಣದಲ್ಲಿ ಟಿಎಂಸಿ ಮುಖಂಡರಾದ ಫಿರ್ಹಾದ್ ಹಕೀಮ್, ಮದನ್ ಮಿತ್ರಾ, ಸುಬ್ರತಾ ಮುಖರ್ಜಿ ಮತ್ತು ಸೋವನ್ ಚಟರ್ಜಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಅರ್ಜಿಯ ವಿಚಾರಣೆಯನ್ನು ವಿಭಾಗೀಯ ಪೀಠದಿಂದ ಉನ್ನತ ಪೀಠಕ್ಕೆ ಹಸ್ತಾಂತರಿಸಿದ್ದರಿಂದ ಮೇ ೧೯ರಿಂದ ಇವರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು.

ಈ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಸಚಿವರು, ಶಾಸಕರು ಮತ್ತು ಸಂಸದರ ಹೆಸರು ಕೂಡಾ ಕೇಳಿ ಬಂದಿತ್ತು. ಟಿಎಂಸಿ ಪಕ್ಷದೊಳಗೆ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಈ ಸ್ಟಿಂಗ್ ಆಪರೇಷನ್ನಲ್ಲಿ ಹಲವು ನಾಯಕರು ಸಿಲುಕಿಕೊಂಡಿದ್ದರು.

56 ಗಂಟೆಗಳ ಈ ವೀಡಿಯೋವನ್ನು 2016ರಲ್ಲಿ ತೆಹೆಲ್ಕಾ ಬಹಿರಂಗಪಡಿಸಿತ್ತು. ಈ ವೀಡಿಯೋದಲ್ಲಿ ಈಗ ಬಿಜೆಪಿ ಶಾಸಕರಾಗಿರುವ ಸುವೆಂಧು ಅಧಿಕಾರಿ, ಮುಕುಲ್ ರಾಯ್, ಟಿಎಂಸಿ ನಾಯಕರಾದ ಸೌಗತಾ ರಾಯ್, ಕಾಕೋಲಿ ಘೋಷ್, ದಸ್ತಿದಾರ್, ಪ್ರಸೂನ್ ಬ್ಯಾನರ್ಜಿ, ಅಪರೂಪ ಪೊದ್ದಾರ್, ಸುಲ್ತಾನ್ ಅಹ್ಮದ್ (ಈಗ ನಿಧನರಾಗಿದ್ದಾರೆ), ಮದನ್ ಮಿತ್ರಾ, ಸೋವನ್ ಚಟರ್ಜಿ, ಫಿರ್ಹಾದ್ ಹಕೀಂ, ಸುಬ್ರತಾ ಮುಖರ್ಜಿ ಮತ್ತು ಈಗ ಅಮಾನತಿನಲ್ಲಿರುವ ಐಪಿಎಸ್ ಅಧಿಕಾರಿ ಹೆಚ್ ಎಂ ಎಸ್ ಮಿರ್ಜಾ ಅವರು ಕಾಣಿಸಿಕೊಂಡಿದ್ದರು.

ಈ ಪ್ರಕರಣ ಬಹಿರಂಗವಾಗುತ್ತಿದ್ದಂತೆಯೇ, ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಕೋಲಾಹಲ ಉಂಟುಮಾಡಿತ್ತು. ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ಚುನಾವಣೆಯ ನಂತರ ಸಿಬಿಐ ತನ್ನ ತನಿಖೆಯನ್ನು ಚುರುಕುಗೊಳಿಸಿ ಟಿಎಂಸಿ ನಾಯಕರನ್ನು ಬಂಧಿಸಿತ್ತು. ಈ ವೇಳೆ ಕೇಂದ್ರ ಸರ್ಕಾರವು ಸಿಬಿಐ ಅನ್ನು ದಾಳವಾಗಿ ಉಪಯೋಗಿಸಿ ಟಿಎಂಸಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ ಎಂಬ ಆರೋಪಗಳೂ ಕೇಳಿ ಬಂದಿದ್ದವು.

ಇದಕ್ಕೆ ಪೂರಕವಾಗಿ ಸ್ಟಿಂಗ್ ಆಪರೇಷನ್ ನಡೆಸಿದಂತಹ ಮ್ಯಾಥ್ಯೂ ಸ್ಯಾಮುಯೆಲ್ ಅವರು ಹೇಳಿಕೆ ನಿಡಿ, ಇದರಲ್ಲಿ ಬಿಜೆಪಿ ನಾಯಕರ ಮೇಲೆಯೂ ಆರೋಪ ಹೊರಿಸಲಾಗಿದೆ ಅವರ ಬಂಧನ ಯಾಕಾಗಿಲ್ಲ ಎಂದು ಪ್ರಶ್ನಿಸಿದ್ದರು.

Previous Post

ಕೋವಿಡ್‌ ತ್ಯಾಜ್ಯ ವಿಲೇವಾರಿ: ಸಂಸ್ಕರಣಾ ಘಟಕಗಳಿಗೆ ಹಣ ಪಾವತಿಸದ ಸರ್ಕಾರ – ಕಾರ್ಯಾಚರಣೆ ಸ್ಥಗಿತಕ್ಕೆ ನಿರ್ಧಾರ

Next Post

ಕರೋನ ನಿಯಮ ಉಲ್ಲಂಘಿಸಿದ ಪ್ರಭಾವಿ ರಾಜಕಾರಣಿಗಳಿಗೊಂದು ನ್ಯಾಯ, ಜನಸಾಮಾನ್ಯರಿಗೊಂದು ನ್ಯಾಯ!

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
Next Post
ಕರೋನ ನಿಯಮ ಉಲ್ಲಂಘಿಸಿದ ಪ್ರಭಾವಿ ರಾಜಕಾರಣಿಗಳಿಗೊಂದು ನ್ಯಾಯ, ಜನಸಾಮಾನ್ಯರಿಗೊಂದು ನ್ಯಾಯ!

ಕರೋನ ನಿಯಮ ಉಲ್ಲಂಘಿಸಿದ ಪ್ರಭಾವಿ ರಾಜಕಾರಣಿಗಳಿಗೊಂದು ನ್ಯಾಯ, ಜನಸಾಮಾನ್ಯರಿಗೊಂದು ನ್ಯಾಯ!

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada