• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ನೋಟು ನಿಷೇಧದಂತೆಯೇ, ಲಾಕ್‌ಡೌನ್‌ಗೂ ಸರ್ಕಾರ ತಯಾರಿ ನಡೆಸಿರಲಿಲ್ಲ – ಮಲ್ಲಿಕಾರ್ಜುನ್‌ ಖರ್ಗೆ

Any Mind by Any Mind
July 20, 2021
in ರಾಜಕೀಯ
0
ನೋಟು ನಿಷೇಧದಂತೆಯೇ, ಲಾಕ್‌ಡೌನ್‌ಗೂ ಸರ್ಕಾರ ತಯಾರಿ ನಡೆಸಿರಲಿಲ್ಲ – ಮಲ್ಲಿಕಾರ್ಜುನ್‌ ಖರ್ಗೆ
Share on WhatsAppShare on FacebookShare on Telegram

ಸಂಸತ್ತು ಮುಂಗಾರು ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಆರಂಭದ ಮುನ್ನವೇ ವಿರೋಧ ಪಕ್ಷಗಳ ನಾಯಕರ ಮಲ್ಲಿಕಾರ್ಜುನ ಖರ್ಗೆ, ಅಭಿವೃದ್ಧಿಗೆ ತೊಡಕಾಗಿರುವ ಬಿಜೆಪಿಯನ್ನು ಅಧಿವೇಶನದಲ್ಲಿ ನಾವು ಈ ಪೆಗಾಸಸ್ ಸಮಸ್ಯೆಯ ಕುರಿತು ಪ್ರಶ್ನೆ ಎತ್ತುತ್ತೇವೆ ಎಂದು ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ರಾಜ್ಯಸಭೆಯಲ್ಲಿ ನಾವು ಈ ಪೆಗಾಸಸ್ ಸಮಸ್ಯೆಯನ್ನು ಕುರಿತು ಪ್ರಶ್ನೆ ಎತ್ತುತ್ತೇವೆ. ರಾಷ್ಟ್ರದ ಅಭಿವೃದ್ಧಿಗೆ ಯಾರೂ ಅಡ್ಡಿಯಾಗುತ್ತಿಲ್ಲ, ಬದಲಿಗೆ ಬಿಜೆಪಿ ಅಡ್ಡಿಯಾಗುತ್ತಿದೆ. ಅವರು ಹೆಚ್ಚಿನ ಸೆಸ್ ವಿಧಿಸುವ ಮೂಲಕ, ಇಂಧನ ಬೆಲೆಯನ್ನು ಹೆಚ್ಚಿಸುವ ಮೂಲಕ, ಲಕ್ಷ ಕೋಟಿ ಹಣವನ್ನು ಸಂಪಾದಿಸಿದ್ದಾರೆ. ಆ ಹಣವನ್ನು ಯೋಜನೆಗಳಿಗೆ ವ್ಯರ್ಥ ಮಾಡುತ್ತಿದೆ ಎಂದು ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಮೊದಲು ಚರ್ಚೆ, ನಂತರ ಪ್ರಸ್ತುತಿ. ಪಿಎಂ ಮೋದಿ ಅವರು ಕೋವಿಡ್‌ ಕುರಿತು ಪ್ರಸ್ತುತಿ ನೀಡಲು ಬಯಸಿದರೆ, ಅದನ್ನು ಅವರು ಕೇಂದ್ರ ಸಭಾಂಗಣದಲ್ಲಿರುವ ಸಂಸದರು ಮತ್ತು ರಾಜ್ಯಸಭಾ ಸದಸ್ಯರಿಗೆ ಪ್ರತ್ಯೇಕವಾಗಿ ನೀಡಬೇಕು. ಸಂಸದರಿಗೆ ತಮ್ಮ ಕ್ಷೇತ್ರಗಳಲ್ಲಿ ಕೋವಿಡ್‌ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.

ಏನಿದು ಪೆಗಾಸಿಸ್:

ಇಸ್ರೇಲಿ ಎನ್ ಎಸ್ ಒ ಕಂಪನಿಯ ಪೇಗಾಸಸ್ ಸ್ಪೈವೇರ್ ಬಳಸಿ ದೇಶದ 300 ಕ್ಕೂ ಹೆಚ್ಚು ಮಂದಿ ಪತ್ರಕರ್ತರು, ಹೋರಾಟಗಾರರು, ರಾಜಕಾರಣಿಗಳ ಮೊಬೈಲ್ ಹ್ಯಾಕ್ ಮಾಡಿ ಅವರ ಮೇಲೆ ಕಳ್ಳಗಣ್ಣು ಇಡಲಾಗಿತ್ತು ಎಂಬುದು. ಸ್ವತಃ ನರೇಂದ್ರ ಮೋದಿಯವರ ಸಂಪುಟದ ಇಬ್ಬರು ಸಚಿವರು, ಮೂವರು ಪ್ರತಿಪಕ್ಷ ನಾಯಕರು, ನ್ಯಾಯಾಧೀಶರೊಬ್ಬರು ಹಾಗೂ ಹಲವು ಮಂದಿ ರಾಷ್ಟ್ರೀಯ ಮತ್ತು ಸ್ಥಳೀಯ ಮಾಧ್ಯಮಗಳ ಪತ್ರಕರ್ತರು ಹಾಗೂ ಉದ್ಯಮಿಗಳ ಮೊಬೈಲ್ ಗಳ ಮೇಲೆ ಹದ್ದಿನಕಣ್ಣಿಡಲಾಗಿತ್ತು ಎಂಬ ಸಂಗತಿ ಫ್ರೆಂಚ್ ಮೂಲದ ಫಾರ್ಬಿಡನ್ ಸ್ಟೋರೀಸ್ ಮತ್ತು ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ವಯಂಸೇವಾ ಸಂಸ್ಥೆಗಳು ಹಲವು ಜಾಗತಿಕ ಮಾಧ್ಯಮಗಳ ಸಹಯೋಗದಲ್ಲಿ ನಡೆಸಿದ ತನಿಖೆಯಲ್ಲಿ ಬಹಿರಂಗಗೊಂಡಿದೆ.

ಪೆಗಾಸಸ್ ಬೇಹುಗಾರಿಕಾ ಸಾಫ್ಟ್ವೇರ್ ಅನ್ನು ಇಸ್ರೇಲಿ ಕಂಪನಿ ಎನ್ಎಸ್ಒ ಅಭಿವೃದ್ಧಿಪಡಿಸಿದೆ. ಸೈಬರ್ ಶಸ್ತ್ರಾಸ್ತ್ರ ತಯಾರಿಸುವಲ್ಲಿ ಈ ಕಂಪನಿ ಪರಿಣಿತಿ ಪಡೆದಿದೆ. ಇದಕ್ಕೆ ದಿ ಪೆಗಾಸಸ್ ಪ್ರಾಜೆಕ್ಟ್ ಎಂದು ಹೆಸರಿಡಲಾಗಿದೆ. 2016ರಲ್ಲಿ ಮೊದಲಿಗೆ ಇದು ಮುಖ್ಯವಾಹಿನಿಗೆ ಬಂದಿತು. ಅರಬ್ ಕಾರ್ಯಕರ್ತರೊಬ್ಬರು ಸಂಶಯಾಸ್ಪದ ಸಂದೇಶವೊಂದನ್ನು ಸ್ವೀಕರಿಸಿದ್ದರು. ಈ ವೇಳೆ ಪೆಗಾಸಸ್ ಐಫೋನ್ ಬಳಕೆದಾರರನ್ನು ಗುರಿಯಾಗಿಸಿಕೊಂಡಿದೆ ಎಂದು ನಂಬಲಾಗಿತ್ತು. ಹಲವು ದಿನಗಳ ಆವಿಷ್ಕಾರದ ನಂತರ ಆಯಪಲ್ ಕಂಪನಿ ತನ್ನ ಐಒಎಸ್ನ ನವೀಕರಿಸಿದ ಆವೃತ್ತಿಯನ್ನು ಬಿಡುಗಡೆ ಮಾಡಿತು, ಇದು ಫೋನ್ಗಳನ್ನು ಹ್ಯಾಕ್ ಮಾಡಲು ಪೆಗಾಸಸ್ ಬಳಸುತ್ತಿರುವ ಭದ್ರತಾ ಲೋಪದೋಷವನ್ನು ತೇಪೆ ಹಾಕಿತು. ಆದಾಗ್ಯೂ, ಪೆಗಾಸಸ್ ಐಫೋನ್ ಮಾತ್ರವಲ್ಲ ಆಯಂಡ್ರಯ್ಡ್ ಫೋನ್ಗಳ ಮೇಲೆಯೂ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ ಎಂಬುದನ್ನು ಒಂದು ವರ್ಷದ ಹಿಂದೆ ಸಂಶೋಧಕರು ಪತ್ತೆ ಹಚ್ಚಿದರು. ಅಷ್ಟರಲ್ಲಾಗಲೇ ಸಾಕಷ್ಟು ಮಾಹಿತಿಗಳಿಗೆ ಕನ್ನಹಾಕಲಾಗಿತ್ತು. ಇದರ ಬೆನ್ನಲ್ಲೇ ಪೆಗಾಸಸ್ ಸೃಷ್ಟಿ ಮಾಡಿದ್ದಕ್ಕೆ ಎನ್ಎಸ್ಒ ಗ್ರೂಪ್ ವಿರುದ್ಧ 2019ರಲ್ಲಿ ಫೇಸ್ಬುಕ್ ದೂರು ನೀಡಿತ್ತು.

ಪೆಗಾಸಸ್ ಬೇಹುಗಾರಿಕಾ ಸಾಫ್ಟ್ವೇರ್ ಅನ್ನು ಇಸ್ರೇಲಿ ಕಂಪನಿ ಎನ್ಎಸ್ಒ ಅಭಿವೃದ್ಧಿಪಡಿಸಿದೆ. ಸೈಬರ್ ಶಸ್ತ್ರಾಸ್ತ್ರ ತಯಾರಿಸುವಲ್ಲಿ ಈ ಕಂಪನಿ ಪರಿಣಿತಿ ಪಡೆದಿದೆ. ಇದಕ್ಕೆ ದಿ ಪೆಗಾಸಸ್ ಪ್ರಾಜೆಕ್ಟ್ ಎಂದು ಹೆಸರಿಡಲಾಗಿದೆ. 2016ರಲ್ಲಿ ಮೊದಲಿಗೆ ಇದು ಮುಖ್ಯವಾಹಿನಿಗೆ ಬಂದಿತು. ಅರಬ್ ಕಾರ್ಯಕರ್ತರೊಬ್ಬರು ಸಂಶಯಾಸ್ಪದ ಸಂದೇಶವೊಂದನ್ನು ಸ್ವೀಕರಿಸಿದ್ದರು. ಈ ವೇಳೆ ಪೆಗಾಸಸ್ ಐಫೋನ್ ಬಳಕೆದಾರರನ್ನು ಗುರಿಯಾಗಿಸಿಕೊಂಡಿದೆ ಎಂದು ನಂಬಲಾಗಿತ್ತು. ಹಲವು ದಿನಗಳ ಆವಿಷ್ಕಾರದ ನಂತರ ಆಯಪಲ್ ಕಂಪನಿ ತನ್ನ ಐಒಎಸ್ನ ನವೀಕರಿಸಿದ ಆವೃತ್ತಿಯನ್ನು ಬಿಡುಗಡೆ ಮಾಡಿತು, ಇದು ಫೋನ್ಗಳನ್ನು ಹ್ಯಾಕ್ ಮಾಡಲು ಪೆಗಾಸಸ್ ಬಳಸುತ್ತಿರುವ ಭದ್ರತಾ ಲೋಪದೋಷವನ್ನು ತೇಪೆ ಹಾಕಿತು. ಆದಾಗ್ಯೂ, ಪೆಗಾಸಸ್ ಐಫೋನ್ ಮಾತ್ರವಲ್ಲ ಆಯಂಡ್ರಯ್ಡ್ ಫೋನ್ಗಳ ಮೇಲೆಯೂ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ ಎಂಬುದನ್ನು ಒಂದು ವರ್ಷದ ಹಿಂದೆ ಸಂಶೋಧಕರು ಪತ್ತೆ ಹಚ್ಚಿದರು. ಅಷ್ಟರಲ್ಲಾಗಲೇ ಸಾಕಷ್ಟು ಮಾಹಿತಿಗಳಿಗೆ ಕನ್ನಹಾಕಲಾಗಿತ್ತು. ಇದರ ಬೆನ್ನಲ್ಲೇ ಪೆಗಾಸಸ್ ಸೃಷ್ಟಿ ಮಾಡಿದ್ದಕ್ಕೆ ಎನ್ಎಸ್ಒ ಗ್ರೂಪ್ ವಿರುದ್ಧ 2019ರಲ್ಲಿ ಫೇಸ್ಬುಕ್ ದೂರು ನೀಡಿತ್ತು. ಕೇವಲ ಮಿಸ್ ಕಾಲ್ ಕೊಡುವ ಮೂಲಕವೂ ಸಾಫ್ಟ್ವೇರ್ ಇನ್ಸ್ಟಾಲ್ ಮಾಡಬಹುದಾಗಿದೆ.

ಪೆಗಾಸಸ್ ಒಮ್ಮೆ ಫೋನ್ನಲ್ಲಿ ಇನ್ಸ್ಟಾಲ್ ಆದರೆ, ಬಳಕೆದಾರರ ಸಂಪೂರ್ಣ ಮಾಹಿತಿಯನ್ನು ಬೇಹುಗಾರಿಕೆ ಮಾಡುತ್ತದೆ. ವಾಟ್ಸ್ಆಯಪ್ನಲ್ಲಿ ಮಾಡಿದ ಸಂಪೂರ್ಣ ಚಾಟ್ಸ್ ಅನ್ನು ಪೆಗಾಸಸ್ ಎನ್ಕ್ರಿಪ್ಟ್ ಮಾಡುತ್ತದೆ. ಮಸೇಜ್ ರೀಡಿಂಗ್, ಕಾಲ್ ಟ್ರ್ಯಾಕಿಂಗ್, ಬಳಕೆದಾರರ ಚಟುವಟಿಕೆ ಮೇಲೆ ನಿಗಾ ಇಡುತ್ತದೆ. ಅಲ್ಲದೆ, ಸ್ಥಳದ ಮಾಹಿತಿಯನ್ನು ಕಲೆಹಾಕುತ್ತದೆ. ಫೋನ್ನಲ್ಲಿರುವ ಕ್ಯಾಮೆರಾ ವಿಡಿಯೋಗಳನ್ನು ಲಭ್ಯವಾಗುವಂತೆ ಮಾಡುತ್ತದೆ ಮತ್ತು ಮೈಕ್ರೋಫೋನ್ ಮೂಲಕ ಫೋನ್ನ ಎಲ್ಲ ಚಟುವಟಿಕೆಯನ್ನು ತಿಳಿಸುತ್ತದೆ.

ಕಚ್ಚಾ ತೈಲ ದರ ಇಳಿಕೆಯಾಗದರು ಇಳಿಕೆಯಾಗದ ಪೆಟ್ರೋಲ್ ಮತ್ತು ಡೀಸೆಲ್ ದರ:

ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ಪ್ರತಿ ಬ್ಯಾರೆಲ್ಗೆ 76ರಿಂದ 73 ಡಾಲರ್ಗೆ ಶುಕ್ರವಾರ ಇಳಿಕೆಯಾದರು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಸ್ವಲ್ಪವೂ ಇಳಿಕೆಯಾಗಿಲ್ಲ. ಈ ನಡುವೆ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶನಿವಾರ ಪ್ರತಿ ಲೀಟರ್ಗೆ 105.25 ರೂ.ಗೆ ಏರಿಕೆಯಾಗಿದೆ. ಅಂದರೆ 30 ಪೈಸೆ ಹೆಚ್ಚಳವಾಗಿದೆ. ಡೀಸೆಲ್ ದರ ಲೀಟರ್ಗೆ 95.26 ರೂ.ಗೆ ವೃದ್ಧಿಸಿದೆ. ಮುಂಬಯಿನಲ್ಲಿ 107 ರೂ.ಗೆ ಜಿಗಿದಿದೆ. ಕಳೆದ ಮೇ 1ರಿಂದ ಇಲ್ಲಿಯವರೆಗೆ 41 ಸಲ ತೈಲ ದರ ಹೆಚ್ಚಳವಾಗಿದ್ದು, ತೈಲ ದರ ಹೆಚ್ಚಳದಿಂದ ಗ್ರಾಹಕರು ಕಂಗಾಲಾಗಿದ್ದಾರೆ.

ಲಕ್ಷ ಕೋಟಿ ಹಣ ಸಂಗ್ರಹ:
ಏಪ್ರಿಲ್-ಜೂನ್ ಅವಧಿಯಲ್ಲಿ ಅಬಕಾರಿ ಸುಂಕದಲ್ಲಿ ಸರ್ಕಾರ 1.01 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸಿದ್ದು, ನೇರ ತೆರಿಗೆ ಸಂಗ್ರಹವು 2.41 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಎಂದು ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ.

Tags: BJPMallikarjun KhargeNarendra Modi
Previous Post

ಬಿಜೆಪಿ ಮತ್ತು ಕಾಂಗ್ರೆಸ್ ಇವೆರಡೂ ರಾಜ್ಯಕ್ಕೆ ಮಾರಕ – ಹೆಚ್ ಡಿ ಕುಮಾರಸ್ವಾಮಿ

Next Post

80% ಹೊಸ ಪ್ರಕರಣಗಳಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿ ಪತ್ತೆ – ಡಾ. NK ಅರೋರಾ

Related Posts

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’
ಕರ್ನಾಟಕ

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

by ಪ್ರತಿಧ್ವನಿ
November 18, 2025
0

ಬೆಳಗಾವಿ: ರಾಜ್ಯ ಸಂಪುಟ ಪುನಾರಚನೆ ಯಾವಾಗ ಆಗುತ್ತೆ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್, ಸಂಪುಟ ಪುನಾರಚನೆ...

Read moreDetails
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
Next Post
80% ಹೊಸ ಪ್ರಕರಣಗಳಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿ ಪತ್ತೆ – ಡಾ. NK ಅರೋರಾ

80% ಹೊಸ ಪ್ರಕರಣಗಳಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿ ಪತ್ತೆ - ಡಾ. NK ಅರೋರಾ

Please login to join discussion

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada