• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಮುರುಗೇಶ ನಿರಾಣಿಯನ್ನು ಹಾಡಿ ಹೊಗಳಿದ ಮಾಜಿ-ಹಾಲಿ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
October 11, 2021
in ಕರ್ನಾಟಕ
0
ಸಚಿವ ಮುರುಗೇಶ ನಿರಾಣಿಯನ್ನು ಹಾಡಿ ಹೊಗಳಿದ ಮಾಜಿ-ಹಾಲಿ ಸಿಎಂ
Share on WhatsAppShare on FacebookShare on Telegram

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕೈಗಾರಿಕಾ ಕ್ಷೇತ್ರದಲ್ಲಿ ಸಾಧಿಸಿರುವ ‘ ಯಶೋಗಾಧೆ’ ಯನ್ನು ‌ಹಾಲಿ ಹಾಗೂ ಮಾಜಿ ಸಿಎಂಗಳಿಂದ ಗುಣಗಾನಕ್ಕೆ ವೇದಿಕೆ ‌ಸಾಕ್ಷಿಯಾಯಿತು.

ADVERTISEMENT

ಇಂತಹ ಅಪರೂಪದ ಸಮಾರಂಭಕ್ಕೆ ಸಾಕ್ಷಿಯಾಗಿದ್ದು, ಬೆಂಗಳೂರಿನ ಅರಮನೆಯಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು, ಹಾಗೂ ಕೈಗಾರಿಕಾ ಆದಾಲತ್ ‘ ಕಾರ್ಯಕ್ರಮ.

ಕಾರ್ಯಕ್ರಮದಲ್ಲಿ ಮಾತನಾಡಿದ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ‌ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ‌ಅವರುಗಳು ಸಚಿವ ‌ನಿರಾಣಿ ಅವರು ನಡೆದು ಬಂದ‌ ದಾರಿ‌ ಹಾಗೂ ಯಶಸ್ವಿ ಉದ್ಯಮಿಯಾಗಿ ಅವರು ‘ಕೈಗಾರಿಕಾ ಕ್ಷೇತ್ರದಲ್ಲಿ ‘ ಮಾಡಿರುವ ಸಾಧನೆಯನ್ನು ಉಭಯ ನಾಯಕರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಮೊದಲು ಭಾಷಣ ಮಾಡಿದ  ಮಾಜಿ ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇಶದಲ್ಲೇ ಮೊದಲ ಬಾರಿಗೆ ‘ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ’ ವನ್ನು ನಡೆಸಿ ವಿಶ್ವದಲ್ಲಿ ಮುಂಚೂಣಿಯಲ್ಲಿರುವ ಉದ್ಯಮಿಗಳು ಹಾಗೂ ಹೂಡಿಕೆದಾರರು ಕರ್ನಾಟಕದತ್ತ ಬರುವಂತೆ ಮಾಡಿದ್ದರು. ಈಗಲೂ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸಿದ್ದಾರೆ.

ಹಲವು ಸುಧಾರಣಾ ಕ್ರಮಗಳ ಪರಿಣಾಮ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ಇದೀಗ ಯುವ ಉದ್ಯಮಿಗಳನ್ನು ಸೃಷ್ಟಿಸಲು ಮತ್ತು ಕೈಗಾರಿಕಾ ವಿವಾದಗಳನ್ನು ಬಗೆಹರಿಸಲು ಆದ್ಯತೆ ನೀಡುವ ಮೂಲಕ ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕವನ್ನು ಅತ್ಯುನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಚಿವ ‌ನಿರಾಣಿ  ಶ್ರಮಿಸುತ್ತಿರುವುದು ಶ್ಲಾಘನೀಯ” ಎಂದು ಕೊಂಡಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಯಿ ಅವರು, ನಾನು ಮತ್ತು ನಿರಾಣಿ ಅವರು ಒಂದೇ ಕಾಲೇಜಿನಲ್ಲಿ ಓದಿದ್ದೇವೆ. ಅವರು ನನಗಿಂತ ನಾಲ್ಕು ‌ವರ್ಷ ಚಿಕ್ಕವರು. ಆದರೆ ಇಂದು ಕೈಗಾರಿಕೆಯಲ್ಲಿ ಅವರು ನನಗಿಂತಲೂ ‘ ಬಹಳ ‌ದೊಡ್ಡವರಾಗಿ ‘ ಬೆಳೆದಿದ್ದಾರೆ ಎಂದು ‌ಕೊಂಡಾಡಿದ್ದಾರೆ.

ಸಣ್ಣ ಮಟ್ಟದಲ್ಲಿ ಉದ್ಯಮ ಸ್ಥಾಪಿಸಿ ಅದನ್ನೇ ದೊಡ್ಡ ಮಟ್ಟಕ್ಕೆ ಕೊಂಡೊಯ್ದಿರುವ ಬೃಹತ್‌ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ,  ಅವರೇ ನಮ್ಮೆಲ್ಲರಿಗೂ ಉತ್ತಮ ಉದಹಾರಣೆ. ಅವರು ನಡೆದು ಬಂದ ಹಾದಿಯೇ ಯುವ ಜನರಿಗೆ  ಪಾಠವಾಗಲಿದೆ ಎಂದು ಯುವ ಸಮೂಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲೇ ಎರಡನೇ ಅತೀ ದೊಡ್ಡ ಸಕ್ಕರೆ ಉತ್ಪಾದನೆ ಹಾಗೂ ಒಂದು ‌ದಿನಕ್ಕೆ‌ 25 ಲಕ್ಷ ‌ಎಥಿನಾಲ್ ಉತ್ಪಾದನೆ ಮಾಡುವ ಏಕೈಕ ‌ಸಂಸ್ಥೆ‌ ಎಂದರೆ ಅದು ನಿರಾಣಿ ಅವರ ಒಡೆತನದ ‌ಕೈಗಾರಿಕೆ. ಇಲ್ಲಿ ಸೇರಿರುವ ಯುವ ಸಮುದಾಯಕ್ಕೆ ‌ನಿರಾಣಿ ಅವರೇ ‘ ಆದರ್ಶ ಕೈಗಾರಿಕೋದ್ಯಮಿ’. ನಿಮಗೆ ‌ಅವರೇ ಪ್ರೇರಣೆಯಾಗಬೇಕು ಎಂದು ‌ಸಿಎಂ ಹೇಳುತ್ತಿದ್ದಂತೆ ಸಭೆಯಲ್ಲಿ ಚಪ್ಪಾಳೆಗಳ ಕರಾಡತನ ಮುಗಿಲು ಮುಟ್ಟಿತ್ತು.

Tags: Basavaraj BommaiBJPForeign Investorsinvestmentsinvestorsmurugesh niraniಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸರ್ಕಾರಿ ಕೆಲಸದ ಆಸೆ ಬಿಟ್ಟು ಯುವಕರು ಸ್ವಾವಲಂಬಿಯಾಗಬೇಕು: ಸಚಿವ ನಿರಾಣಿ

Next Post

ಲಖೀಂಪುರ್ ಹಿಂಸಾಚಾರವನ್ನು ಖಂಡಿಸಿ ಮೌನಾಚರಣೆ ಮೂಲಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಲಖೀಂಪುರ್ ಹಿಂಸಾಚಾರವನ್ನು ಖಂಡಿಸಿ ಮೌನಾಚರಣೆ ಮೂಲಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್

ಲಖೀಂಪುರ್ ಹಿಂಸಾಚಾರವನ್ನು ಖಂಡಿಸಿ ಮೌನಾಚರಣೆ ಮೂಲಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada