• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಉ.ಪ್ರ ರೈತರನ್ನು ಕೊಂದ ಕೊಲೆಪಾತಕ ಧಾಳಿ : ಪ್ರತಿಭಟನೆಗೆ ಕರೆ ನೀಡಿದ ಕರ್ನಾಟಕ ಪ್ರಾಂತ ರೈತ ಸಂಘ

Any Mind by Any Mind
October 3, 2021
in ಕರ್ನಾಟಕ
0
ಉ.ಪ್ರ ರೈತರನ್ನು ಕೊಂದ ಕೊಲೆಪಾತಕ ಧಾಳಿ : ಪ್ರತಿಭಟನೆಗೆ ಕರೆ ನೀಡಿದ ಕರ್ನಾಟಕ ಪ್ರಾಂತ ರೈತ ಸಂಘ
Share on WhatsAppShare on FacebookShare on Telegram

ಈ ದಿನ ಬೆಳಿಗ್ಗೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದ ಸಾವಿರಾರು ರೈತರ ಮೇಲೆ, ಕೇಂದ್ರ ಸರಕಾರದ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ರ ಬೆಂಗಾವಲು ಪಡೆಯ ವಾಹನಗಳನ್ನು ಚಲಾಯಿಸಿ, ಪ್ರತಿಭಟನಾ ನಿರತ ನಾಲ್ವರು ರೈತರನ್ನು ಬರ್ಭರವಾಗಿ ಹತ್ಯೆ ಮಾಡಿದ ಕೊಲೆಪಾತಕ ದುಷ್ಜೃತ್ಯವನ್ನು ಕರ್ನಾಟಕ ಪ್ರಾಂತ ರೈತ ಸಂಘ ತೀವ್ರ ಖಂಡಿಸಿದೆ.

ADVERTISEMENT

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರೈತ ಸಂಘ, ಪ್ರತಿಭಟನಾ ನಿರತ ನಾಲ್ವರು ರೈತರನ್ನು ಬರ್ಭರವಾಗಿ ಹತ್ಯೆ ಮಾಡಿದ ಕೊಲೆಪಾತಕ ದುಷ್ಜೃತ್ಯವನ್ನು ಕರ್ನಾಟಕ ಪ್ರಾಂತ ರೈತ ಸಂಘ ತೀವ್ರ ಖಂಡಿಸಿದೆ, ಪ್ರಧಾನ ಮಂತ್ರಿಗಳು ಈ ಕೂಡಲೇ ಸಚಿವ ಅರ್ಜುನ್ ಮಿಶ್ರರ ರಾಜಿನಾಮೆಯನ್ನು ಪಡೆಯುವಂತೆ ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಒತ್ತಾಯಿಸಿದೆ ಮತ್ತು ಈ ಕೊಲೆಪಾತಕ ಧಾಳಿಯ ವಿರುದ್ದ 04.10.21 ರಂದು ದೇಶದಾದ್ಯಂತ ತೀವ್ರವಾಗಿ ಪ್ರತಿಭಟಿಸಲು ಕಿಸಾನ್ ಸಂಘ್ ಕರೆ ನೀಡಿದೆ. ಈ ಪ್ರತಿಭಟನೆಗೆ ಕರ್ನಾಟಕ ರೈತ ಸಂಘ ಬೆಂಬಲಿಸಿದ್ದು ನಾಳೆ ರಾಜ್ಯಾದ್ಯಂತ ಪ್ರತಿಭಟನೆ ದಾಖಲಾಗುವ ಸಾಧ್ಯತೆಗಳು ಹೆಚ್ಚಿದೆ.

ಅದೇ ರೀತಿ, ಈ ಧಾರುಣ ಹತ್ಯೆಯ ಹಿಂದೆ ಸಚಿವರ ಪುತ್ರ ಮತ್ತು ಸಂಬಂಧಿಗಳು ಇದ್ದು ಅವರನ್ನು ಈ ಕೂಡಲೇ ಬಂಧಿಸಬೇಕು ಮತ್ತು ಅವರ ಮೇಲೆ ಕೊಲೆ ಪಾತಕ ಪ್ರಕರಣಗಳನ್ನು ದಾಖಲಿಸಬೇಕೆಂದು ಒತ್ತಾಯಿಸಿದೆ.

ಈ ಕೊಲೆಗಡುಕ ಪ್ರಕರಣದಲ್ಲಿ ಕೊಲ್ಲಲ್ಪಟ್ಟ ನಾಲ್ವರು ರೈತರಿಗೆ ತಲಾ ಒಂದು ಕೋಟಿ ರೂಗಳ ಪರಿಹಾರವನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಕ್ಷಣವೇ ನೀಡುವಂತೆ ಮತ್ತು ಈ ದಾಳಿಯಲ್ಲಿ ಹತ್ತಕ್ಕೂ ಹೆಚ್ಚು ಜನರು ತೀವ್ರ ಗಾಯಾಳುಗಳಾಗಿದ್ದು ಅವರಿಗೆ ಉಚಿತ ಶೂಶೃಷೆ ಮತ್ತು ಅಗತ್ಯ ಪರಿಹಾರಗಳನ್ನು ಪ್ರಕಟಿಸುವಂತೆ ರೈತ ಸಂಘ ಒತ್ತಾಯಿಸಿದೆ.

ಬೆದರಿದ ದುಷ್ಠ ಕಾರ್ಪೋರೇಟ್ ಕೂಟದ ಹತಾಶ ಧಾಳಿ

ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಲೂಟಿಯ ಪರವಾದ ಮತ್ತು ವ್ಯವಸಾಯ ಹಾಗೂ ರೈತ ವಿರೋಧಿ ಕಾಯ್ದೆಗಳ ವಿರುದ್ದ ಕಳೆದ ಒಂದೆರಡು ವರ್ಷಗಳಿಂದ ದೇಶದಾದ್ಯಂತ, ಮುಖ್ಯವಾಗಿ, ದೆಹಲಿ ಗಡಿಗಳಲ್ಲಿ ಕೋಟ್ಯಾಂತರ ಜನತೆ ನಡೆಸುತ್ತಿರುವ ನಿರಂತರವಾದ ಐತಿಹಾಸಿಕ ಹೋರಾಟದಿಂದ ಬೆದರಿ ಹತಾಷೆಗೊಂಡ ಕಾರ್ಪೊರೇಟ್ ಕಂಪನಿಗಳು, ಬಿಜೆಪಿ, ಸಂಘ ಪರಿವಾರ ಮತ್ತು ಕೇಂದ್ರ ಮತ್ತು ಬಿಜೆಪಿ ನೇತೃತ್ವದ ರಾಜ್ಯ ಸರಕಾರಗಳ ದುಷ್ಠಕೂಟವು, ಅಧಿಕಾರ ದುರುಪಯೋಗ ಮಾಡಿಕೊಂಡು ಹೋರಾಟ ನಿರತರನ್ನು ಅವಹೇಳನಕಾರಿಯಾಗಿ ನಡೆಸಿಕೊಳ್ಳುತ್ತಿರುವುದು. ತುಚ್ಛವಾಗಿ ಮಾತನಾಡುವ ಮತ್ತು ಬಾಡಿಗೆ ರೈತರೆಂದು ಜರೆಯುವ ಉದ್ಧಟತನವನ್ನು ತೋರುತ್ತಿದೆ ಮಾತ್ರವಲ್ಲಾ, ಕೊಲೆ ಪಾತಕ ದುಷ್ಕೃತ್ಯಗಳನ್ನು ಪ್ರಚೋಧಿಸುತ್ತದೆ ಎಂದು ಹೇಳಿದ್ದಾರೆ.

ಕಳೆದ ಒಂದೆರಡು ದಿನಗಳ ಹಿಂದೆ ಹರ್ಯಾಣ ಮುಖ್ಯಮಂತ್ರಿ ಹೋರಾಟ ನಿರತ ರೈತರ ಮೇಲೆ ಲಾಠಿ ಮುಂತಾದ ಆಯುಧಗಳಿಂದ ಧಾಳಿ ನಡೆಸುವಂತೆ ಬಿಜೆಪಿ ಹಾಗೂ ಸಂಘ ಪರಿವಾರದ ಗುಂಡಾಗಳಿಗೆ ಕರೆ ನೀಡುವ ಉದ್ಧಟತನವನ್ನು ತೋರಿದ್ದಾರೆ ಹೋರಾಟ ನಿರತರನ್ನು ಚದುರಿಸಲು ಜಲಪಿರಂಗಿಗಳನ್ನು ಬಳಸಿದ್ದಾರೆ. ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಹೋರಾಟ ನಿರತ ರೈತರನ್ನು ಜರೆಯುವಲ್ಲಿ ಹಿಂದೆ ಬಿದ್ದಿಲ್ಲ ಎಂದಿದ್ದಾರೆ.

Alsoe read: ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಕೇಂದ್ರ ಸಚಿವನ ಮಗ; 2 ಸಾವು, 8 ರೈತರಿಗೆ ಗಂಭೀರ ಗಾಯ

ಈ ದುಷ್ಠ ಕೂಟದ ಅಧಿಕಾರ ದುರುಪಯೋಗ ಮತ್ತು ಧಾಳಿಯ ಸಂಚಿಗೆ ದೇಶದ ರೈತಾಪಿ ಸಮುದಾಯ ಹೆದರುವುದಿಲ್ಲ. ಮಾತ್ರವಲ್ಲಾ, ಈ ದುಷ್ಠಕೂಟದ ಸಂಚನ್ನು ಮತ್ತಷ್ಠು ಬಲವಾಗಿ ಒಗ್ಗೂಡಿ ಪ್ರತಿರೋಧಿಸಲಿದೆಯೆಂದು ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಸಿದೆ.

ದೇಶದ 550ಕ್ಕು ಅಧಿಕ ರೈತ ಸಂಘಗಳಿರುವ ಸಂಯುಕ್ತ ಕಿಸಾನ್ ಮೋರ್ಚಾವು, ಈ ಕೊಲೆಪಾತಕ ಧಾಳಿಯ ವಿರುದ್ದ 04.10.21 ರಂದು ದೇಶದಾದ್ಯಂತ ತೀವ್ರವಾಗಿ ಪ್ರತಿಭಟಿಸಲು ಕರೆ ನೀಡಿದೆ. ರಾಜ್ಯದಲ್ಲಿ ಸಂಯುಕ್ತ ಹೋರಾಟ- ಕರ್ನಾಟಕ ಅದರ ಜಾರಿಗೆ ಕರೆ ನೀಡಿದ್ದು ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಘಟಕಗಳು, ಇತರೆ ಸಂಯುಕ್ತ ಹೋರಾಟ – ಕರ್ನಾಟಕದ ಘಟಕಗಳ ಜೊತೆ ಸೇರಿ ರಾಜ್ಯದಾದ್ಯಂತ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ಕರೆ ನೀಡಿದೆ.

Tags: BJPCongress Partyಉ.ಪ್ರ ರೈತಉತ್ತರ ಪ್ರದೇಶಕರ್ನಾಟಕಕೊಲೆಪಾತಕಕೋವಿಡ್-19ನರೇಂದ್ರ ಮೋದಿಪ್ರತಿಭಟನಾಬಿಜೆಪಿರೈತ ಸಂಘ
Previous Post

ʼಇಂದು ರೈತರ ಸಾವಿಗೆ ಕಾರಣಕರ್ತನಾದ ಕೇಂದ್ರ ಸಚಿವನ ಮಗನ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕುʼ – ಕುರುಬೂರ್‌ ಶಾಂತ್‌ ಕುಮಾರ್

Next Post

‘ಓರ್ವ ಮಹಿಳೆಯಾಗಿ, NDAನಲ್ಲಿ ನಾನೆಲ್ಲೂ ಹೊರಗುಳಿದವಳು ಎಂದೆನಿಸಿಲ್ಲ. ಆದರೆ, ಸಮಾನತೆ ಸಾಧಿಸಲು ಇನ್ನಷ್ಟು ಕೆಲಸವಾಗಬೇಕಿದೆ!’ – ಜಯಂತಿ ಸೇನ್ ಶರ್ಮಾ

Related Posts

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post
‘ಓರ್ವ ಮಹಿಳೆಯಾಗಿ, NDAನಲ್ಲಿ ನಾನೆಲ್ಲೂ ಹೊರಗುಳಿದವಳು ಎಂದೆನಿಸಿಲ್ಲ. ಆದರೆ, ಸಮಾನತೆ ಸಾಧಿಸಲು ಇನ್ನಷ್ಟು ಕೆಲಸವಾಗಬೇಕಿದೆ!’ – ಜಯಂತಿ ಸೇನ್ ಶರ್ಮಾ

'ಓರ್ವ ಮಹಿಳೆಯಾಗಿ, NDAನಲ್ಲಿ ನಾನೆಲ್ಲೂ ಹೊರಗುಳಿದವಳು ಎಂದೆನಿಸಿಲ್ಲ. ಆದರೆ, ಸಮಾನತೆ ಸಾಧಿಸಲು ಇನ್ನಷ್ಟು ಕೆಲಸವಾಗಬೇಕಿದೆ!' - ಜಯಂತಿ ಸೇನ್ ಶರ್ಮಾ

Please login to join discussion

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada