• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಶ್ರೀಲಂಕಾದಲ್ಲಿ ಆಹಾರ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋತಬಯ ರಾಜಪಕ್ಸ

ಫೈಝ್ by ಫೈಝ್
September 2, 2021
in ದೇಶ, ವಿದೇಶ
0
ಶ್ರೀಲಂಕಾದಲ್ಲಿ ಆಹಾರ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋತಬಯ ರಾಜಪಕ್ಸ
Share on WhatsAppShare on FacebookShare on Telegram

ADVERTISEMENT

ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಶ್ರೀಲಂದಲ್ಲಿ ಆಹಾರ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಖಾಸಗಿ ಬ್ಯಾಂಕುಗಳು ವಿತ್ತೀಯ ಆಮದಿಗೆ ಬಳಸುವ ವಿದೇಶಿ ವಿನಿಮಯದ ಕೊರತೆ ಎದುರಿಸುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. 

ಸಾರ್ವಜನಿಕ ಭದ್ರತಾ ಸುಗ್ರಿವಾಜ್ಞೆ ಮೂಲಕ ಶ್ರೀಲಂಕ ಅಧ್ಯಕ್ಷ ಗೋತಬಯ ರಾಜಪಕ್ಸ ಈ ತುರ್ತು ಪರಿಸ್ಥಿತಿ ಕಡಗಳಿಗೆ ಸಹಿ ಹಾಕಿದ್ದಾರೆ. ತುರ್ತು ಪರಿಸ್ಥಿತಿಯ ನಿಯಮದನ್ವಯ, ಅಗತ್ಯಕ್ಕಿಂತ ಹೆಚ್ಚು ಆಹಾರ ದಾಸ್ತಾನು ಹೊಂದಿರುವ ವ್ಯಾಪಾರಿಗಳಿಂದ ದಾಸ್ತಾನು ವಶಪಡಿಸಿಕೊಂಡು ಅವರನ್ನು ಬಂಧಿಸುವ ಅಧಿಕಾರ ಸರ್ಕಾರ ಅಧಿಕಾರಿಗಳಿಗೆ ಸಿಗಲಿದೆ. 

ದೇಶದೆಲ್ಲೆಡೆ ಹಣದುಬ್ಬರದಿಂದ ಜನರು ಕಂಗಾಲಾಗಿದ್ದಾರೆ. ಈ ಕಾರಣಕ್ಕೆ, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ವವ್ಯಾಪಾರಿಗಳು ಸಗಟು ಹಾಗೂ ಚಿಲ್ಲರೆ ವ್ಯಾಪಾರ ನಡೆಸದಂತೆ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ. ಅಗತ್ಯ ಸಾಮಗ್ರಿಗಳಾದ ಭತ್ತ, ಅಕ್ಕಿ ಮತ್ತು ಸಕ್ಕರೆಗಳ ದರದ ಮೇಲೆ ಗಮನ ಹರಿಸುವಂತೆ ಸರ್ಕಾರ ಆದೇಶಿಸಿದೆ. 

epa09436532 Workers unload essential food products at a wholesale market in Colombo, Sri Lanka, 30 August 2021. Sri Lankan authorities allowed to open wholesale market operations as an effort to avoid essential food shortage in the country. The Sri Lankan government has extended an island-wide lockdown until 06 September 2021 as a preventive measure against the spread of the coronavirus disease (COVID-19). The Indian Ocean island nation is currently in midst of the third wave of COVID-19 and the number of cases is increasing day by day. EPA-EFE/CHAMILA KARUNARATHNE

ಇದರೊಂದಿಗೆ, ಗೊತಬಯಾ ಅವರು ಶ್ರೀಲಂಕಾದ ಮೇಜರ್ ಜನರಲ್ ಅವರಿಗೆ ಹೆಚ್ಚುವರಿ ಅಧಿಕಾರವನ್ನು ನೀಡಿದ್ದು, ದೇಶದ ಆಹಾರ ವಿತರಣೆಯ ಮೇಲುಸ್ತುವಾರ ವಹಿಸಿಕೊಳ್ಳಲು ಆದೇಶಿಸಿದ್ದಾರೆ. 

ಶ್ರೀಲಂಕದೆಲ್ಲೆಡೆ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವಾಗಲೇ, ಜನರು ಹಾಲಿನ ಪುಡಿ, ಸಕ್ಕರೆ, ಅಡುಗೆ ಎಣ್ಣೆ ಹಾಗು ಇತರೆ ಸಾಮಗ್ರಿ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮುಂದಿನ ಸೋಮವಾರದವರೆಗೆ ಕರ್ಫ್ಯೂ ಜಾರಿಯಲ್ಲಿದ್ದರೂ, ಜನ ಚಿಂತಿಸದೇ ಉದ್ದದ ಸಾಲುಗಳನ್ನು ನಿರ್ಮಿಸಿದ್ದಾರೆ. 

ಇಂಧನ ಸಚಿರಾದ ಉದಯ ಗಮ್ಮನಪಿಲ್ಲ ಅವರು ಇಂಧನವನ್ನು ಮಿತವಾಗಿ ಬಳಸಲು ಕರೆ ನೀಡಿದ್ದಾರೆ. ಇದರಿಂದಾಗಿ, ಉಳಿದಿರುವ ವಿದೇಶಿ ವಿನಿಮಯ ಮೂಲಗಳಿಂದ ಅಗತ್ಯ ವಸ್ತು, ಔಷಧ ಹಾಗೂ ಲಸಿಕೆಗಳನ್ನು ಖರೀದಿಸಬಹುದು ಎಂದು ಕಿವಿಮಾತು ಹೇಳಿದ್ದಾರೆ. 

2019ರಲ್ಲಿ ಗೋತಬಯ ಅಧಿಕಾರ ಸ್ವೀಕರಿಸುವಾಗ 7.5 ಬಿಲಿಯನ್ ಡಾಲರ್ ನಷ್ಟಿದ್ದ ವಿದೇಶಿ ವಿನಿಮಯ ಮೌಲ್ಯ ಈಗ 2.8 ಬಿಲಿಯನ್ ಡಾಲರ್’ಗೆ ಇಳಿದಿದೆ. ಈ ಕಾರಣಕ್ಕಾಗಿ ಕಳೆದ ವರ್ಷ ಶ್ರೀಲಂಕ ಸರ್ಕಾರವು ವಿದೇಶಿ ನಿರ್ಮಿತ ವಸ್ತುಗಳಾದ ಟೂತ್ ಬ್ರಷ್, ಸ್ಟ್ರಾಬೆರಿ, ವಿನಿಗರ್, ಸಕ್ಕರೆ ಸೇರಿದಂತೆ ಹಲವು ವಸ್ತುಗಳ ಮೇಲೆ ನಿಷೇಧ ಹೇರಿತ್ತು ಅಥವಾ ಅವುಗಲ ಮಾರಾಟಕ್ಕೆ ಪರವಾನಿಗೆ ಪಡೆಯಲು ಸೂಚಿಸಿತ್ತು. 

ಶ್ರೀಲಂಕಾದ ಮುಳುಗುತ್ತಿರುವ ಆರ್ಥಿಕ ಹಡಗಿಗೆ, ಪ್ರವಾಸೋಸ್ಯಮ ಮಾತ್ರ ಜೀವ ತುಂಬಬಹುದಾಗಿತ್ತು. ಆದರೆ, ಕೋವಿಡ್ ಕಾರಣದಿಂದ ಆ ಆಸೆಯೂ ಕಮರಿ ಹೋಗಿದೆ. ಮುಂದಿನ ಹನ್ನೆರಡು ತಿಂಗಳ ಒಳಗಾಗಿ ಶ್ರೀಲಂಕಾ ತಲಾ 1.5 ಬಿಲಿಯನ್ ಡಾಲರ್ ವಿದೇಶಿ ಸಾಲವನ್ನು ಎರಡು ಬಾರಿ ಪಾವತಿಸಬೇಕಿದೆ. ಈಗಿರುವ ಆರ್ಥಿಕ ಸಂಕಷ್ಟದಲ್ಲಿ ಇದು ಕೂಡಾ ಸಾಧ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ. 

Tags: Food emergencyRajapaksaSri lanka
Previous Post

2022ರ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ; ಹಿಂದುತ್ವದ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಮುಂದಾದ ಬಿಜೆಪಿ

Next Post

ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP

ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ : BJP

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada