• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೇಕೆದಾಟು ಯೋಜನೆ; ಬಿಜೆಪಿ ಡಬಲ್ ಗೇಮ್; ತಮಿಳುನಾಡು, ಕರ್ನಾಟಕ ಎರಡು ರಾಜ್ಯಗಳಲ್ಲೂ ವೋಟ್ ಬ್ಯಾಂಕ್ ಪಾಲಿಟಿಕ್ಸ್

ನಚಿಕೇತು by ನಚಿಕೇತು
August 15, 2021
in ಕರ್ನಾಟಕ
0
ಮೇಕೆದಾಟು ಯೋಜನೆ; ಬಿಜೆಪಿ ಡಬಲ್ ಗೇಮ್; ತಮಿಳುನಾಡು, ಕರ್ನಾಟಕ ಎರಡು ರಾಜ್ಯಗಳಲ್ಲೂ ವೋಟ್ ಬ್ಯಾಂಕ್ ಪಾಲಿಟಿಕ್ಸ್
Share on WhatsAppShare on FacebookShare on Telegram

ಒಂದೆಡೆ ಸಿಎಂ ಬಸವರಾಜ್ ಬೊಮ್ಮಾಯಿ ಅಣ್ಣಾಮಲೈ ಧರಣಿಯಾದರೂ ಕೂರಲೀ, ಪ್ರತಿಭಟನೆಯಾದರೂ ಮಾಡಲೀ. ನಮ್ಮ ನೀರು, ನಮ್ಮ ಹಕ್ಕು. ತಮಿಳುನಾಡಿನ ಯಾವುದೇ ರಾಜಕೀಯ ಪಕ್ಷ ಏನು ಬೇಕಾದರೂ ಮಾಡಲೀ. ನಾನು ಮಾತ್ರ ಮೇಕೆದಾಟು ಯೋಜನೆ ಮಾಡಿಯೇ ತೀರುತ್ತೇನೆ ಎನ್ನುತ್ತಿದ್ದಾರೆ. ಇನ್ನೊಂದೆಡೆ ಇತ್ತೀಚೆಗಷ್ಟೇ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆ. ಅಣ್ಣಾಮಲೈ ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಮಾಡಲು ಬಿಡೋದಿಲ್ಲ ಎಂದಿದ್ದಾರೆ.

ADVERTISEMENT

ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಮಾತ್ರ ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತಾಡಿದ್ದಾರೆ. ಹೀಗಿರುವಾಗಲೇ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರದ ಅನುಮತಿ ಅಗತ್ಯ ಎಂದು ಹೇಳಿದೆ. ಇದನ್ನೆಲ್ಲಾ ನೋಡಿದ್ರೆ ಮೇಕೆದಾಟು ವಿಚಾರದಲ್ಲಿ ಬಿಜೆಪಿ ಡಬಲ್ ಗೇಮ್ ಆಡುತ್ತಿದ್ಯಾ ಎಂಬ ಅನುಮಾನ ಶುರುವಾಗಿದೆ.

ಹೌದು, ತಮಿಳುನಾಡು ನಾಯಕರು ಎಷ್ಟೇ ಪ್ರತಿಭಟನೆ ಮಾಡಲೀ, ನಾನಂತೂ ಕೇರ್ ಮಾಡಲ್ಲ. ಅಣ್ಣಾಮಲೈ ಉಪವಾಸ ಕೂತರೂ, ಧರಣಿ ಮಾಡಿದ್ರೂ ಐ ಡೋಂಟ್ ಕೇರ್. ಈತನನ್ನು ನೀವು ದೊಡ್ಡ ಮನುಷ್ಯ ಮಾಡುತ್ತಿದ್ದೀರಿ. ನಮ್ಮ ನೀರು, ನಮ್ಮ ಹಕ್ಕು. ಮೇಕೆದಾಟು ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಸುಪ್ರೀಕೋರ್ಟ್ ತೀರ್ಪು ಕೂಡ ನಮ್ಮ ಪರವೇ ಇದೆ. ಹಾಗಾಗಿ ನಾನು ಮೇಕೆದಾಟು ಯೋಜನೆ ಮಾಡಿಯೇ ತೀರುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಅಗ್ರೆಸ್ಸಿವ್ ಆಗಿ ಮುನ್ನುಗ್ಗುತ್ತಿದ್ದಾರೆ.

ಕರ್ನಾಟಕದ ಪ್ರಮುಖ ಬಿಜೆಪಿ ನಾಯಕ ಮತ್ತು ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಹೇಳಿಕೆ ಮಾತ್ರ ಬೊಮ್ಮಾಯಿಗೆ ತದ್ವಿರುದ್ಧವಾಗಿದೆ. ಮೇಕೆದಾಟು ಯೋಜನೆ ವಿಚಾರದಲ್ಲಿ ನೀವು ಕರ್ನಾಟಕ ಪರವೋ, ತಮಿಳುನಾಡು ಪರವೋ ಎಂಬ ಮಾಧ್ಯಮಗಳ ಪ್ರಶ್ನೆಗೆ ಸಿ.ಟಿ ರವಿ ನೀಡಿರುವ ಉತ್ತರ ಕನ್ನಡಿಗರಿಗೆ ಅಚ್ಚರಿ ಮೂಡಿಸಿದೆ. ನಾನು ಕರ್ನಾಟಕ ಪರವೂ ಅಲ್ಲ, ತಮಿಳುನಾಡು ಪರವೂ ಅಲ್ಲ, ಬದಲಿಗೆ ನಾನು ಭಾರತದ ಪರ ಎಂದಿದ್ದಾರೆ ಸಿ.ಟಿ ರವಿ.

ಮುಂದುವರಿದು, ನೀವು ನನ್ನ ಹೇಳಿಕೆಯನ್ನ ಹೇಗೆ ವಿಶ್ಲೇಷಿಸುತ್ತೀರಿ ಎಂಬುದು ಮುಖ್ಯವಲ್ಲ. ನಾನು ಏನು ಹೇಳ್ತೇನೆ ಅನ್ನೋದು ಮುಖ್ಯ. ಕಾವೇರಿ ನೀರಿನ ಹಂಚಿಕೆಯಾಗಿದೆ. ಸುಪ್ರೀಂಕೋರ್ಟ್ ತೀರ್ಪಿನ ವ್ಯಾಪ್ತಿಯೊಳಗೆ ಕರ್ನಾಟಕ ಮತ್ತು ತಮಿಳುನಾಡು ನೀರು ಹಂಚಿಕೆ ಮಾಡಿಕೊಂಡರೆ ಯಾವುದೇ ಅಡ್ಡಿಯಿಲ್ಲ. ಕರ್ನಾಟಕ ಸರ್ಕಾರವೂ ತಮಿಳುನಾಡು ಜತೆಗೆ ಮಾತಾಡಿ ಯೋಜನೆ ರೂಪಿಸಿದ್ದರೆ ಯಾವುದೇ ಅಡ್ಡಿ ಬರೋದಿಲ್ಲ.. ನೀರು ಎಲ್ಲರಿಗೂ ಅತ್ಯವಶ್ಯಕ. ಕುಡಿಯೋ ನೀರಿಗೆ ಗಡಿಯಿಲ್ಲ.. ನೀರಿಗೆ ರಾಜಕೀಯವಿಲ್ಲ ಎಂದು ತಟಸ್ಥರಾಗಿದ್ದಾರೆ.

ಇನ್ನು, ಸಿಟಿ ರವಿ ಮತ್ತು ಬೊಮ್ಮಾಯಿ ಹೇಳಿಕೆ ಗಮನಿಸಿದರೆ ಬಿಜೆಪಿ ಒಂದೇ ವಿಚಾರವನ್ನ ಇಟ್ಟುಕೊಂಡು ಡಬಲ್ ಗೇಮ್ ಆಡುತ್ತಿದೆ ಎಂಬ ಗುಮಾನಿ ಶುರುವಾಗಿದೆ. ಬಿಜೆಪಿ ನಾಯಕರು ತಮಿಳುನಾಡಿನಲ್ಲೊಂದು, ಕರ್ನಾಟಕದಲ್ಲೊಂದು ನಿಲವು ತಾಳಿರುವುದು ಕೇವಲ ರಾಜಕೀಯ ಎಂದು ಹೇಳಲಾಗುತ್ತಿದೆ. ಎರಡು ರಾಜ್ಯಗಳಲ್ಲೂ ಡಬಲ್ ಗೇಮ್ ಆಡಿ ಮತದಾರರನ್ನು ಸೆಳೆಯೋ ಪ್ರಯತ್ನ ಮಾಡುತ್ತಿದೆ ಎಂಬುದು ಮಾತ್ರ ಸ್ಪಷ್ಟವಾಗಿದೆ.

ಮೇಕೆದಾಟು ವಿಚಾರವನ್ನೇ ಮುಂದಿಟ್ಟುಕೊಂಡು ಸಿಎಂ ಬಸವರಾಜ್ ಬೊಮ್ಮಾಯಿ ಅಗ್ರೆಸ್ಸಿವ್ ಇಮೇಜ್ ಬೆಳೆಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಬೇಕಂತಲೇ ಬಿಜೆಪಿ ಮೇಕೆದಾಟು ವಿಚಾರವನ್ನು ವಿಚಾರ ಮಾಡುತ್ತಿದೆ. ಇದು ವಿವಾದವಾದಷ್ಟೂ ಬಿಜೆಪಿಗೆ ಅಲ್ಲೂ ಲಾಭ ಇಲ್ಲೂ ಲಾಭ. ಯೋಜನೆ ವಿಚಾರವಾಗಿ ವಿರೋಧಿಗಳು ಸಿಡಿದೆದ್ದಷ್ಟೂ ಬಿಜೆಪಿಗೆ ರಾಜಕೀಯ ಲಾಭ ಆಗಲಿದೆ ಅನ್ನೋ ಲೆಕ್ಕಾಚಾರ ಬಿಜೆಪಿಯಲ್ಲಿದೆ.

ಈ ವಿವಾದದ ಬಗ್ಗೆ ವಿಪಕ್ಷಗಳು ಧ್ವನಿ ಎತ್ತಿದಾಗಲೆಲ್ಲ ಯೋಜನೆ ಪರ ಗಟ್ಟಿಯಾದ ನಿಲುವು ಪ್ರದರ್ಶನ ಮಾಡುವುದು. ಈ ಮೂಲಕವೇ ಹಳೇ ಮೈಸೂರು ಭಾಗದಲ್ಲಿ ಜನರ ಮನಸಲ್ಲಿ ನೆಲೆಯೂರಲು ಪ್ರಯತ್ನ ಮಾಡುವುದು ರಾಜ್ಯ ಬಿಜೆಪಿಯ ಪ್ಲಾನ್.

ಅತ್ತ ತಮಿಳುನಾಡಿನಲ್ಲೂ ಬಿಜೆಪಿ ನೆಲೆ ಕಂಡುಕೊಳ್ಳಲು ಮುಂದಾಗಿದೆ. ಅದಕ್ಕಾಗಿಯೇ ಅಣ್ಣಾಮಲೈ ಈ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯನ್ನು ಗಟ್ಟಿಗೊಳಿಸಲು ಈ ಯೋಜನೆಯೇ ದೊಡ್ಡ ಅಸ್ತ್ರವಾಗಿದೆ.

Tags: BJPಅಣ್ಣಾಮಲೈಕರ್ನಾಟಕಬಿಜೆಪಿಮೇಕೆದಾಟು
Previous Post

ಮಧ್ಯಪ್ರದೇಶ ವೈದ್ಯಕೀಯ ಪರೀಕ್ಷೆಯಲ್ಲಿ ಭಾರಿ ಅಕ್ರಮ: ಸರ್ಕಾರಿ ತನಿಖೆಯಿಂದ ಸ್ಫೋಟಕ ಮಾಹಿತಿ ಬಹಿರಂಗ

Next Post

ಸ್ವಾತಂತ್ರ್ಯ ದಿನಾಚಾರಣೆ: ಲಂಡನ್ ಬ್ರಿಡ್ಜ್ ಮೇಲೆ ‘Resign Modi’ ಬ್ಯಾನರ್ ಹಾರಾಟ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ಸ್ವಾತಂತ್ರ್ಯ ದಿನಾಚಾರಣೆ: ಲಂಡನ್ ಬ್ರಿಡ್ಜ್ ಮೇಲೆ ‘Resign Modi’ ಬ್ಯಾನರ್ ಹಾರಾಟ

ಸ್ವಾತಂತ್ರ್ಯ ದಿನಾಚಾರಣೆ: ಲಂಡನ್ ಬ್ರಿಡ್ಜ್ ಮೇಲೆ 'Resign Modi' ಬ್ಯಾನರ್ ಹಾರಾಟ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada