• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಹಿಳಾ ಖೈದಿಗಳ ಕುರಿತು ಇರುವ ತಪ್ಪು ಕಲ್ಪನೆ ತೊಲಗಿಸಲು ಯೋಜನೆ ರೂಪಿಸಬೇಕು- ಸಿಜೆಐ ರಮಣ

ಲಾಯ್ಡ್ by ಲಾಯ್ಡ್
September 17, 2021
in ದೇಶ
0
ಪೊಲೀಸ್ ಠಾಣೆಗಳಲ್ಲಿ ಮಾನವ ಹಕ್ಕುಗಳಿಗೆ ಹೆಚ್ಚಿನ ಅಪಾಯವಿದೆ: ಸಿಜೆಐ ರಮಣ
Share on WhatsAppShare on FacebookShare on Telegram

ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗುವ ಮಹಿಳೆಯರ ಕುರಿತು ಸಮಾಜದಲ್ಲಿ ಆಳವಾದ ಪೂರ್ವಾಗ್ರಹ ಪೀಡಿತ ಆಲೋಚನೆ ಹಾಗೂ ತಾರತಮ್ಯವಿದೆ. ಅವರನ್ನು ಕಳಂಕಿತರಂತೆ ನೋಡಿಕೊಳ್ಳಲಾಗುತ್ತಿದೆ. ಇಂತಹ ಮಹಿಳೆಯರು ಸಮಾಜದೊಂದಿಗೆ ಮರುಸಂಘಟಿತರಾಗಲು ಯೋಜನೆಗಳನ್ನು ರೂಪಿಸಬೇಕಾದ ಅಗತ್ಯವಿದೆ, ಎಂದು ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಹೇಳಿದ್ದಾರೆ. 

ADVERTISEMENT

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ 32ನೇ ಕೇಂದ್ರೀಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು . ಬಂಧನಕ್ಕೆ ಒಳಗಾಗದ ಮಹಿಳೆಯರು ಕಳಂಕಿತರು ಎಂಬ ಭಾವನೆ ಸಮಾಜದಲ್ಲಿ ಮೂಡಿದ್ದು ಇದರಿಂದಾಗಿ ಅವರಿಗೆ ಪುರ್ನವಸತಿ ಕಲ್ಪಿಸುವುದು ನಿಜಕ್ಕೂ ಸವಾಲಿನ ವಿಚಾರವಾಗಿದೆ. ಭಾರತ ಎಲ್ಲರ ಹಿತ ಕಾಯುವ ದೇಶವಾಗಿದ್ದರಿಂದ ಮಹಿಳಾ ಖೈದಿಗಳನ್ನು ಸಮಾಜದೊಂದಿಗೆ ಪುನರ್ ಸಂಯೋಜಿಸಲು ಸೇವೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಬೇಕಾದ ಅನಿವಾರ್ಯತೆ ಇದೆ. ಪುರುಷ ಖೈದಿಗಳಂತೆ ಮಹಿಳೆಯರಿಗೂ ಸಮಾನ ಅವಕಾಶ ನೀಡಬೇಕಾಗಿದೆ, ಎಂದು ಅವರು ಹೇಳಿದ್ದಾರೆ. 

“ಮಹಿಳಾ ಖೈದಿಗಳು ಬಿಡುಗಡೆಯಾದ ಬಳಿಕ ಅವರಿಗೆ ತಾರತಮ್ಯವಿಲ್ಲದ ಶಿಕ್ಷಣ, ಕೌಶಲ್ಯಾಭಿವೃದ್ದಿ ತರಬೇತಿ ಹಾಗೂ ಗೌರವಧನ ಸಿಗುವಂತಹ ಉದ್ಯೋಗವನ್ನು ಪಡೆಯಲು ಯೋಜನೆ ರೂಪಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ. 

ಇದೇ ವೇಳೆ ಮಾತನಾಡಿರುವ ಜಸ್ಟೀಸ್ ಲಲಿತ್, ಕರೋನಾ ಕಾರಣದಿಂದಾಗಿ ಶಾಲೆಗಳು ಮುಚ್ಚಲ್ಪಟ್ಟಿವೆ. ಜ್ಯುವೆನೈಲ್ ಹೋಮ್’ಗಳಲ್ಲಿನ ಪರಿಸ್ಥಿತಿ ಊಹೆಗೂ ನಿಲುಕದಷ್ಟರ ಮಟ್ಟಿಗೆ ಬಿಗಡಾಯಿಸಿದೆ. ಕೇವಲ ಒಬ್ಬ ಶಿಕ್ಷಕ ವೀಡಿಯೋ ತರಗತಿಗಳನ್ನು ನಡೆಸುವುದರ ಮೂಲಕ ಪರಿಣಾಮಕಾರಿ ಶಿಕ್ಷಣ ನೀಡಲು ಅಸಾಧ್ಯ. ಅದರಲ್ಲೂ ವಿವಿಧ ವಯೋಮಿತಿಯ ಮಕ್ಕಳಿರುವ ಕಡೆ ಇದು ಕಷ್ಟ ಸಾಧ್ಯ, ಎಂದು ಹೇಳಿದ್ದಾರೆ. 

“ಈ ಅಂತರವನ್ನು ನಿಭಾಯಿಸಲು ಹಾಗೂ ಸಮಾಜದಲ್ಲಿ ತಳಮಟ್ಟದ ಬದಲಾವಣೆಯನ್ನು ತರಲು ಕಾನೂನು ವಿದ್ಯಾರ್ಥಿಗಳು ಮೂರು ಅಥವಾ ನಾಲ್ಕು ತಾಲ್ಲೂಕುಗಳನ್ನು ದತ್ತು ಪಡೆದು ಕಾರ್ಯ ನಿರ್ವಹಿಸಬೇಕು. ಕಾನೂನು ವಿದ್ಯಾರ್ಥಿಗಳ ಸೇವೆ ಹಾಗೂ ಅವರ ಕೌಶಲ್ಯ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲದು,” ಎಂದು ಜಸ್ಟೀಸ್ ಲಲಿತ್ ಹೇಳಿದ್ದಾರೆ. 

ಶನಿವಾರದಂದು 33 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲೋಕ ಅದಾಲತ್ ಮೂಲಕ ಸುಮಾರು 15 ಲಕ್ಷಗಳಿಗೂ ಅಧಿಕ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇದು ದೇಶದ ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲಿಯೇ ಅತ್ಯಂತ ಮಹತ್ತರವಾದ ಸಾಧನೆ ಎಂದು ಗುರುತಿಸಿಕೊಂಡಿದೆ. 

Tags: Chief JusticeChief Justice of IndiaCovid 19CV ramanaPrison LettersWomenಕೋವಿಡ್-19
Previous Post

ಚರ್ಚೆಗೆ ಗ್ರಾಸವಾದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜೀನಾಮೆ ನಡೆ!

Next Post

ಮೋದಿ ಜನ್ಮದಿನ ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ: ಟ್ವಿಟರ್‌ನಲ್ಲಿ ಭರಪೂರ ಬೆಂಬಲ.!

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಮೋದಿ ಜನ್ಮದಿನ ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ: ಟ್ವಿಟರ್‌ನಲ್ಲಿ ಭರಪೂರ ಬೆಂಬಲ.!

ಮೋದಿ ಜನ್ಮದಿನ ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ: ಟ್ವಿಟರ್‌ನಲ್ಲಿ ಭರಪೂರ ಬೆಂಬಲ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada