• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಜೆಪಿಯಿಂದ ಟಿಎಂಸಿ ಎಡೆಗೆ: ಪಶ್ಚಿಮ ಬಂಗಾಳದಲ್ಲಿ ‘ಘರ್ ವಾಪ್ಸಿ’ ಪರ್ವ ಆರಂಭ

Any Mind by Any Mind
June 1, 2021
in ದೇಶ
0
ಬಿಜೆಪಿಯಿಂದ ಟಿಎಂಸಿ ಎಡೆಗೆ: ಪಶ್ಚಿಮ ಬಂಗಾಳದಲ್ಲಿ ‘ಘರ್ ವಾಪ್ಸಿ’ ಪರ್ವ ಆರಂಭ

Govt of West Bengal

Share on WhatsAppShare on FacebookShare on Telegram

ಪಶ್ಚಿಮ ಬಂಗಾಳ ಚುನಾವಣೆ ಈಗ ಮುಗಿದುಹೋದ ಅಧ್ಯಾಯ. ಈ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಐತಿಹಾಸಿಕ ಜಯ ದಾಖಲಿಸಿದ ನಂತರ, ಪಕ್ಷ ತೊರೆದಿದ್ದ ಹಲವು ಜನ ನಾಯಕರು ವಾಪಸ್ಸು ಬರುವ ಇಚ್ಚೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಚುನಾವಣೆಗೂ ಮುಂಚೆ ಸಾಲು ಸಾಲಾಗಿ ಟಿಎಂಸಿ ನಾಯಕರು ಪಕ್ಷ ತೊರೆದು ಬಿಜೆಪಿ ಸೇರಿದಾಗ ಈ ಬಾರಿ ಟಿಎಂಸಿ ಪಾತಾಳಕ್ಕೆ ಕುಸಿಯುತ್ತದೆ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಎಲ್ಲ ಅಡೆತಡೆಗಳನ್ನು ಮಿರಿ ಅದ್ಧೂರಿ ಜಯ ಸಾಧಿಸಿದ್ದ ದೀದಿ ನೇತೃತ್ವದ ಟಿಎಂಸಿ ತಮ್ಮ ಬದ್ದ ವೈರಿ ಬಿಜೆಪಿ ವಿರುದ್ದ ನೈತಿಕ ಗೆಲುವು ಸಾಧಿಸಿದ್ದರು. 292 ರಲ್ಲಿ 213 ಸ್ಥಾನಗಳನ್ನು ಗೆಲ್ಲುವ ಮೂಲಕ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

ಈಗ, ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಪಶ್ಚಿಮ ಬಂಗಾಳದ ನಾಯಕರು, ‘ಘರ್ ವಾಪ್ಸಿ’ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮತ್ತೆ ಟಿಎಂಸಿ ಸೇರಲು ಬಯಸಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರವನ್ನು ಬರೆಯುತ್ತಿದ್ದಾರೆ.

ಮಾಜಿ ಶಾಸಕಿಯಾಗಿರುವ ಸೊನಾಲಿ ಗುಹಾ ಅವರು, ಟಿಎಂಸಿ ತೊರೆದಿರುವುದು ‘ನೀರಿನಿಂದ ಹೊರ ಬಿದ್ದ ಮೀನಿ’ನಂತೆ ಭಾಸವಾಗುತ್ತಿದೆ ಎಂದಿದ್ದಾರೆ. ಇನ್ನೊಬ್ಬ ನಾಯಕ ದೀಪೆಂಧು ಬಿಸ್ವಾಸಸ್ ಅವರು ಮತ್ತೆ ತೃಣಮೂಲ ಕಾಂಗ್ರೆಸ್ ಬಾವುಟವನ್ನು ಹಿಡಿಯುವ ಇಚ್ಚೆ ವ್ಯಕ್ತಪಡಿಸಿದ್ದಾರೆ.

ಕಳೆದ ದೀದಿ ಸರ್ಕಾರದಲ್ಲಿ ಸಚಿವರಾಗಿದ್ದ ರಾಜಿಬ್ ಬ್ಯಾನರ್ಜಿ ಅವರು ಕೂಡಾ ಪಕ್ಷಕ್ಕೆ ಮರಳುವ ಬಯಕೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತಾಗಿ NDTVಗೆ ಮಾಹಿತಿ ನೀಡಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರು, ಕೇವಲ ನಾಯಕರಷ್ಟೇ ಅಲ್ಲ, 7-8 ಶಾಸಕರು, 3-4 ಸಂಸದರು ಬಿಜೆಪಿಯಿಂದ ಟಿಎಂಸಿ ಸೇರಲು ಇಚ್ಚೆ ವ್ಯಕ್ತಪಡಿಸಿದ್ದಾರೆ, ಎಂದಿದ್ದಾರೆ. ಆದರೆ ಈ ಕುರಿತಾಗಿ ಪಕ್ಷದ ತೀರ್ಮಾನ ಏನು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.

“ನಾವು ಪಕ್ಷದ ನಿಷ್ಟಾವಮತ ಕಾರ್ಯಕರ್ತರ ಕುರಿತಾಗಿಯೂ ಯೋಚಿಸಬೇಕಿದೆ. ಚುನಾವಣೆಗೆ ಕೆಲವೇ ವಾರಗಳಿದ್ದಾಗ ಕೆಲವು ನಾಯಕರು ಪಕ್ಷ ತೊರೆದಿದ್ದರು. ಆದರೂ, ನಮ್ಮ ಕಾರ್ಯಕರ್ತರು ಹಾಗು ನಾಯಕರು ಜಯ ಸಾಧಿಸುವಲ್ಲಿ ಸಫಲರಾಗಿದ್ದರು,” ಎಂದು ಘೋಷ್ ಹೇಳಿದ್ದಾರೆ.

ಅಚ್ಚರಿಯ ವಿಚಾರವೇನೆಂದರೆ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಮಾಜಿ ಟಿಎಂಸಿ ನಾಯಕ ಮುಕುಲ್ ರಾಯ್ ಅವರು ಕೂಡಾ ಟಿಎಂಸಿಗೆ ವಾಪಾಸು ಬರಲು ಪ್ರಯತ್ನಿಸುತ್ತಾ ಇದ್ದಾರೆ ಎಂಬ ಕುರಿತು ವದಂತಿಗಳು ಹಬ್ಬಿವೆ.

ಈ ಬೆಳವಣಿಗೆಗಳನ್ನು ಟೀಕಿಸಿ ಮಾತನಾಡಿರುವ ಬಿಜೆಪಿ ನಾಯಕ ಶಮಿಕ್ ಭಟ್ಟಾಚಾರ್ಯ ಅವರು, ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ಭಾವನೆ ಇತ್ತು. ಆ ಸಂದರ್ಭದಲ್ಲಿ ಎಲ್ಲರೂ ಅಳುತ್ತಾ ಬಿಜೆಪಿ ಸೇರಿದ್ದರು. ಆದರೆ, ಈಗ ನಗುತ್ತಾ ಬಿಜೆಪಿ ತೊರೆಯುತ್ತಿದ್ದಾರೆ. ಇವರ ಕುಟಿಲ ಯೋಚನೆಗಳನ್ನು ಜನರು ಅರ್ಥ ಮಾಡಿಕೊಳ್ಳುತ್ತಾರೆ, ಎಂದು ಹೇಳಿದ್ದಾರೆ.

Previous Post

‘ಬೋನಸ್ ಪಿರಿಯೆಡ್’ನಲ್ಲಿ ರಕ್ಷಣಾತ್ಮಕ ಆಟ ಆಡುತ್ತಿರುವ ಯಡಿಯೂರಪ್ಪ

Next Post

‘ಮಾಧ್ಯಮ’ ಸ್ವಾತಂತ್ತ್ಯದ ಹಿನ್ನೆಲೆಯಲ್ಲಿ ‘ದೇಶದ್ರೋಹ’ ಕಾನೂನಿನ ಮರು ವ್ಯಾಖ್ಯಾನದತ್ತ ಹೆಜ್ಜೆಯಿಟ್ಟ ಸುಪ್ರೀಂ

Related Posts

Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
0

ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ, ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವರಿಗೆ ಅಗತ್ಯ ಭೂ ಮಂಜೂರು ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ...

Read moreDetails

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025

Priyank Kharge: ಬೆಂಗಳೂರು ಟೆಕ್ ಶೃಂಗಸಭೆ 2025: ವಿಸಿಗಳೊಂದಿಗೆ ಸಚಿವ ಖರ್ಗೆ ಸಭೆ..!!

October 29, 2025
Next Post
‘ಮಾಧ್ಯಮ’ ಸ್ವಾತಂತ್ತ್ಯದ ಹಿನ್ನೆಲೆಯಲ್ಲಿ ‘ದೇಶದ್ರೋಹ’ ಕಾನೂನಿನ ಮರು ವ್ಯಾಖ್ಯಾನದತ್ತ ಹೆಜ್ಜೆಯಿಟ್ಟ ಸುಪ್ರೀಂ

‘ಮಾಧ್ಯಮ’ ಸ್ವಾತಂತ್ತ್ಯದ ಹಿನ್ನೆಲೆಯಲ್ಲಿ ‘ದೇಶದ್ರೋಹ’ ಕಾನೂನಿನ ಮರು ವ್ಯಾಖ್ಯಾನದತ್ತ ಹೆಜ್ಜೆಯಿಟ್ಟ ಸುಪ್ರೀಂ

Please login to join discussion

Recent News

Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್
Top Story

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada