• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಆಮ್ಲಜನಕ ಸಿಗದೇ ಒಬ್ಬರೂ ಸತ್ತಿಲ್ಲ ಎಂದು ಹಸೀಸುಳ್ಳು ಹೇಳಿದ ಮೋದಿ ಆಡಳಿತ!

Shivakumar by Shivakumar
July 21, 2021
in ಕರ್ನಾಟಕ, ದೇಶ, ರಾಜಕೀಯ
0
ಆಮ್ಲಜನಕ ಸಿಗದೇ ಒಬ್ಬರೂ ಸತ್ತಿಲ್ಲ ಎಂದು ಹಸೀಸುಳ್ಳು ಹೇಳಿದ ಮೋದಿ ಆಡಳಿತ!
Share on WhatsAppShare on FacebookShare on Telegram

“ದೇಶದಲ್ಲಿ ಕರೊನಾ ಎರಡನೇ ಅಲೆಯಲ್ಲಿಆಮ್ಲಜನಕ ಕೊರತೆಯಿಂದ ಒಂದೇ ಒಂದು ಸಾವು ಸಂಭವಿಸಿಲ್ಲ” – ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ನೀಡಿದ ಆಘಾತಕಾರಿ ಹೇಳಿಕೆ.

ADVERTISEMENT

ದೇಶದಲ್ಲಿ ಕಳೆದ ಏಪ್ರಿಲ್-ಮೇ ಅವಧಿಯಲ್ಲಿ ಕರೋನಾ ಎರಡನೇ ಅಲೆ ಭೀಕರ ಸಾವು-ನೋವುಗಳ ರುದ್ರನರ್ತನ ನಡೆಯುತ್ತಿರುವಾಗ ದೇಶದ ಉದ್ದಗಲಕ್ಕೆ ಆಮ್ಲಜನಕ ಕೊರತೆಯಿಂದ, ಸಕಾಲದಲ್ಲಿ ಜೀವವಾಯು ಲಭ್ಯವಾಗದೆ ಲಕ್ಷಾಂತರ ಮಂದಿ ಸಾವು ಕಂಡಿದ್ದರು. ಜನ ಹಾಗೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಗದೆ ಸಾವು ಕಾಣುತ್ತಿರುವುದನ್ನು ರೋಗಿಗಳ ಸಂಬಂಧಿಕರು, ಆಸ್ಪತ್ರೆಯ ವೈದ್ಯರು, ಆಸ್ಪತ್ರೆಗಳ ಆಡಳಿತ ಮಂಡಳಿಗಳು, ಮಾಧ್ಯಮಗಳು ಮತ್ತು ಬಹುತೇಕ ರಾಜ್ಯ ಸರ್ಕಾರಗಳು ಕೂಡ ವರದಿ ಮಾಡಿದ್ದವು. ಜನರ ಜೀವ ಉಳಿಸುವ ನಿಟ್ಟಿನಲ್ಲಿ ಸಕಾಲದಲ್ಲಿ ಅಗತ್ಯ ಪ್ರಮಾಣದ ಆಮ್ಲಜನಕ ಸರಬರಾಜು ಮಾಡಲಾಗುತ್ತಿಲ್ಲ ಎಂಬ ಆಕ್ರೋಶ ಮತ್ತು ಅಸಹಾಯಕತೆಯ ಮಾತುಗಳು ಈ ಎಲ್ಲಾ ವಲಯದಿಂದ ಕೇಳಿಬಂದಿದ್ದವು.

ಆ ಹಿನ್ನೆಲೆಯಲ್ಲಿ ಸ್ವಯಂ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ನ್ಯಾಯಮೂರ್ತಿಗಳ ನೇತೃತ್ವದ ಕಾರ್ಯಪಡೆ ರಚಿಸಿ ಇಡೀ ಅವ್ಯವಸ್ಥೆಯನ್ನು ಸರಿಪಡಿಸುವ ಯತ್ನ ಮಾಡಿತ್ತು ಮತ್ತು ಆಮ್ಲಜನಕ ವ್ಯವಸ್ಥೆ ಮಾಡುವಲ್ಲಿ ಮೈಮರೆತ, ಕರ್ತವ್ಯಲೋಪ ಎಸಗಿದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಚಾಟಿ ಬೀಸಿತ್ತು. ಪ್ರತಿ ದಿನವೂ ಆಮ್ಲಜನಕ, ಆಸ್ಪತ್ರೆ ಹಾಸಿಗೆ, ಔಷಧಿ, ಚಿಕಿತ್ಸೆ ವಿಷಯದಲ್ಲಿ ನಿರಂತರ ವಿಚಾರಣೆ ಮತ್ತು ಮೇಲ್ವಿಚಾರಣೆಯ ಮೂಲಕ ಸರ್ಕಾರದ ಜುಟ್ಟು ಹಿಡಿದು ಜನರ ಜೀವ ಉಳಿಸುವ ಕೆಲಸ ಮಾಡಿತ್ತು.

ಆದರೆ, ಜನರ ಕಣ್ಣೆದುರಲ್ಲೇ ನಡೆದ ಆ ಎಲ್ಲವೂ ಕನಸು ಎಂಬಂತೆ ಇದೀಗ ಪ್ರಧಾನಿ ಮೋದಿಯವರ ಸರ್ಕಾರ ದೇಶದ ಸಂಸತ್ತಿನಲ್ಲಿ ಇಡೀ ದೇಶದಲ್ಲಿ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಸತ್ಯದ ತಲೆಮೇಲೆ ಹೊಡೆದಂತಹ ಸುಳ್ಳು ಹೇಳಿದೆ! ಈ ಸುಳ್ಳು ಕೇಳಿ ದೇಶದ ಜನ ಬೆಚ್ಚಿಬಿದ್ದಿದ್ದಾರೆ.

ಇಂತಹ ಹಸೀ ಸುಳ್ಳನ್ನು ಮಂಗಳವಾರ ಕೇಂದ್ರ ಆರೋಗ್ಯ ಖಾತೆ ಕ್ಯಾಬಿನೆಟ್ ದರ್ಜೆ ಸಚಿವ ಮನಸುಖ್ ಮಾಂಡವೀಯ ಮತ್ತು ರಾಜ್ಯಖಾತೆ ಸಚಿವ ಭಾರತಿ ಪ್ರವೀಣ್ ಪವಾರ್ ಇಬ್ಬರೂ ಹೇಳಿದ್ದಾರೆ. ಒಬ್ಬರು ರಾಜ್ಯಸಭೆಯಲ್ಲಿ ಹೇಳಿದ್ದರೆ, ಮತ್ತೊಬ್ಬರು ಲೋಕಸಭೆಯಲ್ಲಿ ಹೇಳಿದ್ದಾರೆ. ಆ ಸುಳ್ಳಿಗೆ ಅವರು ನೀಡಿದ ಸಮರ್ಥನೆ ಆರೋಗ್ಯ ವಿಷಯ ರಾಜ್ಯಗಳ ವ್ಯಾಪ್ತಿಗೆ ಸೇರುತ್ತದೆ. ಹಾಗಾಗಿ ಸಾವುಗಳ ಬಗ್ಗೆ ಮಾಹಿತಿ ನೀಡಬೇಕಾದದ್ದು ರಾಜ್ಯಗಳ ಹೊಣೆ. ಆದರೆ, ಈವರೆಗೆ ಯಾವುದೇ ರಾಜ್ಯವೂ ನಿರ್ದಿಷ್ಟವಾಗಿ ಆಮ್ಲಜನಕ ಕೊರತೆಯಿಂದ ಸಾವುಕಂಡವರ ಬಗ್ಗೆ ವರದಿ ನೀಡಿಲ್ಲ ಎಂಬುದು.

ಆದರೆ, ಕರ್ನಾಟಕದ ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಬರೋಬ್ಬರಿ 29 ಮಂದಿ ರೋಗಿಗಳು ಒಂದೇ ರಾತ್ರಿ ಸಾವು ಕಂಡಿದ್ದರು. ಹಾಗೇ ದೆಹಲಿಯ ಆಸ್ಪತ್ರೆಯೊಂದರಲ್ಲಿ 21 ಮಂದಿ ಒಂದೇ ದಿನ ಆಮ್ಲಜನಕ ಸಿಗದೆ ಉಸಿರುಗಟ್ಟಿ ಸತ್ತಿದ್ದರು. ಗೋವಾದಲ್ಲಿ ಐದು ದಿನಗಳ ಅಂತರದಲ್ಲಿ ಬರೋಬ್ಬರಿ 80 ಮಂದಿ ಆಮ್ಲಜನಕವಿಲ್ಲದೆ ಸಾವು ಕಂಡಿದ್ದರು. ಆಂಧ್ರಪ್ರದೇಶದ ತಿರುಪತಿಯಲ್ಲಿ ಒಂದೇ ದಿನ 11 ಮಂದಿ ಆಮ್ಲಜನಕ ಸಿಗದೆ ಸತ್ತಿದ್ದರು. ತೆಲಂಗಾಣದ ಹೈದರಾಬಾದ್ ಆಸ್ಪತ್ರೆಯಲ್ಲಿ 7 ಮಂದಿ ಆಮ್ಲಜನಕ ಕೊರತೆಗೆ ಬಲಿಯಾಗಿದ್ದರು. ಈ ಎಲ್ಲಾ ಘಟನೆಗಳು ಒಂದೇ ದಿನದಲ್ಲಿ ಆಮ್ಲಜನಕ ಸಿಗದೆ ಸಂಭವಿಸಿದ ಭಾರೀ ಸಾವುಗಳ ಕಾರಣಕ್ಕೆ ದೇಶದ ಗಮನ ಸೆಳೆದಿದ್ದವು. ಕಳೆದ ಮೇನಲ್ಲಿ ಸಂಭವಿಸಿದ ಈ ಆಘಾತಕಾರಿ ಘಟನೆಗಳಷ್ಟೇ ಅಲ್ಲದೆ, ಏಪ್ರಿಲ್ ಮತ್ತು ಮೇ ಅಂತ್ಯದ ವರೆಗೆ ದಿನ ನಿತ್ಯ ದೇಶಾದ್ಯಂತ ಪ್ರತಿ ದಿನ ನೂರಾರು ಮಂದಿ ಸಕಾಲದಲ್ಲಿ ಆಮ್ಲಜನಕ ಸಿಗದ ಒಂದೇ ಒಂದು ಕಾರಣಕ್ಕೆ ಜೀವ ಕಳೆದುಕೊಂಡಿದ್ದರು.

ಆಡಳಿತರೂಢ ಸರ್ಕಾರ ಮತ್ತು ವೈದ್ಯಕೀಯ ವ್ಯವಸ್ಥೆಯ ಹೊಣೆಗೇಡಿತನ, ಜನರ ಜೀವದ ಬಗೆಗಿನ ಉಡಾಫೆಯ ಕಾರಣಕ್ಕೆ ಸಂಭವಿಸಿದ ಈ ಸರಣಿ ಸಾವುಗಳ ಕಾರಣದಿಂದಾಗಿಯೇ ಕೋವಿಡ್ ಎರಡನೇ ಅಲೆಯಲ್ಲಿ ದೇಶದ ಕೋವಿಡ್ ಸಾವುಗಳ ಸಂಖ್ಯೆ ಇಡೀ ಜಗತ್ತೇ ಬೆಚ್ಚಿಬೀಳುವ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ಆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ದೇಶದ ಸರ್ವೋಚ್ಛ ನ್ಯಾಯಾಲಯ ಆಮ್ಲಜನಕ ಕೊರತೆ ಸೇರಿದಂತೆ ಆರೋಗ್ಯ ವ್ಯವಸ್ಥೆಯ ಮೇಲೆ ನಿತ್ಯ ಕಣ್ಗಾವಲು ಇಡಲು ವಿಶೇಷ ಕಾರ್ಯಪಡೆ ತಂಡವನ್ನೇ ರಚಿಸಿತ್ತು. ಸುಪ್ರೀಂಕೋರ್ಟ್ ಮಧ್ಯಪ್ರವೇಶದ ಬಳಿಕ ಎಚ್ಚೆತ್ತುಕೊಂಡಿದ್ದ ಚೌಕಿದಾರ್ ಮೋದಿಯವರ ಸರ್ಕಾರ, ಆ ಬಳಿಕವಷ್ಟೇ ಹಂತಹಂತವಾಗಿ ಆಮ್ಲಜನಕ ಸರಬರಾಜು ವ್ಯವಸ್ಥೆಯನ್ನು ಸುಸೂತ್ರಗೊಳಿಸಿತ್ತು. ಆ ಹಿನ್ನೆಲೆಯಲ್ಲಿ ಜೂನ್ ಆರಂಭದ ಹೊತ್ತಿಗೆ ದೇಶದ ಕರೋನಾ ಸಾವುಗಳ ಸಂಖ್ಯೆಯಲ್ಲಿ ಸಮಾಧಾನಕರ ಇಳಿಕೆ ಕಂಡುಬಂದಿತ್ತು.

ಆದರೆ, ಈ ಎಲ್ಲಾ ಸಂಗತಿಗಳು ದೇಶದ ಜನಮಾನಸದಲ್ಲಿ ಇನ್ನೂ ಹಚ್ಚ ಹಸಿರಾಗಿ ಇರುವಾಗಲೇ ಪ್ರಧಾನಿ ಮೋದಿಯವರ ಸರ್ಕಾರ ದೇಶದಲ್ಲಿ ಆಮ್ಲಜನಕ ಕೊರತೆಯಿಂದ ಒಂದೇ ಒಂದು ಸಾವು ಸಂಭವಿಸಿಲ್ಲ ಎಂಬಂತಹ ನಾಚಿಕೆಗೇಡಿನ ವರಸೆ ಪ್ರದರ್ಶಿಸಿದೆ. ಇದು ಹೇಯ ಮತ್ತು ಲಜ್ಜೆಗೆಟ್ಟ ಸುಳ್ಳುಬುರಕತನ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇಂತಹ ಸುಳ್ಳುಗಳು ದೇಶದ ಹೀನಾಯ ಆರೋಗ್ಯ ವ್ಯವಸ್ಥೆಯ ಕಾರಣಕ್ಕೆ ಜೀವ ಕಳೆದುಕೊಂಡ ಲಕ್ಷಾಂತರ ಮಂದಿಗೆ ಮಾಡುವ ಅವಮಾನ ಮತ್ತು ನ್ಯಾಯಾಂಗಕ್ಕೆ ಮಾಡುವ ಅಪಮಾನ ಎಂಬ ಕನಿಷ್ಟ ಹಿಂಜರಿಕೆಯೂ ಇಲ್ಲದೆ ಹೀಗೆ ಮೋದಿಯವರ ಸರ್ಕಾರ ಹಸೀಸುಳ್ಳುಗಳ ಮೂಲಕ ತನ್ನ ಹೊಣೆಗಾರಿಕೆ ಕೊಡವಿಕೊಳ್ಳುವ ಮಟ್ಟಕ್ಕೆ ಕುಸಿದಿದೆ.

ಇದು ಭಾರತೀಯ ಜನತಾ ಪಕ್ಷದ ಆಡಳಿತ ತಲುಪಿರುವ ನೈತಿಕ ಅಧಃಪತನದ ಮಹಾ ಕುಸಿತ ಎನ್ನದೇ ಇನ್ನೇನು ಹೇಳಲು ಸಾಧ್ಯ?

Tags: ಕರೋನಾಕೋವಿಡ್ಪ್ರಧಾನಿ ಮೋದಿಬಿಜೆಪಿಮನಸುಖ್ ಮಾಂಡವೀಯಸುಪ್ರೀಂಕೋರ್ಟ್
Previous Post

2023 ವಿಧಾನಸಭೆ ಚುನಾವಣೆಗೆ ಅಡಿಪಾಯ; ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿಗೆ ಹೈಕಮಾಂಡ್ ಮೆಗಾ ಪ್ಲಾನ್

Next Post

KRS ಡ್ಯಾಂ ಉಳಿಸಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ಗೆ ಮನವಿ ಪತ್ರ ಸಲ್ಲಿಸಿದ ಸಂಸದೆ ಸುಮಲತಾ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
KRS ಡ್ಯಾಂ ಉಳಿಸಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ಗೆ ಮನವಿ ಪತ್ರ ಸಲ್ಲಿಸಿದ ಸಂಸದೆ ಸುಮಲತಾ

KRS ಡ್ಯಾಂ ಉಳಿಸಿ: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ಗೆ ಮನವಿ ಪತ್ರ ಸಲ್ಲಿಸಿದ ಸಂಸದೆ ಸುಮಲತಾ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada