• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ರೈತ ಸಂಸತ್ತು!

Shivakumar A by Shivakumar A
August 7, 2021
in ದೇಶ
0
ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ರೈತ ಸಂಸತ್ತು!
Share on WhatsAppShare on FacebookShare on Telegram

ಸಂಸತ್ತಿಗೆ ಸಮಾನಾಂತರವಾಗಿ ದೆಹಲಿಯ ಜಂತರ್ ಮಂತರ್’ನಲ್ಲಿ ನಡೆಯುತ್ತಿರುವ ರೈತ ಸಂಸತ್ತಿಗೆ ದಿನದಿಂದ ದಿನಕ್ಕೆ ಬೆಂಬಲ ಹೆಚ್ಚಾಗುತ್ತಿದೆ. 12ನೇ ದಿನಕ್ಕೆ ಈ ಸಂಸತ್ತು ಕಾಲಿಟ್ಟಿದೆ. ಶುಕ್ರವಾರದಂದು ರೈತ ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯವನ್ನು ಮಂಡಿಸಲಾಗಿದೆ. ಶುಕ್ರವಾರ ಎಂದಿನಂತೆ 200 ಜನ ರೈತ ಸಂಸದರು ಜಂತರ್ ಮಂತರ್’ನಲ್ಲಿ ಹಾಜರಿದ್ದರು. ಸರ್ಕಾರವು ರೈತರ ಆಂದೋಲನವನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನವನ್ನು ಮಾಡಿದ್ದರೂ, ಕಳೆದ ಎಂಟು ತಿಂಗಳಿನಿಂದ ಆಂದೋಲನವು ಯಶಸ್ವಿಯಾಗಿ ನಡೆಯುತ್ತಿದೆ. ಲಕ್ಷಾಂತರ ರೈತರು ಈ ಆಂದೋಲನದಲ್ಲಿ ಭಾಗಿಯಾಗಿದ್ದಾರೆ. ಇಷ್ಟಾದರೂ ರೈತರ ಬೇಡಿಕೆಯನ್ನು ಈಡೇರಿಸದ ಆಧಾರದ ಮೇಲೆ ಅವಿಶ್ವಾಸ ನಿರ್ಣಯವನ್ನು ಸದನದಲ್ಲಿ ಮಂಡಿಸಲಾಗಿದೆ.

ADVERTISEMENT

ಮೋದಿ ನೇತೃತ್ವದ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸುವ ಸುಳ್ಳು ಹೇಳಿರುವುದನ್ನು ಅವಿಶ್ವಾಸ ನಿರ್ಣಯ ಮಂಡಿಸುವಾಗ ಪರಿಗಣಿಸಲಾಗಿದೆ. ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಜರುಗಿಸದಿದ್ದರೂ, ಪದೇ ಪದೇ ಆ ಸುಳ್ಳನ್ನು ಹೇಳಲಾಗುತ್ತಿದೆ ಎಂದು ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ. ಇದರೊಂದಿಗೆ ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು ನೀಡುವ ವಿಚಾರವಾಗಿ ಬಿಜೆಪಿ ಮತ್ತು ಪ್ರಧಾನ ಮಂತ್ರಿಗಳು ಪ್ರತೀ ಬಾರಿಯೂ ತಮ್ಮದೇ ಮಾತುಗಳಿಗೆ ವಿರುದ್ದವಾಗಿ ನಡೆದುಕೊಂಡಿದ್ದಾರೆ ಎಂದು ರೈತ ಸಂಸದರು ಹೇಳಿದ್ದಾರೆ.

“ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನಾ ಎಂಬ ಹೆಸರಿನಲ್ಲಿ ರೈತರಿಗೆ ಮೋಸ ಮಾಡಲಾಗಿದೆ. ಈ ಯೋಜನೆಯಿಮದ ಸರ್ಕಾರದ ಖರ್ಚು ಹೆಚ್ಚಾಯಿತು, ರೈತರಿಗೆ ಸಿಗುತ್ತಿದ್ದ ವಿಮೆಯ ಮೊತ್ತ ಕಡಿಮೆಯಾಯಿತು, ವಿಮಾ ಕಂಪನಿಗಳಿಗೆ ಹೆಚ್ಚುವರಿ ಲಾಭವಾಯಿತು. ಆಮದು ಮತ್ತು ರಫ್ತಿನ ನಡುವಿನ ವ್ಯತ್ಯಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಆಮದು ಹೆಚ್ಚಾಗುತ್ತಿದೆ. ರಫ್ತು ಕಡಿಮೆಯಾಗುತ್ತಿದೆ. ನೈಸರ್ಗಿಕ ವಿಕೋಪಗಳು ಉಂಟಾದಾಗ ರೈತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ಸಂಪೂರ್ಣವಾಗಿ ಸೋತಿದೆ,” ಎಂದು ಅವಿಶ್ವಾಸ ನಿರ್ಣಯ ಮಂಡಿಸುವಾಗ ಚರ್ಚೆ ಮಾಡಲಾಗಿದೆ.

ಇದರೊಂದಿಗೆ, ಮೋದಿ ಸರ್ಕಾರವು ಕಾರ್ಪೊರೇಟ್ ಪರ, ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಿದೆ. ರೈತರ ಬೇಡಿಕೆಯಂತೆ ರೈತ ವಿರೋಧಿ ಕರಾಳ ಕಾನೂನುಗಳನ್ನು ರದ್ದುಗೊಳಿಸಿ ಎಂ ಎಎಸ್ ಪಿಗೆ ಕಾನೂನಿನ ಮಾನ್ಯತೆ ನೀಡುವ ಕೆಲಸವನ್ನು ಸರ್ಕಾರ ಮಾಡಿಲ್ಲ, ಎಂದು ರೈತರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ಸರ್ಕಾರದ ನೀತಿಗಳಿಂದ ಜನರು ಅನುಭವಿಸುತ್ತಿರುವ ಸಂಕಷ್ಟಗಳ ಕುರಿತಾಗಿಯೂ ಚರ್ಚೆ ನಡೆಸಲಾಗಿದೆ. ಇಂಧನ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರು ಕಷ್ಟ ಅನುಭವಿಸುತ್ತಿದ್ದಾರೆ. ಅಭಿವೃದ್ದಿ ಹೊಂದದ ಆರೋಗ್ಯ ಕ್ಷೇತ್ರದಿಂದಾಗಿ ಜನರು ಕರೋನಾದಿಂದ ಪರಿತಪಿಸುತ್ತಿದ್ದಾರೆ. ಜನರ ಮೇಲೆ ಅವರಿಗೆ ಅರಿವಿಲ್ಲದಂತೆಯೇ ಬೇಹುಗಾರಿಕೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಸರ್ಕಾರದ ವಿರುದ್ದ ದನಿ ಎತ್ತಿದವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದರಿಂದ ಮಾನವ ಹಕ್ಕುಗಳ ಉಲ್ಲಂಘನೆಯೂ ಆಗಿದೆ, ಎಂದು ರೈತ ಸಂಸತ್ತಿನಲ್ಲಿ ಚರ್ಚಿಸಲಾಗಿದೆ.

ರೈತ ಸಂಸತ್ತಿಗೆ ವಿರೋಧ ಪಕ್ಷದ ನಾಯಕರ ಬೆಂಬಲವೂ ಲಭಿಸುತ್ತಿದ್ದು, ಶುಕ್ರವಾರವೂ ಹಲವು ಸಂಸದರು ಜಂತರ್ ಮಂತರ್’ಗೆ ಭೇಟಿ ನೀಡಿದ್ದಾರೆ. ಕಾಂಗ್ರೆಸ್, ಡಿಎಂಕೆ, ಆರ್ ಜೆ ಡಿ, ಸಿಪಿಐಎಂ, ಸಿಪಿಐ, ಶಿವಸೇನೆ, ಆರ್ ಎಸ್ ಪಿ, ಟಿಎಂಸಿ, ಐಯುಎಂಎಲ್ ಸೇರಿದಂತೆ ಇತರೆ ಪಕ್ಷಗಳ ನಾಯಕರು ರೈತ ಸಂತ್ತಿಗೆ ಬೆಂಬಲ ಸೂಚಿಸಿದ್ದಾರೆ.

ಸಿಂಘು ಹಾಗೂ ಟಿಕ್ರಿ ಗಡಿಗಳಲ್ಲಿ ರೈತರ ಆಂದೋಲನ ಮತ್ತಷ್ಟು ಬಲಿಷ್ಟವಾಗುತ್ತಿದೆ. ಗುರುವಾರದಂದು ತಮಿಳುನಾಡಿನಿಂದ ಸುಮಾರು ಒಂದು ಸಾವಿರ ರೈತರು ಸಿಂಘು ಗಡಿಯನ್ನು ತಲುಪಿದ್ದಾರೆ. ಹರಿಯಾಣದಿಂದ 1500ಕ್ಕೂ ಹೆಚ್ಚು ವಾಹನಗಳಲ್ಲಿ ರೈತರು ಪ್ರತಿಭಟನೆಗೆ ಆಗಮಿಸಿದ್ದಾರೆ. ಉತ್ತರಾಖಂಡ್’ನಿಂದಲೂ ರೈತರ ದೊಡ್ಡಗುಂಪೊಂದು ಗಾಝೀಪುರ ಗಡಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಸೇರಿಕೊಂಡಿದೆ.

Previous Post

ʻಜೈ ಭೀಮ್ʼ ಅಲ್ಲ ʻಜೈ ಅಂಬೇಡ್ಕರ್ʼ ಘೋಷವಾಕ್ಯದೊಂದಿಗೆ UP ಚುನಾವಣೆಗೆ ಸಜ್ಜಾದ ಬಿಜೆಪಿ!

Next Post

ಖೇಲ್ ರತ್ನ ಪ್ರಶಸ್ತಿಯ ಬಳಿಕ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಸಿ ಟಿ ರವಿ ಆಗ್ರಹ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಖೇಲ್ ರತ್ನ ಪ್ರಶಸ್ತಿಯ ಬಳಿಕ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಸಿ ಟಿ ರವಿ ಆಗ್ರಹ

ಖೇಲ್ ರತ್ನ ಪ್ರಶಸ್ತಿಯ ಬಳಿಕ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಸಿ ಟಿ ರವಿ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada