• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ, ಅದು ಧಾರ್ಮಿಕ ಭಾವನೆಯ ಸಂಕೇತ: ಶಾಸಕ ಸಾರಾ ಮಹೇಶ್

Any Mind by Any Mind
October 10, 2021
in ಕರ್ನಾಟಕ
0
ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ, ಅದು ಧಾರ್ಮಿಕ ಭಾವನೆಯ ಸಂಕೇತ: ಶಾಸಕ ಸಾರಾ ಮಹೇಶ್
Share on WhatsAppShare on FacebookShare on Telegram

ಕೇಸರಿ ಬಣ್ಣ ಯಾವುದೇ ಒಂದು ಪಕ್ಷದ ಸ್ವತ್ತಲ್ಲ. ಅದು ಈ ದೇಶದ ಧಾರ್ಮಿಕ ಭಾವನೆಯ ಸಂಕೇತವಾಗಿದೆ’ ಎಂದು ಶಾಸಕ ಸಾ.ರಾ.ಮಹೇಶ್ ಇಲ್ಲಿ ಶುಕ್ರವಾರ ಹೇಳಿದರು.

ADVERTISEMENT

ಪಟ್ಟಣದಲ್ಲಿ ನಿರ್ಮಾಣ ಹಂತ ದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯ ಪರಿಶೀಲನೆ ವೇಳೆ, ಮೈಸೂರಿನ ಕೆ.ಆರ್. ಕ್ಷೇತ್ರದ ವಿದ್ಯಾರಣ್ಯಪುರಂ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ‘ಮೋದಿ ಯುಗ ಉತ್ಸವ’ದಲ್ಲಿ ಕೇಸರಿ ಶಾಲು ಹಾಕಿಕೊಂಡು ಪಾಲ್ಗೊಂಡ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ಕ್ಷೇತ್ರದ ವಿದ್ಯಾರಣ್ಯಪುರಂ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ‘ಮೋದಿ ಯುಗ ಉತ್ಸವ’ದಲ್ಲಿ ಕೇಸರಿ ಶಾಲು ಹಾಕಿಕೊಂಡು ಪಾಲ್ಗೊಂಡ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

‘ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವಾಗ ಹಸಿರು ಶಾಲು ಹಾಕಿಕೊಂಡಿದ್ದರು. ಹಾಗಿದ್ದರೆ ಅವರು ರೈತ ಸಂಘದವರಾ? ಕೇಸರಿ ಶಾಲು, ಕೇಸರಿ ಬಣ್ಣ, ಕೇಸರಿ ಕುಂಕುಮ ಇವೆಲ್ಲವೂ ಧಾರ್ಮಿಕ ಭಾವನೆಯ ಸಂಕೇತಗಳಾಗಿವೆ’ ಎಂದು ಹೇಳಿದರು.

‘ನರೇಂದ್ರ ಮೋದಿ ಈ ದೇಶದ ಪ್ರಧಾನಿ. ಅವರು ಯಾವುದೇ ಪಕ್ಷದ ಸ್ವತ್ತಲ್ಲ. ಎಸ್.ಎ.ರಾಮದಾಸ್ ಮತ್ತು ನನ್ನ ಸ್ನೇಹ 30 ವರ್ಷಗಳ ಹಳೆಯದು. ಮೋದಿ ಅವರ ಹೆಸರಿನಲ್ಲಿ ಸವಲತ್ತು ವಿತರಿಸುವ ಸರ್ಕಾರಿ ಕಾರ್ಯಕ್ರಮವಾಗಿತ್ತು. ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಎಸ್‌.ಎ. ರಾಮದಾಸ್ ಅವರು ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದರು. ಆದ್ದರಿಂದ ಕಾರ್ಯಕ್ರಮಕ್ಕೆ ಹೋಗಿದ್ದೆ’ ಎಂದು ಸ್ಪಷ್ಟಪಡಿಸಿದರು.

‘ಯಾವ ಪಕ್ಷದವರೇ ಆಗಿರಲಿ, ಪ್ರಧಾನಿ, ಮುಖ್ಯಮಂತ್ರಿಗೆ ಶುಭ ಕೋರುವುದು ನಮ್ಮ ಜವಾಬ್ದಾರಿ. ರಾಜಕೀಯ ಬಂದಾಗ ರಾಜಕಾರಣ ಮಾಡೋಣ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನರೇಂದ್ರ ಮೋದಿ ಶುಭಾಶಯ ಕೋರುವುದಿಲ್ಲವೇ? ಹಾಗಾಗಿ ನಾನು ಕೂಡ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ಕೋರಿ ಪತ್ರ ಬರೆದಿದ್ದೇನೆ. ಇದು ತಪ್ಪಲ್ಲ’ ಎಂದರು.

‘ನಾನು ಎಲ್ಲಿಯವರೆಗೆ ಸಾರ್ವಜನಿಕ ಜೀವನದಲ್ಲಿ ಇರುತ್ತೇನೆಯೋ ಅಲ್ಲಿಯವರೆಗೆ ನನಗೆ ಗೊತ್ತಿರುವುದು ಕುಮಾರಸ್ವಾಮಿ, ದೇವೇಗೌಡರು ಮತ್ತು ಜೆಡಿಎಸ್ ಚಿಹ್ನೆ. ನನ್ನ ಬಗ್ಗೆ ನಮ್ಮ ನಾಯಕರಿಗೆ ನಂಬಿಕೆ ಇದೆ’ ಎಂದು ಹೇಳಿದರು.

‘ಐಟಿ ಸೇರಿದಂತೆ ಯಾವುದೇ ದಾಳಿ ಇರಲಿ, ಮಾಹಿತಿ ಇಲ್ಲದೇ ಯಾರೂ ದಾಳಿ ಮಾಡುವುದಿಲ್ಲ. ಸಂಬಂಧಪಟ್ಟ ವ್ಯಕ್ತಿಯ ಚಲನವಲನಗಳನ್ನು ಹಲವು ದಿನಗಳಿಂದ ಗಮನಿಸಿ ದಾಳಿ ಮಾಡುತ್ತಾರೆ. ದಾಳಿಯಾದ ತಕ್ಷಣ ಆತಂಕ ಯಾಕೆ? ಕಪ್ಪುಹಣ ಇದ್ದರೆ ತೆಗೆದುಕೊಂಡು ಹೋಗುತ್ತಾರೆ. ಇಲ್ಲದಿದ್ದರೆ ಬಿಟ್ಟು ಹೋಗುತ್ತಾರೆ. ಅದು ದೊಡ್ಡ ವಿಚಾರವಲ್ಲ’ ಎಂದರು.

Tags: Congress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ತನ್ನನ್ನು ರಾಷ್ಟ್ರ ರಾಜಕಾರಣಕ್ಕೆ ಸಾಗ ಹಾಕಲು ಪ್ಲಾನ್ ಮಾಡಿದ್ದ ಡಿಕೆಶಿಗೆ ಸಿದ್ದರಾಮಯ್ಯ ತಿರುಗೇಟು; ಸೋನಿಯಾ ಭೇಟಿ ಬಳಿ ನಡೆದಿದ್ದೇನು?

Next Post

ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

ತೈವಾನ್ ಆಕಾಶದಲ್ಲಿ ಚೀನಾದ 56 ಯುದ್ಧ ವಿಮಾನಗಳ ಹಾರಾಟ; ನೆರೆ ರಾಷ್ಟ್ರಗಳಲ್ಲಿ ಭಾರೀ ಆತಂಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada