• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹೆಚ್‌ಡಿಕೆ – ಸುಮಲತಾ ವಾಕ್ಸಮರದ ನಡುವೆಯೇ, ʼಕೆ ಆರ್ ಎಸ್ ಸುರಕ್ಷಿತವಾಗಿದೆʼ ಎಂದ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
July 10, 2021
in ರಾಜಕೀಯ
0
ಹೆಚ್‌ಡಿಕೆ – ಸುಮಲತಾ ವಾಕ್ಸಮರದ ನಡುವೆಯೇ, ʼಕೆ ಆರ್ ಎಸ್ ಸುರಕ್ಷಿತವಾಗಿದೆʼ ಎಂದ ಸರ್ಕಾರ
Share on WhatsAppShare on FacebookShare on Telegram

ಕಾವೇರಿ ನೀರಾವರಿ ನಿಗಮ ನಿಯಮಿತ (ಸಿಎನ್ಎನ್ಎಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಜಯಪ್ರಕಾಶ್ ಅವರು ʼಕೆಆರ್‌ಎಸ್ (ಕೃಷ್ಣ ರಾಜ ಸಾಗರ)  ಅಣೆಕಟ್ಟು ಸುರಕ್ಷಿತವಾಗಿದೆ. ಅಣೆಕಟ್ಟಿನ ಗೋಡೆಯಲ್ಲಿ ಯಾವುದೇ ಬಿರುಕು ಇಲ್ಲದಿರುವುದು ಆಗಾಗ್ಗೆ ನಡೆಸಿದ ತಪಾಸಣೆಯಿಂದ ಖಚಿತವಾಗಿದೆʼ ಎಂದು ಸ್ಪಷ್ಟಪಡಿಸಿದ್ದಾರೆ. 

ADVERTISEMENT


ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಮಧ್ಯೆ ಕೆಆರ್‌ಎಸ್ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ತಾರಕಕ್ಕೇರಿರುವ ನಡುವಲ್ಲೇ ರಾಜ್ಯ ಸರ್ಕಾರ ಕೆಆರ್‌ಎಸ್ ಸುರಕ್ಷಿತವಾಗಿದೆ ಎಂದು ಸ್ಪಷ್ಟನೆ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ʼಅಣೆಕಟ್ಟು ಸುರಕ್ಷಾ ಪರಿಶೀಲನಾ ಸಮಿತಿ (ಡಿಎಸ್ಆರ್’ಪಿ) ಸದಸ್ಯರು ಹಾಗೂ ಇಲಾಖಾ ಮುಖ್ಯಸ್ಥರು ಅಣೆಕಟ್ಟನ್ನು ನಿಯಮಿತ ಅವಧಿಗಳಲ್ಲಿ ಪರಿವೀಕ್ಷಿಸಿ ವರದಿಯನ್ನು ನೀಡುತ್ತಾ ಬಂದಿದ್ದಾರೆ. ಅಣೆಕಟ್ಟು ರಚನೆಯಲ್ಲಿ ಯಾವುದೇ ದೋಷ ಇಲ್ಲ ಮತ್ತು ಬಿರುಕುಗಳು ಇಲ್ಲʼ ಎಂದು ತಿಳಿಸಿದ್ದಾರೆ. 

ʼಡಿಎಸ್ಆರ್’ಪಿ ಸದಸ್ಯರು ನೀಡಿರುವ ಸಲಹೆಗಳ ಆಧಾರದ ಮೇಲೆ ಅಣೆಕಟ್ಟಿನ ಬಲವನ್ನು ವೃದ್ಧಿಸಲು ಅವಕಾಶವಿರುವ ಕಾಮಗಾರಿಗಳನ್ನು ಅಣೆಕಟ್ಟು ಪುನಶ್ಚೇತನ ಮತ್ತು ಅಭಿವೃದ್ಧಿ ಯೋಜನೆಯ ಹಂತ-1ರ ಅಡಿ ಕೈಗೊಳ್ಳಲಾಗಿದೆ. 70 ಅಡಿಯಿಂದ 131 ಅಡಿಯವರೆಗೆ ಹೊಸದಾಗಿ ಕಟ್ಟಡದ ಕಲ್ಲುಗಳ ಸಂದಿಯಲ್ಲಿ ದುರಸ್ತಿ ಮಾಡಿ ಅಣೆಕಟ್ಟೆಯನ್ನು ಭದ್ರಗೊಳಿಸಲಾಗಿದೆʼ ಎಂದು ವಿವರಿಸಿದ್ದಾರೆ.

ʼಅಣೆಕಟ್ಟೆಯ ಪುನಶ್ಚೇತನ ಕಾಮಗಾರಿಗೆ ವಿಶ್ವಬ್ಯಾಂಕ್ ಮತ್ತು ಕೇಂದ್ರ ಜಲ ಆಯೋಗದಿಂದ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ. ಜು.2ರಂದು ಅಣೆಕಟ್ಟು ಪುನಶ್ಚೇತನ ಮತ್ತು ಅಭಿವೃದ್ಧಿ ಯೋಜನೆಯ ಸಲಹೆಗಾರರು ಹಾಗೂ ರಾಜ್ಯದ ಗೇಟ್ ಸಲಹಾ ಸಮಿತಿ ಸದಸ್ಯರು ಅಣೆಕಟ್ಟೆಯ 136 ಗೇಟುಗಳ ಬದಲಾವಣೆ ಕಾಮಗಾರಿಯ ಸ್ಥಳ ಪರಿವೀಕ್ಷಣೆ ನಡೆಸಿದ್ದು, ಅಣೆಕಟ್ಟೆಯ ಗೋಡೆಯಲ್ಲಿ ಯಾವುದೇ ತರಹದ ಬಿರುಕು ಇಲ್ಲವೆಂದು ತಿಳಿಸಿದ್ದಾರೆಂದುʼ ಸ್ಪಷ್ಟನೆ ನೀಡುವ ಮೂಲಕ ಬಿರುಕು ಬಿಟ್ಟಿದೆ ಎಂಬ ನಾಯಕರ ಹೇಳಿಕೆ ವಿರುದ್ಧ ಕಿಡಿಕಾರಿದ್ದಾರೆ.

Tags: BS YeddyurappaKRSkumaraswamysumalatha
Previous Post

ಅಫ್ಘಾನ್ ಮೇಲೆ ತಾಲಿಬಾನ್ ಹಿಡಿತ ಹೆಚ್ಚುತ್ತಿದ್ದಂತೆ ಆಯ್ಕೆಗಳನ್ನು ಮುಕ್ತವಾಗಿರಿಸಿದ ಭಾರತ

Next Post

ಹೆಚ್ಡಿಕೆ vs ಸುಮಲತಾ ಸಂಘರ್ಷ: ಅನಗತ್ಯ ವಿಚಾರಕ್ಕೆ ತಲೆ ಹಾಕದಂತೆ ಜೆಡಿಎಸ್ ಕಾರ್ಯಕರ್ತರಿಗೆ YSV ದತ್ತಾ ಮನವಿ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಹೆಚ್ಡಿಕೆ vs ಸುಮಲತಾ ಸಂಘರ್ಷ: ಅನಗತ್ಯ ವಿಚಾರಕ್ಕೆ ತಲೆ ಹಾಕದಂತೆ ಜೆಡಿಎಸ್ ಕಾರ್ಯಕರ್ತರಿಗೆ YSV ದತ್ತಾ ಮನವಿ

ಹೆಚ್ಡಿಕೆ vs ಸುಮಲತಾ ಸಂಘರ್ಷ: ಅನಗತ್ಯ ವಿಚಾರಕ್ಕೆ ತಲೆ ಹಾಕದಂತೆ ಜೆಡಿಎಸ್ ಕಾರ್ಯಕರ್ತರಿಗೆ YSV ದತ್ತಾ ಮನವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada