• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ʼಪ್ರಜಾಪ್ರಭುತ್ವ ಮುಂದುವರೆಯುತ್ತದೆʼ: ದೆಹಲಿ ಭೇಟಿ ಯಶಸ್ವಿ ಎಂದ ಮಮತಾ ಬ್ಯಾನರ್ಜಿ

Shivakumar A by Shivakumar A
July 31, 2021
in ದೇಶ, ರಾಜಕೀಯ
0
ʼಪ್ರಜಾಪ್ರಭುತ್ವ ಮುಂದುವರೆಯುತ್ತದೆʼ: ದೆಹಲಿ ಭೇಟಿ ಯಶಸ್ವಿ ಎಂದ ಮಮತಾ ಬ್ಯಾನರ್ಜಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸಿದ ನಂತರ ಈಗ ಮಮತಾ ಬ್ಯಾನರ್ಜಿ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿರುವಂತಿದೆ.  ಮಮತಾ ಬ್ಯಾನರ್ಜಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರೊಂದಿಗೆ ಐದು ದಿನಗಳ ಭೇಟಿಯ ನಂತರ ಶುಕ್ರವಾರ ದೆಹಲಿಯಿಂದ ಮತ್ತೆ ಪಶ್ಚಿಮ ಬಂಗಾಳಕ್ಕೆ ವಾಪಾಸ್‌ ತೆರಳಿದ್ದಾರೆ.

ADVERTISEMENT

ತನ್ನ ರಾಜ್ಯಕ್ಕೆ ಹಿಂದಿರುಗುವಾಗ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ” ತನ್ನ ಐದು ದಿನಗಳ ರಾಷ್ಟ್ರ ರಾಜಧಾನಿ ದೆಹಲಿ ಪ್ರವಾಸವನ್ನು ಯಶಸ್ವಿಯಾಗಿದೆ. ನಾನು ಎರಡು ತಿಂಗಳಿಗೊಮ್ಮೆ ದೆಹಲಿಗೆ ಮರಳುತ್ತೇನೆ, ಪ್ರಜಾಪ್ರಭುತ್ವ ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸರಣಿ ಸಭೆಗಳನ್ನು ಗಮನಿಸಿದಾಗ,2024ರ ಚುನಾವಣೆಯಲ್ಲಿ ರಾಷ್ಟ್ರ ನಾಯಕತ್ವಕ್ಕೆ ಪ್ರಮುಖವಾದ ಉಮೇದುವಾರಿಕೆಯನ್ನು ಬಯಸುತ್ತಿರುವಂತೆ ಭಾಸವಾಗುತ್ತಿದೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗುವ ಆಕಾಂಕ್ಷೆ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ನಯವಾಗಿ ಉತ್ತರಿಸಿದ್ದ ದೀದಿ, ತಾನೊಬ್ಬಳು ಸಾಮಾನ್ಯ ಕಾರ್ಯಕರ್ತೆ ಎಂದಿದ್ದರು. ರಾಷ್ಟ್ರ ರಾಜಕಾರಣಕ್ಕೆ ಮತ್ತೆ ಪ್ರವೇಶಿಸುವ ಕುರಿತು ಹೆಚ್ಚಿನ ಗುಟ್ಟು ಬಿಟ್ಟುಕೊಡಲಿಲ್ಲ. ಆದರೆ, ಲೋಕಸಭಾ ಚುನಾವಣೆಯ ವೇಳೆ ದೇಶದಲ್ಲಿರುವ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಕೆಲಸವನ್ನು ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸಲು ಎಲ್ಲಾ ಪಕ್ಷಗಳು ಒಗ್ಗೂಡಬೇಕಾದ ಅನಿವಾರ್ಯತೆಯ ಕುರಿತು ಅವರು ಬೆಳಕು ಚೆಲ್ಲಿದ್ದಾರೆ.

“ರಾಜಕಾರಣದಲ್ಲಿ ಕೆಲವು ಬಾರಿ ನಾವು ನಮ್ಮೊಳಗಿನ ಭಿನ್ನಮತವನ್ನು ಮರೆತು ಒಗ್ಗೂಡಬೇಕಿದೆ. ದೇಶಕ್ಕಾಗಿ ಒಗ್ಗಟ್ಟಿನಿಂದ ಹೋರಾಡಬೇಕಿದೆ. ಸಾಕಷ್ಟು ‘ಅಚ್ಚೇ ದಿನ್’ ನೋಡಿದ್ದೇವೆ. ಇನ್ನು ‘ಸಚ್ಚೇ ದಿನ್’ (ಸತ್ಯದ ದಿನಗಳು) ನೋಡಬೇಕಿದೆ,” ಎಂದು ಅವರು ಹೇಳಿದ್ದಾರೆ.

2019ರ ಚುನಾವಣೆಯಲ್ಲಿಯೂ ವಿಪಕ್ಷಗಳನ್ನು ಒಗ್ಗೂಡಿಸುವ ಕೆಲಸಕ್ಕೆ ದೀದಿ ಕೈಹಾಕಿದ್ದರು. ಆದರೆ, ಬಹುತೇಕ ಪಕ್ಷಗಳು ದೀದಿ ಕೈಹಿಡಿಯದ ಕಾರಣ ಈ ಯೋಜನೆ ಮಕಾಡೆ ಮಲಗಿತ್ತು. ಏಕೆಂದರೆ, ಎಲ್ಲಾ ವಿರೋಧ ಪಕ್ಷಗಳು ತೃಣಮೂಲ ಕಾಂಗ್ರೆಸ್ ನೇತೃತ್ವದಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸಬೇಕು ಎಂಬ ಆಲೋಚನೆಯೊಂದಿಗೆ ರೂಪಿಸಿದ ಯೋಜನೆಗೆ ಹೆಚ್ಚಿನ ಬೆಂಬಲ ಸಿಗಲಿಲ್ಲ.

ಈ ಬಾರಿಯೂ ಅಂತಹುದೇ ಪ್ರಯತ್ನಕ್ಕೆ ದೀದಿ ಮತ್ತೆ ಮುಂದಾಗಿದ್ದಾರೆ. ಆದರೆ, ಈ ಬಾರಿ ಪಶ್ಚಿಮ ಬಂಗಾಳ ಚುನಾವಣೆ ಗೆದ್ದಿರುವ ಅಧಿಕಾರದೊಂದಿಗೆ ವಿಪಕ್ಷ ನಾಯಕರನ್ನು ಭೇಟಿಯಾಗಿದ್ದಾರೆ.

ಬಂಗಾಳದಲ್ಲಿ ವೀರಾವೇಶದಿಂದ ಮುನ್ನುಗ್ಗುತ್ತಿದ್ದ ಬಿಜೆಪಿಯ ಯಾಗಾಶ್ವವನ್ನು ಕಟ್ಟಿ ಹಾಕಿದ ದೀದಿ, ದೇಶದಲ್ಲಿ ಬಿಜೆಪಿಯನ್ನು ಸೋಲಿಸುವ ಹೊಸ ಮಂತ್ರವನ್ನು ಕಂಡು ಹುಡುಕಿದಂತಾಗಿದೆ. ಚುನಾವಣೆಗಳನ್ನು ಗೆಲ್ಲಲು ಬಿಜೆಪಿ ಅನುಸರಿಸುತ್ತಿದ್ದ ಬೂತ್ ಮಟ್ಟದ ತಂತ್ರಗಾರಿಕೆ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿಯೂ ದೀದಿ ಬಿಜೆಪಿಯನ್ನು ಹಿಂದಿಕ್ಕಿದ್ದಾರೆ.

‘ಹಿಂದುತ್ವ’ದಿಂದಲೇ ಚುನಾವಣೆ ಗೆಲ್ಲಬಹುದು ಅಂದುಕೊಂಡಿದ್ದ ಬಿಜೆಪಿಗೆ, ತಕ್ಕ ಉತ್ತರವನ್ನು ಈಗಾಗಲೇ ದೀದಿ ನೀಡಿದ್ದಾರೆ. ಇತರ ಜಾತ್ಯಾತೀತ ಪಕ್ಷಗಳು ‘ಮೃದು ಹಿಂದುತ್ವ’ ಧೋರಣೆಯನ್ನು ಅನುಸರಿಸಬೇಕಾದ ಅಗತ್ಯವಿಲ್ಲ ಎಂದು ಪಶ್ಚಿಮ ಬಂಗಾಳದ ಚುನಾವಣೆ ತೋರಿಸಿಕೊಟ್ಟಿದೆ.

ಚುನಾವಣೆಯಲ್ಲಿ ಗೆದ್ದ ನಂತರ ಒಂದರ ಮೇಲೊಂದರಂತೆ ಬಿಜೆಪಿಗೆ ಮರ್ಮಾಘಾತವನ್ನು ನೀಡುತ್ತಲೇ ಬಂದಿದ್ದಾರೆ. ಟಿಎಂಸಿ ತೊರೆದಿದ್ದ ಹಲವು ಹಿರಿಯ ನಾಯಕರು ಟಿಎಂಸಿಗೆ ವಾಪಾಸಾಗಿದ್ದಾರೆ. ಪೆಗಾಸಸ್ ವಿರುದ್ದ ತನಿಖೆ ನಡೆಸಲು ನ್ಯಾಯಾಂಗ ಸಮಿತಿಯನ್ನು ರಚಿಸಿದ್ದಾರೆ. ಮಾಧ್ಯಮಗಳ ಪಕ್ಷಪಾತೀಯ ಧೋರಣೆಯ ವಿರುದ್ದ, ಕೇಂದ್ರದ ಪರವಾದ ಒಲವಿನ ವಿರುದ್ದ ಕಿಡಿಕಾರಿದ್ದಾರೆ. ರಾಜ್ಯದಿಂದ ರಾಷ್ಟ್ರ ಎಂಬ ಧೋರಣೆಯಿಂದ ರಾಷ್ಟ್ರೀಯವಾದಿ ಸಿದ್ದಾಂತವನ್ನು ಪಶ್ಚಿಮ ಬಂಗಾಳದಲ್ಲಿ ಬುಡಮೇಲು ಮಾಡುವಲ್ಲಿ ದೀದಿ ಸಫಲರಾಗಿದ್ದಾರೆ.

ಇಷ್ಟೆಲ್ಲಾ ಸಾಧನೆಗಳನ್ನು ಕೇವಲ ಕಳೆದ ಆರು ತಿಂಗಳಲ್ಲಿ ಮಾಡಿರುವ ದೀದಿ, ಪ್ರಧಾನಿ ಹುದ್ದೆಯ ಕಣ್ಣಿಡುವುದರಲ್ಲಿ ಆಶ್ಚರ್ಯವೇನಿಲ್ಲ. ದೇಶದಲ್ಲಿರುವ 16 ವಿರೋಧ ಪಕ್ಷಗಳ ಬೆಂಬಲವನ್ನು ಪಡೆಯುವಲ್ಲಿ ಮಮತಾ ಬ್ಯಾನರ್ಜಿ ಸಫಲವಾಗುತ್ತಾರೋ ಎಂಬುದು ಈಗ ಉಳಿದಿರುವ ಪ್ರಶ್ನೆ.

ಪ್ರಸ್ತುತ ದೇಶದಲ್ಲಿ ಬಿಜೆಪಿ ವಿರುದ್ದ ಇರುವಂತಹ ರಾಜಕೀಯ ಪಕ್ಷಗಳನ್ನು ಒಗ್ಗೂಡಿಸಿ ಈಗಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವುದು ಸಿಎಂ ಮಮತಾ ಬ್ಯಾನರ್ಜಿಯ ಉದ್ದೇಶವಾಗಿದೆ. ಇದರಿಂದಾಗಿ ಬಿಜೆಪಿಯ ವಿರುದ್ದ ದೇಶದೆಲ್ಲೆಡೆ ಧ್ವನಿ ಎಬ್ಬಿಸುವ ಸಾಧ್ಯತೆಯಿದೆ.

ಇಷ್ಟು ಮಾತ್ರವಲ್ಲದೇ, ಪಶ್ಚಿಮ ಬಂಗಾಳ ಚುನಾವಣೆಯ ಗೆಲುವಿನ ಮಂತ್ರವಾಗಿದ್ದ ‘ಖೇಲಾ ಹೋಬೆ’ಯನ್ನು ದೇಶದೆಲ್ಲೆಡೆ ಮೊಳಗಿಸುವ ದೀದಿ ಕಾರ್ಯತಂತ್ರಕ್ಕೆ ಇತರ ಪಕ್ಷಗಳು ಯಾವ ರೀತಿ ಸ್ಪಂದಿಸುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Tags: BJPಬಿಜೆಪಿ
Previous Post

ಪಿಪಿಇ ಕಿಟ್ ಖರೀದಿಯಲ್ಲಿ ಮತ್ತೊಂದು ಹಗರಣ: ಕೆ ಆರ್‌ ಎಸ್‌ ಗಂಭೀರ ಆರೋಪ

Next Post

ಗುಳ್ಳವ್ವ ಗೊಗ್ಗಪ್ಪನ ಮೂರ್ತಿ ಪೂಜೆ ಬಾಂಧವ್ಯ ಬೆಸೆಯಲು ಸಹಕಾರಿ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post
ಗುಳ್ಳವ್ವ ಗೊಗ್ಗಪ್ಪನ ಮೂರ್ತಿ ಪೂಜೆ ಬಾಂಧವ್ಯ ಬೆಸೆಯಲು ಸಹಕಾರಿ

ಗುಳ್ಳವ್ವ ಗೊಗ್ಗಪ್ಪನ ಮೂರ್ತಿ ಪೂಜೆ ಬಾಂಧವ್ಯ ಬೆಸೆಯಲು ಸಹಕಾರಿ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada