• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿ‌ಎಸ್‌ವೈ ಬಳಿ ಇರುವ ನೀರಾವರಿ ಇಲಾಖೆಯಿಂದ ಅವ್ಯವಹಾರ: ತನಿಖೆಗೆ ಜಂಟಿ ಸದನ ಸಮಿತಿ ರಚನೆಗೆ ಡಿ.ಕೆ.ಶಿ ಆಗ್ರಹ

Any Mind by Any Mind
June 19, 2021
in ಕರ್ನಾಟಕ, ರಾಜಕೀಯ
0
ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರಲ್ಲಿ ಯಾರಾದರೂ ಒಬ್ಬರು ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರಾ? – ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

‘ನೀರಾವರಿ ಇಲಾಖೆಯಲ್ಲಿ ನಿಯಮಾವಳಿ ಉಲ್ಲಂಘಿಸಿ 20 ಸಾವಿರ ಕೋಟಿ ರುಪಾಯಿ ಕಾಮಗಾರಿ ಟೆಂಡರ್ ಕರೆಯಲಾಗಿದೆ ಎಂದು ಬಿಜೆಪಿ ನಾಯಕರೇ ಆರೋಪ ಮಾಡಿದ್ದು, ಈ ಬಗ್ಗೆ ಮೌನ ವಹಿಸುವ ಮೂಲಕ ಮುಖ್ಯಮಂತ್ರಿಗಳು ಈ ಆರೋಪ ನಿಜ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಹಗರಣದ ತನಿಖೆಗೆ ಸರಕಾರ ಜಂಟಿ ಸದನ ಸಮಿತಿ ರಚಿಸಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ADVERTISEMENT

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರಯ, ‘ರಾಮನ ಹೆಸರೆಳುವವರ ಪಕ್ಷದಲ್ಲಿ ರಾಮಾಯಣ, ಮಹಾಭಾರತ ಎಲ್ಲವೂ ನಡೆಯುತ್ತಿದೆ. ಬಿಜೆಪಿಯ ಯುದ್ಧಕಾಂಡ, ಜನಸಾಮಾನ್ಯರ ಕರ್ಮಕಾಂಡ. ಇದು ಮುಗಿಯದ (ನೆವರ್ ಎಂಡಿಗ್) ನರಕಯಾತನೆಯಾಗಿದೆ. ಈ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ನಾನು ಸದನದಲ್ಲಿ ಈ ಬಗ್ಗೆ ಭವಿಷ್ಯ ಹೇಳಿದ್ದೆ ಎಂದಿದ್ದಾರೆ.

ಕರ್ನಾಟಕ ಹೆಲ್ತ್ ಟೂರಿಸಂಗೆ ಪ್ರಸಿದ್ಧಿ. ಆದರೆ ಅದೀಗ ಹೆಲ್ ಟೂರಿಸಂ (ನರಕ ಯಾತ್ರೆ) ಆಗಿದೆ. ಜನ ಉದ್ಯೋಗಕ್ಕೆ ಹುಡುಕಾಟ, ಜೀವನ ನಡೆಸಲು ಪರದಾಟ ನಡೆಸುತ್ತಿದ್ದಾರೆ. ಕೋವಿಡ್ ಪರಿಸ್ಥಿತಿಯಿಂದ ರಾಜ್ಯದಲ್ಲಿ 30 ಲಕ್ಷ ಉದ್ಯೋಗ ನಷ್ಟವಾಗಿದೆ. ಈ ವಿಚಾರದಲ್ಲಿ ನಾನು ಎರಡು ಕಮಿಟಿಗಳನ್ನು ಮಾಡಿದ್ದೇನೆ. ಒಂದು ವಾರದಲ್ಲಿ ವರದಿ ನೀಡಲಿದೆ ಎಂದಿದ್ದಾರೆ.

ಈ ಸಮಯದಲ್ಲಿ ಬಿಜೆಪಿಯವರಿಗೆ ಹೆಚ್ಚು ಮಾತನಾಡಲು ನಾವು ಅವಕಾಶ ಕೊಡಬೇಕು. ರಾಜ್ಯಕ್ಕೆ ಅವರೇ ಸಂದೇಶ ನೀಡುತ್ತಿದ್ದಾರೆ. ಅವರು ಆಡಳಿತ ಪಕ್ಷದ ಜನರ ಪ್ರತಿನಿಧಿಗಳು. ಅವರಿಗೆ ನಮಗಿಂತ ಹೆಚ್ಚಿನ ಸತ್ಯ ಗೊತ್ತಿರುತ್ತದೆ. ವಿಶ್ವನಾಥ್ ಅವರು ನೀರಾವರಿ ಇಲಾಖೆ ಅವ್ಯವಹಾರದ ಬಗ್ಗೆ ಮಾಡಿರುವ ಆರೋಪ ಸಂಬಂಧ ನನಗೂ ಮಾಹಿತಿ ಇದೆ. 10 ಕೋಟಿ ರೂ. ಕಾಮಗಾರಿಗೆ 20 ಕೋಟಿ ರೂ. ಅಂದಾಜು ವೆಚ್ಚ ಸಿದ್ಧವಾಗಿದೆ. ಈ ಸರ್ಕಾರ ಬಂದ ಮೇಲೆ ಆರ್ಥಿಕ ಸಮಸ್ಯೆ ಇದ್ದರೂ, ನೀರಾವರಿ ಇಲಾಖೆಯಲ್ಲಿ ಹೇಗೆ ನಿಯಮಗಳ ಉಲ್ಲಂಘನೆ ಮಾಡಿ ಕಾಮಗಾರಿಗಳಿಗೆ ಅನುಮತಿ ನೀಡಲಾಗುತ್ತಿದೆ ಎಂಬುದೂ ತಿಳಿದಿದೆ ಎಂದಿದ್ದಾರೆ.

ಈ ಎಲ್ಲ ವಿಚಾರಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ನಾನು ಸುಮ್ಮನಿದ್ದೆ. ಇನ್ನು ಏನೆಲ್ಲಾ ಮಾಡುತ್ತಾರೋ ಮಾಡಲಿ, ಸದನದಲ್ಲಿ ಎಲ್ಲವನ್ನೂ ಒಟ್ಟಿಗೆ ಚರ್ಚೆ ಮಾಡೋಣ ಅಂತಾ ಕಾಯುತ್ತಿದ್ದೆವು. ಈ ಮಧ್ಯದಲ್ಲಿ ವಿಶ್ವನಾಥ್ ಅವರು ರಾಜ್ಯದ ಜನರ ಮುಂದೆ ಈ ವಿಚಾರ ಬಿಚ್ಚಿಟ್ಟಿದ್ದಾರೆ. ಮುಖ್ಯಮಂತ್ರಿಗಳ ಬಳಿ ಈ ಇಲಾಖೆ ಇದ್ದು, ಈ ಬಗ್ಗೆ ಅವರು ಸ್ಪಷ್ಟನೆ ನೀಡದೇ ಅಧಿಕಾರಿಗಳ ಮೂಲಕ ಹೇಳಿಕೆ ಕೊಡಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ಈ ಆರೋಪ ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಜಂಟಿ ಸದನ ಸಮಿತಿ ರಚನೆ ಮಾಡಬೇಕು. ಬೇಕಾದರೆ ಸಮಿತಿಗೆ ನಿಮ್ಮ ಪಕ್ಷದವರನ್ನೇ ಅಧ್ಯಕ್ಷರನ್ನಾಗಿ ಮಾಡಿಕೊಂಡು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಶಾಸಕರು ಹಾಗೂ ಪರಿಷತ್ ಸದಸ್ಯರನ್ನು ಸಮಿತಿಗೆ ಸೇರಿಸಿ. ಈ ವಿಚಾರ ಚರ್ಚಿಸಲು ತಕ್ಷಣ ಅಧಿವೇಶನ ಕರೆಯಿರಿ. ಈಗ ನಿಮ್ಮ ಕುರ್ಚಿ ಬಿಗಿಯಾಗಿದೆ. ಅಧಿವೇಶನ ಕರೆಯಲು ಯಾವುದೇ ಆತಂಕವಿಲ್ಲ. ವಿಮಾನ ನಿಲ್ದಾಣದಿಂದ ಕುಮಾರಕೃಪಾವರೆಗೂ ನಿಮ್ಮ ಸಿನಿಮಾದ ದೃಶ್ಯವನ್ನು ರಾಜ್ಯದ ಜನ ಕಣ್ತುಂಬಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಕೇರಳದಲ್ಲಿ ಅಧಿವೇಶನ ಆರಂಭವಾಗಿದೆ, ಇದೇ 21ರಿಂದ ತಮಿಳುನಾಡಿನಲ್ಲಿ ನಡೆಯಲಿದೆ. ನಿಮಗೆ ಅಧಿವೇಶನ ಕರೆಯಲು ಇಷ್ಟವಿಲ್ಲದಿದ್ದರೆ ವರ್ಚುವಲ್ ಸಭೆಯನ್ನಾದರೂ ಕರೆಯಿರಿ. ಪ್ರಧಾನಮಂತ್ರಿಗಳು ಸಭೆ ನಡೆಸುವಂತೆ ನೀವೂ ವರ್ಚುವಲ್ ಮೂಲಕ ಮಾಡಿ. ಹೆಚ್ಚೆಂದರೆ 300 ಜನ ಇರುತ್ತಾರೆ. ಅಲ್ಲೇ ಚರ್ಚೆ ಮಾಡೋಣ. ಈ ವಿಚಾರದಲ್ಲಿ ನಿಮ್ಮ ನಾಯಕರು ಏನು ಹೇಳುತ್ತಾರೋ ಹೇಳಲಿ, ನೀವು ಏನು ಸ್ಪಷ್ಟನೆ ಕೊಡುತ್ತೀರೋ ಕೊಡಿ. ಈ ವಿಚಾರವನ್ನು ಜನಸಾಮಾನ್ಯರ ಮುಂದೆ ಇಡೋಣ. ನಿಮಗೆ ಈ ಸಭೆ ನಡೆಸಲು ಆಗದಿದ್ದರೆ ಹೇಳಿ, ನಾವೇ ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಡುತ್ತೇವೆ.

ಬಿಜೆಪಿ ನಾಯಕರು ಪರಸ್ಪರ ಯಾವ ಪದಬಳಕೆ ಮಾಡಿದ್ದಾರೆ ಎಂದರೆ.., ಹುಚ್ಚರು, ಅರೆ ಹುಚ್ಚರು, 420ಗಳು, ಲೂಟಿಕೋರರು ಸೇರಿದಂತೆ ಅಸಂವಿಧಾನಿಕ ಪದಗಳನ್ನೂ ಬಳಕೆ ಮಾಡಿದ್ದು, ಅವುಗಳು ನನ್ನ ಬಾಯಲ್ಲಿ ಬರೋದು ಬೇಡ. ಬಾಂಬೆ ಟೀಂನ 17 ಜನರೇ ಇದಕ್ಕೆಲ್ಲ ಕಾರಣ ಅಂತಿದ್ದಾರೆ. ಈ ಪದ ಬಳಕೆ, ತಿಕ್ಕಾಟ, ಭ್ರಷ್ಟಾಚಾರ, ಬಿಜೆಪಿಯ ಕಮಿಷನ್ ವಿಚಾರ ಎಲ್ಲವನ್ನು ಸದನದಲ್ಲಿ ಮಾತನಾಡೋಣ.

ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ದೂರವಾಣಿ ಕದ್ದಾಲಿಕೆ ದೂರಿನ ತನಿಖೆಯನ್ನು ಯಡಿಯೂರಪ್ಪ ಅವರು ಅಧಿಕಾರಕ್ಕೆ ಬರುತ್ತಿದ್ದಂತೆ ಸಿಬಿಐಗೆ ವಹಿಸಿದ್ದರು. ಈಗ ಅವರದೇ ಪಕ್ಷದ ಬೆಲ್ಲದ್ ಅವರು ಕದ್ದಾಲಿಕೆ ಆರೋಪ ಮಾಡಿರುವಾಗ ಯಾಕೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ತನಿಖೆ ನಡೆಸುತ್ತಿದ್ದಾರೆ? ನಾನು ಕಮಿಷನರ್ ಅವರು ಒಳ್ಳೆಯ ಕೆಲಸ ಮಾಡುವ ನಿರೀಕ್ಷೆ ಇಟ್ಟುಕೊಂಡಿದ್ದೆ. ಆದರೆ, ಅವರು ನಿರೀಕ್ಷೆ ಹುಸಿ ಮಾಡುತ್ತಿದ್ದಾರೆ. ಬಡ್ತಿ ಸಿಕ್ಕ ಕಾರಣ ಅನೇಕ ಕೇಸ್ ಗಳನ್ನು ಮುಚ್ಚಿಹಾಕಲು ತರಾತುರಿಯಲ್ಲಿದ್ದಾರೆ. ಮುಂದೆ ಈ ವಿಚಾರಸಲ್ಲಿ ಏನು ಮಾಡಬೇಕೆಂದು ಪಕ್ಷ ತೀರ್ಮಾನಿಸಲಿದೆ.

ನನ್ನ ದೂರವಾಣಿ ಕರೆ ಕದ್ದಾಲಿಕೆಯಾಗುತ್ತಿದೆ ಎಂದಾಗ ಅಶೋಕ್ ಅವರು ಇದು ಕಾಂಗ್ರೆಸ್ ಸಂಸ್ಕೃತಿ ಎಂದಿದ್ದರು. ಹಾಗಾದ್ರೆ ಬೆಲ್ಲದ್ ಅವರ ದೂರವಾಣಿ ಕರೆ ಕದ್ದಾಲಿಕೆ ಯಾರ ಸಂಸ್ಕೃತಿ? ನನ್ನ ದೂರವಾಣಿ ಕರೆ ಕದ್ದಾಲಿಕೆ ಈ ಕಾಲಕ್ಕೆ ಮುಗಿಯುವುದಿಲ್ಲ. ನನ್ನನ್ನು ಎಷ್ಟು ಸಂಸ್ಥೆಗಳು ಬೆನ್ನತ್ತಿವೆ ಎಂಬ ವಿಚಾರ ಈಗ ಬೇಡ. ಬಿಜೆಪಿಯ ಆಂತರಿಕ ಬಿಕ್ಕಟ್ಟನ್ನು ವಿರೋಧ ಪಕ್ಷದವರು ಬಳಸಿಕೊಳ್ಳುತ್ತಿಲ್ಲ ಅಂತಾ ಸಚಿವ ಈಶ್ವರಪ್ಪನವರೇ ಅಪ್ಪಣೆ ಕೊಡಿಸಿದ್ದಾರೆ. ಇದೆಲ್ಲವನ್ನೂ ನಾವು ಸದನದಲ್ಲೇ ಚರ್ಚೆ ಮಾಡೋಣ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ. ಮುಖ್ಯಮಂತ್ರಿಯಾಗಲು ನನಗೆ, ಸಿದ್ದರಾಮಯ್ಯ ಅವರಿಗೆ, ಖರ್ಗೆ ಅವರಿಗೆ, ಪರಮೇಶ್ವರ್ ಅವರಿಗೆ, ಇನ್ನೂ ಯಾರ್ಯಾರಿಗೋ ಆಸೆ ಇರಬಹುದು. ಆದರೆ ನಮ್ಮ ಕರ್ತವ್ಯ ಮುಖ್ಯಮಂತ್ರಿ ಆಗೋದಲ್ಲ. ಈ ರಾಜ್ಯದಲ್ಲಿ ಜನಪರ ಕೆಲಸ ಮಾಡಲು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವುದಾಗಿದೆ. ಎಲ್ಲರೂ ಹದ್ದು-ಬಸ್ತಿನಲ್ಲಿರಬೇಕು ಎಂದು ನಾನೂ ಹೇಳಿದ್ದೇನೆ, ದೆಹಲಿ ನಾಯಕರೂ ಹೇಳಿದ್ದಾರೆ. ಕೆಲವರು ವೈಯಕ್ತಿಕ ಅಭಿಪ್ರಾಯ ಹೇಳಿರಬಹುದು. ಈ ವಿಚಾರವಾಗಿ ಕರೆದು ನಾನು ವಿವರಣೆ ಕೇಳಿದ್ದೇನೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಇಲ್ಲಿದ್ದೇನೆ. ನನಗೆ ಪಕ್ಷ ಮುಖ್ಯ. ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮುಖ್ಯ ಅಂತಾ ನಾನು ಮೊದಲ ದಿನವೇ ಹೇಳಿ ಪ್ರತಿಜ್ಞೆ ಸ್ವೀಕರಿಸಿದ್ದೇನೆ.

ರಾಜ್ಯದಲ್ಲಿ ಆದಾಯವಿಲ್ಲದೆ, ವ್ಯಾಪಾರಿಗಳು, ಕಾರ್ಮಿಕರು ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕೋವಿಡ್ ಸಮಯದಲ್ಲಿ ಆಗಿರುವ ನಷ್ಟವನ್ನು ಅಂದಾಜು ಮಾಡಲಾಗುತ್ತಿಲ್ಲ. ರಾಜ್ಯದಲ್ಲಿ ಕೊವಿಡ್ ನಿಂದ ಸತ್ತವರ ಡೆತ್ ಆಡಿಟ್ ಮಾಡಿ ಎಂದು ನಾವು ಒತ್ತಾಯ ಮಾಡುತ್ತಿದ್ದೇವೆ. ಆದರೆ ಸರ್ಕಾರ ಅದನ್ನು ಮಾಡದೇ ಸತ್ತವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ.

ಪಂಚಾಯಿತಿ ಹಾಗೂ ಬೂತ್ ಮಟ್ಟದ ಕಾರ್ಯಕರ್ತರು, ಕಳೆದ ವರ್ಷ ಮಾರ್ಚ್ ನಿಂದ ಇಲ್ಲಿಯವರೆಗೂ ಎಷ್ಟು ಜನ ಕೋವಿಡ್ ನಿಂದ ಸತ್ತಿದ್ದಾರೆ ಎಂಬುದರ ಮಾಹಿತಿ ಕಲೆಹಾಕಿ, 1 ಲಕ್ಷ ಪರಿಹಾರಕ್ಕೆ ತಹಶೀಲ್ದಾರರಿಗೆ ಅರ್ಜಿ ನೀಡಬೇಕು. ನಂತರ ನಾನು ಒಂದು ನಂಬರ್ ಕಳುಹಿಸಿಕಡುತ್ತೇನೆ. ಅದಕ್ಕೆ ನೀವು ಮಾಹಿತಿ ಕಳುಹಿಸಬೇಕು. ನಾನು, ಶಾಸಕಾಂಗ ಪಕ್ಷದ ನಾಯಕರು ಹಾಗೂ ಎಲ್ಲ ಹಿರಿಯ ನಾಯಕರು ಸರ್ಕಾರದ ಮೇಲೆ ಒತ್ತಡ ಹಾಕಿ ಹಣ ಸಿಗುವಂತೆ ಮಾಡುತ್ತೇವೆ.

ಸರ್ಕಾರ ಘೋಷಿಸಿದ ಪರಿಹಾರ ಎಲ್ಲರಿಗೂ ಸಿಕ್ಕಿಲ್ಲ. ಅವರು ಯಾವುದಾದರೂ ಮಾನದಂಡ ಅನುಸರಿಸಲಿ. ನಾವೂ ಒಂದು ಪಟ್ಟಿ ಮಾಡುತ್ತೇವೆ. ಪರಿಹಾರ ಕೊಡಿಸುವ ವಿಚಾರದಲ್ಲಿ ಪಕ್ಷಬೇಧ ಬೇಡ. ಯಾವುದೇ ಪಕ್ಷ, ವರ್ಗದ ಯಾರೇ ಮೃತಪಟ್ಟಿದ್ದರೂ ಅವರ ಮಾಹಿತಿ ಪಡೆದು ಕಳುಹಿಸಿ. ಅನೇಕರು ಕೊರೋನಾ ಎಂದು ಹೇಳಿದರೆ ಮೃತದೇಹ ಕೊಡುವುದಿಲ್ಲ ಎಂದು ಕೋವಿಡ್ ಸಾವನ್ನು ಪ್ರಕಟಿಸಿಯೇ ಇಲ್ಲ. ಅಂತಹವರೆಲ್ಲರೂ ಅಫಿಡವಿಟ್ ಹಾಕಿ, ತಹಶೀಲ್ದಾರರಿಗೆ ಅರ್ಜಿ ಕೊಟ್ಟು ಪರಿಹಾರ ಪಡೆಯಲು ನೋಂದಣಿ ಮಾಡಿಸಬೇಕು.

ಸರ್ಕಾರ ಪರಿಹಾರ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದೆ. ಅವರೇ ತಂದಿರುವ ಕಾಯಿಲೆಯಿಂದ ಜನ ಸತ್ತಿದ್ದಾರೆ. ಈಗ ಪರಿಹಾರ ಕೊಡಲಿ ಬಿಡಿ. ಈ ಸರ್ಕಾರ ಮುಚ್ಚಿಡುತ್ತಿರುವುದನ್ನು ಬಿಚ್ಚಿಡುವುದೇ ನಮ್ಮ ಕೆಲಸ.

ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ವ್ಯಾಕ್ಸಿನೇಟ್ ಕರ್ನಾಟಕ ಕಾರ್ಯಕ್ರಮ, ಇದರಲ್ಲಿ 17 ವರ್ಷದೊಳಗಿನ ವಿದ್ಯಾರ್ಥಿಗಳು ಪ್ರತಿಯೊಬ್ಬರೂ ಲಸಿಕೆ ಪಡೆಯುವ ಬಗ್ಗೆ ಜಾಗೃತಿ ಮೂಡಿಸಲು ತಮ್ಮದೇ ಆದ ರೀತಿಯಲ್ಲಿ 2 ನಿಮಿಷದೊಳಗಿನ ವಿಡಿಯೋ ಮಾಡಿ, ಅದನ್ನು ಜುಲೈ 1ರ ಒಳಗಾಗಿ www.vaccinatekarnataka.com ಗೆ ಅಪ್ ಲೋಡ್ ಮಾಡಿ. ಈ ವಿಡಿಯೋಗಳನ್ನು ಹಾಡು, ನೃತ್ಯ, ಸಂಗೀತ, ಕಲೆ ಸೇರಿದಂತೆ ಸೃಜನಾತ್ಮಕವಾಗಿ ಮಾಡಿ ಕಳುಹಿಸಬಹುದು. ಅತ್ಯುತ್ತಮ ವಿಡಿಯೋ ಮಾಡಿದ 100 ಮಂದಿಗೆ ನಾವು ಆಂಡ್ರಾಯ್ಡ್ ಟ್ಯಾಬ್ ಗಳನ್ನು ಬಹುಮಾನವಾಗಿ ವಿತರಿಸುತ್ತೇವೆ ಎಂದಿದ್ದಾರೆ.

Tags: DK ShivakumarYediyurappa
Previous Post

ಕಿರುಅರಣ್ಯ ನಾಶಕ್ಕೆ ಮುಂದಾದ ಅರಣ್ಯ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆ: ನೈಜ ಹೋರಾಟಗಾರರ ವೇದಿಕೆಯಿಂದ ಆಕ್ಷೇಪ

Next Post

ಕೋವಿಡ್ ಮಾರ್ಗಸೂಚಿ ಪಾಲಿಸದಿದ್ದರೆ 6-8 ವಾರಗಳಲ್ಲಿ 3ನೇ ಅಲೆ: AIIMS ನಿರ್ದೇಶಕ ಎಚ್ಚರಿಕೆ

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ಕೋವಿಡ್ ಮಾರ್ಗಸೂಚಿ ಪಾಲಿಸದಿದ್ದರೆ 6-8 ವಾರಗಳಲ್ಲಿ 3ನೇ ಅಲೆ: AIIMS ನಿರ್ದೇಶಕ ಎಚ್ಚರಿಕೆ

ಕೋವಿಡ್ ಮಾರ್ಗಸೂಚಿ ಪಾಲಿಸದಿದ್ದರೆ 6-8 ವಾರಗಳಲ್ಲಿ 3ನೇ ಅಲೆ: AIIMS ನಿರ್ದೇಶಕ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada