• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂಪುಟದಲ್ಲಿ ಪ್ರಾದೇಶಿಕ ಸಮನ್ವಯತೆ ಕಾಯ್ದುಕೊಳ್ಳಲು ವಿಫಲವಾದ ಬಿಜೆಪಿ: ಸ್ವಪಕ್ಷೀಯರಿಂದಲೇ ಕೇಳಿಬರುತ್ತಿದೆ ಅಪಸ್ವರ!

ಪ್ರತಿಧ್ವನಿ by ಪ್ರತಿಧ್ವನಿ
August 4, 2021
in ಕರ್ನಾಟಕ
0
ಸಂಪುಟದಲ್ಲಿ ಪ್ರಾದೇಶಿಕ ಸಮನ್ವಯತೆ ಕಾಯ್ದುಕೊಳ್ಳಲು ವಿಫಲವಾದ ಬಿಜೆಪಿ: ಸ್ವಪಕ್ಷೀಯರಿಂದಲೇ ಕೇಳಿಬರುತ್ತಿದೆ ಅಪಸ್ವರ!
Share on WhatsAppShare on FacebookShare on Telegram

ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರದ ಬೆನ್ನಲ್ಲೇ ಬಿಜೆಪಿ ವಿರುದ್ಧ ಸ್ವಪಕ್ಷೀಯರಿಂದಲೇ ಅಪಸ್ವರ ಎದ್ದಿದೆ. ಹಳೆ ಮೈಸೂರು ಪ್ರಾಂತ್ಯ, ಕಲ್ಯಾಣ ಕರ್ನಾಟಕ ಪ್ರಾಂತ್ಯ ಮೈಸೂರು, ಕೊಡಗು, ಕಲಬುರಗಿ-ಯಾದಗಿರಿ ಮೊದಲಾದ ಭಾಗಗಳಿಗೆ ಸಚಿವಗಿರಿ ಸಿಗದಿರುವುದು ಅಲ್ಲಿಯ ಸ್ಥಳೀಯ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.

ADVERTISEMENT

ಮೈಸೂರು ಪ್ರಾಂತ್ಯದ ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆಗೊಂದೇ ಸಚಿವ ಸ್ಥಾನ ನೀಡಲಾಗಿದೆ.‌ ಮೈಸೂರು, ಕೊಡಗು, ಹಾಸನ , ಚಾಮರಾಜನಗರ ಜಿಲ್ಲೆಗಳ ಯಾವುದೇ ನಾಯಕರಿಗೆ ಈ ಬಾರಿ ಸಚಿವ ಸ್ಥಾನ ದೊರೆತಿಲ್ಲ. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿಯೂ ಮೈಸೂರು ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ದೊರೆತಿರಲಿಲ್ಲ.

ಹಾಗಾಗಿ, ಈ ಬಾರಿ ಸಚಿವಗಿರಿ ಲಭಿಸುವ ನಿರೀಕ್ಷೆಯಲ್ಲಿದ್ದರು ಆ ಭಾಗದ ಕಾರ್ಯಕರ್ತರು. ಕೃಷ್ಣರಾಜ ಕ್ಷೇತ್ರದ ಶಾಸಕ, ಐದು ಬಾರಿ ಶಾಸಕರಾಗಿರುವ ರಾಮದಾಸ್ ಗೆ ಈ ಬಾರಿ ಸಚಿವ ಸ್ಥಾನ ಪಕ್ಕಾ ಎನ್ನಲಾಗಿತ್ತು. ಸ್ವತಃ ಯಡಿಯೂರಪ್ಪ ಅವರೇ ರಾಮ್‌ದಾಸ್‌ ಬಳಿ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದರು, ಹಾಗಾಗಿ ನಿರೀಕ್ಷೆ ಇಟ್ಟಿದ್ದೆ ಎಂದು ರಾಮ್‌ದಾಸ್‌ ಅವರೇ ಮಾಧ್ಯಮಗಳೆದುರು ತಿಳಿಸಿದ್ದಾರೆ.

ಸಚಿವ ಸ್ಥಾನ ನೀಡುವುದಾಗಿ #BSYediyurappa ನನಗೆ ಭರವಸೆ ಕೊಟ್ಟಿದ್ರು, ಹಾಗಾಗಿ ನಿರೀಕ್ಷೆ ಇಟ್ಟಿದ್ದೆ- SA Ramdas

ಕರಾವಳಿ ಬಳಿಕ ಬಿಜೆಪಿಯ ಭದ್ರಕೋಟೆ ಎಂದೇ ಹೇಳಲಾಗಿರುವ ಕೊಡಗು ಜಿಲ್ಲೆ ಕೂಡಾ ಸಚಿವ ಸ್ಥಾನದಿಂದ ವಂಚಿತವಾಗಿದೆ. ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ಶಾಸಕರು ಹಾಗೂ ಒಬ್ಬ ವಿಧಾನ ಪರಿಷತ್‌ ಸದಸ್ಯರಿದ್ದರೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ ಎನ್ನುವುದು ಸ್ಥಳೀಯ ಕಾರ್ಯಕರ್ತರ ಅಸಮಾಧಾನಕ್ಕೆ ಮುಖ್ಯ ಕಾರಣವಾಗಿದೆ.

ಅರವಿಂದ್‌ ಬೆಲ್ಲದ, ಬಸನಗೌಡ ಪಾಟೀಲ್‌ ಯತ್ನಾಳ್‌, ಸಿಪಿ ಯೋಗೇಶ್ವರ್‌ ಮೊದಲಾದವರಿಗೂ ಸಚಿವ ಸ್ಥಾನ ಸಿಗದಿರುವುದು ಅವರ ಅಭಿಮಾನಿ ಬಳಗಕ್ಕೆ ತೀವ್ರ ನಿರಾಸೆಯಾಗಿದೆ. ಬಿಎಸ್‌ವೈ ಪದಚ್ಯುತಿ ಬಳಿಕವಂತೂ ಯತ್ನಾಳ್‌ ತನಗೆ ಸಚಿವ ಸ್ಥಾನ ನೀಡುವ ಕುರಿತು ನಿರೀಕ್ಷೆ ಇಟ್ಟಿದ್ದರು. ಆದರೆ ಅವರಿಗೆ ಈ ಬಾರಿಯೂ ಸಚಿವ ಸ್ಥಾನ ಸಿಕ್ಕಿಲ್ಲ.

ಈ ನಡುವೆ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಕೃಷ್ಣಪ್ಪ ಬಹಿರಂಗವಾಗಿಯೇ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಿಂದ ಅನ್ಯಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯವು 80ರಷ್ಟು ಭಾಗವು ಬಿಜೆಪಿಗೆ ಮತ ನೀಡಿರುವುದು ಪಕ್ಷ ಮರೆಯಬಾರದಿತ್ತು.ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು,ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ ಎಂದು ಪೂರ್ಣಿಮಾ ಹೇಳಿದ್ದಾರೆ.

ಕಲಬುರಗಿ-ಯಾದಗಿರಿ ಭಾಗಕ್ಕೆ ಯಾವುದೇ ಪ್ರಾತಿನಿಧ್ಯ ಸಿಗದಿರುವುದು ಕೂಡಾ ಆ ಭಾಗದ ಜನತೆಗೆ ನಿರಾಸೆ ತಂದಿಟ್ಟಿದೆ. ಶಾಸಕ ದತ್ತಾತ್ರೇಯ ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದಿರುವುದರಿಂದ ಅವರ ಅಭಿಮಾನಿಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಟೀಲ್ ಬೆಂಬಲಿಗರು, ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯಪುರ, ಕೋಲಾರ, ಚಿಕ್ಕಮಗಳೂರು, ದಾವಣಗೆರೆ, ರಾಮನಗರ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಸಚಿವ ಸ್ಥಾನ ದೊರೆಯದಿರುವುದು ಕೂಡಾ ಆ ಭಾಗದ ಜನರಲ್ಲಿ ನಿರಾಸೆ ಮೂಡಿಸಿದೆ.

ಈ ನಡುವೆ ಶಾಸಕ ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ಸಿಗದಿರುವುದನ್ನು ವಿರೋಧಿಸಿ ಅವರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ಬಾರಿ ಶಾಸಕರಾಗಿರುವ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವ ಭರವಸೆಯಲ್ಲಿ ಅವರ ಅಭಿಮಾನಿಗಳು ಇದ್ದರು.  ಆದರೆ ಅವರಿಗೆ ಸಚಿವ ಸ್ಥಾನ ನೀಡದೆ ಇರೋದನ್ನು ವಿರೋಧಿಸಿ  ಅವರ ಅಭಿಮಾನಿಗಳು, ಹಾವೇರಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Renukacharya ಆಸೆಗೆ ತಣ್ಣೀರೆರಚಿದ BJP ಹೈಕಮಾಂಡ್: ಮಂತ್ರಿಗಿರಿ ತಪ್ಪಿದ ಬಗ್ಗೆ ಹೊನ್ನಾಳಿ ಶಾಸಕರ ಪ್ರತಿಕ್ರಿಯೆ ಏನು?

ಉಳಿದಂತೆ ಶಾಸಕ ರಾಜುಗೌಡ, ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಸಿಗದಿರುವುದಕ್ಕೆ ತಮ್ಮ ಬೇಸರವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.

Tags: BJPCovid 19ಎಚ್ ಡಿ ಕುಮಾರಸ್ವಾಮಿಕರೋನಾಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಜೋಗ ಪ್ರವಾಸಿಗರಿಗೆ ಕರೋನಾ ನೆಗೇಟಿವ್ ಸರ್ಟಿಫಿಕೇಟ್ ಕಡ್ಡಾಯ: ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ

Next Post

ಸಂಪುಟ ರಚನೆಯ ಸೂತ್ರ: ವರಿಷ್ಠರು ಬಿಎಸ್ ವೈಗೆ ರವಾನಿಸಿದ ಸಂದೇಶವೇನು?

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಸಂಪುಟ ರಚನೆಯ ಸೂತ್ರ: ವರಿಷ್ಠರು ಬಿಎಸ್ ವೈಗೆ ರವಾನಿಸಿದ ಸಂದೇಶವೇನು?

ಸಂಪುಟ ರಚನೆಯ ಸೂತ್ರ: ವರಿಷ್ಠರು ಬಿಎಸ್ ವೈಗೆ ರವಾನಿಸಿದ ಸಂದೇಶವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada