• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯ ಸುತ್ತ ಬಿಗಿ ಭದ್ರತೆ

ಪ್ರತಿಧ್ವನಿ by ಪ್ರತಿಧ್ವನಿ
August 14, 2021
in ದೇಶ
0
ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯ ಸುತ್ತ ಬಿಗಿ ಭದ್ರತೆ
Share on WhatsAppShare on FacebookShare on Telegram

ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿದ್ದಂತೆಯೇ ದೆಹಲಿಯ ಕೆಂಪು ಕೋಟೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಲವು ಹಂತಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸುಮಾರು 5000ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಬಾರಿ ಕೆಂಪು ಕೋಟೆಯ ಸುತ್ತ ಬಿಗಿ ಪಹರೆ ಕಾಯ್ದುಕೊಳ್ಳಲಿವೆ.

ADVERTISEMENT

NSG ಸ್ನೈಪರ್ಸ್ ಪಡೆ, SWAT ಕಮಾಂಡೊ, ಕೈಟ್ ಕ್ಯಾಚರ್ಸ್ ಪಡೆ, ಶ್ವಾನ ದಳ ಮತ್ತು ಶಾರ್ಪ್ ಶೂಟರ್ಸ್ ಪಡೆಗಳನ್ನು ಕೆಂಪು ಕೋಟೆಯ ಸುತ್ತಲಿರುವ ಎತ್ತರದ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಇತ್ತೀಚಿಗೆ ಜಮ್ಮು ಏರ್ಪೋರ್ಟ್’ನಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಡ್ರೋನ್ ಬಳಸಿ ಬಾಂಬ್ ದಾಳಿ ನಡೆಸಿದ ಕಾರಣಕ್ಕೆ, ಕೆಂಪು ಕೋಟೆಯ ಸುತ್ತ ಡ್ರೋನ್ ನಿರೋಧಕ ವ್ಯವಸ್ಥೆಯನ್ನು ಕೂಡಾ ಅಳವಡಿಸಿಕೊಳ್ಳಲಾಗಿದೆ.

ಎರಡು ಪೊಲೀಸ್ ಕಂಟ್ರೋಲ್ ರೂಮ್ ಬಳಸಿಕೊಂಡು 350 ಕ್ಯಾಮೆರಾಗಳ ಮುಖಾಂತರ ಪ್ರತಿಕ್ಷಣದ ಚಲನವಲನಗಳ ಮೇಲೆ ನಿಗಾ ಇರಿಸಲಾಗುತ್ತಿದೆ. ಕೋವಿಡ್ ನಿಯಮಗಳ ಪಾಲನೆಯನ್ನು ಅನುಷ್ಠಾನಗೊಳಿಸಲು ಹಾಗೂ ಭದ್ರತೆಯನ್ನು ಕಾಪಾಡಲು 5000ದಷ್ಟು ಭದ್ರತಾ ಪಡೆಯ ಸಿಬ್ಬಂದಿಗಳು ಕೆಂಪು ಕೋಟೆಯಲ್ಲಿ ಇರಲಿದ್ದಾರೆ.

ಹಿಂದೆಂದೂ ಕೈಗೊಳ್ಳದ ವಿಶೇಷ ಭದ್ರತಾ ಕ್ರಮವೊಂದನ್ನು ಈ ಬಾರಿ ಕೈಗೊಳ್ಳಲಾಗಿದೆ. ಜನವರಿ 26ರಂದು ರೈತರ ಟ್ರ್ಯಾಕ್ಟರ್ ಮೆರವಣಿಗೆಯ ವೇಳೆ ನಡೆದಂತಹ ಅನಾಹುತಕಾರಿ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ, ಬೃಹತ್ ಕಂಟೈನರ್’ಗಳನ್ನು ಕೆಂಪು ಕೋಟೆಯ ಪ್ರವೇಶ ದ್ವಾರದ ಬಳಿ ಇಡಲಾಗಿದೆ. ಆಮಂತ್ರಿತ ಅತಿಥಿಗಳ ಹೊರತಾಗಿ ಬೇರೆ ಯಾರೂ ಸ್ವಾತಂತ್ರ್ಯ ದಿನಾಚರಣೆಯ ಸ್ಥಳ ಪ್ರವೇಶಿಸದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ, ದೆಹಲಿಯ ಚಾಂದನಿ ಚೌಕ್ ಹಾಗೂ ಆಸುಪಾಸಿನ ಪ್ರದೇಶದಿಂದ ಕೆಂಪುಕೋಟೆಯ ಒಳಗೆ ಏನು ನಡೆಯುತ್ತಿದೆ ಎಂಬುದು ಕಾಣಿಸದಷ್ಟು ಎತ್ತರಕ್ಕೆ ಈ ಕಂಟೈನರ್’ಗಳನ್ನು ಇಡಲಾಗಿದೆ.

ಇದರೊಂದಿಗೆ, 70 ಪಿಸಿಆರ್ ವಾಹನಗಳು, ಪ್ರಹಾರ್ ವಾಹನಗಳು ಮತ್ತು ತುರ್ತು ರಕ್ಷಣಾ ಘಟಕದ ವಾಹನಗಳು ಕೂಡಾ ಕೆಂಪು ಕೋಟೆಯ ಸುತ್ತ ನಿಯೋಜಿಸಲಾಗಿವೆ. ಕೋಟೆಯ ಆಸುಪಾಸಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಗಳು ಬೈಕುಗಳ ಮೇಲೆ ಗಸ್ತು ತಿರುಗಲಿದ್ದಾರೆ. ಯಮುನಾ ನದಿಯಲ್ಲಿಯೂ ಬೊಟ್ ಮೂಲಕ ಪೊಲೀಸ್ ಪಡೆಗಳು ಗಸ್ತು ತಿರುಗಲಿದ್ದು, ಯಾವುದೇ ಅಚಾತುರ್ಯ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಕೃಷಿ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಬೀಡು ಬಿಟ್ಟಿರುವ ಪ್ರತಿಭಟನಾ ನಿರತ ರೈತರು ನಗರದೊಳಗೆ ಪ್ರವೇಶಿಸದಂತೆಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆಹಲಿಯೊಳಗೆ ಪ್ರವೇಶಿಸಿರುವ ವ್ಯಕ್ತಿಗಳ ಕುರಿತು ಮಾಹಿತಿ ದೃಢೀಕರಣ ಪ್ರಕ್ರಿಯೆ ನಡೆಸಲಾಗಿದೆ. ದೆಹಲಿಯ ನಿವಾಸಿಗಳ ಹಾಗೂ ಇಲ್ಲಿ ಬಾಡಿಗೆಗೆ ಇರುವವರ ಗುರುತು ಪತ್ತೆ ಕೂಡಾ ಮಾಡಲಾಗಿದೆ.

ನಾಳೆ ಕೆಂಪು ಕೋಟೆಯಲ್ಲಿ ಕಾರ್ಯಕ್ರಮ ನಡೆಯುತ್ತಿರುವ ವೇಳೆ ದೆಹಲಿಯ ಎಂಟು ರಸ್ತೆಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಯಾವುದೇ ರೀತಿಯ ಭೌತಿಕ ವಸ್ತುಗಳ ಹಾರಾಟವನ್ನು ಆಗಸ್ಟ್ 16ರ ವರೆಗೆ ನಿರ್ಬಂಧಿಸಲಾಗಿದೆ. ನಿಯಮ ಮೀರಿ ಡ್ರೋನ್ ಹಾರಾಟ ನಡೆಸಿದ ವೆಬ್ ಸಿರೀಸ್ ತಂಡವೊಂದರ ವಿರುದ್ದ ಈಗಾಗಲೇ ಪ್ರಕರಣವನ್ನೂ ದಾಖಲಿಸಲಾಗಿದೆ

Tags: DelhiIndependence Day
Previous Post

ರೈತರ ಜೀವನದ ಜೊತೆ ಚೆಲ್ಲಾಟವಾಡಬೇಡಿ – ಮಾಜಿ ಶಾಸಕ ಹೆಚ್‌ ಸಿ ಬಾಲಕೃಷ್ಣ

Next Post

ಭದ್ರಾ ಜಲಾಶಯ ಮೈದುಂಬಿದ್ದು, ನೀರಾವರಿ ಸಚಿವ ಗೋವಿಂದ ಕಾರಜೋಳ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಬಾಗಿನ ಅರ್ಪಿಸಲಾಯಿತು

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post

ಭದ್ರಾ ಜಲಾಶಯ ಮೈದುಂಬಿದ್ದು, ನೀರಾವರಿ ಸಚಿವ ಗೋವಿಂದ ಕಾರಜೋಳ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಬಾಗಿನ ಅರ್ಪಿಸಲಾಯಿತು

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada