• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅರುಣ್ ಸಿಂಗ್ ಅವರನ್ನು ಭೇಟಿಯಾಗದ ಬೆಲ್ಲದ್-ಯತ್ನಾಳ್: BSY ಪರ ಹೇಳಿಕೆ ದಾಖಲಿಸಿದ 35 ಶಾಸಕರು

Any Mind by Any Mind
June 17, 2021
in ಕರ್ನಾಟಕ, ರಾಜಕೀಯ
0
ಅರುಣ್ ಸಿಂಗ್ ಅವರನ್ನು ಭೇಟಿಯಾಗದ ಬೆಲ್ಲದ್-ಯತ್ನಾಳ್: BSY ಪರ ಹೇಳಿಕೆ ದಾಖಲಿಸಿದ  35 ಶಾಸಕರು
Share on WhatsAppShare on FacebookShare on Telegram

ಬಿಎಸ್‌ ಯಡಿಯೂರಪ್ಪ ವಿರುದ್ಧ ಹಿಂದಿನಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಾ ಬಂದಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಯಡಿಯೂರಪ್ಪ ಪರ್ಯಾಯ ಎಂದೇ ಬಿಂಬಿತವಾಗಿರುವ ಅರವಿಂದ ಬೆಲ್ಲದ್‌ ಅವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ರನ್ನು ಭೇಟಿಯಾಗದೆ ಇರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ADVERTISEMENT

ನಾಲ್ವರು ಸಚಿವರು ಸೇರಿದಂತೆ ಒಟ್ಟು 51 ಮಂದಿ ಬಿಜೆಪಿ ಶಾಸಕರು ಅರುಣ್ ಸಿಂಗ್ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅವರಲ್ಲಿ 35 ಮಂದಿ ಶಾಸಕರು ಬಿ ಎಸ್‌ ಯಡಿಯೂರಪ್ಪ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಅರವಿಂದ ಬೆಲ್ಲದ್‌

 ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಗುರುವಾರ ಬೆಳಿಗ್ಗೆಯಿಂದಲೇ ಶಾಸಕರು ಹಾಗೂ ಅರುಣ್‌ ಸಿಂಗ್‌ ನಡುವಿನ ಭೇಟಿ ಪ್ರತ್ಯೇಕವಾಗಿ ಜರುಗಿವೆ.

ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿದ ಶಾಸಕರಲ್ಲಿ 15 ಕ್ಕೂ ಹೆಚ್ಚು ಶಾಸಕರು ಬಿ ಎಸ್‌ ವೈ ನಾಯಕತ್ವದ ವಿರುದ್ಧ ಅಪಸ್ವರ ಎತ್ತಿರುವುದಾಗಿ ಆಂತರಿಕ ಮೂಲಗಳು ತಿಳಿಸಿವೆ.

ಅರುಣ್‌ ಸಿಂಗ್‌ ಅವರನ್ನು ಭೇಟಿಯಾಗದ ಬೆಲ್ಲದ್-ಯತ್ನಾಳ್‌

ನಾಯಕತ್ವ ಬದಲಾವಣೆ ಊಹಾಪೋಹಗಳು ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿದ್ದಂತೆಯೇ ಲಿಂಗಾಯತ ನಾಯಕರಾದ ಬಸನಗೌಡ ಪಾಟೀಲ ಯತ್ನಾಳ್‌ ಹಾಗೂ ಅರವಿಂದ ಬೆಲ್ಲದ ಅವರ ಕಡೆಗೆ ವಿಶೇಷವಾಗಿ ಗಮನ ಹರಿಸಲಾಗಿತ್ತು.

ಬಸನಗೌಡ ಪಾಟೀಲ್‌

ಬಿಎಸ್‌ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ವಿರುದ್ಧ ಹಿಂದಿನಿಂದಲೂ ಅಸಹನೆ ವ್ಯಕ್ತಪಡಿಸುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್‌ ಹಾಗೂ ಇತ್ತೀಚೆಗೆ ಮುಖ್ಯಮಂತ್ರಿ ಸ್ಥಾನಾರ್ಥಿ ಎಂದು ಬಿಂಬಿತವಾಗಿದ್ದ ಅರವಿಂದ ಬೆಲ್ಲದ್‌ ಅವರು ಅರುಣ್‌ ಸಿಂಗ್‌ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಹೊರ ಬಂದಿತ್ತು. ಆದರೆ, ಗುರುವಾರ ಸಂಜೆವರೆಗೂ ಅರುಣ್‌ ಸಿಂಗ್‌ ಭೇಟಿಗೆ ಈ ನಾಯಕರೀರ್ವರೂ ಬರದೇ ಇರುವುದು ಕುತೂಹಲ ಮೂಡಿಸಿದೆ. ಬಲ್ಲ ಮೂಲಗಳ ಪ್ರಕಾರ, ಅರುಣ್‌ ಸಿಂಗ್‌ ವಿಜಯೇಂದ್ರ ಪರವಿದ್ದಾರೆ ಎಂದೇ ಅನೇಕ ಬಂಡಾಯ ಶಾಸಕರು ಅವರನ್ನು ಭೇಟಿಯಾಗಲಿಲ್ಲ ಎಂದು ಹೇಳಲಾಗಿದೆ.

ಅರುಣ್‌ ಸಿಂಗ್‌ ಭೇಟಿಗೆ ನಾನು ಅವಕಾಶವೇ ಕೇಳಿಲ್ಲ – ಯತ್ನಾಳ್‌ ಸ್ಪಷ್ಟಣೆ

ಅರುಣ್‌ ಸಿಂಗ್‌ ಅವರ ಭೇಟಿಯಾಗದಿರುವ ಕುರಿತು ಹರಿದಾಡುತ್ತಿರುವ ಊಹಪೋಹಗಳಿಗೆ ತೆರೆ ಎಳೆಯಲು ಪ್ರಯತ್ನಿಸಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ , ನಾನು ಅರುಣ್‌ ಸಿಂಗ್‌ ಅವರ ಭೇಟಿಗೆ ಅವಕಾಶವನ್ನೇ ಕೇಳಲಿಲ್ಲ. ಸುಳ್ಳು ಸುದ್ದಿ ಬಿತ್ತರಿಸಬೇಡಿ ಎಂದು ತಮ್ಮ ಫೇಸ್‌ಬುಕ್‌ ಖಾತೆ ಮೂಲಕ ತಿಳಿಸಿದ್ದು, ಜೊತೆಗೆ ಅರುಣ್‌ ಸಿಂಗ್‌ ಅವರ ಭೇಟಿಗೆ ಅವಕಾಶ ಕೇಳಿದ ಶಾಸಕರು ಎನ್ನಲಾದ ಪಟ್ಟಿಯೊಂದನ್ನು ಬಹಿರಂಗಗೊಳಿಸಿದ್ದಾರೆ. ಕೆಲವು ಗಂಟೆಗಳ ಬಳಿಕ ಆ ಪಟ್ಟಿಯನ್ನು ಪೇಸ್‌ಬುಕ್‌ನಿಂದ ಡಿಲಿಟ್‌ ಮಾಡಿದ್ದಾರೆ.

ಯತ್ನಾಳ್‌ ಹಂಚಿ, ಅಳಿಸಿದ ಪಟ್ಟಿ

Previous Post

ಷರತ್ತುಗಳೊಂದಿಗೆ ಸೋಮವಾರದಿಂದ ರಸ್ತೆಗಿಳಿಯುತ್ತಿವೆ ಬಿಎಂಟಿಸಿ

Next Post

ಮಲೆನಾಡು ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ- ಮರದಡಿ ಪಾಠಕ್ಕೂ ಅಡ್ಡಿಯಾದ ವರ್ಷಧಾರೆ..

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ಮಲೆನಾಡು ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ- ಮರದಡಿ ಪಾಠಕ್ಕೂ ಅಡ್ಡಿಯಾದ ವರ್ಷಧಾರೆ..

ಮಲೆನಾಡು ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ- ಮರದಡಿ ಪಾಠಕ್ಕೂ ಅಡ್ಡಿಯಾದ ವರ್ಷಧಾರೆ..

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada