• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೇಶದಲ್ಲಿ ಇಳಿಮುಖ ಕಂಡ ಕರೋನಾ ಸೋಂಕು : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನಿರ್ಬಂಧ ಸಡಿಲಿಕೆ!

ಕರ್ಣ by ಕರ್ಣ
September 26, 2021
in ಕರ್ನಾಟಕ
0
ದೇಶದಲ್ಲಿ ಇಳಿಮುಖ ಕಂಡ ಕರೋನಾ ಸೋಂಕು : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನಿರ್ಬಂಧ ಸಡಿಲಿಕೆ!
Share on WhatsAppShare on FacebookShare on Telegram

ಕೋವಿಡ್ ಸೋಂಕು ದೇಶದಲ್ಲಿ ಅಟ್ಟಹಾಸ ಮೆರೆದ ನಂತರ ಇದೀಗ ನಿಯಂತರಣದತ್ತ ಸಾಗಿದೆ. ದೇಶದೆಲ್ಲೆಡೆ ಸೋಂಕು ನಿಯಂತ್ರಣದಲ್ಲಿದ್ದು, ಆಯಾ ರಾಜ್ಯಗಳಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಒಂದೊಂದಾಗಿಯೇ ಸಡಿಲಿಕೆ ಮಾಡಲಾಗುತ್ತಿದೆ. ನೆನ್ನೆಯಷ್ಟೇ ಕರ್ನಾಟಕದಲ್ಲಿಯೂ ಕೋವಿಡ್ ಸಂಬಂಧ ಮಹತ್ವದ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಕ್ಟೋಬರ್ 1ರಿಂದ ಶೇ. 100 ಆಸನ ಭರ್ತಿಯೊಂದಿಗೆ ಸಿನಿಮಾ ಮಂದಿರ ತೆರೆಯಲು, ಅಕ್ಟೋಬರ್ 3ರಿಂದ ಪಬ್​ಗಳನ್ನು ಆರಂಭ ಮಾಡಲು ಅನುಮತಿ ನೀಡಿದ್ದರು. ಮಹಾರಾಷ್ಟ್ರದಲ್ಲೂ ಅಕ್ಟೋಬರ್ 7ರಿಂದ ಧಾರ್ಮಿಕ ಸ್ಥಳಗಳ ಪ್ರವೇಶಕ್ಕೆ ಅನುಮತಿ ನೀಡಿದೆ. ಅದರಂತೆ ಇದೀಗ ಕೊರೋನಾ ಪ್ರಕರಣಗಳು ವ್ಯಾಪಕವಾಗಿ ಹಬ್ಬಿದ್ದ ಕೇರಳದಲ್ಲೂ ಸೋಂಕು ನಿಯಂತ್ರಣಕ್ಕೆ ಬಂದ ಕಾರಣ ಹಲವು ನಿರ್ಬಂಧ ಸಡಿಲಿಕೆ ಮಾಡಲಾಗಿದೆ.

ADVERTISEMENT

ರಾಜ್ಯದಲ್ಲಿ ಅಕ್ಟೋಬರ್ 1ರಿಂದ ಚಿತ್ರಮಂದಿರ 100%ರಷ್ಟು ಅವಕಾಶ!

ಕರ್ನಾಟಕದಲ್ಲೂ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ನಾಲ್ಕೈದು ಜಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲೆಡೆ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇದೆ. ಹೀಗಾಗಿ ಅಕ್ಟೋಬರ್ 1ರಿಂದ ಎಲ್ಲ ಸಿನಿಮಾ ಮಂದಿರಗಳನ್ನು ಶೇ. 100ರಷ್ಟು ಭರ್ತಿಯೊಂದಿಗೆ ತೆರೆಯಲು ಅವಕಾಶ ನೀಡಲಾಗಿದೆ. ಶೇ. 1ಕ್ಕಿಂತ ಹೆಚ್ಚಿದ್ದರೆ ಶೇ. 50 ರಷ್ಟು ಭರ್ತಿಯೊಂದಿಗೆ ಸಿನಿಮಾ ಥಿಯೇಟರ್ ತೆರೆಯಲು ಅನುಮತಿ ನೀಡಲಾಗಿದೆ. ಅಕ್ಟೋಬರ್ 3 ರಿಂದ ಪಬ್ ತೆರೆಯಲು ಅವಕಾಶ ನೀಡಲಾಗಿದೆ. ಕನಿಷ್ಠ 1 ಡೋಸ್ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಗಡಿ ಭಾಗದಲ್ಲಿ ಹೆಚ್ಚು ನಿಗಾ ವಹಿಸಲು ಸೂಚಿಸಲಾಗಿದೆ. ದೇವಸ್ಥಾನ ಪ್ರವೇಶಕ್ಕೆ ಅವಕಾಶ ಸಂಬಂಧ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲಿ ಅವರು ಪರಿಸ್ಥಿತಿ ನೋಡಿಕೊಂಡು ದೇವಸ್ಥಾನದ ಬಗ್ಗೆ ನಿರ್ಧಾರ ಮಾಡುತ್ತಾರೆ. ಹಾಗೂ 6 -12 ನೇ ತರಗತಿಗಳಿಗೆ ಶೇ. 100 ರಷ್ಟು ಹಾಜರಾತಿಗೆ ಅನುಮತಿ ನೀಡಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಶಾಲಾ ಕಾಲೇಜಿಗೆ ಅನುಮತಿ ನೀಡಲಾಗಿದೆ. ನೈಟ್ ಕರ್ಫ್ಯೂ 10 ರಿಂದ ಆರಂಭ ಆಗಲಿದೆ.

ಮಹಾರಾಷ್ಟ್ರದಲ್ಲಿ ಅಕ್ಟೋಬರ್ 7ರಿಂದ ಧಾರ್ಮಿಕ ಕ್ಷೇತ್ರ ಓಪನ್!

ಕೊರೋನಾವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸರ್ಕಾರವು ಅಕ್ಟೋಬರ್ 7 ರಿಂದ ನವರಾತ್ರಿಯ ಮೊದಲ ದಿನ ಎಲ್ಲಾ ಧಾರ್ಮಿಕ ಸ್ಥಳಗಳನ್ನು ಮತ್ತೆ ತೆರೆಯುವುದಾಗಿ ಘೋಷಿಸಿದೆ. ಜಿಮ್‌ಗಳು, ಯೋಗ ಕೇಂದ್ರಗಳು, ಸಲೂನ್‌ಗಳು, ಸ್ಪಾಗಳು, ಬ್ಯೂಟಿ ಪಾರ್ಲರ್‌ಗಳು ಎಲ್ಲಾ ದಿನವೂ ಬೆಳಿಗ್ಗೆ 10 ಗಂಟೆಯವರೆಗೆ ಶೇ. 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಬಹುದು. ಮತ್ತು ಎಲ್ಲಾ ಉದ್ಯೋಗಿಗಳಿಗೆ ಸಂಪೂರ್ಣವಾಗಿ ಲಸಿಕೆ ಕಡ್ಡಾಯ ಎಂದು ಹೇಳಿದೆ.

ಅಕ್ಟೋಬರ್ 22 ರಿಂದ ಮಹಾರಾಷ್ಟ್ರದಲ್ಲಿ ಥಿಯೇಟರ್‌ಗಳು, ಮಲ್ಟಿಪ್ಲೆಕ್ಸ್‌ಗಳು ತೆರೆಯಬಹುದು. “ಗ್ರಾಮೀಣ ಪ್ರದೇಶದ ಎಲ್ಲಾ ಶಾಲೆಗಳು 5 ರಿಂದ 12 ನೇ ತರಗತಿಯವರೆಗೆ ದೈಹಿಕ ತರಗತಿಗಳನ್ನು ಪುನರಾರಂಭಿಸಲಿವೆ” ಎಂದು ಶಾಲಾ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ಹೇಳಿದರು. ನಗರ ಪ್ರದೇಶಗಳಲ್ಲಿ 8 ರಿಂದ 12 ನೇ ತರಗತಿಯವರೆಗೆ ದೈಹಿಕ ತರಗತಿಗಳನ್ನು ಪುನರಾರಂಭಿಸಲು ರಾಜ್ಯವು ಅನುಮತಿ ನೀಡಿದೆ. ಹಾಲ್​ನಲ್ಲಿ ಮದುವೆಗೆ 100 ಜನ ಸೇರಲು ಹಾಗೂ ಬಯಲು ಪ್ರದೇಶದಲ್ಲಿ 200 ಜನ ಸೇರಲು ಅವಕಾಶ ನೀಡಲಾಗಿದೆ.

ಕೊರೋನಾ ಇಳಿಕೆಯಾದ ಬೆನ್ನಲ್ಲೇ ಲಸಿಕೆ ಕಡೆ ಕೇರಳ ಗಮನ!

ಮಾರ್ಚ್ 2020 ರಿಂದ ನಿರ್ಬಂಧ ಹೇರಿಕೆಯಾದ ನಂತರ ಕೇರಳ ಸರ್ಕಾರವು ಕಳೆದ ವಾರ ನವೆಂಬರ್ 1 ರಿಂದ ಶಾಲೆಗಳನ್ನು ತೆರೆಯಲು ನಿರ್ಧರಿಸಿತು. ಸೆಪ್ಟೆಂಬರ್ 24 ರಂದು ಸರ್ಕಾರವು ಶಾಲೆಗಳನ್ನು ಪುನಃ ತೆರೆಯಲು ಕರಡು ಮಾರ್ಗಸೂಚಿಗಳನ್ನು ಹೊರಡಿಸಿತು, ಇದರಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಬೆಂಚ್‌ನಲ್ಲಿ ಕುಳಿತುಕೊಳ್ಳಲು ಅವಕಾಶವಿದೆ. ಆರೋಗ್ಯ ಮಂತ್ರಿ ವೀಣಾ ಜಾರ್ಜ್ ಅವರು, 18 ವರ್ಷಕ್ಕಿಂತ ಮೇಲ್ಪಟ್ಟ ಶೇ. 91.3 ರಷ್ಟು ಜನರು ಕೋವಿಡ್ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದಾರೆ ಮತ್ತು ಅದೇ ವಯಸ್ಸಿನ ಶೇ .39 ರಷ್ಟು ಜನರು ಎರಡೂ ಡೋಸ್ ಪಡೆದಿದ್ದಾರೆ ಎಂದು ಹೇಳಿದರು.

ದೆಹಲಿಯಲ್ಲೂ ಕೊರೋನಾ ನಿರ್ಬಂಧ ಸಡಿಲಿಕೆ!

ಸೆಪ್ಟೆಂಬರ್ 15 ರಂದು ದೆಹಲಿ ಸರ್ಕಾರವು ಮದುವೆ ಸಮಾರಂಭಗಳಲ್ಲಿ ಕೇವಲ 100 ಜನರಿಗೆ ಮಾತ್ರ ಪಾಲ್ಗೊಳ್ಳು ಅವಕಾಶ ನೀಡಿತ್ತು ಮತ್ತು ಚಿತ್ರಮಂದಿರಗಳು ಕೇವಲ 50 ಶೇಕಡಾ ಆಸನ ಸಾಮರ್ಥ್ಯದೊಂದಿಗೆ ತೆರೆಯಬಹುದು ಎಂದು ಹೇಳಿದೆ. ಶೇ. 50 ಆಸನ ಸಾಮರ್ಥ್ಯದಲ್ಲಿ ಶಾಲೆಗಳನ್ನು 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ತೆರೆಯಲು ಅನುಮತಿ ನೀಡಲಾಗಿದೆ. ಪ್ರವಾಸಿಗರಿಗೆ ಧಾರ್ಮಿಕ ಸ್ಥಳಗಳ ಒಳಗೆ ಪ್ರವೇಶವಿಲ್ಲದಿದ್ದರೂ, ಮಾರುಕಟ್ಟೆಗಳು, ಮಾಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳು ಶೇ. 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ತೆರೆದಿರಲು ಅನುಮತಿ ಕಲ್ಪಿಸಲಾಗಿದೆ. ಈಜುಕೊಳಗಳು ಮತ್ತು ಮನರಂಜನೆ ಮತ್ತು ಮನರಂಜನಾ ಉದ್ಯಾನವನಗಳ ಮೇಲಿನ ನಿರ್ಬಂಧ ಮುಂದುವರೆದಿದೆ.

Tags: Congress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಅಫ್ಘಾನ್ ನೆಲೆ ಭಯೋತ್ಪಾದನೆಗೆ ಬಳಕೆಯಾಗಲು ಬಿಡೋದಿಲ್ಲ; ಚೀನಾ-ಪಾಕ್ ವಿರುದ್ಧ ಮೋದಿ ಕಿಡಿ

Next Post

ಹುಬ್ಬಳ್ಳಿಯ ಮಕ್ಕಳಲ್ಲಿ ತೀವ್ರವಾದ ವೈರಲ್ ಜ್ವರ – ವೈದ್ಯರಿಗೆ ಆತಂಕ!

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ಹುಬ್ಬಳ್ಳಿಯ ಮಕ್ಕಳಲ್ಲಿ ತೀವ್ರವಾದ ವೈರಲ್ ಜ್ವರ – ವೈದ್ಯರಿಗೆ ಆತಂಕ!

ಹುಬ್ಬಳ್ಳಿಯ ಮಕ್ಕಳಲ್ಲಿ ತೀವ್ರವಾದ ವೈರಲ್ ಜ್ವರ - ವೈದ್ಯರಿಗೆ ಆತಂಕ!

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada