• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌ಗೂ ಪೆಟ್ರೋಲ್ ಬೆಲೆ ಏರಿಕೆಗೂ ಸಂಬಂಧ ಏನು?: ಮಾಜಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 11, 2021
in ಕರ್ನಾಟಕ
0
ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜೊತೆ ಕೆಲಸ ಮಾಡುವ ಅವಕಾಶ ನನಗೆ ಸಿಗಲಿಲ್ಲ-  ಸಿದ್ದರಾಮಯ್ಯ
Share on WhatsAppShare on FacebookShare on Telegram

ಕಲ್ಲಿದ್ದಲು ಕೊರತೆ ಕೃತಕವೋ ಅಥವಾ ಸ್ವಾಭಾವಿಕವೋ ಎಂಬ ಬಗ್ಗೆ ಮೊದಲು ಗೊತ್ತಾಗಬೇಕು, ಕರ್ನಾಟಕದಲ್ಲಿ ಈ ವರೆಗೆ ವಿದ್ಯುತ್ ಅಭಾವ ಇರಲಿಲ್ಲ, ಯಾವಾಗಲೂ ವಿದ್ಯುತ್ ಉತ್ಪಾದನೆ ಅಗತ್ಯ ಪ್ರಮಾಣಕ್ಕಿಂತ ಹೆಚ್ಚಿತ್ತು. ನಮ್ಮಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳು ಸ್ಥಗಿತವಾಗಿರುವುದರಿಂದ ನಮ್ಮ ರಾಜ್ಯಕ್ಕೆ ಕಲ್ಲಿದ್ದಲಿನ ಅಗತ್ಯ ಹೆಚ್ಚಿಲ್ಲ. ಸರ್ಕಾರ ವಿದ್ಯುತ್ ಉತ್ಪಾದಕಾ ಘಟಕಗಳನ್ನು ಖಾಸಗಿಯವರಿಗೆ ನೀಡುವ ಉದ್ದೇಶದಿಂದ ಕೃತಕ ಅಭಾವ ಸೃಷ್ಟಿ ಮಾಡಬಾರದು. ಹಾಗೇನಾದರೂ ಸರ್ಕಾರ ಮಾಡಿದರೆ ನಾನು ಅದನ್ನು ಖಂಡಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ವಿದ್ಯುತ್ ಘಟಕಗಳನ್ನು ಖಾಸಗೀಕರಣ ಮಾಡಬಾರದು, ಇದರಿಂದ ರೈತರಿಗೆ ಅನ್ಯಾಯವಾಗಲಿದೆ. ಒಮ್ಮೆ ಖಾಸಗೀಕರಣಗೊಂಡರೆ ರೈತರಿಗೆ ಪೂರೈಕೆಯಾಗುತ್ತಿರುವ ಉಚಿತ ವಿದ್ಯುತ್ ಅನ್ನು ನಿಲ್ಲಿಸುತ್ತಾರೆ ಎಂಧು ಹೇಳಿದ್ದಾರೆ.

ದೇಶಭಕ್ತರ ಸರ್ಕಾರ ಬೆಂಗಳೂರು ನಗರ ಉಸ್ತುವಾರಿ ಸ್ಥಾನಕ್ಕಾಗಿ ಕಿತ್ತಾಟ ಮಾಡುತ್ತಿದೆ. ಇದು ಲಾಭದಾಯಕ ಸ್ಥಾನವಾಗಿರುವುದರಿಂದ ಇಷ್ಟೆಲ್ಲಾ ಗಲಾಟೆಗಳಾಗುತ್ತಿದೆ. ಜಿ.ಎಸ್.ಟಿ ಪರಿಹಾರ, ನಮ್ಮ ತೆರಿಗೆ ಪಾಲಿನ ಹಣವನ್ನು ರಾಜ್ಯ ಸರ್ಕಾರ ಗಟ್ಟಿಧ್ವನಿಯಲ್ಲಿ ಕೇಳಬೇಕು. ಇದೇನು ಭಿಕ್ಷೆಯಲ್ಲ, ಇದು ನಮ್ಮ ಹಕ್ಕು ಎಂಧು ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಆಗುತ್ತಿದೆ. ಏಪ್ರಿಲ್ ಇಂದ ಸೆಪ್ಟೆಂಬರ್ ವರೆಗೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ 3,000 ಕೋಟಿ ರೂಪಾಯಿ ತೆರಿಗೆ ಹೆಚ್ಚು ಸಂಗ್ರಹವಾಗಿದೆ. ಸ್ಟಾಲಿನ್ ಸರ್ಕಾರ ಮೂರು ರೂಪಾಯಿ ತೆರಿಗೆ ಕಡಿಮೆ ಮಾಡಿದೆ, ನಮ್ಮ ರಾಜ್ಯದಲ್ಲಿ ಕನಿಷ್ಟ ಹತ್ತು ರೂಪಾಯಿ ಕಡಿಮೆ ಮಾಡಬೇಕು. ಆಗ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಬೇಕು. ಕಳೆದ ಏಳು ವರ್ಷದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಒಂದರಿಂದಲೇ ಕೇಂದ್ರ ಸರ್ಕಾರಕ್ಕೆ 23 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ಕರ್ನಾಟಕವೊಂದರಿಂದಲೇ 1.20 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ಬಡವರ ಬಗ್ಗೆ ದೊಡ್ಡ ದೊಡ್ಡ ಮಾತನಾಡುವ ಬಿಜೆಪಿಯವರು ತೆರಿಗೆ ಕಡಿತ ಮಾಡಿ ಜನರಿಗೆ ಸಹಾಯ ಮಾಡಲಿ ಎಂದು ಹೇಳಿದ್ದಾರೆ.

ಮನಮೋಹನ್ ಸಿಂಗ್ ಅವರ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ಡೀಸೆಲ್ ಮೇಲೆ 3 ರೂಪಾಯಿ 45 ಪೈಸೆ ಅಬಕಾರಿ ತೆರಿಗೆ ಇತ್ತು, ಈಗ ಅದು 31 ರೂಪಾಯಿ 84 ಪೈಸೆ ಆಗಿದೆ. ಪೆಟ್ರೋಲ್ ಮೇಲೆ 9 ರೂಪಾಯಿ 21 ಪೈಸೆ ತೆರಿಗೆ ಇತ್ತು ಇತ್ತು, ಈಗ 32 ರೂಪಾಯಿ 98 ಪೈಸೆಗೆ ಏರಿದೆ. ಇದರಲ್ಲಿ ಕನಿಷ್ಟ 50% ಕಡಿಮೆ ಮಾಡಲಿ. ಇದನ್ನೇ ನಾನು ಕ್ರಿಮಿನಲ್ ಲೂಟಿ ಎಂದು ಕರೆದಿದ್ದು ಎಂದು ಕಿಡಿಕಾರಿದ್ದಾರೆ.

ಕೋವಿಡ್ಗೂ ಪೆಟ್ರೋಲ್ ಬೆಲೆ ಏರಿಕೆಗೂ ಸಂಬಂಧ ಏನು? ನಿರೀಕ್ಷಿತ ಪ್ರಮಾಣದಲ್ಲಿ ಆದಾಯ ಬರುತ್ತಿಲ್ಲ ಎಂಬ ಕಾರಣಕ್ಕೆ ಬಡ ಜನರ ರಕ್ತ ಕುಡಿಯುವುದು ಸರಿನಾ? ಕಾರ್ಪೊರೇಟ್ ಸಂಸ್ಥೆಗಳ ಮೇಲೆ ತೆರಿಗೆ ಹೆಚ್ಚು ಮಾಡಲಿ. ಕೊರೊನಾ ಇದ್ದರೂ ಅದಾನಿ ಆಸ್ತಿ ನಾಲ್ಕು ಪಟ್ಟು ಹೆಚ್ಚಾಗಿದೆ, ಬಡವರ ಬದುಕು ಬೀದಿಗೆ ಬರುತ್ತಿದೆ. ಹೀಗಿದ್ದಾಗ ಯಾರ ಮೇಲೆ ತೆರಿಗೆ ಹೆಚ್ಚು ಮಾಡಬೇಕು ಅಂತ ಸರ್ಕಾರಕ್ಕೆ ಗೊತ್ತಾಗಲ್ವಾ? ಅದಾನಿ, ಅಂಬಾನಿ ಬೆಳಿಬೇಕು, ಬಡವರು ಸಾಯಬೇಕು, ಇದು ಬಿಜೆಪಿ ಅವರ ನೀತಿ ಎಂದು ಆರೋಪಿಸಿದ್ದಾರೆ.

ಯಡಿಯೂರಪ್ಪ ಅವರ ಮೇಲೆ ನನಗೆ ಪ್ರೀತಿಯಾಗಲಿ, ದ್ವೇಷವಾಗಲಿ ಇಲ್ಲ. ಬಿಜೆಪಿ ಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದರೆ ಸುಧಾಕರ್ ಪಕ್ಷಕ್ಕೆ ರಾಜೀನಾಮೆ ನೀಡಲಿ. ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂಬುದನ್ನು ಬಹುಕಾಲದಿಂದ ಹೇಳುತ್ತಾ ಬಂದಿದ್ದೇನೆ. ಈಗಲೂ ಆದಷ್ಟು ಬೇಗ ಅವರೇ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಕೋರುತ್ತೇನೆಂದು ಸುದ್ದಿಘೋಷ್ಠಿಯಲ್ಲಿ ತಿಳಿಸಿದ್ದಾರೆ.

Tags: BJPCongress PartyCovid 19Petrol Diesel Pricepetrol-diesel price hikeಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉತ್ತಮ ಆಡಳಿತ ನೀಡಿದವರ್ಯಾರು? ಕರೋನಾ ಅವಧಿಯಲ್ಲೂ ಲೂಟಿ ಹೊಡೆದು ಜನರ ರಕ್ತ ಹೀರಿದವರ್ಯಾರು? ಎಂದು ಎಲ್ಲರಿಗೂ ತಿಳಿದಿದೆ – ಬಿಜೆಪಿಗೆ ಎಚ್‌.ಸಿ ಮಹಾದೇವಪ್ಪ ಟಾಂಗ್

Next Post

ಅವಿದ್ಯಾವಂತರು ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ, ಅವರು ದೇಶಕ್ಕೆ ಹೊರೆ – ಅಮಿತ್ ಶಾ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಅವಿದ್ಯಾವಂತರು ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ, ಅವರು ದೇಶಕ್ಕೆ ಹೊರೆ – ಅಮಿತ್ ಶಾ

ಅವಿದ್ಯಾವಂತರು ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ, ಅವರು ದೇಶಕ್ಕೆ ಹೊರೆ - ಅಮಿತ್ ಶಾ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada