• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಾಲಿಬಾನ್ ಶೈಲಿಯ ದಾಳಿಗೆ ಕರೆ ನೀಡಿ ವಿವಾದಕ್ಕೆ ಸಿಲುಕಿದ ಬಿಜೆಪಿ ಶಾಸಕ

Any Mind by Any Mind
August 20, 2021
in ದೇಶ
0
ತಾಲಿಬಾನ್ ಶೈಲಿಯ ದಾಳಿಗೆ ಕರೆ ನೀಡಿ ವಿವಾದಕ್ಕೆ ಸಿಲುಕಿದ ಬಿಜೆಪಿ ಶಾಸಕ
Share on WhatsAppShare on FacebookShare on Telegram

ತ್ರಿಪುರಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷದ ಶಾಸಕರೊಬ್ಬರು ತಮ್ಮ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಟಿಎಂಸಿ ನಾಯಕರು ಏರ್ಪೋರ್ಟ್’ನಲ್ಲಿ ಇಳಿದ ಕೂಡಲೇ ‘ತಾಲೀಬಾನ್’ ಶೈಲಿಯಲ್ಲಿ ಅವರ ಮೇಲೆ ದಾಳಿ ನಡೆಸಲು ಬಹಿರಂಗವಾಗಿ ಸಂದೇಶ ರವಾನಿಸಿದ್ದಾರೆ. 

ADVERTISEMENT

ತ್ರಿಪುರಾದ ಬೆಲೊನಿಯಾ ವಿಧಾನಸಭಾ ಕ್ಷೇತ್ರದ ಅರುಣ್ ಚಂದ್ರ ಭೌಮಿಕ್ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕರು. ಗುರುವಾರದಂದು ರಾಜ್ಯದ ನೂತನ ಶಿಕ್ಷಣ ಮಂತ್ರಿಯಾದ ಪ್ರತಿಮಾ ಭೌಮಿಕ್ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವ ವೇಳೆ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. 

ರಾಜ್ಯದಲ್ಲಿ 25 ವರ್ಷಗಳ ಎಡಪಕ್ಷದ ಆಡಳಿತವನ್ನು ಕಿತ್ತೊಗೆದು ಬಿಪ್ಲಬ್ ಕುಮಾರ್ ದೇಬ್ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚಿಸಿತ್ತು. ಈ ಸರ್ಕಾರವನ್ನು ಟಿಎಂಸಿಯು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ, ಎಂದು ಅವರು ಹೇಳಿದ್ದಾರೆ. 

“ಟಿಎಂಸಿ ನಾಯಕರು ಪಶ್ಚಿಮ ಬಂಗಾಳದಿಂದ ಬಂದು ಬಿಪ್ಲಬ್ ದೇಬ್ ಅವರ ಸರ್ಕಾರಕ್ಕೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಇವೆಲ್ಲಾ ಪ.ಬಂ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೂಚನೆಯ ಮೇರೆಗೆ ನಡೆಯುತ್ತಿದೆ. ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ಅವರ ಮೇಲೆ, ತಾಲಿಬಾನ್ ಶೈಲಿಯಲ್ಲಿ ದಾಳಿ ನಡೆಸಿ,” ಎಂದು ಹೇಳಿದ್ದಾರೆ. 

ಅವರು ಒಮ್ಮೆ ಏರ್ಪೋರ್ಟ್’ಗೆ ಬಂದಿಳಿದ ತಕ್ಷಣವೇ ಅವರ ಮೇಲೆ ದಾಳಿ ನಡೆಸಬೇಕು. ಬಿಪ್ಲಬ್ ಕುಮಾರ್ ದೇಬ್ ಅವರ ಸರ್ಕರವನ್ನು ನಮ್ಮ ಕೊನೆಯ ಉಸಿರು ಇರುವವರೆಗೂ ನಾವು ರಕ್ಷಿಸಬೇಕಿದೆ, ಎಂದು ಹೇಳಿದ್ದಾರೆ. 

ಇವರ ಭಾಷಣದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಟೀಕೆಗೆ ಒಳಗಾಗಿದೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಟಿಎಂಸಿಯ ರಿತಬ್ರತಾ ಬ್ಯಾನರ್ಜಿ ಅವರು, ಸಂಪೂರ್ಣ ವಿಶ್ವವೇ ತಾಲೀಬಾನ್ ಮಾಡಿರುವ ಕುಕೃತ್ಯಗಳನ್ನು ಖಂಡಿಸುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದಂತಹ ಬಿಜೆಪಿ ಶಾಸಕರೊಬ್ಬರು ತಾಲೀಬಾನ್ ಶೈಲಿಯ ದಾಳಿಗೆ ಕರೆ ನೀಡಿದ್ದಾರೆ. ಇದು ತಾಲೀಬಾನ್’ಗೆ ನೀಡಿಉರವ ಬೆಂಬಲವಲ್ಲದೇ ಮತ್ತೇನು?, ಎಂದು ಪ್ರಶ್ನಿಸಿದ್ದಾರೆ. 

ಅರುಣ್ ಭೌಮಿಕ್ ಅವರು ಈ ಭಾಷಣ ಮಾಡಿದ ಬೆನ್ನಲ್ಲೇ, ತ್ರಿಪುರಾದಲ್ಲಿ ಬಿಜೆಪಿ ಬೆಂಬಲಿತ ಗೂಂಡಾಗಳು ಟಿಎಂಸಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್’ನಿಂದ ಟಿಎಂಸಿಗೆ ಬಂದಿರುವ ಸುಬಲ್ ಭೌಮಿಕ್ ಅವರು ಹೇಳಿದ್ದಾರೆ. ತ್ರಿಪುರಾದಲ್ಲಿ ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ದ ದಾಳಿ ನಡೆಸಿದ್ದು ಬಿಜೆಪಿ ಕಾರ್ಯಕರ್ತರೇ ಎಂದು ಟೀಕಿಸಿದ್ದಾರೆ. 

ತ್ರಿಪುರಾ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಬೇಂದು ಭಟ್ಟಾಚಾರ್ಯ ಅವರು, ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ನಡೆಸಿದ ದಾಳಿಯ ಕುರಿತು ಆಕ್ರೋಶ ವ್ಯಕ್ತಪಡಿಸುವ ಸಂದರ್ಭದಲ್ಲಿ ಬಂದಂತಹ ಭಾವನೆಯಿಂದ ಈ ರೀತಿಯ ಮಾತುಗಳು ಬಂದಿವೆ. ಪಕ್ಷವು ಕಾನೂನನ್ನು ಕೈಗೆ ತೆಗೆದುಕೊಳ್ಳುವ ಪ್ರತಿಯೊಬ್ಬರ ವಿರುದ್ದ ಕ್ರಮ ಕೈಗೊಳ್ಳಲಿದೆ. ನಮಗೆ ಸಂವಿಧಾನದ ಮೇಲೆ ಸಂಪೂರ್ಣ ವಿಶ್ವಾಸವಿದೆ, ಎಂದು ಹೇಳಿದ್ದಾರೆ. 

ಇತ್ತೀಚಿಗೆ ತಾಲಿಬಾನಿಗಳನ್ನು ಸ್ವಾತಂತ್ರ್ಯ ಯೋಧರು ಎಂಬರ್ಥದಲ್ಲಿ ಬಿಂಬಿಸಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದರೊಬ್ಬರ ವಿರುದ್ದ ದೇಶದ್ರೋಹದ ಪ್ರಕರಣವನ್ನು ದಾಖಲಿಸಲಾಗಿತ್ತು. ಸಂಭಲ್ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಶಫಿಕುರ್ ರೆಹಮಾನ್ ಬರ್ಕ್ ಅವರು ಈ ರೀತಿಯ ಹೇಳಿಕೆ ನೀಡಿದ್ದರು. ಇದರ ವಿರುದ್ದ ಸರ್ಕಾರವು ಶೀಘ್ರವಾಗಿ ಕ್ರಮ ಕೈಗೊಂಡು ಅವರ ವಿರುದ್ದ ದೇಶದ್ರೋಹದ ಪ್ರಕರಣವನ್ನು ದಾಖಲಿಸಿತ್ತು. ಈಗ ತ್ರಿಪುರಾದಲ್ಲಿ ತಮ್ಮದೇ ಪಕ್ಷವಿರುವುದರಿಂದ ಅರುಣ್ ಭೌಮಿಕ್ ಅವರ ವಿರುದ್ದ ಯಾವ ರೀತಿಯ ಕ್ರಮ ಕೈಗೊಳ್ಳುವುದು ಎಂದು ಕಾದುನೋಡಬೇಕಿದೆ. 

Previous Post

ಮೂಲಭೂತ ಸೌಕರ್ಯ, ಕಳಪೆ ಮಟ್ಟದ ಶಿಕ್ಷಣದಿಂದಾಗಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜಿಗೆ ಬೀಗ!

Next Post

2029ರಲ್ಲಿ ಮಂಗಳ ಗ್ರಹದ ಮಣ್ಣು ಭೂಮಿಗೆ ತರಲಿದ್ದೇವೆ: ಜಪಾನ್ ಬಾಹ್ಯಾಕಾಶ ಸಂಸ್ಥೆ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
2029ರಲ್ಲಿ ಮಂಗಳ ಗ್ರಹದ ಮಣ್ಣು ಭೂಮಿಗೆ ತರಲಿದ್ದೇವೆ: ಜಪಾನ್ ಬಾಹ್ಯಾಕಾಶ ಸಂಸ್ಥೆ

2029ರಲ್ಲಿ ಮಂಗಳ ಗ್ರಹದ ಮಣ್ಣು ಭೂಮಿಗೆ ತರಲಿದ್ದೇವೆ: ಜಪಾನ್ ಬಾಹ್ಯಾಕಾಶ ಸಂಸ್ಥೆ

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada