• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೋವಿಡ್-19: ಕೇರಳಕ್ಕೆ ದುಬಾರಿಯಾಗಿ ಪರಿಣಮಿಸಿದ ಓಣಂ ಹಾಗೂ ಬಕ್ರೀದ್ ಆಚರಣೆ

ಪ್ರತಿಧ್ವನಿ by ಪ್ರತಿಧ್ವನಿ
August 26, 2021
in ದೇಶ
0
ಕೋವಿಡ್-19: ಕೇರಳಕ್ಕೆ ದುಬಾರಿಯಾಗಿ ಪರಿಣಮಿಸಿದ ಓಣಂ ಹಾಗೂ ಬಕ್ರೀದ್ ಆಚರಣೆ
Share on WhatsAppShare on FacebookShare on Telegram

ಈ ಬಾರಿಯ ಓಣಂ ಹಾಗೂ ಬಕ್ರೀದ್ ಆಚರಣೆ ಕೇರಳಕ್ಕೆ ಮಾರಕವಾಗಿ ಪರಿಣಮಿಸಿದೆ. ಬರೋಬ್ಬರಿ ಮೂರು ತಿಂಗಳ ಬಳಿಕ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 30 ಸಾವಿರವನ್ನು ದಾಟಿದೆ. ಓಣಂ ಆಚರಣೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯನ್ನು ಜನರು ಮರೆತಿದ್ದು ಈ ಅವಾಂತರಕ್ಕೆ ಕಾರಣ ಎಂದು ತಜ್ಞರು ಹೇಳಿದ್ದಾರೆ.

ADVERTISEMENT

ಬುಧವಾರದಂದು ಕೇರಳದಲ್ಲಿ 31,445 ಹೊಸ ಕೋವಿಡ್ ಪ್ರಕರಣಗಳ ದಾಖಲಾಗಿವೆ. ಇದರೊಂದಿಗೆ ರಾಜ್ಯ ಕೋವಿಡ್ ಪಾಸಿಟಿವಿಟಿ ರೇಟ್ ಕೂಡಾ ಬೃಹತ್ ಏರಿಕೆ ಕಂಡು 19%ಕ್ಕೆ ಬಮದು ನಿಂತಿದೆ. ಕಳೆದ ಬಾರಿ ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಮೂವತ್ತು ಸಾವಿರದ ಗಡಿ ದಾಟಿದ್ದು ಮೇ 20ರಂದು. ಅಂದು 30,491 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.

ದೇಶದೆಲ್ಲೆಡೆ ಕೋವಿಡ್ ಎರಡನೇ ಅಲೆಯು ತಗ್ಗಿದ್ದರೂ, ಕೇರಳದಲ್ಲಿ ಮಾತ್ರ ಇನ್ನೂ ಮುಂದುವರೆಯುತ್ತಲೇ ಇದೆ. ಮೊದಲು ಈ ಬೆಳವಣಿಗೆಗೆ ರಾಜ್ಯದ ಆರೋಗ್ಯ ಮಂತ್ರಿಯಾಗಿರುವ ವೀಣಾ ಜಾರ್ಜ್ ಅವರು ಸ್ಪಷ್ಟೀಕರಣವನ್ನು ನೀಡುವ ಪ್ರಯತ್ನಪಟ್ಟಿದ್ದರಾದರೂ, ಈಗ ಮಾತ್ರ ಪರಿಸ್ಥಿತಿ ಕೈ ಮೀರುವ ಹಂತವನ್ನು ತಲುಪಿದೆ.

ಕೇರಳದ ಒಟ್ಟು ಸೋಂಕಿತರ ಸಂಖ್ಯೆ 38,83,429ಕ್ಕೆ ತಲುಪಿದೆ. ಇದರಿಂದಾಗಿ ಆತಂಕಕ್ಕೆ ಒಳಗಾಗಿರುವ ಸರ್ಕಾರ, ಕೋವಿಡ್ ಪರೀಕ್ಷೆಯನ್ನು ರಾಜ್ಯದಾದ್ಯಂತ ತೀವ್ರಗೊಳಿಸುವ ನಿರ್ಧಾರಕ್ಕೆ ಬಂದಿದೆ. ಇದರಿಂದಾಗಿ ಕೋವಿಡ್ ಪ್ರಸರಣವನ್ನು ತಡೆಯುವುದು ಸುಲಭ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಜುಲೈ 27ರಂದು ಆಚರಿಸಲಾಗಿದ್ದ ಬಕ್ರೀದ್ ಹಬ್ಬದ ಬಳಿಕ ಕೇರಳದಲ್ಲಿ ಕೋವಿಡ್ ಸೋಂಕಿನ ಹರಡುವಿಕೆ ತೀವ್ರವಾಗಿದೆ. ಬಕ್ರೀದ್ ಆಚರಣೆಯ ಬಳಿಕ ಪ್ರತಿದಿನವು ಕನಿಷ್ಟ 20 ಸಾವಿರ ಪ್ರಕರಣಗಳು ವರದಿಯಾಗುತ್ತಿವೆ. ಈ ಪ್ರಕರಣಗಳ ಸಂಖ್ಯೆ ಓಣಂ ಹಬ್ಬದ ಬಳಿಕ ಹೊಸ ದಾಖಲೆಯನ್ನೇ ನಿರ್ಮಿಸಿದೆ.

ಸದ್ಯಕ್ಕೆ ಕೇರಳದಲ್ಲಿ 1,70,292 ಪ್ರಕರಣಗಳು ಸಕ್ರಿಯವಾಗಿವೆ. ಪ್ರತಿ ದಿನವೂ ಒಮದು ಲಕ್ಷಕ್ಕೂ ಅಧಿಕ ಜನರ ಸ್ವಾಬ್ ಟೆಸ್ಟ್ ನಡೆಸಲಾಗುತ್ತಿದೆ. ಎರ್ನಾಕುಲಂ, ತ್ರಿಶ್ಶೂರ್, ಮಲಪ್ಪುರಂ, ಪಾಲಕ್ಕಾಡ್, ಕೋಝಿಕ್ಕೋಡ್, ಕೊಲ್ಲಂ, ಕೊಟ್ಟಾಯಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ತೀವ್ರಗತಿಯಲ್ಲಿ ಏರಿಕೆಯನ್ನು ಕಾಣುತ್ತಿದೆ.

ಈ ಕಾರಣದಿಂದ ಹಬ್ಬದ ಆಚರಣೆಗಳು ಸಾಧ್ಯವಾದಷ್ಟು ಸರಳವಾಗಿ ಇರಬೇಕು ಎಂದು ರಾಜ್ಯದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಸರಣಿ ಹಬ್ಬಗಳು ಬರಲಿದ್ದು, ಇದರಿಂದ ಮುರನೇ ಅಲೆಯ ತೀವ್ರತೆ ದೇಶದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ.

Tags: bakridCovid 19Kerala Governmentonamಕೋವಿಡ್-19
Previous Post

ಕೋವಿಡ್-19 ಲಸಿಕೆ ರಕ್ಷಣೆ ಆರು ತಿಂಗಳಲ್ಲಿ ಕಡಿಮೆಯಾಗುತ್ತದೆ: ಯುಕೆ ಸಂಶೋಧನೆ

Next Post

ಪಂಜಾಬ್, ರಾಜಸ್ಥಾನದ ನಂತರ ಛತ್ತೀಸ್ ಘಡ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಪಂಜಾಬ್, ರಾಜಸ್ಥಾನದ ನಂತರ ಛತ್ತೀಸ್ ಘಡ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

ಪಂಜಾಬ್, ರಾಜಸ್ಥಾನದ ನಂತರ ಛತ್ತೀಸ್ ಘಡ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada