• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆಕ್ಸಿಜನ್‌ ಸರಬರಾಜು ಕುರಿತ ಐದು ಆಡಿಯೋ ಕ್ಲಿಪ್ಪಿಂಗ್ ಕುರಿತು ಸಾಮಾಜಿಕ ತಾಣಗಳಲ್ಲಿ ನಡೆದಿದೆ ಭಾರೀ ಚರ್ಚೆ

Any Mind by Any Mind
June 9, 2021
in ಕರ್ನಾಟಕ
0
ಆಕ್ಸಿಜನ್‌ ಸರಬರಾಜು ಕುರಿತ ಐದು ಆಡಿಯೋ ಕ್ಲಿಪ್ಪಿಂಗ್ ಕುರಿತು ಸಾಮಾಜಿಕ ತಾಣಗಳಲ್ಲಿ ನಡೆದಿದೆ ಭಾರೀ ಚರ್ಚೆ
Share on WhatsAppShare on FacebookShare on Telegram

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಮೇ 2ರಂದು ಸಂಭವಿಸಿದ ಆಕ್ಸಿಜನ್‌ ಕೊರತೆಯ ದುರಂತದಲ್ಲಿ 24 ಜನ ರೋಗಿಗಳು ಮೃತಪಟ್ಟಿದ್ದು ಮತ್ತು ರಾಜ್ಯ ಹೈಕೋರ್ಟ್‌ ಇದನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿತ್ತು. ಸರ್ಕಾರ 24 ಸಂತ್ರಸ್ಥ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರವನ್ನೂ ವಿತರಿಸಿದ ನಂತರ ಈ ಇಡೀ ಪ್ರಕರಣವೇ ತಣ್ಣಗಾಗಿತ್ತು. ಆದರೆ ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯ ಬೆನ್ನಲ್ಲೇ ಬಿಡುಗಡೆಗೊಂಡ ಐದು ಆಡಿಯೋ ಕ್ಲಿಪ್ಪಿಂಗ್‌ ಗಳು ಸಾಮಾಜಿಕ ಜಾಲ ತಾಣದಲ್ಲಿ ಈಗ ಭಾರೀ ಚರ್ಚೆಯನ್ನು ಹುಟ್ಟು ಹಾಕಿವೆ. ಇಲ್ಲಿ ಜಿಲ್ಲಾಧಿಕಾರಿ ಸಿಂಧೂರಿ ಅವರ ಕ್ರಮ ಸರಿಯಿದೆ ಎಂದು ಸಾವಿರಾರು ಜನರೂ ಅವರದ್ದು ತಪ್ಪು ಎಂದೂ ಸಾವಿರಾರು ನೆಟ್ಟಿಗರು ಚರ್ಚೆಯಲ್ಲಿ ತೊಡಗಿದ್ದಾರೆ.

ADVERTISEMENT
ಭೂಗಳ್ಳರ ವಿರುದ್ದ ಕ್ರಮಕ್ಕೆ ಮುಂದಾಗಿದ್ದ ರೋಹಿಣಿ ಸಿಂಧೂರಿ ಕೊನೆದಾಗಿ ಹೇಳಿದ್ದೇನು ಗೊತ್ತಾ ?

ಇದರ ಜತೆಗೆ ವೈರಲ್ ಆಗಿರುವ ಈ ಐದು ಆಡಿಯೊ ತುಣುಕುಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅದರಲ್ಲೂ ವಿಶೇಷವಾಗಿ ಮೈಸೂರಿನ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಉಪ ಔಷಧ ನಿಯಂತ್ರಕ ಅರುಣ್ ಕುಮಾರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಹಲವರು ಸಿಂಧೂರಿ ಅವರ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಆಮ್ಲಜನಕ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ ಎಂಬುದು ಗೊತ್ತಿದ್ದರೂ ಚಾಮರಾಜನಗರ ಜಿಲ್ಲಾಡಳಿತ ಸುಮ್ಮನೆ ಇದ್ದುದು ಏಕೆ ಎಂದು ಪ್ರಶ್ನಿಸಿದ್ದಾರೆ. ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದೇ ಇರುವ ಸರ್ಕಾರದ ನಿಲುವು ಹಾಗೂ ಸರ್ಕಾರದ ಮೇಲೆ ಒತ್ತಡ ಹೇರಲು ಜನಪ್ರತಿನಿಧಿಗಳು ಯಾರೂ ಪ್ರಯತ್ನಿಸಿಲ್ಲ ಎಂದು ಅಸಮಾಧಾನವನ್ನೂ ಹೊರ ಹಾಕಿದ್ದಾರೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆಯನ್ನು ಪ್ರಸ್ತಾಪಿಸಿರುವ ಜನರು, 24 ಜನರು ಮೃತಪಟ್ಟಿದ್ದರೂ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಯಾಕಿನ್ನೂ ವರ್ಗವಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.

‘ಚಾಮರಾಜನಗರ ಡಿಸಿ ವರ್ಗಾವಣೆ ರದ್ದುಪಡಿಸುವಲ್ಲಿ, ಮೈಸೂರು ಡಿಸಿ ವರ್ಗಾವಣೆ ಮಾಡಿಸುವಲ್ಲಿ ಆ ಜಿಲ್ಲೆಯ ರಾಜಕಾರಣಿಗಳ ಪಾತ್ರ ಬಹುಮುಖ್ಯವಾಗಿದೆ’ ಎಂದು ವಸಂತ್ ಹೆಗ್ಗೊಠಾರ ಎಂಬುವವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ‘ಚಾಮರಾಜನಗರದ ಡಿಸಿ ವರ್ಗಾವಣೆ ಆದರೆ ಕೋವಿಡ್ ನಿಯಂತ್ರಣಕ್ಕೆ ತೊಂದರೆಯಾಗುತ್ತದೆ. ಅದೇ ಮೈಸೂರಿನ ಡಿಸಿ ವರ್ಗಾವಣೆಯಾಗಿದೆ. ಆದರೆ ತೊಂದರೆಯಾಗುವುದಿಲ್ಲವೇ ಎಂದೂ ಫೇಸ್ಬುಕ್ನಲ್ಲಿ ಪ್ರಶ್ನಿಸಿದ್ದಾರೆ. ರಾಜಕೀಯ ಮುಖಂಡರು ಹಾಗೂ ಜನರ ನಡುವೆಯೂ ಇದೇ ವಿಚಾರವಾಗಿ ಚರ್ಚೆ ನಡೆಯುತ್ತಿದ್ದು, ದುರಂತ ನಡೆದು 40 ದಿನಗಳ ನಂತರ, ಅದರಲ್ಲೂ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದ ನಂತರ ಆಡಿಯೋ ವೈರಲ್ ಆಗಿರುವುದರ ಬಗ್ಗೆ ಹಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಆಡಿಯೊ ತುಣುಕುಗಳಲ್ಲಿ ಕೇಳಿ ಬರುವ ಮಾತುಕತೆಯಲ್ಲಿ ಜಿಲ್ಲೆಯ ಅಧಿಕಾರಿಗಳು ಯಾರೊಬ್ಬರೂ ಭಾಗಿಯಾಗಿಲ್ಲ. ಮೈಸೂರಿನ ಹೆಚ್ಚುವರಿ ಜಿಲ್ಲಾಧಿಕಾರಿ, ಉಪ ಔಷಧ ನಿಯಂತ್ರಕ ಹಾಗೂ ಆಮ್ಲಜನಕ ಪೂರೈಸುವ ಎರಡು ಸಂಸ್ಥೆಗಳ ಸಿಬ್ಬಂದಿ ಮಾತ್ರ ಇದ್ದಾರೆ. ಆಡಿಯೋ ತುಣುಕುಗಳ ಬಗ್ಗೆ ತನಿಖೆಯಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಈಗಾಗಲೇ ಒತ್ತಾಯಿಸಿದೆ. ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿಯ ವೆಂಕಟರಣಸ್ವಾಮಿ (ಪಾಪು) ಹಾಗೂ ವೀರಭದ್ರಸ್ವಾಮಿ ಅವರು, ಆಡಿಯೋದಲ್ಲಿನ ಅಂಶಗಳ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಬ್ರಾರ್‌ ಅಹಮದ್‌ ಅವರು ಜಿಲ್ಲಾಧಿಕಾರಿ ಸಿಂಧೂರಿ ಅವರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಅದರಲ್ಲಿ ಅವರು, ಮೈಸೂರು ಜಿಲ್ಲೆಗೇ ಆಮ್ಲಜನಕ ಕೊರತೆ ಇರುವುದನ್ನು ಪ್ರಸ್ತಾಪಿಸಿದ್ದಾರೆ. ಜಿಲ್ಲೆಯ ಮುಖ್ಯಸ್ಥರಾಗಿ ಚಾಮರಾಜನಗರ ಸೇರಿದಂತೆ ಬೇರೆ ಕಡೆಗೆ ಎಷ್ಟು ಆಮ್ಲಜನಕ ಹೋಗುತ್ತಿದೆ ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಅವರಿಗೆ ಇರುತ್ತದೆ. ಗಮನಕ್ಕೆ ತಂದು ಕಳುಹಿಸಬೇಕು ಎಂದು ಹೇಳಿದ್ದರಲ್ಲಿ ತಪ್ಪೇನಿದೆ’ ಎಂದು ತಿಳಿಸಿದರು. ‘ಮೇ 2ರಂದು ದುರಂತ ಸಂಭವಿಸುವ ಮೊದಲೇ ಈ ಸಂಭಾಷಣೆಗಳು ನಡೆದಿವೆ. ಅಂದರೆ, ಅಂದು ನಡೆದಿರುವುದು ಏಕಾಏಕಿ ದುರಂತ ಅಲ್ಲ. ಅದಕ್ಕಿಂತ ಮೊದಲೇ ಆಮ್ಲಜನಕ ಪೂರೈಕೆಗೆ ತೊಂದರೆಯಾಗಿತ್ತು. ಇದು ಗೊತ್ತಿದ್ದರೂ, ಜಿಲ್ಲಾಡಳಿತ ಏನೂ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿ, ವೈದ್ಯರು, ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದರು ಎಂಬುದು ಸ್ಪಷ್ಟ’ ಎಂದು ಅವರು ದೂರಿದರು.‘ದುರ್ಘಟನೆ ನಡೆದು 40 ದಿನಗಳ ನಂತರ ಆಡಿಯೊ ತುಣುಕುಗಳು ಬಿಡುಗಡೆಯಾಗಿವೆ. ಅದೂ ರೋಹಿಣಿ ಸಿಂಧೂರಿ ಅವರು ವರ್ಗಾವಣೆಯಾದ ನಂತರ. ಇದುವರೆಗೂ ಈ ತುಣುಕುಗಳು ಯಾಕೆ ಹೊರಗಡೆ ಬಂದಿಲ್ಲ? ಈಗ ಬಿಡುಗಡೆ ಮಾಡಿರುವುದರ ಹಿಂದೆ ಇಡೀ ಪ್ರಕರಣವನ್ನು ಮುಚ್ಚಿಹಾಕುವ ಯತ್ನವಿದೆ’ ಎಂದು ಅಬ್ರಾರ್ ಅಹಮದ್ ಹೇಳಿದರು.

ಈ ನಡುವೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಆಮ್ಲಜನಕ ಘಟಕದ ಟ್ಯಾಂಕ್ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಹೊಸ ಟ್ಯಾಂಕ್ ಬಂದಿದೆ. ಆದರೆ, ಟ್ಯಾಂಕ್ ಬಂದು ಒಂದು ವಾರವಾದರೂ ಇನ್ನೂ ಅಳವಡಿಕೆಯಾಗಿಲ್ಲ. ಟ್ಯಾಂಕ್ ಹೊತ್ತಿರುವ ಲಾರಿ ಆಸ್ಪತ್ರೆಯ ಬಳಿ ನಿಂತುಕೊಂಡಿದೆ. ಘಟಕದಲ್ಲಿರುವ ಟ್ಯಾಂಕ್ನಲ್ಲಿ ಹೊರ ಭಾಗದ ಒತ್ತಡ ನಿಯಂತ್ರಣ ವ್ಯವಸ್ಥೆಯಲ್ಲಿ ದೋಷ ಕಂಡು ಬಂದಿದೆ ಎಂದು ಜಿಲ್ಲಾ ಸರ್ಜನ್ ಡಾ.ಶ್ರೀನಿವಾಸ್ ಹೇಳಿದ್ದಾರೆ. ‘ಇದು ಸಣ್ಣ ಪ್ರಮಾಣದ ದೋಷ. ರೋಗಿಗಳಿಗೆ ಆಮ್ಲಜನಕ ಪೂರೈಕೆಗೆ ಏನೂ ತೊಂದರೆಯಾಗಿಲ್ಲ. ಘಟಕ ಅಳವಡಿಸಿರುವ ಕಂಪನಿಯ ತಾಂತ್ರಿಕ ಸಿಬ್ಬಂದಿ ಅದನ್ನು ದುರಸ್ತಿ ಮಾಡಿದ್ದಾರೆ’ ಎಂದು ಡಾ.ಶ್ರೀನಿವಾಸ್ ತಿಳಿಸಿದರು.

ಇದಕ್ಕೂ ಮೊದಲು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು,‘ಟ್ಯಾಂಕ್ನಲ್ಲಿ ಸೋರಿಕೆ ಇಲ್ಲ. ಆದರೆ, ಹೊರಗಿನ ಒತ್ತಡ ನಿಯಂತ್ರಣ ವ್ಯವಸ್ಥೆಯಲ್ಲಿ ದೋಷವಿದೆ. ಅದನ್ನು ತಾತ್ಕಾಲಿಕವಾಗಿ ಸರಿಪಡಿಸಲಾಗಿದೆ. ದೀರ್ಘಕಾಲದಲ್ಲಿ ಅದು ಸಮಸ್ಯೆಯಾಗಿ ಕಾಡಬಹುದು ಎಂಬ ಉದ್ದೇಶದಿಂದ ಹೊಸ ಟ್ಯಾಂಕ್ ಅಳವಡಿಸಲಾಗುತ್ತಿದೆ. ಈಗಾಗಲೇ ಟ್ಯಾಂಕ್ ತಲುಪಿದೆ. ಅದರ ಅಳವಡಿಕೆಗೆ ಚೆನ್ನೈಯಿಂದ ಅನುಮತಿ ಬೇಕಾಗಿದೆ. ಆ ಪ್ರಕ್ರಿಯೆ ನಡೆಯುತ್ತಿದ್ದು, ಇನ್ನು ಒಂದೆರಡು ದಿನಗಳಲ್ಲಿ ಅಳವಡಿಸಲಾಗುವುದು’ ಎಂದರು. ಆಮ್ಲಜನಕ ಸಮಸ್ಯೆ ಇಲ್ಲ: ಆಸ್ಪತ್ರೆಗೆ ಈಗ ನಿಗದಿಯಂತೆ ಆಮ್ಲಜನಕ ಪೂರೈಕೆಯಾಗುತ್ತಿದೆ. ಘಟಕಕ್ಕೆ ಬಳ್ಳಾರಿಯಿಂದ ನಿಯಮಿತವಾಗಿ ಆಮ್ಲಜನಕ ಬರುತ್ತಿದೆ. ಸಿಲಿಂಡರ್ಗಳನ್ನೂ ತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ಇನ್ನು ಸಮಸ್ಯೆ ಉಂಟಾಗದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Previous Post

ಲಂಚಮುಕ್ತ ಕರ್ನಾಟಕ ಅಭಿಯಾನ ಪುನರಾರಂಭ –ಕೆಆರ್‌ಎಸ್‌ ಪಕ್ಷ

Next Post

ಇಂಧನದ ಬೆಲೆ ಏರಿಕೆಯ ಬೆನ್ನಲೆ ವಿದ್ಯುತ್‌ ದರ ಏರಿಸಿದ ಸರ್ಕಾರ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಇಂಧನದ ಬೆಲೆ ಏರಿಕೆಯ ಬೆನ್ನಲೆ ವಿದ್ಯುತ್‌ ದರ ಏರಿಸಿದ ಸರ್ಕಾರ

ಇಂಧನದ ಬೆಲೆ ಏರಿಕೆಯ ಬೆನ್ನಲೆ ವಿದ್ಯುತ್‌ ದರ ಏರಿಸಿದ ಸರ್ಕಾರ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada