• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರೈತರಿಗೆ ಬೀಜ, ಗೊಬ್ಬರವನ್ನು ಉಚಿತವಾಗಿ ನೀಡಬೇಕು -ಸಿದ್ದರಾಮಯ್ಯ ಆಗ್ರಹ

Any Mind by Any Mind
June 5, 2021
in ಕರ್ನಾಟಕ
0
ರೈತರಿಗೆ ಬೀಜ, ಗೊಬ್ಬರವನ್ನು ಉಚಿತವಾಗಿ ನೀಡಬೇಕು -ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಸರ್ಕಾರದ ನೀತಿಗಳು ಮತ್ತು ಕೋವಿಡ್ ಮುಂತಾದ ಕಾರಣಗಳಿಂದಾಗಿ ಇಂದು ರೈತರ ಬಳಿ ಬಿತ್ತನೆ ಚಟುವಟಿಕೆಗಳಿಗೆ ಕೈಯಲ್ಲಿ ಹಣವಿಲ್ಲದಂತಾಗಿದೆ. ಹಾಗಾಗಿ ರೈತರಿಗೆ ಬೀಜ, ಗೊಬ್ಬರವನ್ನು ಉಚಿತವಾಗಿ ನೀಡಲು ಕ್ರಮವಹಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

ಪತ್ರದ ಮುಖ್ಯಾಂಶಗಳು :-
ಈ ವರ್ಷ ಕೇವಲ ಶೇ. 19, ಅಂದರೆ 410 ಕ್ವಿಂಟಾಲ್ ಹೆಸರು ಕಾಳು ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಿಗೆ ವಿತರಣೆ ಮಾಡಲಾಗಿದೆ. ಕಳೆದ ವರ್ಷ ತುಮಕೂರಿಗೆ 851 ಕ್ವಿಂಟಾಲ್ ಕಾಳನ್ನು ವಿತರಿಸಿದ್ದರೆ ಈ ವರ್ಷ ಕೇವಲ 90 ಕ್ವಿಂಟಾಲ್ ವಿತರಿಸಲಾಗಿದೆ. ಹಾಸನಕ್ಕೆ 618 ಕ್ವಿಂಟಾಲಿಗೆ ಬದಲಾಗಿ 87.5 ಕ್ವಿಂಟಾಲ್, ಮೈಸೂರಿಗೆ 418 ಕ್ವಿಂಟಾಲ್ ಬೇಡಿಕೆಗೆ ಬದಲಾಗಿ 165.50, ಚಾಮರಾಜನಗರಕ್ಕೆ 222 ಕ್ವಿಂಟಾಲಿನ ಬದಲು 67.5 ಕ್ವಿಂಟಾಲ್ ನೀಡಲಾಗಿದೆ. ಇದನ್ನು ದ್ರೋಹವೆನ್ನದೆ ಇನ್ನು ಯಾವ ಭಾಷೆಯಲ್ಲಿ ಹೇಳಬೇಕು?

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಕೂಡಲೇ ಸಾಲ ವಿತರಣೆ ಚಟುವಟಿಕೆಗಳನ್ನು ಆರಂಭಿಸಬೇಕು. ಹೆಸರು, ಉದ್ದು, ಅಲಸಂಡೆ, ತೊಗರಿ ಮುಂತಾದ ದ್ವಿದಳ ಧಾನ್ಯಗಳು ಹಾಗೂ ಸೋಯಾ, ಶೇಂಗಾ ಮುಂತಾದ ಎಣ್ಣೆ ಬೀಜಗಳನ್ನು ಹೇಗಾದರೂ ಮಾಡಿ ಸಂಗ್ರಹಿಸಿ ಬೇಡಿಕೆ ಇದ್ದಷ್ಟು ನೀಡಲು ಕೂಡಲೇ ಸಮರೋಪಾದಿಯಲ್ಲಿ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ವರ್ಷದ ಪೂರ್ವ ಮುಂಗಾರಿನಲ್ಲಿ ಮಳೆಯ ಪ್ರಮಾಣವೂ ಕಡಿಮೆಯಾಗಿಲ್ಲ. ಕಳೆದ ಬಾರಿಗೆ ಹೋಲಿಸಿದರೆ ಸರಾಸರಿಗಿಂತ ಶೇ. 15-20 ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಸರ್ಕಾರ ಬಿತ್ತನೆ ಬೀಜ ಸರಬರಾಜು ಮಾಡದೆ ತೊಂದರೆ ಮಾಡಿದೆ. ನನಗಿರುವ ಮಾಹಿತಿಯ ಪ್ರಕಾರ ಈ ವರ್ಷ ಬೇಡಿಕೆಯನ್ನು ಅಂದಾಜು ಮಾಡದೆ, ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜವನ್ನು ಸಂಗ್ರಹಣೆ ಮಾಡಿಕೊಳ್ಳದೆ ಮೈಮರೆಯಲಾಗಿದೆ. ಕಡೆಗೆ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಳೆದ ವರ್ಷ ಬಿತ್ತನೆ ಬೀಜ ಪಡೆದ ರೈತರಿಗೆ ಈ ವರ್ಷ ನೀಡಲಾಗದು ಎಂದು ರೈತ ಸಂಪರ್ಕ ಕೇಂದ್ರಗಳಲ್ಲಿ ಹೇಳಿ ಕಳಿಸಿದ್ದಾರೆ. ಕೃಷಿ ಇಲಾಖೆಯೂ ಸಹ ಸುತ್ತೋಲೆಗಳನ್ನು ಹೊರಡಿಸಿದೆ.

ಈಗ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿತ್ತನೆ ಕೆಲಸಗಳು ಪ್ರಾರಂಭವಾಗುತ್ತವೆ. ಅಲ್ಲಿಗೂ ಸಹ ಸಾಕಷ್ಟು ಪ್ರಮಾಣದ ಬಿತ್ತನೆ ಕಾಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಬರುತ್ತಿವೆ.ನನಗೆ ಇರುವ ಮಾಹಿತಿ ಪ್ರಕಾರ ಕೃಷಿ ಇಲಾಖೆ 8391 ಕ್ವಿಂಟಾಲಿಗೆ ಬದಲು ಕೇವಲ 5000 ರಿಂದ 5500 ಕ್ವಿಂಟಾಲ್ ಹೆಸರು ಕಾಳನ್ನು ವಿತರಿಸಲು ಈಗ ಹೊರಟಿದೆ. ಇದು ಸರಿಯಾದ ಕ್ರಮವಲ್ಲ.

ಇದೆಲ್ಲದರಿಂದ ಆಗುವ ಪರಿಣಾಮಗಳೇನು? ರೈತರಿಗೆ ಸಮರ್ಪಕ ಬಿತ್ತನೆ ಬೀಜ ಸಿಗದೆ ಬಿತ್ತನೆ ಮಾಡದಿದ್ದರೆ ಅಥವಾ ರೈತರು ತಮ್ಮ ಬಳಿ ಇದ್ದ ಗುಣಮಟ್ಟವಿಲ್ಲದ ಬೀಜಗಳನ್ನು ಬಿತ್ತನೆ ಮಾಡಿದರೆ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಇದರಿಂದ ರೈತರಿಗೆ ಆದಾಯ ಖೋತಾ ಆಗುತ್ತದೆ. ವಿದೇಶಗಳಿಂದ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತದೆ. ಕಾಳುಗಳನ್ನು ಬಳಸುವ ಗ್ರಾಹಕರಿಗೆ ಸುಲಭದ ದರದಲ್ಲಿ ಕೈಗೆಟುಕದೆ ದ್ವಿದಳ ಧಾನ್ಯಗಳ ಬಳಕೆಯನ್ನು ಕಡಿಮೆ ಮಾಡಲಾರಂಭಿಸುತ್ತಾರೆ. ಇದರಿಂದ ಒಟ್ಟಾರೆ ರಾಷ್ಟ್ರದ ಜನರ ಆರೋಗ್ಯದ ಮಟ್ಟ ಕುಸಿತವಾಗುತ್ತದೆ.

ನಿಜವಾದ ರಾಷ್ಟ್ರಪ್ರೇಮವೆಂದರೆ ತನ್ನ ಜನರಿಗೆ ಉತ್ತಮ ಆಹಾರವನ್ನು ನೀಡಿ ಸದೃಢರಾಗಿಸುವುದೂ ಹೌದಲ್ಲವೆ? ಕೇವಲ ಬಾಯಿ ಮಾತಿನಲ್ಲಿ ರಾಷ್ಟ್ರಪ್ರೇಮದ ಮಾತನಾಡಿ ಅದಾನಿ, ಧಮಾನಿ, ಅಂಬಾನಿಗಳ ಕೈಗೆ ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ವಿತರಣೆಯನ್ನು ಕೊಟ್ಟು, ಅವರಿಗೆ ಜನರನ್ನು ಹುರಿದು ಮುಕ್ಕಲು ಬಿಟ್ಟು ಜನರ ಬಳಿ ಇರುವ ಬಿಡಿಗಾಸುಗಳನ್ನು ಲೂಟಿ ಹೊಡೆಯಲು ಅವಕಾಶ ಮಾಡಿಕೊಟ್ಟು ಹಸಿರು ಶಾಲನ್ನು ಹೆಗಲ ಮೇಲೆ ಹಾಕಿಕೊಂಡರೆ ಅದು ರೈತ ಪ್ರೇಮವಾಗುತ್ತದೆಯೇ? ವೇಷಗಳನ್ನು ಧರಿಸಿ ಘೋಷಣೆಗಳನ್ನು ಕೂಗಿದರೆ ಅದು ರಾಷ್ಟ್ರಪ್ರೇಮವಾಗುತ್ತದೆಯೇ? ಸುಳ್ಳು ಘೋಷಣೆಗಳ ಕೆಸರಿನಲ್ಲಿ ಮುಳುಗಿಸಿ ಜನರನ್ನು ಭೀಕರ ಶೋಷಣೆ ಮಾಡುವುದರಿಂದ ದೇಶ ಪ್ರಗತಿ ಹೊಂದಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

Previous Post

ಜಿಲ್ಲಾಧಿಕಾರಿ ರೋಹಿಣಿ ಮತ್ತು ಕಮೀಷನರ್‌ ಶಿಲ್ಪಾ ಜಗಳಕ್ಕೆ ಕಾರಣವೇನು ಗೊತ್ತಾ?

Next Post

ಪಾಲಿಕೆ ಆಯುಕ್ತರ ರಾಜೀನಾಮೆಯ ಹಿಂದಿದ್ಯಾ ಭೂ ಮಾಫಿಯಾ ಸಂಚು ಸಂಚು..?

Related Posts

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
0

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....

Read moreDetails
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
Next Post
ಪಾಲಿಕೆ ಆಯುಕ್ತರ ರಾಜೀನಾಮೆಯ ಹಿಂದಿದ್ಯಾ ಭೂ ಮಾಫಿಯಾ ಸಂಚು ಸಂಚು..?

ಪಾಲಿಕೆ ಆಯುಕ್ತರ ರಾಜೀನಾಮೆಯ ಹಿಂದಿದ್ಯಾ ಭೂ ಮಾಫಿಯಾ ಸಂಚು ಸಂಚು..?

Please login to join discussion

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada