• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಯಂ ನಿವೃತ್ತಿಗೆ ಮುಂದಾದ ಹಿರಿಯ IPS ಅಧಿಕಾರಿ ಭಾಸ್ಕರ್ ರಾವ್; ಸದ್ಯದಲ್ಲೇ ರಾಜಕೀಯ ಪ್ರವೇಶ

ನಚಿಕೇತು by ನಚಿಕೇತು
September 21, 2021
in ಕರ್ನಾಟಕ
0
ಸ್ವಯಂ ನಿವೃತ್ತಿಗೆ ಮುಂದಾದ ಹಿರಿಯ IPS ಅಧಿಕಾರಿ ಭಾಸ್ಕರ್ ರಾವ್; ಸದ್ಯದಲ್ಲೇ ರಾಜಕೀಯ ಪ್ರವೇಶ
Share on WhatsAppShare on FacebookShare on Telegram

ಬೆಂಗಳೂರು ಪೊಲೀಸ್ ಕಮೀಷನರ್ ಆಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವಧಿಗೂ ಮುನ್ನವೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಡಿಜಿ ಐಜಿಪಿ ಪ್ರವೀಣ್ ಸೂದ್ಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಭಾಸ್ಕರ್ ರಾವ್, ವೈಯಕ್ತಿಕ ಕಾರಣಕ್ಕಾಗಿ ಸ್ವಯಂಪ್ರೇರಿತವಾಗಿ ರಾಜೀನಾಮೆ ಪಡೆಯುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ತಾನು ನೀಡಿರುವ ಅರ್ಜಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

1990ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಹಾಲಿ ರೈಲ್ವೇ ಇಲಾಖೆಯ ಎಡಿಜಿಪಿ. ಇದಕ್ಕೂ ಮುನ್ನ ರಾಜ್ಯ ಆಂತರಿಕಾ ಭದ್ರತಾ ವಿಭಾಗದ ಎಡಿಜಿಪಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈಗ ರಾಜಕೀಯ ಸೇರುವ ಇರಾದೆಯಿಂದ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ತನ್ನ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿರುವ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯ ರಂಗ ಪ್ರವೇಶ ಫಿಕ್ಸ್ ಆಗಿದೆ. ಮೊನ್ನೆ ತಾನೆ ಐಪಿಎಸ್ ವೃತ್ತಿಗೆ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಕೆ ಮಾಡಿರುವ ಭಾಸ್ಕರ್ರಾವ್ ರಾಜಕಾರಣದ ಅಖಾಡಕ್ಕಿಳಿಯಲು ವೇದಿಕೆ ಸಿದ್ಧಪಡಿಸಿಕೊಂಡಿದ್ದಾರೆ. ಮುಂಬರುವ ರಾಜ್ಯಸಭಾ ಬೈ ಎಲೆಕ್ಷನ್ನಲ್ಲೆ ರಾಜಕೀಯ ಭವಿಷ್ಯದ ಅಗ್ನಿಪರೀಕ್ಷೆಗೆ ಮುಂದಾಗಲಿದ್ದಾರೆ ಎನ್ನಲಾಗ್ತಿದೆ.

ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್. ರಾಜ್ಯದ ವಿವಿಧ ಹುದ್ದೆಗಳನ್ನ ಅಲಂಕರಿಸಿ ಸದ್ಯ ರೈಲ್ವೇ ವಿಭಾಗದ ಎಡಿಜಿಪಿ ಆಗಿದ್ದಾರೆ. ದಿಢೀರ್ ಐಪಿಎಸ್ ವೃತ್ತಿಗೆ ಸ್ವಯಂ ನಿವೃತ್ತಿಗೆ ಅರ್ಜಿ ಹಾಕುವ ಮೂಲಕ ಕುತೂಹಲ ಕೆರಳಿಸಿರುವ ಇವರು, ಅಣ್ಣಾಮಲೈರಂತೆ ರಾಜಕೀಯ ಪ್ರವೇಶಿಸುತ್ತಾರೆ ಎಂದು ಹೇಳಲಾಗುತ್ತಿದೆ.

ಇನ್ನು ರಾಜಕೀಯ ಪ್ರವೇಶಕ್ಕೆ ಮುಂದಡಿ ಇಡುತ್ತಿರುವ ಭಾಸ್ಕರ್ ರಾವ್ ಅವರು ಕಾಂಗ್ರೆಸ್ನತ್ತ ಚಿತ್ತ ನೆಟ್ಟಿದ್ದಾರೆ. ಆಸ್ಕರ್ ಫರ್ನಾಂಡಿಸ್ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭಾ ಬೈ ಎಲೆಕ್ಷನ್ನಲ್ಲೇ ಭಾಸ್ಕರ್ ರಾವ್ ಸ್ಪರ್ಧೆಗೆ ಸಿದ್ಧರಾಗ್ತಿದ್ದಾರೆ. ಕಾಂಗ್ರೆಸ್ನಿಂದ ಯಾರಿಗೆ ಟಿಕೆಟ್ ನೀಡಬೇಕೆಂಬ ವಿಚಾರದಲ್ಲೂ ಭಾಸ್ಕರ್ ರಾವ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗಿದೆ.

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಭಾಸ್ಕರ್ ರಾವ್ ತಯಾರಿ ನಡೆಸಿದ್ದು, ಆಸ್ಕರ್ ಫರ್ನಾಂಡಿಸ್ ನಿಧನದಿಂದ ತೆರವಾಗಿರುವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಸದ್ಯದಲ್ಲಿ ಎದುರಾಗಲಿರೋ ರಾಜ್ಯಸಭಾ ಸ್ಥಾನದ ಬೈ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಭಾಸ್ಕರ್ರಾವ್ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಉಪ ಚುನಾವಣೆ ಘೋಷಣೆಗೂ ಮುನ್ನವೇ ಭಾಸ್ಕರ್ ರಾವ್ ರಾಜಕೀಯದ ಸುಳಿವು ಕೊಟ್ಟಿದ್ದಾರೆ.

ಒಟ್ನಲ್ಲಿ ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಅಧಿಕೃತವಾಗಿ ರಾಜಕೀಯಕ್ಕೆ ದುಮುಕುವ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯಸಭಾ ಬೈ ಎಲೆಕ್ಷನ್ ಮೂಲಕವೇ ರಾಜಕೀಯ ಭವಿಷ್ಯದ ಪರೀಕ್ಷೆಗೆ ಇಳಿಯಲು ಭಾಸ್ಕರ್ ರಾವ್ ಸಿದ್ಧವಾಗಿದ್ದು, ರಾಜಕಾರಣ ಅವರ ಕೈಹಿಡಿಯುತ್ತಾ ನೋಡಬೇಕು.

ಕಳೆದ ವರ್ಷ ಎಡಿಜಿಪಿ ಸಂಜಯ್ ಸಹಾಯ್ ಹಾಗೂ ಅಣ್ಣಾಮಲೈ ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿದ್ದರು. ಇನ್ನು ಮೂರು ವರ್ಷಗಳ ಕಾಲ ಭಾಸ್ಕರ್ ರಾವ್ ಸೇವಾ ಅವಧಿ ಇದೆ. ಕಮಿಷನರ್ ಆಗಿದ್ದ ಸಂದರ್ಭದಲ್ಲಿ ಸಾಕಷ್ಟು ಕೆಲಸಗಳನ್ನ ಮಾಡಿ ಒಳ್ಳೆಯ ಹೆಸರು ಪಡೆದಿದ್ದರು. ಜೊತೆಗೆ ರೈಲ್ವೆ ಇಲಾಖೆಯಲ್ಲಿದ್ದಾಗಲೂ ಸೋನುಸೂದ್ ಜೊತೆ ಕೈ ಜೋಡಿಸಿ ಕೋವಿಡ್-19 ಸಂದರ್ಭದಲ್ಲಿ ಕಷ್ಟದ ಕುಟುಂಬಗಳಿಗೆ ಸಹಾಯ ಮಾಡಿದ್ದರು. ಈಗ ಧಿಡೀರ್ ಸ್ವಯಂ ನಿವೃತ್ತಿಗೆ ಮುಂದಾಗಿರೋದು ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಸ್ನೇಹಿತರ ವರ್ಗದಲ್ಲೂ ರಾಜಕೀಯಕ್ಕೆ ಹೋಗ್ತಾರೆ ಎಂದು ಮಾತುಗಳು ಸಹ ಕೇಳಿ ಬರುತ್ತಿವೆ.

Tags: BJPCovid 19IPS ಅಧಿಕಾರಿಕರ್ನಾಟಕ ರಾಜಕೀಯಕೋವಿಡ್-19ಬಿಜೆಪಿಭಾಸ್ಕರ್ ರಾವ್ರಾಜಕೀಯ
Previous Post

ಒಕ್ಕಲಿಗರ ಸಂಘದ ಜಾಗವನ್ನು ಹಿಂಪಡೆಯದಂತೆ ಆಗ್ರಹಿಸಿ ಸಂಘದ ಸದಸ್ಯರಿಂದ ಹೋರಾಟ

Next Post

ಅವಧಿಗೂ ಮುನ್ನ ದೇಶದ 5 ರಾಜ್ಯಗಳಲ್ಲಿ 6 ಸಿಎಂ ಬದಲಾವಣೆ : ಇದು ರಾಷ್ಟ್ರ ರಾಜಕಾರಣದಲ್ಲಿ‌ ಶುರುವಾದ ಹೊಸ ರಾಜಕೀಯ ‘ತಂತ್ರ’ಗಾರಿಕೆಯೇ ?

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಅವಧಿಗೂ ಮುನ್ನ ದೇಶದ 5 ರಾಜ್ಯಗಳಲ್ಲಿ 6 ಸಿಎಂ ಬದಲಾವಣೆ : ಇದು ರಾಷ್ಟ್ರ ರಾಜಕಾರಣದಲ್ಲಿ‌ ಶುರುವಾದ ಹೊಸ ರಾಜಕೀಯ ‘ತಂತ್ರ’ಗಾರಿಕೆಯೇ ?

ಅವಧಿಗೂ ಮುನ್ನ ದೇಶದ 5 ರಾಜ್ಯಗಳಲ್ಲಿ 6 ಸಿಎಂ ಬದಲಾವಣೆ : ಇದು ರಾಷ್ಟ್ರ ರಾಜಕಾರಣದಲ್ಲಿ‌ ಶುರುವಾದ ಹೊಸ ರಾಜಕೀಯ 'ತಂತ್ರ'ಗಾರಿಕೆಯೇ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada