• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ದೆಹಲಿಯಿಂದ ಬರುತ್ತಲೇ ಸಿದ್ದರಾಮಯ್ಯ ವಿರುದ್ಧ ಗುಟುರು ಹಾಕಿದರೇ ಡಿಕೆಶಿ?

Shivakumar by Shivakumar
June 24, 2021
in ರಾಜಕೀಯ
0
ದೆಹಲಿಯಿಂದ ಬರುತ್ತಲೇ ಸಿದ್ದರಾಮಯ್ಯ ವಿರುದ್ಧ ಗುಟುರು ಹಾಕಿದರೇ ಡಿಕೆಶಿ?
Share on WhatsAppShare on FacebookShare on Telegram

“ವಿಧಾನಸೌಧದ ಮೂರನೇ ಮಹಡಿಯನ್ನು ಏರಲು ಮೆಟ್ಟಿಲಾಗಿ ನನ್ನನ್ನು ಬಳಸಿಕೊಳ್ಳಿ. ಮುಂದಿನ ಮುಖ್ಯಮಂತ್ರಿಯಾಗಲು ನನಗೆ ಅವಸರವಿದೆ ಎಂದು ನಾನೆಂದೂ ಹೇಳಿಲ್ಲ. ಮುಖ್ಯಮಂತ್ರಿ ಕುರಿತ ಹೇಳಿಕೆಗಳ ವಿಷಯದಲ್ಲಿ ಪಕ್ಷದ ಹೈಕಮಾಂಡ್ ಏನು ಹೇಳಬೇಕೋ ಅದನ್ನು ಹೇಳಿದೆ. ಆದರೂ ಕೆಲವರು ಅಂತಹ ಹೇಳಿಕೆ ಮುಂದುವರಿಸಿದ್ಧಾರೆ. ಶಾಸಕರ ಅಂತಹ ಹೇಳಿಕೆಗಳನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಅವರು ನೋಡಿಕೊಳ್ಳದೇ ಇದ್ದರೆ, ಆ ಬಗ್ಗೆ ಗಮನಹರಿಸಲು ಕಾಂಗ್ರೆಸ್ ಪಕ್ಷ ಬದುಕಿದೆ”

ADVERTISEMENT
ತನ್ನದೇ ಆದ ಇತಿಹಾಸವಿರುವ ಕಾಂಗ್ರೆಸನ್ನು ಯಾರಿಗೂ ಸಾಯಿಸಲು ಸಾಧ್ಯವಿಲ್ಲ -DK ಶಿವಕುಮಾರ್‌ #DKShivakumar #Congress

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಭುಗಿಲೆದ್ದಿರುವ ಮುಖ್ಯಮಂತ್ರಿ ಸ್ಥಾನದ ಪೈಪೋಟಿಯ ಬಗ್ಗೆ ಸಾಕಷ್ಟು ಹೇಳುತ್ತದೆ. ಅದರಲ್ಲೂ ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ, ಕಳೆದ ಎರಡೂವರೆ ವರ್ಷದಿಂದ ನಡೆಯುತ್ತಿರುವ ಮುಸುಕಿನ ಗುದ್ದಾಟ ಇದೀಗ ಮಧ್ಯಂತರ ಚುನಾವಣೆಯ ನಿರೀಕ್ಷೆಯಲ್ಲಿ ಕ್ಲೈಮ್ಯಾಕ್ಸ್ ಗೆ ತಲುಪಿದೆ ಎಂಬುದನ್ನೂ ಈ ಹೇಳಿಕೆ ಹೇಳದೇ ಇರದು. ಏಕೆಂದರೆ, ಡಿ ಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿರುವುದು ದೆಹಲಿಗೆ ಹೋಗಿ ಪಕ್ಷದ ಹೈಕಮಾಂಡ್ ಭೇಟಿ ಮಾಡಿ ಬಂದ ಬಳಿಕ! ಅದರಲ್ಲೂ ಪಕ್ಷದ ಸಂಘಟನೆಯನ್ನು ತಮ್ಮ ಕೈಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಎಂದೇ ಹೇಳಲಾಗುತ್ತಿರುವ ಪಕ್ಷದ ಜಿಲ್ಲಾ ಮತ್ತು ಬ್ಲಾಕ್ ಪದಾಧಿಕಾರಿಗಳ ಬದಲಾವಣೆಗೆ ಹೈಕಮಾಂಡ್ ಹಸಿರು ನಿಶಾನೆ ತೋರಿದ ಬಳಿಕ!

ಹಾಗಾಗಿ, ಈ ಹೇಳಿಕೆ ಸಹಜವಾಗೇ ವ್ಯಂಗ್ಯ, ಧಮಕಿ ಸೇರಿದಂತೆ ಹಲವು ಅರ್ಥಗಳನ್ನು ಏಕಕಾಲಕ್ಕೆ ಹೊರಡಿಸುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುವ ಒಂದು ಅವಕಾಶವೆಂಬುದು ಕಾಂಗ್ರೆಸ್ಸಿನಲ್ಲಿ ಬಹುತೇಕ ಸಂಪ್ರದಾಯ. ಆ ಹಿನ್ನೆಲೆಯಲ್ಲಿ ಕಳೆದ ಬಾರಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಸಾಕಷ್ಟು ತೆರೆಮರೆಯ ಹಗಜಗ್ಗಾಟ ನಡೆದಿತ್ತು. ಹೇಗಾದರೂ ಮಾಡಿ, ಡಿ ಕೆ ಶಿವಕುಮಾರ್ ಸೇರಿದಂತೆ ತಮ್ಮ ಬಣದವವರಲ್ಲದವರು ಆ ಸ್ಥಾನಕ್ಕೆ ಬರದಂತೆ ತಡೆಯಬೇಕು ಎಂಬ ಲೆಕ್ಕಾಚಾರದಲ್ಲಿ ಸಿದ್ದರಾಮಯ್ಯ ದಿನೇಶ್ ಗುಂಡೂರಾವ್ ಅವರನ್ನೇ ಮುಂದುವರಿಸಲು ಯತ್ನಿಸಿದ್ದರು. ಅದೂ ಸಾಧ್ಯವಿಲ್ಲ ಎನಿಸಿದಾದ ಡಾ ಎಂ ಬಿ ಪಾಟೀಲ್ ಮತ್ತಿತರ ತಮ್ಮ ಆಪ್ತ ಬಳಗದವರನ್ನೇ ಕೆಪಿಸಿಸಿ ಕುರ್ಚಿಯಲ್ಲಿ ಕೂರಿಸಲು ಯತ್ನಿಸಿದ್ದರು. ಕೊನೆಗೇ ಮೂಲ ಕಾಂಗ್ರೆಸ್ಸಿಗರು ಮತ್ತು ವಲಸೆ ಕಾಂಗ್ರೆಸ್ಸಿಗರ ಲೆಕ್ಕಾಚಾರದ ಪ್ರಕಾರ, ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿರುವುದರಿಂದ ಸಹಜವಾಗೇ ಮೂಲ ಕಾಂಗ್ರೆಸ್ಸಿಗರ ಪೈಕಿ ಪಕ್ಷ ಸಂಘಟನೆಗೆ ಬೇಕಾದ ಪ್ರಭಾವ ಮತ್ತು ‘ಬಲ’ದ ಮಾನದಂಡದ ಮೇಲೆ ಹೈಕಮಾಂಡ್ ಡಿ ಕೆ ಶಿವಕುಮಾರ್ ಅವರನ್ನು ನೇಮಕ ಮಾಡಿತ್ತು.

ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ: ಡಿ.ಕೆ. ಶಿವಕುಮಾರ್

ಆದರೆ, ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾದರೂ, ಡಿ ಕೆ ಶಿವಕುಮಾರ್ ಅವರಿಗೆ ಪಕ್ಷದ ತಳಮಟ್ಟದಿಂದ ಮೇಲಿನವರೆಗೆ ಹಿಡಿತ ಸಾಧಿಸಲು ಅಗತ್ಯ ಸಮಯಾವಕಾಶ ಮತ್ತು ರಾಜ್ಯ ಪ್ರವಾಸದ ಅವಕಾಶಕ್ಕೆ ಕೋವಿಡ್ ದೊಡ್ಡ ಅಡ್ಡಗಾಲಾಗಿತ್ತು. ಹಾಗಾಗಿ, ಪಕ್ಷದ ಚುಕ್ಕಾಣಿ ಹಿಡಿದರೂ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಈಗಲೂ ಸಿದ್ದರಾಮಯ್ಯ ಮಾತೇ ನಡೆಯುವಂತಹ ಇರುಸುಮುರಿಸಿನ ಪರಿಸ್ಥಿತಿ ಮುಂದುವರಿದಿತ್ತು.

ಇದೀಗ ಕರೋನಾ ಲಾಕ್ ಡೌನ್ ಅಂತ್ಯ ಸಮೀಪಿಸುವ ಹೊತ್ತಿಗೆ ಆಡಳಿತದ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ತಾರಕಕ್ಕೇರಿದೆ. ಒಂದು ಹಂತದಲ್ಲಿ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿಲ್ಲ. ಹಾಗೊಂದು ವೇಳೆ ಅವರ ಪಕ್ಷದ ವರಿಷ್ಠರು ಒತ್ತಾಯಪೂರ್ವಕವಾಗಿ ರಾಜೀನಾಮೆ ಪಡೆದುಕೊಂಡರೆ, ಬಿಜೆಪಿಯಿಂದ ಹೊರಹೋಗಿ ಮತ್ತೆ ಪ್ರಾದೇಶಿಕ ಪಕ್ಷ ಕಟ್ಟಲು ಸಿದ್ಧತೆ ನಡೆಸಿದ್ದಾರೆ ಎಂಬ ವದಂತಿಗಳು ಜೋರಾಗಿದ್ದವು. ಆ ಹಿನ್ನೆಲೆಯಲ್ಲಿ ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನೂ ಊಹಿಸಿದ ಡಿ ಕೆ ಶಿವಕುಮಾರ್ ಅವರು ಪಕ್ಷದ ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಆಯಕಟ್ಟಿನ ಸ್ಥಾನಗಳಲ್ಲಿ ತಮ್ಮವರನ್ನೇ ಕೂರಿಸುವ ಮೂಲಕ ಇಡೀ ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು, ನಾಳೆ ಸಂದರ್ಭ ಬಂದಾಗ ವಿಧಾನಸಭಾ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಸಿಎಂ ಕುರ್ಚಿ ಏರಲು ಬೇಕಾದ ಜನಬಲದವರೆಗೆ ಎಲ್ಲಕ್ಕೂ ವ್ಯವಸ್ಥೆ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ತಂತ್ರಗಾರಿಕೆ ಆರಂಭಿಸಿದ್ದರು.

ಡಿ ಕೆ ಶಿವಕುಮಾರ್ ಅವರ ಈ ತಂತ್ರ ಅಂತಿಮವಾಗಿ ಪಕ್ಷದ ಮೇಲಿನ ತಮ್ಮ ಹಿಡಿತವನ್ನು ಕಿತ್ತುಕೊಳ್ಳಲಿದೆ ಎಂಬ ಸೂಕ್ಷ್ಮ ಅರಿತ ಸಿದ್ದರಾಮಯ್ಯ, ತಮ್ಮ ಬೆಂಬಲಿಗರ ಮೂಲಕ ಮುಂದಿನ ಸಿಎಂ ತಾವೇ ಎಂಬ ಹೇಳಿಕೆಗಳನ್ನು ತೇಲಿಬಿಟ್ಟು, ಪಕ್ಷದ ಸಂಘಟನೆ ಮಟ್ಟದಲ್ಲಿ ಏನೇ ಸರ್ಕಸ್ ಮಾಡಿದರೂ ಅಂತಿಮವಾಗಿ ಪಕ್ಷದ ಶಾಸಕರು ಮತ್ತು ರಾಜ್ಯದ ಜನತೆ ಈಗಲೂ ತಮ್ಮ ಹೆಸರನ್ನೇ ಸಿಎಂ ಸ್ಥಾನಕ್ಕೆ ಸೂಚಿಸುತ್ತಾರೆ ಎಂದು ಪರೋಕ್ಷವಾಗಿ ಡಿ ಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

ಆದರೆ, ಈ ವಿಷಯದಲ್ಲಿ ಪಕ್ಕಾ ಯೋಜನೆ ತಯಾರಿಸಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷರು, ಇತ್ತ ಸಿದ್ದರಾಮಯ್ಯ ಬಣದವರು ಮುಂದಿನ ಸಿಎಂ ಭಜನೆ ಮಾಡುತ್ತಿರುವಾಗಲೇ ದೆಹಲಿಗೆ ಹಾರಿ, ಜಿಲ್ಲಾ ಮಟ್ಟದ ಬ್ಲಾಕ್ ಮಟ್ಟದ ಪದಾಧಿಕಾರಿಗಳ ಬದಲಾವಣೆಗೆ ಗ್ರೀನ್ ಸಿಗ್ನಲ್ ಪಡೆದು ಬಂದಿದ್ಧಾರೆ. ಬಂದವರೇ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರ ವಿರುದ್ಧ ಪರೋಕ್ಷ ಗುಟುರು ಹಾಕಿದ್ದಾರೆ. ಆದರೆ, ಹೈಕಮಾಂಡ್ ಗ್ರೀನ್ ಸಿಗ್ನಲ್ ಬಲದ ಮೇಲೆ ಮುನ್ನುಗ್ಗುತ್ತಿರುವ ಡಿ ಕೆ ಶಿವಕುಮಾರ್ ಅವರಿಗೆ ಬ್ರೇಕ್ ಹಾಕಲು ಈಗಾಗಲೇ ಸಿದ್ದರಾಮಯ್ಯ ಪ್ರತಿತಂತ್ರ ಹೆಣೆದಿದ್ದು, ಪಕ್ಷದ ಜಿಲ್ಲಾ ಮಟ್ಟದ ತಾಲೂಕು ಅಧ್ಯಕ್ಷರ ದಿಢೀರ್ ಬದಲಾವಣೆಯ ಯೋಜನೆಗೆ ತಮ್ಮದೇ ಕಾರಣಗಳನ್ನು ಕೊಟ್ಟು ತಡೆಯೊಡ್ಡಲು ಸಿದ್ದರಾಮಯ್ಯ ಸದ್ಯದಲ್ಲೇ ದೆಹಲಿಗೆ ಹಾರಲಿದ್ದಾರೆ. ಅಲ್ಲಿ ಹೈಕಮಾಂಡ್ ಜೊತೆ ಪದಾಧಿಕಾರಿಗಳ ಬದಲಾವಣೆಯ ಸಾಧಕ-ಬಾಧಕ ಕುರಿತು ಚರ್ಚಿಸಿ, ಅಂತಹ ದಿಢೀರ್ ಕ್ರಮ ಪಕ್ಷದ ಸಂಘಟನೆಯ ಮೇಲೆ ಬೀರುವ ಪರಿಣಾಮಗಳನ್ನು ವಿವರಿಸಿ, ಸಾಧ್ಯವಾದಷ್ಟು ಯಥಾಸ್ಥಿತಿ ಮುಂದುವರಿಸಿಕೊಂಡು ಹೋಗುವಂತೆ ಮನವೊಲಿಸಲಿದ್ದಾರೆ ಎನ್ನಲಾಗಿದೆ.

ಒಟ್ಟಾರೆ, ಬಿಜೆಪಿಯ ನಾಯಕತ್ವ ಬದಲಾವಣೆಯ ಬಿಕ್ಕಟ್ಟು ತಣ್ಣಗಾಗುತ್ತಿದ್ದಂತೆ ಇತ್ತ ಕಾಂಗ್ರೆಸ್ಸಿನಲ್ಲಿ ಇಷ್ಟು ದಿನ ಬೂದಿಮುಚ್ಚಿದ ಕೆಂಡದಂತಿದ್ದ ಇಬ್ಬರು ನಾಯಕರ ನಡುವಿನ ಸಿಎಂ ಕುರ್ಚಿಯ ಹಣಾಹಣಿ ಮತ್ತೆ ಕಾವೇರಿದೆ. ಭವಿಷ್ಯದ ಕುರ್ಚಿಗಾಗಿನ ಈ ಮದಗಜಗಳ ಕಾದಾಟದಲ್ಲಿ ಯಾವ ನಾಯಕರ ಕೈ ಮೇಲಾಗುವುದೋ ಕಾದುನೋಡಬೇಕಿದೆ. ಆದರೆ, ಸದ್ಯಕ್ಕಂತೂ ಜಿಲ್ಲಾ ಮತ್ತು ತಾಲೂಕು ಮಟ್ಟದ ನಾಯಕರು ನಜ್ಜುಗುಜ್ಜಾಗುವ ಸಾಧ್ಯತೆಯಂತೂ ಇದ್ದೇ ಇದೆ.

Previous Post

ಲಾಕ್ ಡೌನ್ ನಲ್ಲಿ ಆನ್ ಲೈನ್ ಸೈಕ್ಲಿಂಗ್ ಕೋಚಿಂಗ್…

Next Post

ಕೋಲಾರದ ಜನರ ಬದುಕಿಗಿಂತ ಯಾವುದೂ ದುಬಾರಿಯಲ್ಲ: ಆಂಜನೇಯ ರೆಡ್ಡಿ

Related Posts

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
0

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....

Read moreDetails
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
Next Post
ಕೋಲಾರದ ಜನರ ಬದುಕಿಗಿಂತ ಯಾವುದೂ ದುಬಾರಿಯಲ್ಲ: ಆಂಜನೇಯ ರೆಡ್ಡಿ

ಕೋಲಾರದ ಜನರ ಬದುಕಿಗಿಂತ ಯಾವುದೂ ದುಬಾರಿಯಲ್ಲ: ಆಂಜನೇಯ ರೆಡ್ಡಿ

Please login to join discussion

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada