• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶ್ರದ್ಧಾಂಜಲಿ ಹಾಗೂ ಸಾರ್ವಜನಿಕ ಹಕ್ಕೊತ್ತಾಯದ ಬಹಿರಂಗ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
July 14, 2021
in ದೇಶ
0
ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶ್ರದ್ಧಾಂಜಲಿ ಹಾಗೂ ಸಾರ್ವಜನಿಕ ಹಕ್ಕೊತ್ತಾಯದ ಬಹಿರಂಗ ಸಭೆ
Share on WhatsAppShare on FacebookShare on Telegram

‘ಕರಾಳ ಯುಎಪಿಎ ವಿರೋಧಿ ಸಮಾನ ಮನಸ್ಕರ ವೇದಿಕೆ’ ಆಶ್ರಯದಲ್ಲಿ ಇಂದು 14-7-2021 ಬೆಂಗಳೂರಿನಲ್ಲಿ ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶ್ರದ್ಧಾಂಜಲಿ ಹಾಗೂ ಸಾರ್ವಜನಿಕ ಹಕ್ಕೊತ್ತಾಯದ ಬಹಿರಂಗ ಸಭೆ ನಡೆಯಿತು. ಕೋವಿಡ್ನ ಕಟ್ಟುನಿಟ್ಟಿನ ನಿರ್ಬಂಧಗಳ ನಡುವೆಯೂ ಸುಮಾರು 150 ಜನ ವಿವಿಧ ಸಂಘಟನೆಗಳ ಕಾರ್ಯಕರ್ತರು-ಮುಖಂಡರು ಹಾಗೂ ಹಲವು ಮಂದಿ ಸಾರ್ವಜನಿಕ ಗಣ್ಯರು ಸಭೆಯಲ್ಲಿ ಪಾಲ್ಗೊಂಡು, ಕರಾಳ UAPA ಮತ್ತು NIA ರದ್ದಾಗಬೇಕು, ಬಂಧಿತ ಹೋರಾಟಗಾರರ ಬಿಡುಗಡೆಯಾಗಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಿದರು.

ADVERTISEMENT

ಹಿರಿಯ ವಕೀಲರಾದ ಕೆ. ಬಾಲನ್ ಅವರು ಯುಎಪಿಎ ಮತ್ತು ಎನ್ಐಎ ಕುರಿತು ಮಾತನಾಡಿ, ಇದು ಈ ಮೊದಲಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿಯೇ ಕಾಯ್ದೆಯಾಗಿ ಬಂದಿದ್ದು, ಅದರೊಳಗೆ ಜಗತ್ತಿನಲ್ಲೆಲ್ಲೂ ಇಲ್ಲದಂಥ ಅತಿ ಕ್ರೂರವೂ, ಮಾನವೀಯತೆಗೆ ತದ್ವಿರುದ್ಧವೂ ಆದಂಥ ಮತ್ತಷ್ಟು ಕಲಂಗಳನ್ನು ಕಾಲಕಾಲಕ್ಕೆ ಸೇರಿಸಿದ್ದಲ್ಲದೆ, ಅದರ ನಿರಾತಂಕ ಜಾರಿಗಾಗಿ ಎನ್ಐಎ ತನಿಖಾ ಸಂಸ್ಥೆಯನ್ನೂ ಸ್ಥಾಪಿಸಲಾಯಿತು. ನಂತರದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಇವುಗಳ ವ್ಯಾಪ್ತಿ ಮತ್ತು ಅಧಿಕಾರಗಳನ್ನು ಮತ್ತಷ್ಟು ಹಿಗ್ಗಿಸಿ ಇವತ್ತಿನ ಅಕರಾಳ ವಿಕರಾಳ ಸ್ವರೂಪಕ್ಕೆ ತಂದಿಟ್ಟಿದೆ. ಈ ಎಲ್ಲ ಪಕ್ಷಗಳಿಗೂ ನೆಲ-ಜಲ-ಖನಿಜ ಮೊದಲ್ಗೊಂಡು ದೇಶದ ಸಕಲ ಸಂಪತ್ತನ್ನೂ ದೊಡ್ಡ ಬಂಡವಾಳಿಗ ಕಾರ್ಪೊರೇಟ್ ಶಕ್ತಿಗಳಿಗೆ ಬಿಡಿಗಾಸಿಗೆ ಧಾರೆ ಎರೆಯುವುದು ಹಾಗೂ ಅದನ್ನು ವಿರೋಧಿಸುವ ಆದಿವಾಸಿ-ದಲಿತ-ಅಲ್ಪಸಂಖ್ಯಾತ ಮತ್ತಿತರ ಸಮುದಾಯಗಳು ಮತ್ತು ಪ್ರಜಾತಾಂತ್ರಿಕ ಸಂಘಟನೆಗಳನ್ನು ಬಗ್ಗುಬಡಿಯುವುದಕ್ಕಾಗಿ ಇಂತಹ ಘೋರ ಕಾಯಿದೆ ಅಗತ್ಯವಾಗಿದೆ ಎಂದರು.

ಬಿ.ಟಿ.ಲಲಿತಾ ನಾಯಕ್ ಅವರು ಮಾತನಾಡಿ, ಸ್ಟ್ಯಾನ್ ಸ್ವಾಮಿಯಂಥ ಧೀಮಂತ ಸಂತನ ಕ್ರೂರ ಕೊಲೆಗೆ ಶ್ರದ್ಧಾಂಜಲಿ ಸಲ್ಲಿಸುವುದು ಮತ್ತು ಇಂತಹ ಕಾಯ್ದೆಗಳ ವಿರುದ್ಧ ಮಾತನಾಡುವುದು ಕೂಡ ದೇಶದ್ರೋಹ ಎಂಬಂಥ ಪ್ರಚಾರವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಈಗಾಗಲೇ ಅದರ ವಿವಿಧ ರೂಪಗಳಲ್ಲಿ ರದ್ದಾಗಿರುವ ಯುಎಪಿಎಯನ್ನು ಕೂಡಲೇ ರದ್ದು ಮಾಡುವಂತೆ ನಾವೆಲ್ಲರೂ ನಿರಂತರ ಹೋರಾಟ ಮಾಡದಿದ್ದರೆ ಈ ದೇಶದಲ್ಲಿ ಜನಸಾಮಾನ್ಯರಿಗೆ ಭವಿಷ್ಯವೇ ಇಲ್ಲದಂತಾಗುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಈ ಲಾಭಬಡುಕರು ಏನನ್ನೂ ಉಳಿಸುವುದಿಲ್ಲ. ಯುಎಪಿಎ ಮತ್ತು ಎನ್ಐಎ ರದ್ದಾಗಲೇಬೇಕು ಎಂದು ಆಗ್ರಹಿಸಿದರು.

ಪಿಯೂಸಿಎಲ್ನ ಪ್ರೊ. ವೈ.ಜೆ.ರಾಜೇಂದ್ರ ಮಾತನಾಡಿ, ವಿಚಾರಣೆಯಾಗಲಿ ಜಾಮೀನಾಗಲಿ ಇಲ್ಲದೆ, ಚಿಕಿತ್ಸೆಗೆ ಅವಕಾಶವನ್ನೂ ನೀಡದೆ, ಸ್ವಾಮಿ ಅವರನ್ನು ಅಮಾನುಷ ಹಿಂಸೆಗೆ ಈಡುಮಾಡಿ ಕೊಂದಿದ್ದರಲ್ಲಿ ಎನ್ಐಎ ಅಧಿಕಾರಿಗಳು ಮತ್ತು ಸ್ಥಳೀಯ ಕೋರ್ಟುಗಳು ಮಾತ್ರವಲ್ಲ, ಹೈಕೋರ್ಟಿನಂಥ ಉನ್ನತ ನ್ಯಾಯಾಲಯ ಕೂಡ ಭಾಗೀದಾರನಾಗಿದೆ. ಹೀಗಾಗಿ ಈ ಕುರಿತು ಉನ್ನತ ವಿಚಾರಣೆ ನಡೆದು ಎಲ್ಲ ತಪ್ಪಿತಸ್ಥರಿಗೂ ಶಿಕ್ಷೆಯಾಗಬೇಕು, ಯುಎಪಿಎ/ಎನ್ಐಎ ರದ್ದಾಗಬೇಕು, ಎಲ್ಲ ರಾಜಕೀಯ ಕೈದಿಗಳನ್ನೂ ಬೇಶರತ್ ಬಿಡುಗಡೆ ಮಾಡಬೇಕು ಎಂದು ಪಿಯೂಸಿಎಲ್ ಆಗ್ರಹಿಸುತ್ತದೆ ಎಂದರು.

ಈ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟ ರಾಜ್ಯದಾದ್ಯಂತ ನಡೆಯಬೇಕಿದೆ, ಅದಕ್ಕಾಗಿ ಇನ್ನೂ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸಿ, ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಸಮಾನ ಮನಸ್ಕ ಸಂಘಟನೆಗಳೂ ಒಗ್ಗೂಡಬೇಕಿದೆ, ಜನಸಾಮಾನ್ಯರೂ ಸ್ವಯಂಪ್ರೇರಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕಿದೆ ಎಂದು ಸಿರಿಮನೆ ನಾಗರಾಜ್ ಮನವಿ ಮಾಡಿದರು.

ದಲಿತ ಮುಖಂಡ ಎಸ್. ಗೋಪಾಲ್, ಪ್ರೊ. ಎನ್.ವಿ. ನರಸಿಂಹಯ್ಯ ಮಾತನಾಡಿ ಸ್ವಾಮಿಯವರ ಹತ್ಯೆಯನ್ನು ಖಂಡಿಸಿ, ಯುಎಪಿಎ ಮತ್ತು ಎನ್ಐಎ ರದ್ದತಿಗಾಗಿ ಒತ್ತಾಯಿಸಿದರು.

Previous Post

ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಸಂಪೂರ್ಣ; ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಸಚಿವ ಸುರೇಶ್ ಕುಮಾರ್ ಸಲಹೆ

Next Post

ಕಾಂಗ್ರೆಸ್ ಸೇರುತ್ತಾರಾ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್?

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಕಾಂಗ್ರೆಸ್ ಸೇರುತ್ತಾರಾ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್?

ಕಾಂಗ್ರೆಸ್ ಸೇರುತ್ತಾರಾ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್?

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada