• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಹೆಚ್ಚಿದ ಬಾಲ್ಯ ವಿವಾಹ ; ಕರ್ನಾಟಕವೇ ನಂಬರ್‌ 1

ಪ್ರತಿಧ್ವನಿ by ಪ್ರತಿಧ್ವನಿ
October 5, 2021
in ಕರ್ನಾಟಕ
0
ರಾಜ್ಯದಲ್ಲಿ ಹೆಚ್ಚಿದ ಬಾಲ್ಯ ವಿವಾಹ ; ಕರ್ನಾಟಕವೇ ನಂಬರ್‌ 1
Share on WhatsAppShare on FacebookShare on Telegram

ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರದಲ್ಲು ಹೆಣ್ಣು ಮಕ್ಕಳು ಪುರುಷರಷ್ಟೆ ಸರಿಸಮಾನವಾಗಿ ಸಾಧನೆ ಮಾಡುತ್ತ ಮುನ್ನಡೆಯುತ್ತಿರುವ ಹೆಣ್ಣುಮಕ್ಕಳು ಹೆತ್ತವರಿಗೆ ಎಂದಿಗು ಭಾರ ಎಂಬುದನ್ನ ಎಂಬುವ ಪರಿಸಸ್ಥಿತಿ ಇನ್ನು ಬದಲಾಗಿಲ್ಲ.

ADVERTISEMENT

ವಯಸ್ಸಿಗೆ ಬರುವ ಮೊದಲೇ ಹೆಣ್ಣು ಮಕ್ಕಳ ಮೇಲೆ ಸಂಸಾರ ನೌಕೆಯ ಭಾರ ಹೊರಿಸುವ ಬಾಲ್ಯ ವಿವಾಹ ಪ್ರಕರಣಗಳು ಭಾರತದಲ್ಲಿ ಹೆಚ್ಚುತ್ತಿದ್ದು ಇದರಲ್ಲಿ, ನಮ್ಮ ರಾಜ್ಯ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

2020ರಲ್ಲಿ ರಾಜ್ಯಾದ್ಯಂತ 184 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದು ಪರಿಸ್ಥಿತಿಯ ಗಂಬೀರತೆಗೆ ಕೈಗನ್ನಡಿಯಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (NCRB) ಬಿಡುಗಡೆ ಮಾಡಿರುವ ವಿಶೇಷ ವರದಿಯಲ್ಲಿ ಈ ಬಗ್ಗೆ ತಿಳಿಸಲಾಗಿದೆ.

ಕರೋನ ಬರುವುದಕ್ಕು ಮುನ್ನ ಮತ್ತು ಬಂದ ನಂತರ ಬಾಲ್ಯ ವಿವಾಹಗಳಲ್ಲಿ ಶೇಕಡ 50%ರಷ್ಟು ಪ್ರಕರಣಗಳು ಏರಿಕೆಯಾಗಿದೆ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಆದರೆ, ಯಾವ ಪ್ರಕರಣ ಸಹ ಪೊಲೀಸ್ ಠಾಣೆ ಮೆಟ್ಟಿಲೇರದಿರುವುದು ಕಂಡು ಬರುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ನೋಡುತ್ತಾ ಹೋದರೆ ವರ್ಷದಿಂದ ವರ್ಷಕ್ಕೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ 2018ರಲ್ಲಿ 501,2019ರಲ್ಲಿ 523, 2020ರಲ್ಲಿ 785 ಪಕ್ರರಣಗಳು ವರದಿಯಾಗಿದೆ.

ಕರ್ನಾಟಕದಲ್ಲಿ 2018ರಲ್ಲಿ 73 ಪ್ರಕರಣಗಳು ದಾಖಲಾದರೆ, 2019ರಲ್ಲಿ 111 ಪ್ರಕರಣಗಳು ದಾಖಲಾಗಿವೆ, 2020ರಲ್ಲಿ 184 ಪ್ರಕರಣಗಳು ದಾಖಲಾಗಿ ದೇಶದಲ್ಲೇ ಅತಿ ಹೆಚ್ಚು ಬಾಲ್ಯ ವಿವಾಹ ನಡೆಯುವ ರಾಜ್ಯ ಎಂಬ ಅಪಕೀರ್ತಿಗೆ ಪಾತ್ರವಾಗಿದೆ. ಅಸ್ಸಾಂ ಎರಡನೇ ಸ್ಥಾನದಲ್ಲಿದ್ದು ನಂತರದ ಸ್ಥಾನಗಳಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿವೆ.

ಕರ್ನಾಟಕದಲ್ಲಿ ನೋಡುವುದಾದರೆ ಉತ್ತರ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೋವಿಡ್ನಿಂದ ಶಾಲೆಗಳು ಮುಚ್ಚಿದ ಕಾರಣ ಬಾಲ್ಯ ವಿವಾಹ ಪ್ರಕರಣಗೂ ಹೆಚ್ಚಾಗಿ ದಾಖಲಾಗಿವೆ. ಹಳೇ ಮೈಸೂರು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿ ರಜ್ಯದ ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ.
ಜಿಲ್ಲೆಗಳ ಪೈಕಿ ಧಾರವಾಡ ಮೊದಲನೇ ಸ್ಥಾನದಲ್ಲಿದರೆ, ಹಾವೇರಿ, ಚಾಮರಾಜನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಮೈಸೂರು, ಹಾಸನ, ಚಿತ್ರದುರ್ಗ, ಉಡುಪಿ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ ನಂತರದ ಸ್ಥಾನಗಳಲಿದೆ.

ಬಾಲ್ಯ ವಿವಾಹ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರತಿ ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಮತ್ತು ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ಆರು ತಿಂಗಳಿಗೊಮ್ಮೆ ಈ ಸಮಿತಿ ಸಭೆ ನಡೆಸಿ ಬಾಲ್ಯ ವಿವಾಹವನ್ನು ತಡೆಗಟ್ಟಲು ಕ್ರಮಗಳನ್ನು ಜಾರಿಗೆ ತರುತ್ತದೆ ಮತ್ತು ಈ ಅಭಿಯಾನಕ್ಕೆ ಕೆಲವು ಎನ್ಜಿಒಗಳು ಸಹಕಾರ ನೀಡುತ್ತಿದು ಬಾಲ್ಯ ವಿವಾಹ ತಡೆಗಟ್ಟಲು ನೂತನ ಕ್ರಮಗಳನ್ನು ಜಾರಿಗೆ ತರಲು ಇಲಾಖೆ ಚಿಂತಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags: BJPChild marrageCongress PartyCovid 19KarnatakaKarnataka GovernmentKarnataka Politicsಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ರೈತರ ಸಾವಿಗೆ ಕಾರಣನಾದ ಮಂತ್ರಿ ಮಗನನ್ನು ಇನ್ನೂ ಬಂಧಿಸಿಲ್ಲ ಎಂದರೆ ನಾವು ಯಾವ ಆಡಳಿತದಲ್ಲಿದ್ದೇವೆʼ – DK Shivakumar

Next Post

ಮಗನ ವಿಚಾರದಲ್ಲಿ ಶಾರುಖ್ ಖಾನ್ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗುತ್ತಿದೆ – ಶಶಿ ತರೂರ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಮಗನ ವಿಚಾರದಲ್ಲಿ ಶಾರುಖ್ ಖಾನ್ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗುತ್ತಿದೆ – ಶಶಿ ತರೂರ್

ಮಗನ ವಿಚಾರದಲ್ಲಿ ಶಾರುಖ್ ಖಾನ್ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗುತ್ತಿದೆ - ಶಶಿ ತರೂರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada