• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕ್ಯಾನ್ಸರ್ ಉಂಟುಮಾಡುವ ಜೀವಕೋಶಗಳಲ್ಲಿನ ಮಾರ್ಪಾಡುಗಳನ್ನು ಗುರುತಿಸಲು ಎಐ ಆಧಾರಿತ ಗಣಿತ ಮಾದರಿಯನ್ನು ಅಭಿವೃದ್ಧಿ ಪಡಿಸಿದ ಮದ್ರಾಸ್ ಐಐಟಿ

ಫಾತಿಮಾ by ಫಾತಿಮಾ
July 20, 2021
in ದೇಶ, ಶೋಧ
0
ಕ್ಯಾನ್ಸರ್ ಉಂಟುಮಾಡುವ ಜೀವಕೋಶಗಳಲ್ಲಿನ ಮಾರ್ಪಾಡುಗಳನ್ನು ಗುರುತಿಸಲು ಎಐ ಆಧಾರಿತ ಗಣಿತ ಮಾದರಿಯನ್ನು ಅಭಿವೃದ್ಧಿ ಪಡಿಸಿದ ಮದ್ರಾಸ್ ಐಐಟಿ
Share on WhatsAppShare on FacebookShare on Telegram

ಕ್ಯಾನ್ಸರ್ ಉಂಟುಮಾಡುವ ಜೀವಕೋಶಗಳಲ್ಲಿನ ಬದಲಾವಣೆಗಳನ್ನು ಗುರುತಿಸಲು ಮದ್ರಾಸ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಸಂಶೋಧಕರು ಕೃತಕ ಬುದ್ಧಿಮತ್ತೆ (AI) ಆಧಾರಿತ ಗಣಿತದ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ.

ADVERTISEMENT

ಈ ಅಲ್ಗಾರಿದಮ್ ಕ್ಯಾನ್ಸರ್ ಪ್ರಗತಿಗೆ ಕಾರಣವಾದ ಆನುವಂಶಿಕ ಮಾರ್ಪಾಡುಗಳನ್ನು ಗುರುತಿಸಲು ಡಿಎನ್ಎ ಸಂಯೋಜನೆಯನ್ನು ನಿಯಂತ್ರಿಸುವ ತುಲನಾತ್ಮಕವಾಗಿ ಪರೀಕ್ಷಿಸದ ತಂತ್ರವನ್ನು ಬಳಸುತ್ತದೆ. ಫಲಿತಾಂಶಗಳನ್ನು ಇಂಟರ್ನ್ಯಾಷನಲ್ ಜರ್ನಲ್ ಆಫ್ ಕ್ಯಾನ್ಸರ್ನಲ್ಲಿ ಪ್ರಕಟಿಸಲಾಗಿದೆ.

ತಂಡದ ಪ್ರಕಾರ, ಆನುವಂಶಿಕ ಬದಲಾವಣೆಗಳಿಂದ ಜೀವಕೋಶಗಳ ಅನಿಯಂತ್ರಿತ ಬೆಳವಣಿಗೆಯಿಂದಾಗಿ ಕ್ಯಾನ್ಸರ್ ಉಂಟಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ, ಹೈ-ಥ್ರೋಪುಟ್ ಡಿಎನ್ಎ ಅನುಕ್ರಮವು ಈ ಬದಲಾವಣೆಗಳ ಅಳತೆಯನ್ನು ಶಕ್ತಗೊಳಿಸುವ ಮೂಲಕ ಕ್ಯಾನ್ಸರ್ ಸಂಶೋಧನೆಯ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿದೆ.

ಆದರೆ, ಈ ಅನುಕ್ರಮ ಡೇಟಾಸೆಟ್ಗಳ ಸಂಕೀರ್ಣತೆ ಮತ್ತು ಗಾತ್ರದಿಂದಾಗಿ, ಕ್ಯಾನ್ಸರ್ ರೋಗಿಗಳ ಜೀನೋಮ್ಗಳಿಂದ ನಿಖರವಾದ ಬದಲಾವಣೆಗಳನ್ನು ಗುರುತಿಸುವುದು ಕಷ್ಟ.

“ಕ್ಯಾನ್ಸರ್ ಸಂಶೋಧಕರು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾದ ಕ್ಯಾನ್ಸರ್ ಕೋಶಗಳು ಬೆಳೆಯಲು ಅನುವು ಮಾಡಿಕೊಡುವ ತುಲನಾತ್ಮಕವಾಗಿ ಕಡಿಮೆ ಸಂಖ್ಯೆಯಲ್ಲಿರುವ ‘ಚಾಲಕ’ ರೂಪಾಂತರಗಳು (driver mutation) ಮತ್ತು ರೋಗದ ಮೇಲೆ ಯಾವ ಪರಿಣಾಮವನ್ನೂ ಬೀರದ ಹೆಚ್ಚಿನ ಸಂಖ್ಯೆಯಲ್ಲಿರುವ ‘ಪ್ರಯಾಣಿಕ’ ರೂಪಾಂತರಗಳ (passenger mutation) ನಡುವಿನ ವ್ಯತ್ಯಾಸವು ಒಳಗೊಂಡಿರುತ್ತದೆ ” ಎಂದು ಐಐಟಿ ಮದ್ರಾಸ್ನ ರಾಬರ್ಟ್ ಬಾಷ್ ಸೆಂಟರ್ ಫಾರ್ ಡಾಟಾ ಸೈನ್ಸ್ ಮತ್ತು ಎಐ (ಆರ್ಬಿಸಿಡಿಎಸ್ಎಐ) ಮುಖ್ಯಸ್ಥ ಬಿ ರವೀಂದ್ರನ್ ಹೇಳಿದ್ದಾರೆ.

ನಿರ್ದಿಷ್ಟ ಅನಾರೋಗ್ಯಕ್ಕೆ ಮಾತ್ರವಲ್ಲದೆ ವ್ಯಕ್ತಿಯ ಆನುವಂಶಿಕ ಮಾರ್ಪಾಡುಗಳಿಗೆ “ನಿಖರ ಆಂಕೊಲಾಜಿ” ಮತ್ತು “ಟೈಲರಿಂಗ್ ಟ್ರೀಟ್ಮೆಂಟ್ಸ್” ಎಂದು ಕರೆಯಲ್ಪಡುವ ವಿಧಾನದ ಮೂಲಕ ರೋಗಿಗೆ ಅತ್ಯಂತ ಸೂಕ್ತವಾದ ಚಿಕಿತ್ಸಾ ಕಾರ್ಯ ವಿಧಾನ ರೂಪಿಸುವುದು ಸವಾಲಿನದು ಮತ್ತು ಇದಕ್ಕೆ ‘ಚಾಲಕ’ ರೂಪಾಂತರಗಳ ವ್ಯಾಪಕವಾದ ಕ್ಯಾಟಲಾಗ್ ಮಾಡುವ ಅಗತ್ಯವಿರುತ್ತದೆ.

ತಮ್ಮ ಗಣಿತದ ಮಾದರಿಯ ಮೂಲಕ ಊಹಿಸಲಾದ ‘ಚಾಲಕ’ ರೂಪಾಂತರಗಳು ಅಂತಿಮವಾಗಿ ಕ್ಯಾನ್ಸರ್ ಗೆ ಔಷಧ ಕಂಡುಹಿಡಿಯಲು ಸಹಾಯ ಮಾಡುತ್ತದೆ ಮತ್ತು ‘ಸರಿಯಾದ ಸಮಯದಲ್ಲಿ ಸರಿಯಾದ ವ್ಯಕ್ತಿಗೆ ಸರಿಯಾದ ಔಷಧಿಯನ್ನು’ ಸೂಚಿಸುವ ಕಲ್ಪನೆಯನ್ನು ಮುನ್ನಡೆಸುತ್ತದೆ ಎಂದು ಸಂಶೋಧಕರು ಭರವಸೆ ಇಟ್ಟುಕೊಂಡಿದ್ದಾರೆ.

“ಈ ಹಿಂದೆ ಪ್ರಕಟಿಸಲಾದ ವಿಧಾನಗಳಲ್ಲಿ ಸಂಶೋಧಕರು ದೊಡ್ಡ ಸಂಖ್ಯೆಯ ಕ್ಯಾನ್ಸರ್ ರೋಗಿಗಳ ಡಿಎನ್ಎ ಸಂಯೋಜನೆಯನ್ನು ಪರಿಶೀಲಿಸಿ ಮತ್ತು ಸಾಮಾನ್ಯ ಜೀವಕೋಶಗಳೊಂದಿಗೆ ಕ್ಯಾನ್ಸರ್ ಕೋಶಗಳನ್ನು ಹೋಲಿಸಿ ನೋಡಿ ನಿರ್ದಿಷ್ಟ ರೂಪಾಂತರವು ಕ್ಯಾನ್ಸರ್ ಕೋಶದಲ್ಲಿ ಹೆಚ್ಚು ಬಾರಿ ಕಂಡು ಬಂದಿದೆಯೇ ಎಂದು ಪರೀಕ್ಷಿಸುತ್ತಿದ್ದರು. ಆದರೆ ಈ ವಿಧಾನದಲ್ಲಿ ಅಪರೂಪದ ಚಾಲಕ ರೂಪಾಂತರಗಳು ಸಂಶೋಧನೆಯಿಂದ ಬಿಟ್ಟು ಹೋಗುವ ಸಾಧ್ಯತೆಗಳಿವೆ” ಎಂದು ಐಐಟಿ ಮದ್ರಾಸ್ನ ಪ್ರೊಫೆಸರ್ ಕಾರ್ತಿಕ್ ರಾಮನ್ ಹೇಳಿದ್ದಾರೆ.

“Driver mutationಗಳನ್ನು ಕಂಡುಹಿಡಿಯುವುದು ಅಪರೂಪದ ಮತ್ತು ಅತಿ ಕಷ್ಟದ ಕೆಲಸ. ಆದರೆ ಅವನ್ನು ಕಂಡುಹಿಡಿಯುವ ವಿಧಾನಗಳ ಅಭಿವೃದ್ಧಿಯು ಅಂತಿಮವಾಗಿ ಆರಂಭಿಕ ರೋಗ ನಿರ್ಣಯಗಳನ್ನು ಮತ್ತು ವೈಯಕ್ತಿಕಗೊಳಿಸಿದ (personalised) ಚಿಕಿತ್ಸೆಗಳ ಬೆಳವಣಿಗೆಯನ್ನು ವೇಗಗೊಳಿಸುತ್ತದೆ” ಎಂದೂ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕ್ಯಾನ್ಸರ್ ಸಂಶೋಧಕರು ರೂಪಾಂತರಗಳ ಬಗ್ಗೆ ಮುನ್ಸೂಚನೆಗಳನ್ನು ಪಡೆಯಲು ಅನುವಾಗುವಂತೆ ಮತ್ರು ಬಳಸಲು ಸುಲಭವಾದ ವೆಬ್ ಇಂಟರ್ಫೇಸನ್ನು ಅಭಿವೃದ್ಧಿ ಪಡಿಸುವುದು, ಆ ಮೂಲಕ ರೂಪಾಂತರಗಳ ಸಂದರ್ಭವನ್ನು ಅಧ್ಯಯನ ಮಾಡುವುದು ಮತ್ತು ಕ್ಯಾನ್ಸರ್ ವಿಕಾಸದ ಮೇಲೆ ಅವು ಹೇಗೆ ಪರಿಣಾಮ ಬೀರುತ್ತವೆ ಎಂಬುವುದನ್ನು ಅಧ್ಯಯನ ಮಾಡುವುದು ತಂಡದ ಮುಂದಿನ ಗುರಿ ಎಂದು ಅದು ಹೇಳಿದೆ.

Tags: Cancer
Previous Post

2014-19ರ ನಡುವೆ ಭಾರತದಲ್ಲಿ 326 ದೇಶದ್ರೋಹ ಪ್ರಕರಣಗಳು ದಾಖಲು: ಕೇವಲ 6 ಜನರ ಅಪರಾಧ ಸಾಬೀತು

Next Post

ಪೆಗಾಸಸ್ ದುರುಪಯೋಗದ ಪ್ರತಿ ಆರೋಪಗಳ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ: ಎನ್‌ಎಸ್ಒ ಸಮೂಹದ ಅಧ್ಯಕ್ಷ

Related Posts

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
0

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

January 12, 2026
WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

January 12, 2026
Next Post
ಇಸ್ರೇಲ್ ಮಾಲ್ವೇರ್ ಬಳಸಿ ರಾಜಕಾರಣಿಗಳು, ಪತ್ರಕರ್ತರ ಚಲನವಲನದ ಮೇಲೆ ಕಣ್ಣಿಟ್ಟಿತ್ತೆ ಸರ್ಕಾರ?

ಪೆಗಾಸಸ್ ದುರುಪಯೋಗದ ಪ್ರತಿ ಆರೋಪಗಳ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ: ಎನ್‌ಎಸ್ಒ ಸಮೂಹದ ಅಧ್ಯಕ್ಷ

Please login to join discussion

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada