• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

2023 ವಿಧಾನಸಭಾ ಚುನಾವಣೆ; ಬೆಳಗಾವಿಯ 18 ಕ್ಷೇತ್ರಗಳಲ್ಲಿ ಹತ್ತು ಸೀಟು ಗೆಲ್ಲಲು ಸತೀಶ್ ಜಾರಕಿಹೊಳಿ ಮಾಸ್ಟರ್ ಪ್ಲಾನ್

ನಚಿಕೇತು by ನಚಿಕೇತು
August 23, 2021
in ಕರ್ನಾಟಕ, ರಾಜಕೀಯ
0
2023 ವಿಧಾನಸಭಾ ಚುನಾವಣೆ; ಬೆಳಗಾವಿಯ 18 ಕ್ಷೇತ್ರಗಳಲ್ಲಿ ಹತ್ತು ಸೀಟು ಗೆಲ್ಲಲು ಸತೀಶ್ ಜಾರಕಿಹೊಳಿ ಮಾಸ್ಟರ್ ಪ್ಲಾನ್
Share on WhatsAppShare on FacebookShare on Telegram


ರಾಜ್ಯ ರಾಜಕಾರಣದಲ್ಲಿ ನಿರಂತರ ಸದ್ದು ಮಾಡುವ ಏಕೈಕ ಜಿಲ್ಲೆ ಬೆಳಗಾವಿ. ಇದಕ್ಕೆ ಕಾರಣ ಜಾರಕಿಹೊಳಿ ಕುಟುಂಬದ ರಾಜಕಾರಣ. ಬೆಳಗಾವಿ ಮತ್ತು ಕರ್ನಾಟಕದ ರಾಜಕಾರಣದಲ್ಲಿ ಕಳೆದ 2 ದಶಕದಿಂದ ಜಾರಕಿಹೊಳಿ ಕುಟುಂಬ  ಕಡೆಗಣಿಸಲು ಸಾಧ್ಯವಿಲ್ಲದಂತೆ ಬೆಳೆದು ನಿಂತಿದೆ.

ADVERTISEMENT

ಮಾಜಿ ಸಚಿವ ರಮೇಶ ಜಾರಕಿಹೊಳಿ ಗೋಕಾಕ ಕ್ಷೇತ್ರದಲ್ಲಿ, ಬಾಲಚಂದ್ರ ಜಾರಕಿಹೊಳಿ ಅರಬಾವಿ ಕ್ಷೇತ್ರದಲ್ಲಿ, ಸತೀಶ್ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದಲ್ಲಿ ಹಿಡಿತ ಸಾಧಿಸಿ ಸತತವಾಗಿ ಗೆಲ್ಲುತ್ತಲೇ ಬಂದಿದ್ದಾರೆ. ಯಾವುದೇ ಸರ್ಕಾರ ಬಂದರೂ ಕುಟುಂಬದ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ. ಹಾಗಾಗಿ ಮೂವರು ಸಚಿವರಾಗಿ ಕೆಲಸ ನಿರ್ವಹಿಸಿದ್ದಾರೆ.


ಇದೇ ಮೊದಲ ಬಾರಿಗೆ ಜಾರಕಿಹೊಳಿ ಕುಟುಂಬದ ಸೈಲೆಂಟ್ ಮ್ಯಾನ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಿನ 2023 ವಿಧಾನಸಭಾ ಚುನಾವಣೆಯನ್ನ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದಾರೆ. ಹೇಗಾದರು ಸರಿ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಬೇಕು ಎಂದು ಹೊರಟಿದ್ದಾರೆ. ಸತೀಶ್ ಜಾರಕಿಹೊಳಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ನಂತರ ಯಮಕನಮರಡಿ ಕ್ಷೇತ್ರವನ್ನು ಆಯ್ದುಕೊಂಡರು. ಕುಟುಂಬದ ಸಹೋದರರಲ್ಲಿ ಬೇರೆಲ್ಲರಿಗಿಂತ ಭಿನ್ನವಾಗಿ ಹೆಜ್ಜೆ ಹಾಕುತ್ತ ಬಂದಿರುವ ಸತೀಶ್ ಈಗ ಇಡೀ ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.


2004ಕ್ಕಿಂತ ಮೊದಲು ಕಾಂಗ್ರೆಸ್ ಹಿಡಿತದಲ್ಲಿದ್ದ ಇಡೀ ಬೆಳಗಾವಿ ಜಿಲ್ಲೆಯನ್ನು ಮರಳಿ ಪಕ್ಷಕ್ಕೆ ತರುವ ಸವಾಲಿನೊಂದಿಗೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಿಗಿಂತಲೂ ಈಗ ಕಾಂಗ್ರೆಸ್ಗೆ ಹಲವು ಕಾರಣಗಳಿಗಾಗಿ ಜಿಲ್ಲೆಗೆ ಹತ್ತಿರವಾಗಿದೆ.


ಬೆಲೆ ಏರಿಕೆ ನಿಯಂತ್ರಣದಲ್ಲಿ ವಿಫಲ, ಆಡಳಿತದಲ್ಲಿ ಭ್ರಷ್ಟಾಚಾರ, ಪಕ್ಷದೊಳಗಿನ ಭಿನ್ನಮತ, ಮೂಲ ಬಿಜೆಪಿಗರ ಕಡೆಗಣನೆ, ಬೆಳಗಾವಿ ಸುವರ್ಣ ವಿಧಾನಸೌಧವನ್ನು ಭೂತಬಂಗಲೆಯಾಗಿಸಿರುವುದು. ಹೀಗೆ ಹತ್ತಾರು ವಿಚಾರಗಳನ್ನು ಮುಂದಿಟ್ಟುಕೊಂಡು ಮುಂದೆ ಚುನಾವಣೆಗೆ ಹೋಗಲು ಸತೀಶ್ ಜಾರಕಿಹೊಳಿ 2023 ವಿಧಾನಸಭಾ ಚುನಾವಣೆಗೆ ಹೋಗಲು ಮುಂದಾಗಿದ್ದಾರೆ.


ಸತೀಶ್ ಜಾರಕಿಹೊಳಿ ಬೆಳಗಾವಿ ಕಾಂಗ್ರೆಸ್ ಪಾಲಿನ ಚಾಣಾಕ್ಯ ರಾಜಕಾರಣಿ. ಅಹಿಂದ ಸಂಘಟನೆಯಲ್ಲಿ ಮಹತ್ವದ ಪಾತ್ರವಹಿಸಿರುವ ಸತೀಶ್, 2023ರ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಇತ್ತೀಚೆಗೆ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯ ಕೆಲಸ ಚುರುಕುಗೊಳಿಸಿದ್ದಾರೆ. ಉಪಚುನಾವಣೆ ವೇಳೆ ಮತ ಹಾಕಿದ ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಲ್ಪ ಮತದಲ್ಲಿ ಸೋತರೂ ಭವಿಷ್ಯದ ರಾಜಕಾರಣದಲ್ಲಿ ಮತ್ತಷ್ಟು ಗಟ್ಟಿಯಾಗಲು ಜಾರಕಿಹೊಳಿ ತಮ್ಮದೇ ಸರಳ ಶೈಲಿಯಲ್ಲಿ ಕ್ಷೇತ್ರದಾದ್ಯಂತ ಸಂಚಾರ ನಡೆಸುತ್ತಿದ್ದಾರೆ.


2023ರ ಚುನಾವಣೆಗೆ ಮಾಸ್ಟರ್ ಪ್ಲಾನ್ ಹೆಣೆದಿರುವ ಇವರು, ಸಮಯ ವ್ಯರ್ಥ ಮಾಡದೆ ಪ್ರತಿ ಹಳ್ಳಿಗೂ ಭೇಟಿ ನೀಡುತ್ತಿದ್ದಾರೆ. ಕಾರ್ಯಕರ್ತರು ಮತ್ತು ಜನರ ಜೊತೆ ಸಮಾಲೋಚಿಸುತ್ತಿದ್ದಾರೆ. ಈ ಮೂಲಕ ಮತದಾರರನ್ನು ಹಿಡಿದಿಟ್ಟುಕೊಳ್ಳಲು ಸತೀಶ್ ರಣತಂತ್ರ ಹೆಣೆದಿದ್ದಾರೆ.
ಸತೀಶ್ ಜಾರಕಿಹೊಳಿ ಮಹತ್ವಾಕಾಂಕ್ಷಿ ರಾಜಕಾರಣಿ. ಉನ್ನತ ಹುದ್ದೆಯ ಮೇಲೆ ಕಣ್ಣಿಟ್ಟು ಕುಳಿತಿರುವ ಹಿಂದುಳಿದ ಸಮುದಾಯದ ನಾಯಕ. ಮೊದಲು ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕೆಲಸ ಚುರುಕುಗೊಳಿಸಬೇಕು. ಜಿಲ್ಲೆಯ 2 ಲೋಕಸಭಾ ಕ್ಷೇತ್ರಗಳಾದ ಬೆಳಗಾವಿ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರದ ಮೇಲೆ ಹಿಡಿತ ಸಾಧಿಸಬೇಕು. ಇದರ ಜೊತೆಗೆ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ 10 ಸ್ಥಾನ ಕಾಂಗ್ರೆಸ್ ಮಡಿಲಿಗೆ ತುಂಬಿಸಬೇಕು ಅನ್ನೋದು ಇವರ ಗುರಿ.


ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಮಂಗಳಾ ಅಂಗಡಿ ವಿರುದ್ಧ ಅಲ್ಪಮತದಲ್ಲಿ ಸತೀಶ್ ಜಾರಕಿಹೊಳಿ ಸೋಲು ಕಂಡಿದ್ದರು. ಸೋತರು ಕಾಂಗ್ರೆಸ್ ಪಾಲಿಗೆ ಸತೀಶ್ ಗಳಿಸಿದ್ದ ಭಾರೀ ಮತಗಳು ಹೊಸ ಆಶಾಭಾವ ಹುಟ್ಟುಹಾಕಿದೆ. ಇದರ ಬೆನ್ನಲ್ಲೇ ಮುಂದಿನ 2023 ವಿಧಾನಸಭಾ ಚುನಾವಣೆಗೆ ಬೇಕಾದ ಅಗತ್ಯ ತಯಾರಿ ಶುರು ಮಾಡಿದ್ದಾರೆ.


ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದಿಂದ ನನ್ನದು ಮಾತ್ರ ಹಿಡಿತ ಇರಬೇಕು. ಅದಕ್ಕಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕನಿಷ್ಠ 10 ಅಭ್ಯರ್ಥಿಗಳನ್ನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಬೇಕು. ಈ ಮೂಲಕ ನನ್ನ ವಿರುದ್ಧ ಇರುವ ಜಾರಕಿಹೊಳಿ ಸಹೋದರರಿಗೆ ನಾನು ಏನು ಎಂದು ತೋರಿಸಬೇಕು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳಬೇಕು ಎಂದು ಸತೀಶ್ ಹೊರಟಿದ್ದಾರೆ.

Tags: Congress PartyElectionRamesh JarakiholiSatish Jarakiholiಬಿಜೆಪಿ
Previous Post

ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಬಾವುಟ: ರಾಷ್ಟ್ರಧ್ವಜಕ್ಕೆ ಅಪಮಾನ ಎಂದ ಪ್ರತಿಪಕ್ಷಗಳು

Next Post

ಸಿಎಂ ಬೊಮ್ಮಾಯಿಗೆ ಫುಲ್ ಟೆನ್ಷನ್; ಆನಂದ್ ಸಿಂಗ್ ಮುಂದಿನ ನಡೆಯೇನು?

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ಸಿಎಂ ಬೊಮ್ಮಾಯಿಗೆ ಫುಲ್ ಟೆನ್ಷನ್; ಆನಂದ್ ಸಿಂಗ್ ಮುಂದಿನ ನಡೆಯೇನು?

ಸಿಎಂ ಬೊಮ್ಮಾಯಿಗೆ ಫುಲ್ ಟೆನ್ಷನ್; ಆನಂದ್ ಸಿಂಗ್ ಮುಂದಿನ ನಡೆಯೇನು?

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada