• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಕ್ಷದ್ವೀಪ ನ್ಯಾಯಾಲಯ ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ಬದಲಾಯಿಸುವ ಯಾವುದೇ ಪ್ರಸ್ತಾಪವಿಲ್ಲ: ಜಿಲ್ಲಾಧಿಕಾರಿ

ಫಾತಿಮಾ by ಫಾತಿಮಾ
June 22, 2021
in ದೇಶ
0
ಲಕ್ಷದ್ವೀಪ ನ್ಯಾಯಾಲಯ ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ಬದಲಾಯಿಸುವ ಯಾವುದೇ ಪ್ರಸ್ತಾಪವಿಲ್ಲ: ಜಿಲ್ಲಾಧಿಕಾರಿ
Share on WhatsAppShare on FacebookShare on Telegram

ಮೋದಿ ಆಪ್ತ, ರಾಜಕಾರಣಿ ಪ್ರಫುಲ್ ಪಟೇಲ್‌‌ ಲಕ್ಷದ್ವೀಪದಲ್ಲಿ ಆಡಳಿತಾಧಿಕಾರಿಯಾಗಿ ನೇಮಕಗೊಂಡ ನಂತರ ಗೋ ಮಾಂಸ ಮಾರಾಟ ನಿಷೇಧ, ಗೂಂಡಾ ಕಾಯ್ದೆ ಜಾರಿ, ಇಬ್ಬರಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ಅನರ್ಹ, ಖಾಸಗಿ ಭೂಮಿ ವಶಪಡಿಸಿಕೊಳ್ಳುವ ಕಾಯ್ದೆ, ಮದ್ಯ ಮಾರಾಟ ನಿಷೇಧ ತೆರವು, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮಾಂಸಾಹಾರ ನಿಷೇಧವನ್ನು ಒಳಗೊಂಡ ಹಲವು ಮಸೂದೆ, ವಿಧೇಯಕಗಳನ್ನು ಪರಿಚಯಿಸಿದ್ದರು. ಇದು ದ್ವೀಪದ ಜನರ ವಿರೋಧಕ್ಕೆ ಕಾರಣವಾಗಿದ್ದು, ಲಕ್ಷದ್ವೀಪದಲ್ಲಿ ಇದೇ ಮೊದಲ ಬಾರಿಗೆ ಪ್ರತಿಭಟನೆಯ ಕಾವು ಕಂಡುಬಂದಿತ್ತು. ಈ ಬಗ್ಗೆ ಕಾನೂನು ಹೋರಾಟಕ್ಕೂ ಚಾಲನೆ ಸಿಕ್ಕಿದ್ದು ಕೇರಳ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.

ADVERTISEMENT
ಪ್ರಫುಲ್ ಪಟೇಲ್‌‌, ಲಕ್ಷದ್ವೀಪದಲ್ಲಿ ಆಡಳಿತಾಧಿಕಾರಿ

ಇದೀಗ ಪ್ರಫುಲ್ ಪಟೇಲ್‌‌‌ ಅವರು ಲಕ್ಷದ್ವೀಪದ ಕಾನೂನು ವ್ಯಾಪ್ತಿಯನ್ನು ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌‌ಗೆ ಬದಲಾಯಿಸಲು ಪ್ರಸ್ತಾಪ ಇಟ್ಟಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿತ್ತು. ಪ್ರಸ್ತುತ ಕೇರಳ ಹೈಕೋರ್ಟೇ ಲಕ್ಷದ್ವೀಪದ ಹೈಕೋರ್ಟೂ ಆಗಿದ್ದು ಇದು ದ್ವೀಪದಿಂದ 400 ಕಿ.ಮೀ.ದೂರದಲ್ಲಿದೆ. ಆದರೆ ಹೊಸದಾಗಿ ಪ್ರಸ್ತಾಪ ಮಾಡಿರುವ ಕರ್ನಾಟಕ ಹೈಕೋರ್ಟ್‌ ದ್ವೀಪದಿಂದ 1,000 ಕಿ.ಮೀ. ದೂರದಲ್ಲಿದೆ.

ಆದರೆ ಭಾನುವಾರ ರಾತ್ರಿ ಲಕ್ಷದ್ವೀಪ ಜಿಲ್ಲಾಧಿಕಾರಿ ಎಸ್.ಅಸ್ಕರ್ ಅಲಿ ಅವರು ಅಂತಹ ಯಾವುದೇ ಪ್ರಸ್ತಾಪಗಳು ಇಲ್ಲ ಎಂದಿರುವುದಾಗಿ ‘ದಿ ವೀಕ್’ ವರದಿ ಮಾಡಿದೆ. ಈ ಮೊದಲು, ನ್ಯಾಯಾಲಯ ವ್ಯಾಪ್ತಿಯನ್ನು ಸ್ಥಳಾಂತರಿಸುವ ಕುರಿತು ಜೂನ್ 17 ರಂದು (ಗುರುವಾರ) ಇಮೇಲ್ ಮೂಲಕ ಅವರಿಗೆ ಕಳುಹಿಸಲಾದ ಪ್ರಶ್ನೆಗಳಿಗೆ ಅಲಿಯಿಂದ ಅಥವಾ ಮುಖ್ಯ ಕಾರ್ಯದರ್ಶಿ ಎ ಅನ್ಬರಸು ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಎನ್ನುತ್ತದೆ ‘ದಿ ವೀಕ್’.

ಎಸ್.ಅಸ್ಕರ್ ಅಲಿ, ಲಕ್ಷದ್ವೀಪ ಜಿಲ್ಲಾಧಿಕಾರಿ

“ಲಕ್ಷದ್ವೀಪ ಆಡಳಿತವು ತನ್ನ ಕಾನೂನು ವ್ಯಾಪ್ತಿಯನ್ನು ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ಬದಲಾಯಿಸುವ ಯಾವುದೇ ಪ್ರಸ್ತಾಪವಿಲ್ಲ. ಕೇರಳದಿಂದ ಕರ್ನಾಟಕಕ್ಕೆ ಉನ್ನತ ಅಧಿಕಾರ ವ್ಯಾಪ್ತಿಯನ್ನು ಬದಲಾಯಿಸುವ ಸುದ್ದಿ ಆಧಾರರಹಿತವಾಗಿದೆ ಮತ್ತು ಸತ್ಯದಿಂದ ದೂರವಿದೆ” ಎಂದು ವಾಟ್ಸಾಪ್ ಸಂದೇಶದಲ್ಲಿ ಅಲಿ ಹೇಳಿರುವುದಾಗಿಯೂ ‘ದಿ ವೀಕ್’ ವರದಿ ಮಾಡಿದೆ

ದ್ವೀಪಗಳ ಹೊಸ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ತೆಗೆದುಕೊಂಡ ನಿರ್ಧಾರಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಹಲವಾರು ದಾವೆಗಳನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಆಡಳಿತವು ಈ ಪ್ರಸ್ತಾಪವನ್ನು ಇಟ್ಟಿತ್ತು ಎಂದು ಹೇಳಲಾಗಿತ್ತು.

ಮಾಜಿ ಆಡಳಿತಾಧಿಕಾರಿ ದಿನೇಶ್ವರ ಶರ್ಮಾ ಅಲ್ಪಾವಧಿಯ ಅನಾರೋಗ್ಯದಿಂದ ನಿಧನರಾದ ನಂತರ ದಮನ್ ಮತ್ತು ಡಿಯು ಆಡಳಿತಗಾರರಾಗಿರುವ ಪಟೇಲ್ ಅವರಿಗೆ ಕಳೆದ ವರ್ಷದ ಡಿಸೆಂಬರ್ ಮೊದಲ ವಾರದಲ್ಲಿ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದ ಹೆಚ್ಚುವರಿ ಉಸ್ತುವಾರಿ ನೀಡಲಾಯಿತು.

ದಿನೇಶ್ವರ ಶರ್ಮಾ, ಲಕ್ಷದ್ವೀಪದ ಮಾಜಿ ಆಡಳಿತಾಧಿಕಾರಿ

ಈ ವರ್ಷ 11 ರಿಟ್ ಅರ್ಜಿಗಳು ಸೇರಿದಂತೆ 23 ಅರ್ಜಿಗಳನ್ನು ಲಕ್ಷದ್ವೀಪದ ಆಡಳಿತಗಾರರ ವಿರುದ್ಧ ಮತ್ತು ದ್ವೀಪಗಳ ಸ್ಥಳೀಯ ಸರ್ಕಾರದ ವಿರುದ್ಧ ಸಲ್ಲಿಸಲಾಗಿದೆ.

ಆದರೆ ಕಾನೂನಿನ ಪ್ರಕಾರ ನ್ಯಾಯಾಲಯದ ವ್ಯಾಪ್ತಿಯನ್ನು ಸಂಸತ್ತಿನ ಮೂಲಕ ಮಾತ್ರ ಬದಲಾಯಿಸಬಹುದಾಗಿದ್ದು, ಈ ಬಗ್ಗೆ ಪಿಟಿಐ ಜೊತೆ ದೂರವಾಣಿ ಮೂಲಕ ಮಾತನಾಡಿದ ಲೋಕಸಭಾ ಸದಸ್ಯ ಮೊಹಮ್ಮದ್ ಫೈಜಲ್ ಪಿ ಪಿ, “ನ್ಯಾಯಾಂಗ ವ್ಯಾಪ್ತಿಯನ್ನು ಕೇರಳದಿಂದ ಕರ್ನಾಟಕಕ್ಕೆ ಸ್ಥಳಾಂತರಿಸುವ ಪ್ರಫುಲ್ ಪಟೇಲ್ ಅವರ ಮೊದಲ ಪ್ರಯತ್ನ ಇದು” ಎಂದು ಹೇಳಿದ್ದಾರೆ.

“ನಿರ್ದಿಷ್ಟವಾಗಿ ನ್ಯಾಯಲಯ ವ್ಯಾಪ್ತಿಯನ್ನು ಬದಲಾಯಿಸಲು ಅವರು ಏಕೆ ಬಯಸುತ್ತಾರೆ? ಇದು ಸಂಪೂರ್ಣವಾಗಿ ತಮ್ಮ ಹುದ್ದೆಯ ದುರುಪಯೋಗವಾಗಿದೆ. ಈ ದ್ವೀಪಗಳಲ್ಲಿನ ಜನರ ಮಾತೃಭಾಷೆ ಮಲಯಾಳಂ ” ಎಂದು ಅವರು ಹೇಳಿದ್ದಾರೆ. ಪ್ರಫುಲ್ ಪಟೇಲ್‌ಗಿಂತ ಮೊದಲು 36 ಆಡಳಿತಾಧಿಕಾರಿಗಳು ಲಕ್ಷದ್ವೀಪಕ್ಕೆ ಆಗಮಿಸಿದ್ದರು ಆದರೆ ಯಾರಿಗೂ ಈ ರೀತಿಯ ಆಲೋಚನೆ ಬಂದಿರಲಿಲ್ಲ ಎಂದು ಫೈಜಲ್ ಹೇಳಿದ್ದಾರೆ.

ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಲಯಾಳಂ ಮೌಖಿಕ ಮತ್ತು ಲಿಖಿತ ಭಾಷೆಯಾಗಿರುವುದರಿಂದ ದ್ವೀಪಕ್ಕೆ ಕೇರಳ ಹೈಕೋರ್ಟನ್ನೇ ನ್ಯಾಯ ತೀರ್ಮಾನಗಳಿಗೆ ಬಳಸಲಾಗುತ್ತಿದೆ ಎಂದು ಲಕ್ಷದ್ವೀಪದ ಕಾನೂನು ತಜ್ಞರು ಹೇಳುತ್ತಾರೆ.

ಹೈಕೋರ್ಟ್‌ನ ನ್ಯಾಯ ವ್ಯಾಪ್ತಿಯನ್ನು ಬದಲಾಯಿಸುವುದರಿಂದ ದ್ವೀಪಗಳ ಸಂಪೂರ್ಣ ನ್ಯಾಯಾಂಗ ವ್ಯವಸ್ಥೆಯು ಬದಲಾಗುತ್ತದೆ. ಏಕೆಂದರೆ ಇದುವರೆಗೆ ಒಂದೇ ಭಾಷೆ ಮತ್ತು ಲಿಪಿ ಹೊಂದಿದ್ದರಿಂದ ಎಲ್ಲಾ ನ್ಯಾಯಾಂಗ ಅಧಿಕಾರಿಗಳನ್ನು ಕೇರಳ ಹೈಕೋರ್ಟ್‌ನಿಂದಲೇ ಕಳುಹಿಸಲಾಗುತ್ತಿತ್ತು. ಅಲ್ಲದೆ ಹೈಕೋರ್ಟನ್ನು ಬದಲಾಯಿಸುವುದರಿಂದ ಸರ್ಕಾರಕ್ಕೆ ಹೆಚ್ಚುವರಿ ಹೊರೆ ಸಹ ಬೀಳಲಿದೆ. ಯಾಕೆಂದರೆ ಪ್ರಸ್ತುತ ವಿಚಾರಣೆಯಲ್ಲಿರುವ ಎಲ್ಲಾ ಪ್ರಕರಣಗಳನ್ನು ಹೊಸದಾಗಿ ಆಲಿಸಬೇಕಾಗುತ್ತದೆ ಕಾನೂನು ತಜ್ಞರು ಅಭಿಪ್ರಾಯ ಪಡುತ್ತಾರೆ.

Previous Post

ಉತ್ತರಪ್ರದೇಶ ಚುನಾವಣೆ ಹಿನ್ನೆಲೆ: ವಿರೋಧ ಪಕ್ಷಗಳ ಒಗ್ಗಟ್ಟಿಗೆ ಶರದ್ ಪವಾರ್ ತಯಾರಿ

Next Post

ಜೂನ್ 24ರಂದು ಎಐಸಿಸಿ ಮತ್ತು ರಾಜ್ಯ ಉಸ್ತುವಾರಿಗಳ ಸಭೆ ಕರೆದ ಸೋನಿಯಾ ಗಾಂಧಿ

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ದೇಶ ಕರೋನಾದಿಂದ ಬಚಾವ್ ಆಗಬಹುದು. ಆದರೆ ಕಾಂಗ್ರೆಸ್ ಸೋಮಾರಿತನ ರೋಗದಿಂದ ಚೇತರಿಸಿಕೊಳ್ಳುವುದಿಲ್ಲ

ಜೂನ್ 24ರಂದು ಎಐಸಿಸಿ ಮತ್ತು ರಾಜ್ಯ ಉಸ್ತುವಾರಿಗಳ ಸಭೆ ಕರೆದ ಸೋನಿಯಾ ಗಾಂಧಿ

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada