• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗೋವುಗಳನ್ನು ಸಾವಿನ ದವಡೆಗೆ ದೂಡಿದ ಇದೆಂಥ ಗೋರಕ್ಷಣೆ? ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನೆ

Any Mind by Any Mind
June 9, 2021
in ಕರ್ನಾಟಕ
0
ಗೋವುಗಳನ್ನು ಸಾವಿನ ದವಡೆಗೆ ದೂಡಿದ ಇದೆಂಥ ಗೋರಕ್ಷಣೆ? ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನೆ
Share on WhatsAppShare on FacebookShare on Telegram

ADVERTISEMENT

 ಗೋವುಗಳಲ್ಲಿ ಕಾಲುಬಾಯಿ ಜ್ವರ ಕಾಡಿಸಿಕೊಂಡ ಹಿನ್ನೆಲೆ, ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಗರಂ ಆಗಿದ್ದಾರೆ.   ಗೋ‘ ರಕ್ಷಣೆ ಬಗ್ಗೆ ಬಿಜೆಪಿ ಹಾದಿಬೀದಿಯಲ್ಲಿ ಅರಚುತ್ತದೇ ಹೊರತು, ಗೋವುಗಳ ರಕ್ಷಣೆ ಮಾಡುವುದಿಲ್ಲ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಹಸುಗಳಲ್ಲಿ ಕಾಣಿಸಿಕೊಳ್ಳುವ ಗಂಭೀರ ಕಾಯಿಲೆಯಾದ ಕಾಲುಬಾಯಿ ಜ್ವರದ–FMD ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸಿಯೇ ಇಲ್ಲ. ರಾಜ್ಯ ಸರ್ಕಾರ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಂಕ್ರಾಮಿಕ ರೋಗ ಕಾಲುಬಾಯಿ ಜ್ವರ ಭೀಕರ ಕಾಯಿಲೆ. ಅದು ಬಹುಬೇಗ ಹರಡುತ್ತದೆ. ಹಸುಗಳು ನರಳಾಡಿ ಸಾಯುತ್ತವೆ. ಗೋವುಗಳ ಪಾಡು ನೋಡಲಾಗದೇ ರೈತ ಕೊರಗಿ ಕುಗ್ಗಿಹೋಗುತ್ತಾನೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಲಸಿಕಾ ಅಭಿಯಾನ ನಡೆಸದೇ ಇರುವುದೇ ಇದಕ್ಕೆ ಕಾರಣ ಎಂಬ ಅಂಶ ಬಯಲಾಗಿದೆ ಎಂದಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ರಾಸುಗಳಿಗೆ ಲಸಿಕೆ ಅಭಿಯಾನ ನಡೆಸಬೇಕಿತ್ತು. ಆದರೆ, ಕೋವಿಡ್‌ 19 ಕಾರಣದಿಂದ ಲಸಿಕೆ ಹಾಕಿಲ್ಲ ಎಂದು ಪಶುವೈದ್ಯರು ಹೇಳಿದ್ದಾರೆ. ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋವಧೆಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾ. ಮತ್ತು ರಾಮನಗರ ಜಿಲ್ಲೆಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿದೆ. ಹೈನೋದ್ಯಮವನ್ನು ಕಂಗೆಡಿಸುವ ಈ ಕಾಯಿಲೆ ಸಾಂಕ್ರಾಮಿಕವಾಗುವುದನ್ನು ತಡೆಯಲು ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು. ಮುಂದೆ ಜೂನ್‌ನಲ್ಲಿ ನಡೆಯಲಿರುವ ಲಸಿಕೆ ಅಭಿಯಾನವನ್ನು ಯಾವ ಕಾರಣಕ್ಕೂ ತಪ್ಪಿಸದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕಾಯಿಲೆಗೆ ಬಲಿಯಾಗಿರುವ ರಾಸುಗಳ ಮಾಲೀಕರಿಗೆ ಸರ್ಕಾರ ಪರಿಹಾರ ನೀಡಲಿ. ಹಿಂದೆ ಬಿಜೆಪಿಯೇ ಅಧಿಕಾರದಲ್ಲಿದ್ದಾಗಲೂ ಕಾಲುಬಾಯಿ ಜ್ವರಬಂದಿತ್ತು. ಆಗ ನಾನೇ ವೈಯಕ್ತಿಕವಾಗಿ ರೈತರಿಗೆ ಪರಿಹಾರ ಹಣ ನೀಡಿದ್ದೆ. ಅದರಿಂದ ಎಚ್ಚೆತ್ತ ಸರ್ಕಾರ ತಾನೂ ಪರಿಹಾರ ನೀಡಿತ್ತು. ಗೋವುಗಳ ಬಗ್ಗೆ ದೊಡ್ಡದಾಗಿ ಮಾತಾಡುವ ಬಿಜೆಪಿ ಈಗ ಗೋವುಗಳ ರಕ್ಷಣೆ ಮಾಡಲಿ ಎಂದು ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Previous Post

ಕೊರೋನಾ ನಡುವೆ ಪಂಚ ರಾಜ್ಯ ಚುನಾವಣೆ ಗೆಲುವೇ ಬಿಜೆಪಿ ಆದ್ಯತೆ!

Next Post

ಜಿಲ್ಲಾಧಿಕಾರಿ ರೋಹಿಣಿ ಮತ್ತು ಕಮೀಷನರ್‌ ಶಿಲ್ಪಾ ಜಗಳಕ್ಕೆ ಕಾರಣವೇನು ಗೊತ್ತಾ?

Related Posts

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
0

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....

Read moreDetails
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
Next Post
ಜಿಲ್ಲಾಧಿಕಾರಿ ರೋಹಿಣಿ ಮತ್ತು ಕಮೀಷನರ್‌ ಶಿಲ್ಪಾ ಜಗಳಕ್ಕೆ ಕಾರಣವೇನು ಗೊತ್ತಾ?

ಜಿಲ್ಲಾಧಿಕಾರಿ ರೋಹಿಣಿ ಮತ್ತು ಕಮೀಷನರ್‌ ಶಿಲ್ಪಾ ಜಗಳಕ್ಕೆ ಕಾರಣವೇನು ಗೊತ್ತಾ?

Please login to join discussion

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada