• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ

Any Mind by Any Mind
October 7, 2021
in ಕರ್ನಾಟಕ
0
2021 ಮೈಸೂರು ದಸರಾ ಉದ್ಘಾಟನೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಎಸ್‌ಎಂ ಕೃಷ್ಣ
Share on WhatsAppShare on FacebookShare on Telegram

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು 2021ರ ನಾಡ ಹಬ್ಬ ದಸರಾವನ್ನು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಉದ್ಘಾಟಿಸಿದ್ದಾರೆ. ಬೆಳ್ಳಿ ರಥದಲ್ಲಿ ಇರಿಸಿದ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಜ್ಯೋತಿ ಬೆಳಗಿಸುವ ಮೂಲಕ ನಾಡ ಹಬ್ಬ ದಸರಾಗೆ ಚಾಲನೆ ನೀಡಲಾಯಿತು.

ADVERTISEMENT

ಮಾಜಿ ಸಿಎಂ ಕೃಷ್ಣ ಅವರಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ,ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ..ಸೋಮಶೇಖರ್‌, ಬೈರತಿ ಬಸವರಾಜು, ಶಶಿಕಲಾ ಜೊಲ್ಲೆ ಸಾಥ್‌ ನೀಡಿದರು.

“ಮೈಸೂರು ದಸರಾ ವಸ್ತುಪ್ರದರ್ಶನವು ವಿಶ್ವವಿಖ್ಯಾತ ದಸರಾದಂತೆಯೇ ಪ್ರಸಿದ್ಧವಾಗಿತ್ತು. ನಾವು ರಾಜಪ್ರಭುತ್ವವನ್ನು ವಿರೋಧಿಸುತ್ತೇವೆ ಆದರೆ ಯದುವಂಶದ ಮಹಾನ್ ರಾಜರ ಸಾಧನೆಗಳು ಮತ್ತು ಕೊಡುಗೆಗಳನ್ನು ನಾವು ಇತಿಹಾಸದ ಪುಟಗಳಿಂದ ಅಳಿಸಲು ಸಾಧ್ಯವಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕುಟುಂಬದ ಸದಸ್ಯರ ಚಿನ್ನದ ಆಭರಣಗಳನ್ನು ಕೃಷ್ಣರಾಜ ಸಾಗರ ಅಣೆಕಟ್ಟನ್ನು ನಿರ್ಮಿಸಲು ವಾಗ್ದಾನ ಮಾಡಿದರು, ಇದು ಈ ಪ್ರದೇಶದ ರೈತರ, ವಿಶೇಷವಾಗಿ ಮಂಡ್ಯ ಜಿಲ್ಲೆಯ ಪ್ರಗತಿಗೆ ಸಹಾಯ ಮಾಡಿತು, ”ಎಂದು ಉದ್ಘಾಟನೆಯ ನಂತರ ಮಾಜಿ ಸಿಎಂ ಕೃಷ್ಣ ಹೇಳಿದ್ದಾರೆ.

ಸರ್ಕಾರ ಮುಂದಿನ ವರ್ಷ ಬಾದಾಮಿ, ಐಹೊಳೆಯಂತಹ ಪ್ರವಾಸಿ ತಾಣಗಳನ್ನು ಒಳಗೊಂಡಂತೆ ದಸರಾ ಪ್ಯಾಕೇಜ್‌ ಅನ್ನು ಘೋಷಿಸಬೇಕು. ಇದರಿಂದ, ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಿದಂತಾಗುತ್ತದೆ ಮತ್ತು ಸರ್ಕಾರಕ್ಕೆ ಆದಾಯವು ಹೆಚ್ಚುತ್ತದೆ ಎಂದು ಭಾಷನದ ವೇಳೆ ಹೇಳಿದ್ದಾರೆ. ಅಭಿವೃದ್ಧಿ ಮತ್ತು ಸರಿಯಾದ ಯೋಜನೆ ಮೂಲಕ ಪ್ರವಾಸಿಗರನ್ನು ಆಕರ್ಷಿಸಲು ಹೆಚ್ಚು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಒಂದು ಜಾಗವು ಹೇಗೆ ಪ್ರಗತಿ ಸಾಧಿಸಬಹುದು ಎಂಬುದಕ್ಕೆ ನಮ್ಮಗೆ ಸಿಂಗಾಪುರ ಒಂದು ಉತ್ತಮ ಉದಾಹರಣೆಯಾಗಿದೆ ಮೈಸೂರು ಜೆಲ್ಲೆಗೂ ಇದೇ ರೀತಿಯ ಸಾಮರ್ಥ್ಯ ಇದೆ ಎಂದು ಹೇಳಿದ್ದಾರೆ.

ಭಾಷಣದ ವೇಳೆ ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ʻʻನನ್ನ 6ದಶಕಗಳ ರಾಜಕೀಯ ಜೀವನದಲ್ಲಿ ಪ್ರಗತಿಯ ಕಡೆಗೆ ಅಂತಹ ಬದ್ಧತೆ ಮತ್ತು ಸಮರ್ಪನೆಯನ್ನು ಹೊಂದಿರುವ ನಾಯಕನನ್ನು ನಾನು ಎಂದಿಗು ನೋಡಿಲ್ಲ. ಮೋದಿಯವರು ರಾಷ್ಟ್ರಕ್ಕಾಗಿ ದೊಡ್ಡ ದೊಡ್ಡ ಕನಸುಗಳನ್ನು ಹೊಂದಿದ್ದಾರೆ ಮತ್ತು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಅವರು ದೇಶವನ್ನು ಮುನ್ನಡೆಸುತ್ತಿದ್ದಾರೆ. ರಾಷ್ಟ್ರದ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುವ ಅವಶ್ಯಕತೆಯಿದೆ ಈ ನಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದು ನಾನು ಭಾವಿಸಿದ್ದೇನೆʼʼ ಎಂದು ಹೇಳಿದ್ದಾರೆ. ಗಾಂಧೀಜಿರವರು 1934ರಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮೈಸೂರು ಪ್ರಜಾ ಪ್ರತಿನಿಧಿಯಾಗಿದ್ದ ನನ್ನ ತಂದೆ ಮಲ್ಲಯ್ಯರವರು ಸ್ಥಾಪಿಸಿದ್ದ ಹಾಸ್ಟೆಲಿಗೆ ಭೇಟಿ ನೀಡಿದರು. ಇಬ್ಬರು ಹರಿಜನ ಹುಡುಗರು ಹಾಸ್ಟೆಲಿನಲ್ಲಿ ಬೇರೆ ಜಾತಿಯ ಹುಡುಗರೊಂದಿಗೆ ವಾಸಿಸುತ್ತಿದ್ದನ್ನು ಕಂಡು ಗಾಂಧೀಜಿ ಸಂತೋಷಪಟ್ಟರು ಎಂದು ಭಾಷಣದ ವೇಳೆ ನೆನೆಪಿಸಿಕೊಂಡರು.

ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಕೆ.ಸುಧಾಕರ್‌, ಬಿ.ಸಿ.ಪಾಟೀಲ್‌, ಶಾಸಕರಾದ ಜಿ.ಟಿ.ದೇವೇಗೌಡ, ಎಲ್‌ ನಾಗೇಂದ್ರ, ತನ್ವೀರ್‌ ಸೇಠ್‌, ಎಸ್‌.ಎ.ರಾಮದಾಸ್‌, ಬಿ.ಹರ್ಷವರ್ಧನ್‌, ಕೆ.ಮಹದೇವ್‌, ವಿಧಾನ ಪರಿಷತ್‌ ಸದಸ್ಯರಾದ ಹೆಚ್‌.ವಿಶ್ವನಾಥ್‌, ಮೈಸುರು ಮಹಾನಗರ ಪಾಲಿಕೆ ಮಹಾಪೌರರಾದ ಸುನಂದ ಪಾಲನೇತ್ರ ಮತ್ತು ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Tags: B C PatilBasavaraj BommaiBJPByrati BasavarajuCovid 19Dr SudhakarH VishwanathSM KrishnaST Somshekarಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಬಿಜೆಪಿ ಪಕ್ಷದ ಫ್ಯಾಮಿಲಿ ಬಿಸಿನೆಸ್ʼಗೆ ಸಂಘದಲ್ಲಿಯೇ ತರಬೇತಿ ನೀಡಲಾಗುತ್ತಿದೆಯೇ? – ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಕೆ ಕುಮಾರಸ್ವಾಮಿ ಪ್ರಶ್ನೆ

Next Post

ಹಾನಗಲ್:‌ ಕಾಂಗ್ರೆಸ್‌ ನಾಯಕರಿಂದ ದರ್ಗಾ ಭೇಟಿ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಹಾನಗಲ್:‌ ಕಾಂಗ್ರೆಸ್‌ ನಾಯಕರಿಂದ ದರ್ಗಾ ಭೇಟಿ

ಹಾನಗಲ್:‌ ಕಾಂಗ್ರೆಸ್‌ ನಾಯಕರಿಂದ ದರ್ಗಾ ಭೇಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada