• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2022 ಉ.ಪ್ರ ಚುನಾವಣೆ ಗೆಲ್ಲಲು BSP ಸರ್ಕಸ್; ದಲಿತ-ಬ್ರಾಹ್ಮಣ ಟ್ರಂಪ್ ಕಾರ್ಡ್ ಪ್ಲೇಗೆ ಮುಂದಾದ ಮಾಯಾವತಿ

ನಚಿಕೇತು by ನಚಿಕೇತು
July 18, 2021
in ದೇಶ
0
2022 ಉ.ಪ್ರ ಚುನಾವಣೆ ಗೆಲ್ಲಲು BSP ಸರ್ಕಸ್; ದಲಿತ-ಬ್ರಾಹ್ಮಣ ಟ್ರಂಪ್ ಕಾರ್ಡ್ ಪ್ಲೇಗೆ ಮುಂದಾದ ಮಾಯಾವತಿ
Share on WhatsAppShare on FacebookShare on Telegram

2022 ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗೆಲ್ಲಲು ಬಹುಜನ ಸಮಾಜವಾದಿ ಪಕ್ಷ ಭಾರೀ ಸರ್ಕಸ್ ನಡೆಸುತ್ತಿದೆ. ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಹೇಗಾದರೂ ಸರಿಯೇ ಸೋಲಿಸಬೇಕು ಎಂದು BSP ಮುಖ್ಯಸ್ಥೆ ಮಾಯಾವತಿ ದಲಿತ-ಬ್ರಾಹ್ಮಣ ಸೂತ್ರದ ಮೊರೆ ಹೋಗಿದ್ದಾರೆ. ಸದ್ಯ ಉತ್ತರ ಪ್ರದೇಶದಲ್ಲಿ ರಾಜಕೀಯ ಸ್ಥಿತ್ಯಂತರ ಶುರುವಾಗಿದೆ. ಇದೇ ಸಂದರ್ಭವನ್ನು ಸರಿಯಾಗಿ ಬಳಸಿಕೊಂಡು ಜಾತಿ ಲೆಕ್ಕಾಚಾರದ ಮೇಲೆ ಚುನಾವಣೆ ಗೆಲ್ಲಲು ಅಗ್ಯವಿರುವ ಎಲ್ಲಾ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂದು ಮಾಯಾವತಿ ಮುಂದಾಗಿದ್ದಾರೆ.

ADVERTISEMENT


ಪ್ರಸ್ತುತ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಬ್ರಾಹ್ಮಣ ಸಮುದಾಯ ಮುನಿಸಿಕೊಂಡಿದೆ. ಈ ಬ್ರಾಹ್ಮಣ ಸಮುದಾಯದ ಮತಗಳನ್ನು ಬಿಎಸ್ಪಿಯತ್ತ ಸೆಳೆಯಲು ಎಂದು ಮಾಯಾವತಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಮಾಯಾವತಿ ಅವರು, ಮುಂದಿನ ಚುನಾವಣೆಯಲ್ಲಿ ಬ್ರಾಹ್ಮಣರು ಬಿಜೆಪಿಗೆ ಯಾವುದೇ ಕಾರಣಕ್ಕೂ ಮತ ಹಾಕುವುದಿಲ್ಲ. ಬದಲಿಗೆ ನಮ್ಮ ಪಕ್ಷವನ್ನೇ ಬೆಂಬಲಿಸಲಿದ್ದಾರೆ ಎಂದಿದ್ದಾರೆ.


ಹೀಗೆ ಮುಂದುವರಿದ ಅವರು, ಬ್ರಾಹ್ಮಣರನ್ನು ತಲುಪುವ ಸಲುವಾಗಿಯೇ BSP ಪ್ರಧಾನ ಕಾರ್ಯದರ್ಶಿ ಎಸ್ಸಿ ಮಿಶ್ರಾ ನೇತೃತ್ವದಲ್ಲಿ ಸಮ್ಮೇಳನವೊಂದು ನಡೆಸುತ್ತಿದ್ದೇವೆ. ಜುಲೈ 23ರಂದು ಅಯೋಧ್ಯೆಯಲ್ಲಿ ಬ್ರಾಹ್ಮಣರ ಸಮ್ಮೇಳನ ಆಯೋಜಿಸಿದ್ದೇವೆ. ಇಲ್ಲಿ ಬ್ರಾಹ್ಮಣರ ಬೇಡಿಕೆಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದಿದ್ದಾರೆ. ಜತೆಗೆ ತನ್ನ ಪಕ್ಷದ ಸಂಸದರಿಗೂ ಮುಂದಿನ ಮುಂಗಾರು ಅಧಿವೇನದಲ್ಲಿ ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಂತೆ ಆದೇಶಿಸಿದ್ದಾರೆ ಮಾಯಾವತಿ.


2017ರಲ್ಲಿ ಭರ್ಜರಿ ಜಯ ದಾಖಲಿಸಿದ ಬಿಜೆಪಿ ವಿರುದ್ಧ ಬ್ರಾಹ್ಮಣ ಸಮುದಾಯ ಗರಂ ಆಗಿದೆ. ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತವಹಿಸಿದ ಬ್ರಾಹ್ಮಣ ಸಮುದಾಯ ಈಗ ಯೋಗಿ ಆದಿತ್ಯನಾಥ್ ಆಡಳಿತ ವೈಖರಿಗೆ ಬೇಸತ್ತಿದೆ. ತಮ್ಮ ಸಮುದಾಯಕ್ಕೆ ಸರ್ಕಾರರಿಂದ ಹೆಚ್ಚಿನ ಮಹತ್ವವೇನು ಸಿಕ್ಕಿಲ್ಲ ಎಂದು ದೂರಿದೆ.


20 ಕೋಟಿ ಜನಸಂಖ್ಯೆಯಲ್ಲಿ ಶೇ. 12ರಷ್ಟಿರುವ ಸಮುದಾಯವು ಪ್ರಮುಖ ಮತಬ್ಯಾಂಕ್ ಆಗಿ ಪರಿಣಮಿಸಿದೆ. ಕೇವಲ ಸಂಖ್ಯೆಯಿಂದ ಮಾತ್ರವಲ್ಲದೆ, ಇತರೆ ಸಮುದಾಯದ ಮೇಲೂ ಪ್ರಭಾವ ಬೀರುವ ಸಾಮರ್ಥ್ಯ ನಾಯಕರು ಬ್ರಾಹ್ಮಣ ಸಮುದಾಯದವರೇ. ಮತದಾನ ನಡವಳಿಕೆ ಸಮುದಾಯದ ಮತಗಳು ಸರ್ಕಾರದ ಭವಿಷ್ಯ ನಿರ್ಧರಿಸುತ್ತವೆ ಎಂಬುದು ನಿರ್ವಿವಾದವಾಗಿದೆ. ಶೇ. 80ರಷ್ಟು ಬ್ರಾಹ್ಮಣರು 2017ರಲ್ಲಿ ಬಿಜೆಪಿ ಪರ ಮತ ಹಾಕಿದ್ದಾರೆ. 2014 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಶೇ.72 ಹಾಗೂ ಶೇ. 82ರಷ್ಟು ಬ್ರಾಹ್ಮಣ ಮತಗಳನ್ನು ಬಿಜೆಪಿ ಪಡೆದುಕೊಂಡಿತ್ತು. ಹೀಗಾಗಿ ಗೆಲುವು ಸುಲಭವಾಗಿತ್ತು.

2007 ಹಾಗೂ 2012ರಲ್ಲಿ ಬಿಎಸ್ಪಿ ಹಾಗೂ ಎಸ್ಪಿ ಗೆಲುವು ಸಾಧಿಸಿದ್ದವು. ಆಗ ಕ್ರಮವಾಗಿ ಶೇ 40 ಹಾಗೂ ಶೇ. 38 ರಷ್ಟು ಬ್ರಾಹ್ಮಣ ಮತಗಳನ್ನು ಮಾತ್ರ ಕೇಸರಿ ಪಡೆ ಪಡೆದುಕೊಂಡಿತ್ತು. ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಬ್ರಾಹ್ಮಣ ಮತಗಳು ಬೀಳೋದು ಡೌಟ್ ಎನ್ನಲಾಗುತ್ತಿದೆ.


ಈ ಮಧ್ಯೆಯೇ ಸಮೀಕ್ಷೆಯೊಂದರ ಪ್ರಕಾರ ಮುಂಬರುವ ಚುನಾವಣೆಯಲ್ಲಿ ಶೇ. 43.1ರಷ್ಟು ಮಂದಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರವನ್ನು ಬೆಂಬಲಿಸುವ ಸಾಧ್ಯತೆ ಇದೆ. ಅದೇ ರೀತಿ ಶೇ. 29.6ರಷ್ಟು ಮಂದಿ ಸಮಾಜವಾದಿ ಪಕ್ಷವನ್ನು ಬೆಂಬಲಿಸಬಹುದು. ಬಿಎಸ್‌ಪಿ ಪರ ಶೇ. 10.1ರಷ್ಟು ಮಂದಿ ಹಾಗೂ ಕಾಂಗ್ರೆಸ್‌ ಪಕ್ಷದ ಪರ ಶೇ. 8.1 ರಷ್ಟು ಮಂದಿ ಒಲವು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

Tags: Mayawati's Outreach To Brahmins Before UP Polls:
Previous Post

ಮುಂಗಾರು ಅಧಿವೇಶನಕ್ಕೆ 1 ದಿನ ಬಾಕಿ: ಕಾಂಗ್ರೆಸ್‌ ಸಂಸದೀಯ ತಂಡ ಪುನರ್‌ರಚನೆ

Next Post

ಮಾನ್ಸೂನ್ ಅಧಿವೇಶನ: ಸರ್ಕಾರ ಮಂಡಿಸಲಿರುವ ಮಸೂದೆಗಳು ಮತ್ತು ವಿರೋಧ ಪಕ್ಷಗಳ ಕಾರ್ಯತಂತ್ರಗಳು

Related Posts

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
0

ದುಬೈ ಏರ್​​ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. https://youtu.be/_-ETZQKXvgY?si=HJdmeaIp6arDY5i5 ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ...

Read moreDetails

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025
Next Post
ಮಾನ್ಸೂನ್ ಅಧಿವೇಶನ: ಸರ್ಕಾರ ಮಂಡಿಸಲಿರುವ ಮಸೂದೆಗಳು ಮತ್ತು ವಿರೋಧ ಪಕ್ಷಗಳ ಕಾರ್ಯತಂತ್ರಗಳು

ಮಾನ್ಸೂನ್ ಅಧಿವೇಶನ: ಸರ್ಕಾರ ಮಂಡಿಸಲಿರುವ ಮಸೂದೆಗಳು ಮತ್ತು ವಿರೋಧ ಪಕ್ಷಗಳ ಕಾರ್ಯತಂತ್ರಗಳು

Please login to join discussion

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada