• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಿಎಎ ಸಮರ್ಥಿಸಿಕೊಳ್ಳಲು ಅಫ್ಘಾನ್ ಉದಾಹರಣೆ ನೀಡಿದ ಕೇಂದ್ರ ಸಚಿವ

Any Mind by Any Mind
August 23, 2021
in ದೇಶ
0
ಸಿಎಎ ಸಮರ್ಥಿಸಿಕೊಳ್ಳಲು ಅಫ್ಘಾನ್ ಉದಾಹರಣೆ ನೀಡಿದ ಕೇಂದ್ರ ಸಚಿವ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಮರ್ಥಿಸಿಕೊಳ್ಳಲು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಅಫ್ಘಾನಿಸ್ತಾನದ ಬಿಕ್ಕಟ್ಟನ್ನು ಬಳಸಿಕೊಂಡಿದ್ದಾರೆ. ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತರಲು ಕಾರಣವೇನು ಎಂಬದನ್ನು ವಿವರಿಸಲು ಅಫ್ಘಾನ್ ಉದಾಹರಣೆಯನ್ನು ನೀಡಿದ್ದಾರೆ. 

ADVERTISEMENT

ಈ ಕುರಿತಾಗಿ ಟ್ವೀಟ್ ಮಾಡಿರುವ ಹರ್ದೀಪ್ ಸಿಂಗ್ ಅವರು, ನಮ್ಮ ನೆರೆಯ ರಾಷ್ಟ್ರದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ಗಮನಿಸಿದಾಗ ಪೌರತ್ವ ತಿದ್ದುಪಡಿ ಕಾಯ್ದೆಯ ಮಹತ್ವ ತಿಳಿಯುತ್ತದೆ ಎಂದು ಹೇಳಿದ್ದಾರೆ. 

“ನಮ್ಮ ನೆರೆ ರಾಷ್ಟ್ರದಲ್ಲಿ ಘಟಿಸಿರುವ ಇತ್ತೀಚಿನ ಬೆಳವಣಿಗೆಗಳು ಹಾಗೂ ಅಲ್ಲಿನ ಸಿಖ್ ಮತ್ತು ಹಿಂದೂ ಸಮುದಾಯದ ಜನರು ಪಡುತ್ತಿರುವ ಕಷ್ಟಗಳನ್ನು ನೋಡುತ್ತಿದ್ದರೆ,  ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಬೇಕಾದ ಅನಿವಾರ್ಯತೆಯ ಕುರಿತು ನಮಗೆ ತಿಳಿಯುತ್ತದೆ,” ಎಂದು ಅವರು ಹೇಳಿದ್ದಾರೆ. 

 ಅಫ್ಘಾನಿಸ್ತಾನದಲ್ಲಿ 1996ರಿಂದ 2001ರ ತನಕ ತಾಲಿಬಾನ್ ಆಡಳಿತವಿದಾಗ ಅಲ್ಲಿನ  ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ದ ತಾಲಿಬಾನ್ ಅತ್ಯಂತ ಕಠೋರ ರೀತಿಯಲ್ಲಿ ವ್ಯವಹರಿಸಿತ್ತು. ವಿದೇಶಿಗರು ಹಾಗೂ ಪ್ರಾದೇಶಿಕ ಅಲ್ಪಸಂಖ್ಯಾತರು ಕೂಡಾ ಈ ಸಂದರ್ಭದಲ್ಲಿ ದೌರ್ಜನ್ಯಕ್ಕೆ ಒಳಪಟ್ಟಿದ್ದರು. 

ಈಗ ಮತ್ತೆ ಅಂತುಹುದೇ ಪರಿಸ್ಥಿತಿ ಮರುಕಳಿಸುವ ಆತಂಕ ಎದುರಾಗಿದೆ. ಈಗಾಗಲೇ ನೂರಾರು ಭಾರತೀಯರನ್ನು ಹಾಗೂ ಅಲ್ಲಿನ  ಹಿಂದೂ, ಸಿಖ್ಖರನ್ನು ಭಾರತಕ್ಕೆ ಕರೆತರಲಾಗಿದೆ. 

ಸಿಎಎ ಕಾಯ್ದೆಯು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಆಯಾ ದೇಶಗಳ ಅಲ್ಪಸಂಖ್ಯಾತ 

ಸಮುದಾಯಗಳಾದ ಹಿಂದೂ, ಜೈನ, ಬೌಧ, ಪಾರ್ಸಿ ಹಾಗೂ ಕ್ರೈಸ್ತ ಧರ್ಮದ ನಾಗರಿಕರಿಗೆ ಭಾರತದ ಪೌರತ್ವ ನೀಡುತ್ತದೆ. ಈ ಕಾಯ್ದೆಯ ಅಡಿಯಲ್ಲಿ ಡಿಸೆಂಬರ್ 31,2014ರ ವರೆಗೆ ಭಾರತಕ್ಕೆ ಆಗಮಿಸಿರುವ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸದೇ, ಭಾರತೀಯ  ನಾಗರಿಕರು ಎಂದು ಪರಿಗಣಿಸಲಾಗುತ್ತಿತ್ತು.  ಈ ಕಾಯ್ದೆಯು ಭಾರತದ ಸಾಂವಿಧಾನಿಕ ಆಶಯಗಳಿಗೆ ವಿರುದ್ದವಾದದ್ದು ಎಂಬ ಕಾರಣಕ್ಕೆ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸಂವಿಧಾನಕ್ಕೆ ವಿರುದ್ದವಾದದ್ದು ಎಂಬುದು ಹಲವರ ಅಭಿಪ್ರಾಯವಾಗಿದೆ

Tags: AfghanistanAfghanistanCrisisBJPCAAನರೇಂದ್ರ ಮೋದಿಬಿಜೆಪಿ
Previous Post

ಪಶ್ಚಿಮ ಬಂಗಾಳ ವಿಭಜನೆಗೆ ಬೆಂಬಲ ಸೂಚಿಸಿದ ದಿಲೀಪ್ ಘೋಷ್

Next Post

ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಬಾವುಟ: ರಾಷ್ಟ್ರಧ್ವಜಕ್ಕೆ ಅಪಮಾನ ಎಂದ ಪ್ರತಿಪಕ್ಷಗಳು

Related Posts

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?
Top Story

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

by ಪ್ರತಿಧ್ವನಿ
February 11, 2026
0

ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ ಇದೆ. ಅದು ಯಾವುದೇ ಕ್ರಿಕೆಟ್...

Read moreDetails
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
Next Post
ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಬಾವುಟ: ರಾಷ್ಟ್ರಧ್ವಜಕ್ಕೆ ಅಪಮಾನ ಎಂದ ಪ್ರತಿಪಕ್ಷಗಳು

ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಬಾವುಟ: ರಾಷ್ಟ್ರಧ್ವಜಕ್ಕೆ ಅಪಮಾನ ಎಂದ ಪ್ರತಿಪಕ್ಷಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada