• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

2023ರ ಎಲೆಕ್ಷನ್: ಕಾಂಗ್ರೆಸ್‌ನ ಡಿಕೆಶಿ, ಸಿದ್ದರಾಮಯ್ಯ ಬಿಟ್ಟು ದಲಿತರಿಗೆ ಸಿಗಲಿದೆಯಾ ಸಿಎಂ ಸ್ಥಾನ?

ನಚಿಕೇತು by ನಚಿಕೇತು
August 10, 2021
in ಕರ್ನಾಟಕ, ರಾಜಕೀಯ
0
2023ರ ಎಲೆಕ್ಷನ್: ಕಾಂಗ್ರೆಸ್‌ನ ಡಿಕೆಶಿ, ಸಿದ್ದರಾಮಯ್ಯ ಬಿಟ್ಟು ದಲಿತರಿಗೆ ಸಿಗಲಿದೆಯಾ ಸಿಎಂ ಸ್ಥಾನ?
Share on WhatsAppShare on FacebookShare on Telegram

ರಾಜ್ಯ ರಾಜಕೀಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯದ್ದೇ ಜೋರು ಚರ್ಚೆ. ಅದರಲ್ಲೂ ಮುಂದೆ ಯಾವುದೇ ಪಕ್ಷ ಗೆದ್ದು ಅಧಿಕಾರಕ್ಕೆ ಬಂದರೂ ದಲಿತರನ್ನು ಸಿಎಂ ಮಾಡಲಿದ್ದಾರಾ? ಎಂಬ ಚರ್ಚೆಯಂತೂ ನಡೆಯುತ್ತಲೇ ಇದೆ. ಈಗಲೂ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಅಥವಾ ಡಿ.ಕೆ ಶಿವಕುಮಾರ್ ಎಂದು ಹೇಳುತ್ತಿದ್ದಾರೆಯೇ ಹೊರತು ಇಲ್ಲಿಯೂ ಯಾವೊಬ್ಬ ದಲಿತ ನಾಯಕರ ಹೆಸರೂ ಕೇಳಿ ಬರುತ್ತಿಲ್ಲ. ಇದಕ್ಕೆ ಕಾರಣ ಹಲವು ವರ್ಷಗಳಿಂದಲೂ ದಲಿತ ಮುಖ್ಯಮಂತ್ರಿಯ ಕನಸು ಮರೀಚಿಕೆಯಾಗಿಯೇ ಉಳಿದಿರುವುದು. ದಲಿತ ಸಿಎಂ ಕೂಗು ಕೇಳಿ ಬಂದ ಕೂಡಲೇ ಪ್ರಬಲ ಸಮುದಾಯದವರು ಅದನ್ನು ದಮನ ಮಾಡುವುದು. ಈ ಹಿಂದೆ ಎಷ್ಟೋ ಬಾರಿ ಕಾಂಗ್ರೆಸ್ನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡುವ ಅವಕಾಶಗಳಿದ್ದರೂ ಸೋ ಕಾಲ್ಡ್ ಸೆಕ್ಯೂಲರ್ ಪಾರ್ಟಿ ನಾಯಕರೇ ಇದಕ್ಕೆ ತಣ್ಣೀರು ಎರಚಿದ್ರು.

ADVERTISEMENT

ಹೌದು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಷ್ಟೋ ಬಾರಿ ದಲಿತರಿಗೆ ಸಿಎಂ ಆಗುವ ಅವಕಾಶಗಳಿದ್ದವು. ಉದಾಹರಣೆಗೆ 2008ರಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಎದುರಿಸಿದ್ದದ್ದು. ಆಗ ಕಾಂಗ್ರೆಸ್ಗೆ ಬಹುಮತ ಸಿಗಲಿಲ್ಲವಾದರೂ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಈ ಸಂದರ್ಭದಲ್ಲಿ ಹೈಕಮಾಂಡ್ ಮನಸ್ಸು ಮಾಡಿದ್ರೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬಹುದಿತ್ತು. ಇನ್ನು, 2013ರಲ್ಲಿ ಕಾಂಗ್ರೆಸ್ಗೆ ಬಹುಮತ ಸಿಕ್ಕರೂ ಅಂದಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ದಲಿತ ನಾಯಕ ಡಾ. ಜಿ ಪರಮೇಶ್ವರ್ ಅವರನ್ನು ಬೇಕಂತಲೇ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿ ಸಿಎಂ ಸ್ಥಾನ ತಪ್ಪಿಸಲಾಯ್ತು. ಬೇಕಿದ್ದರೆ ಎಂಎಲ್ಸಿ ಮಾಡಿ ಸಿಎಂ ಮಾಡಬಹುದಿತ್ತು, ಆದರೆ ಸೋತ ಕಾರಣ ದಲಿತ ಸಿಎಂ ಧ್ವನಿ ಆಡಗಿ ಹೋಯ್ತು.

ಯಾವುದೇ ಸಂದರ್ಭದಲ್ಲಾದ್ರೂ ಬೇರೆ ಸಮುದಾಯದಿಂದ ಸಿಎಂ ಕೂಗು ಕೇಳಿ ಬಂದರೆ ಅವರ ಬೆನ್ನಿಗೆ ನಿಲ್ಲೋದು ದಲಿತರು. ಆದರೆ, ದಲಿತ ಸಿಎಂ ಕೂಗು ಕೇಳಿ ಬಂದಾಗ ಯಾವ ಸಮುದಾಯದ ನಾಯಕರು ಇವರ ಬೆನ್ನಿಗೆ ನಿಲ್ಲೋದಿಲ್ಲ. ರಾಜ್ಯ ಆಳುವ ಸಾಮರ್ಥ್ಯ ಇದ್ದರೂ ದಲಿತ ಎಂಬ ಕಾರಣಕ್ಕೆ ಅವಕಾಶ ಸಿಗುತ್ತಿಲ್ಲ. ಸಾಮರ್ಥ್ಯ ಹೊಂದಿದ್ದರೂ, ಕಾನೂನು ಅರಿವಿದ್ದರೂ ದಲಿತರಿಗೆ ಸಿಎಂ ಸ್ಥಾನ ನೀಡೋಕೆ ಯಾವ ಪಕ್ಷಕ್ಕೂ ಇಷ್ಟ ಇಲ್ಲ. ಹೀಗಿದ್ದರೂ ಮತ್ತೊಮ್ಮೆ ದಲಿತ ಸಿಎಂ ಕೂಗು ಕೇಳಿ ಬರುತ್ತಿದೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲೋಕೆ ಬೇಕಾದ ವಾತಾವರಣ ನಿರ್ಮಾಣವಾಗಿದೆ. ಅತಿಯಾದ ಆತ್ಮ ವಿಶ್ವಾಸದಿಂದ ಇರುವ ಕಾಂಗ್ರೆಸ್ಗೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವಿನ ಒಳ ಜಗಳವೇ ಮುಳ್ಳಾಗಬಹುದು. ಈಗಲೂ ಮುಂದಿನ ಸಿಎಂ ಯಾರು ಎಂಬುದೇ ಚರ್ಚೆ, ಈ ವೇಳೆ ಸ್ವಾಭಾವಿಕವಾಗಿ ಕಾಂಗ್ರೆಸ್ನಲ್ಲಿ ಕೇಳಿ ಬರುವುದು ಸಿದ್ದರಾಮಯ್ಯನವರ ಹೆಸರು. ಇವರು ಉತ್ತಮ ಆಡಳಿತ ನೀಡಿದ್ದರಿಂದ ಸಿದ್ದರಾಮಯ್ಯ ಹೆಸರು ಕೇಳಿ ಬರೋದು ಸಹಜ.

ಇನ್ನೊಂದೆಡೆ ಕಾಂಗ್ರೆಸ್ ಶಿಸ್ತಿನ ಸಿಪಾಯಿ ಎಂದೇ ಕರೆಯಲಾಗುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೆಸರು ಕೂಡ ಸಿಎಂ ಸ್ಥಾನಕ್ಕೆ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಇವರು ಒಕ್ಕಲಿಗ ಸಮುದಾಯ ಎಂಬುದು. ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡು ಬೆಳೆದು ಬಂದ ಇವರು ಸಿಎಂ ಗಾದಿಗೆ ಪೈಪೋಟಿ ನೀಡುತ್ತಿರೋದು ನಿಜ. ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಕ್ಕಲಿಗ ಮತ ‘ಕೈ’ ಹಿಡಿದರೆ ಡಿಕೆಶಿ ಮುಂದಿನ ಸಿಎಂ ಆಗಬಹುದು ಎನ್ನಬಹುದು. ಎಸ್. ಎಂ ಕೃಷ್ಣ ಬಳಿಕ ಕಾಂಗ್ರೆಸ್ನಲ್ಲಿ ಯಾರಿಗಾದರೂ ಒಕ್ಕಲಿಗರಿಗೆ ಸಿಎಂ ಸ್ಥಾನಕ್ಕೆ ಸಿಕ್ಕರೆ ಅದು ಡಿಕೆಶಿಗೆ ಮಾತ್ರ.

ಇನ್ನೊಂದೆಡೆ ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನದ ಮೇಲೆ ಲಿಂಗಾಯತ ಸಮುದಾಯದ ನಾಯಕರು ಹದ್ದಿನ ಕಣ್ಣಿಟ್ಟಿದ್ದಾರೆ. ವೀರೇಂದ್ರ ಪಾಟೀಲ್ ನಂತರ ಲಿಂಗಾಯತ ಸಮುದಾಯದ ಯಾರು ಕಾಂಗ್ರೆಸ್ನಲ್ಲಿ ಈವರೆಗೂ ಸಿಎಂ ಆಗಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಶಾಮನೂರು ಶಿವಶಂಕರಪ್ಪ, ಎಚ್. ಕೆ. ಪಾಟೀಲ್, ಎಂ. ಬಿ. ಪಾಟೀಲ್ ಹಲವರ ಹೆಸರು ಮುಂಚೂಣಿಯಲ್ಲಿದೆ.

ಹೀಗಿರುವಾಗಲೇ ದಲಿತ ಸಿಎಂ ರೇಸ್ನಲ್ಲಿ ಮತ್ತೆ ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್ ಮತ್ತು ಮುನಿಯಪ್ಪ ಹೆಸರು ಕೇಳಿ ಬರ್ತಿದೆ. ಈ ಬಾರಿಯಾದರೂ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಹೊರತುಪಡಿಸಿ ದಲಿತ ಸಿಎಂಗೆ ಹೈಕಮಾಂಡ್ ಮಣೆ ಹಾಕಲಿದೆಯಾ? ನೋಡಬೇಕು.

Tags: Congress PartyDK ShivakumarKarnataka Politicsಸಿದ್ದರಾಮಯ್ಯ
Previous Post

ಕೊರೋನಾ ಲಸಿಕೆಯ ಪಾರದರ್ಶಕತೆ ಬಗ್ಗೆ ಪ್ರಶ್ನಿಸಿದ ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್: ಉತ್ತರಿಸುವಂತೆ ಮೋದಿ ಸರ್ಕಾರಕ್ಕೆ ʻಸುಪ್ರೀಂʼ ನೋಟೀಸ್!

Next Post

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಬಸವರಾಜ್‌ ಬೊಮ್ಮಾಯಿ ಆದೇಶ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಆಗಸ್ಟ್ 23 ರಿಂದ 9 – 12ನೇ ತರಗತಿಗಳು ಆರಂಭ, ರಾಜ್ಯಾದ್ಯಂತ ನೈಟ್ ಕರ್ಫ್ಯೂ‌ ಜಾರಿ: ಸಿಎಂ  ಬೊಮ್ಮಾಯಿ

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಬಸವರಾಜ್‌ ಬೊಮ್ಮಾಯಿ ಆದೇಶ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada