• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಫೇಸ್ಬುಕ್ ನಲ್ಲಿ ಭಾರತೀಯ ಬಲಪಂಥಿಯರ ದ್ವೇಷಪೂರಿತ ಬರಹ/ಭಾಷಣಗಳ ಹಿಂದೆ RSS?

ಪ್ರತಿಧ್ವನಿ by ಪ್ರತಿಧ್ವನಿ
October 13, 2021
in ದೇಶ, ರಾಜಕೀಯ
0
ಫೇಸ್ಬುಕ್ ನಲ್ಲಿ ಭಾರತೀಯ ಬಲಪಂಥಿಯರ ದ್ವೇಷಪೂರಿತ ಬರಹ/ಭಾಷಣಗಳ ಹಿಂದೆ RSS?
Share on WhatsAppShare on FacebookShare on Telegram

ಮೋದಿ ನೇತೃತ್ವದ ಬಿಜೆಪಿ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಸಾಂಪ್ರದಾಯಿಕ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ದೇಶದಲ್ಲಿ ದ್ವೇಷ ಬಿತ್ತುವ ಕೆಲಸ ಯಾವ ರೀತಿಯಲ್ಲಿ ವ್ಯವಸ್ಥಿತವಾಗಿ ಮಾಡುತ್ತಿವೆ ಎನ್ನುವುದನ್ನು ನಾವೆಲ್ಲ ಬಲ್ಲೆವು. ನಾಗರಿಕ ತಿದ್ದುಪಡೆ ಕಾನೂನಿನ ವಿರುದ್ಧದ ಪ್ರತಿಭಟನೆಗಳಿಂದ ಹಿಡಿದು ಇತ್ತೀಚಿನ ರೈತರ ಚಳುವಳಿಯ ವರೆಗೆ ಪ್ರತಿಭಟನಕಾರರನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತ ಸರಕಾರದ ಜನವಿರೋಧಿ ಕೃತ್ಯಗಳನ್ನು ಭಾರತೀಯ ಮಾಧ್ಯಮಗಳು ಬೆಂಬಲಿಸುತ್ತಲೇ ಬಂದಿವೆ. ಅಷ್ಟೇ ಅಲ್ಲದೆ, ಕೊರೋನ ಸಾಂಕ್ರಮಿಕ ರೋಗ ಹರಡಿದ್ದು ಕೂಡ ಅಲ್ಪಸಂಖ್ಯಾತ ಸಮುದಾಯದವರಿಂದ ಎನ್ನುವ ಸುಳ್ಳು ಸುದ್ಧಿಗಳನ್ನು ಮಾಧ್ಯಮಗಳು ಹರಡಿದ್ದು ನಾವು ನೋಡಿದ್ದೇವೆ. ವಿಚಿತ್ರ ಆಂಗಿಕ ಭಾಷೆಯ ಪ್ರದರ್ಶನ, ವಿಪರೀತ ಏರುಧ್ವನಿಯಲ್ಲಿ ಅನಗತ್ಯ ಅರಚಾಟ, ವಿರೋಧಿಗಳ ತೇಜೊವಧೆ ಇಂದಿನ ದೃಶ್ಯ ಮಾಧ್ಯಮಗಳ ಆಂಕರ್ ಗಳು ಯಾವ ನಾಚಿಕೆಯೂ ಇಲ್ಲದೆ ಮಾಡುತ್ತ ಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.

ADVERTISEMENT

ಮೋದಿ ಸರಕಾರದ ಧಮನಕಾರಿ ನೀತಿ ಮತ್ತು ದೇಶದ ಮಾಧ್ಯಮಗಳ ನಪುಂಶಕತ್ವದಿಂದ ಈ ದೇಶದ ಪ್ರಜ್ಞಾವಂತ ನಾಗರಿಕರು ತಮ್ಮ ಅಭಿವ್ಯಕ್ತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರದರ್ಶಿಸುತ್ತಿದ್ದಾರೆ. ಸೋಷಲ್ ಮೇಡಿಯಾಗಳ ಮೂಲಕವೇ ಅಧಿಕಾರಕ್ಕೆ ಬಂದಿರುವ ಮೋದಿ ಸರಕಾರ ಇಂದು ಅದೇ ಸೋಷಲ್ ಮೇಡಿಯಾಗಳನ್ನು ನಿಯಂತ್ರಿಸುವ ಮೂಲಕ ಜನರ ಅಭಿವ್ಯಕ್ತಿಗೆ ಸಂಚಕಾರ ತಂದಿರುವುದಷ್ಟೇ ತಲ್ಲದೆ ದೇಶದಲ್ಲಿ ಕೋಮು ದ್ವೇಷವನ್ನು ವ್ಯವಸ್ಥಿತವಾಗಿ ಬಿತ್ತುವ ಕೆಲಸ ಮಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಪರಿಣಾಮಕಾರಿ ಆಗಿರುವ ಫೇಸ್ಬುಕ್ಕನ್ನು ಬಿಜೆಪಿ/ಸಂಘ ಪರಿವಾರ ವ್ಯವಸ್ಥಿತವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎನ್ನುವ ಅನುಮಾನಗಳು ದಟ್ಟವಾಗುತ್ತಿವೆ. ಅದಕ್ಕೆ ಪುಷ್ಠಿಯೊದಗಿಸುವಂತೆ ಈ ವಾರದ ಆರಂಭದಲ್ಲಿ “ಫೇಸ್‌ಬುಕ್ ವಿಷ್ಟರ್ ಬ್ಲೋವರ್” ಎಂಬ ಶಿರ್ಷಿಕೆಯಲ್ಲಿ ಫೇಸ್ಬುಕ್ ಮಾಜಿ ಉದ್ಯೋಗಿ ಫ್ರಾನ್ಸಿಸ್ ಹೌಗೆನ್ ಅವರು ಬಹಿರಂಗಪಡಿಸಿದ ಸ್ಪೋಟಕ ಸುದ್ದಿ ವಿಶ್ವದಾದ್ಯಂತ ಭಾರೀ ಸಂಚಲನವನ್ನೇ ಸೃಷ್ಠಿಸಿದೆ. ಈ ಸುದ್ದಿಯು ಭಾರತದಲ್ಲಿ ವಿಘಟನೆ ಹಾಗು ಜನಾಂಗೀಯ ದ್ವೇಷ ಹರಡುವ ಕುರಿತು ಅನೇಕ ಉಲ್ಲೇಖಗಳನ್ನು ಒಳಗೊಂಡಿದೆ.

ಭಾರತದಲ್ಲಿ ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಫೇಸ್‌ಬುಕ್‌ ಮೂಲಕ ಕೋಮು ದ್ವೇಷ ಹರಡುವ ಕಾರ್ಯಗಳ ಬಗ್ಗೆ ಹೌಗೇನ್ ಪ್ರಮುಖ ಟಿಪ್ಪಣಿ ಎಂದರೆ; ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಸಂಬಂಧಿಸಿದ ಫೇಸ್ಬುಕ್ ಪೇಜುಗಳು ಜನರಲ್ಲಿ “ಭಯ ಹುಟ್ಟಿಸುವಿಕೆ, ಮುಸ್ಲಿಂ ವಿರೋಧಿ ಭಾವನೆ ಕೆರಳಿಸುವ ಬರಹಗಳು” ಭಾರತೀಯ ವಿವಿಧ ಭಾಷಾ ಎಡಿಟರ್ ಗಳ ಕೊರತೆಯಿಂದಾಗಿ ಫೇಸ್ಬುಕನ್ನು ಒಂದು ವೇದಿಕೆಯಾಗಿ ಬಳಸುತ್ತಿವೆ ಎನ್ನುವುದು. ಈ ಪೇಜುಗಳು ಮತ್ತು ವೈಯಕ್ತಿಕ ಖಾತೆಗಳು ಬಿಜೆಪಿ ಬೆಂಬಲಿಗರಿಗೆ ಸೇರಿದ ಏಕ ಬಳಕೆದಾರರ ಬಹು ಖಾತೆಗಳಾಗಿದ್ದು ಇವು ಭಾರತೀಯ ಮುಸ್ಲಿಮರ ಬಗ್ಗೆ ದ್ವೇಷ ಕಾರುತ್ತಿವೆ ಎನ್ನುವುದು ಆಕೆಯ ಪ್ರಮುಖ ಆರೋಪವಾಗಿದೆ. ಮಾಜಿ ಫೇಸ್‌ಬುಕ್ ದತ್ತಾಂಶ ವಿಜ್ಞಾನಿ ಹೌಗೆನ್ ಇತ್ತೀಚೆಗೆ ಯುಎಸ್ ಕಾಂಗ್ರೆಸ್ ಮತ್ತು ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೆ ನೀಡಿರುವ ಹೇಳಿಕೆಯಲ್ಲಿ ಭಾರತವೂ ಸೇರಿದಂತೆ ಜಾಗತಿಕ ಸಾಮಾಜಿಕ ಮಾಧ್ಯಮ ಬೃಹತ್ ಪ್ರಮಾಣದಲ್ಲಿ ಜಾಗತಿಕ ವಿಘಟನೆ ಮತ್ತು ಜನಾಂಗೀಯ ಹಿಂಸೆಯನ್ನು ಉತ್ತೇಜಿಸುತ್ತದೆ ಎಂದು ಆರೋಪಿಸಿರುವ ಕುರಿತು ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.

ಫೇಸ್ಬುಕ್ಕಿನಲ್ಲಿ ದ್ವೇಷಪೂರಿತ ಬರಹ/ಭಾಷಣಗಳನ್ನು ಪತ್ತೆಹಚ್ಚಲು ಕಂಪನಿಯು ಗಮನಾರ್ಹ ಹೂಡಿಕೆಯನ್ನು ಮಾಡಿದ್ದು, ಅದರ ಪರಿಣಾಮವಾಗಿ ಆ ರೀತಿಯ ಘಟನೆಗಳು ಈಗ ತೀವ್ರವಾಗಿ ಕಡಿಮೆಯಾಗಿದೆ ಎಂದು ಗುರುವಾರ ಫೇಸ್‌ಬುಕ್ ವಕ್ತಾರರೊಬ್ಬರು ದಿ ಟೇಲಿಗ್ರಾಫ್ ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ ಎಂದು ಕೂಡ ವರದಿಗಳು ಸ್ಪಷ್ಟಪಡಿಸಿವೆ. ೩೭ ವರ್ಷ ವಯಸ್ಸಿ ಹೌಗೆನ್ ಅವರು ಕಳೆದ ಮೇ ತಿಂಗಳಲ್ಲಿ ಜಾಗತಿಕ ಬೃಹತ್ ಸಾಮಾಜಿಕ ಮಾಧ್ಯಮ ಸಂಸ್ಥೆಯನ್ನು ತೊರೆದಿದ್ದು ಇದರಲ್ಲಿ ಅವರು ಈ ಹಿಂದೆ “Civi Integrity Tram” ನ ಭಾಗವಾಗಿದ್ದರು. ಅದು ಪ್ರಪಂಚದಾದ್ಯಂತ ಚುನಾವಣಾ ಹಸ್ತಕ್ಷೇಪ ಪ್ರಕರಣಗಳ ಮೇಲ್ವಿಚಾರಣೆ ಮಾಡುತ್ತಿತ್ತು. ಈ ಮೇಲ್ವಿಚಾರಣಾ ಟ್ರ್ಯಾಮನ್ನು ೨೦೨೦ ರ ಯುಎಸ್ ಅಧ್ಯಕ್ಷೀಯ ಚುನಾವಣೆಯ ನಂತರ ವಿಸರ್ಜಿಸಲಾಗಿತ್ತು ಎನ್ನುವ ಕುರಿತು ದಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ. ಕಳೆದ ತಿಂಗಳು ಆಕೆ ಯುಎಸ್ ಮಾರುಕಟ್ಟೆಗಳ ಕಾವಲುಗಾರ ಸಂಸ್ಥೆ ಎಸ್‌ಇಸಿಗೆ ತಮ್ಮ ವಕೀಲರೊಂದಿಗೆ ಸೇರಿ ಕನಿಷ್ಠ ಎಂಟು ದೂರುಗಳನ್ನು ಸಲ್ಲಿಸಿದ್ದಾರಂತೆ. ಅದಷ್ಟೇ ಅಲ್ಲದೆ ಆಕೆ ಈ ವಾರದ ಆರಂಭದಲ್ಲಿ ಸಿಬಿಎಸ್ ನ್ಯೂಸ್‌ನಲ್ಲಿ ಸಾರ್ವಜನಿಕವಾಗಿ

ತನ್ನ ಆರೋಪಗಳನ್ನು ಮಾಡಿದ್ದಲ್ಲದೆ ನಂತರ ಯುಎಸ್ ಕಾಂಗ್ರೆಸ್‌ಗೆ ಈ ಕುರಿತು ಮಹತ್ವದ ಸಾಕ್ಷ್ಯಗಳನ್ನು ನೀಡಿದ್ದಾರೆಂದು ವರದಿಗಳಾಗಿವೆ.

ಸೋರಿಕೆಯಾದ “ಎಡ್ವರ್ಸರಿಯಲ್ ಹಾರ್ಮಫುಲ್ ನೆಟ್‌ವರ್ಕ್ಸ್ – ಇಂಡಿಯಾ ಕೇಸ್ ಸ್ಟಡಿ” ಎಂಬ ಫೇಸ್ಬುಕ್ಕಿನ ಆಂತರಿಕ ಸಮಿಕ್ಷಾ ದಾಖಲೆ ಸಿಬಿಎಸ್ ನ್ಯೂಸ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ ಕುರಿತು ಎಸ್‌ಇಸಿ ದೂರುಗಳಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಸೋರಿಕೆಯಾದ ಈ ದಾಖಲೆಯ ಒಂದು ಆಯ್ದ ಭಾಗವು ಹೀಗೆ ಹೇಳುತ್ತದೆ: “ಆರ್‌ಎಸ್‌ಎಸ್ ಬೆಂಬಲಿತ ಫೇಸ್ಬುಕ್ ಬಳಕೆದಾರರು ಮತ್ತು ಬಳಕೆದಾರರ ಗುಂಪುಗಳು ಹೊಂದಿರುವ ಪೇಜುಗಳು ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಭಯವನ್ನು ಹುಟ್ಟಿಸುತ್ತವೆ. ಮುಸ್ಲಿಮ್ ವಿರೋಧಿ ಬರಹಗಳು/ಭಾಷಣಗಳು ಹಿಂಸಾತ್ಮಕ ಮತ್ತು ದಹನಕಾರಿ ಉದ್ದೇಶ ಹೊಂದಿರುತ್ತವೆ. ಈ ಪೇಜುಗಳಲ್ಲಿ ಮುಸ್ಲಿಮರ ಬಗ್ಗೆ ತಪ್ಪು ಅಭಿಪ್ರಾಯ ರೂಪಿಸುವ ಅನೇಕ ಸಂಗತಿಗಳಿದ್ದು ಮುಸ್ಲಿಮರನ್ನು ಹಂದಿ ಮತ್ತು ನಾಯಿಗಳಿಗೆ ಹೋಲಿಸುವ ಮತ್ತು ಹಲವಾರು ಅಮಾನವೀಯ ಪೋಸ್ಟ್‌ಗಳು ಇವೆ. ಮುಸ್ಲಿಮ್ ಪುರುಷರು ತಮ್ಮ ಕುಟುಂಬದ ಮಹಿಳಾ ಸದಸ್ಯರ ಮೇಲೆ ಅತ್ಯಾಚಾರ ಮಾಡುತ್ತಾರೆ ಎನ್ನುವ ಸುಳ್ಳು ಸಂಗತಿಗಳು ಕೂಡ ಆ ಪೇಜುಗಳಲ್ಲಿ ಬರೆಯಲಾಗುತ್ತಿದೆ” ಎನ್ನುತ್ತವೆ ಸೋರಿಕೆಯಾದ ಫೇಸ್ಬುಕ್ ದಾಖಲೆಯ ಆ ಆಯ್ದ ಭಾಗ.

ಆ ದಾಖಲೆಯಲ್ಲಿ “ನಮ್ಮ ಹಿಂದಿ ಮತ್ತು ಬಂಗಾಳಿ ವರ್ಗೀಕರಣದ ಕೊರತೆ ಎಂದರೆ ಈ ವಿಷಯದ ಹೆಚ್ಚಿನ ಭಾಗವನ್ನು ಎಂದಿಗೂ ಫ್ಲ್ಯಾಗ್ ಮಾಡಲಾಗಿಲ್ಲ ಅಥವಾ ಅಂತಹ ಬಳಕೆದಾರರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ …” ಎನ್ನುವ ಮಾಹಿತಿ ಇದೆ ಎನ್ನುತ್ತವೆ ದಿ ಟೆಲಿಗ್ರಾಫ್ ವರದಿಗಳು. ಆರ್‌ಎಸ್‌ಎಸ್ ಮತ್ತು ಬಿಜೆಪಿ ಹೌಗೆನ್ ಅವರ ಈ ಗುರುತರ ಆರೋಪಗಳಿಗೆ ಇನ್ನೂ ಪ್ರತಿಕ್ರಿಯಿಸಿಲ್ಲ. ಕಳೆದ ವರ್ಷ, ವಾಲ್ ಸ್ಟ್ರೀಟ್ ಜರ್ನಲ್ ಹೆಸರಿಸಿದ ಪ್ರಸ್ತುತ ಮತ್ತು ಮಾಜಿ ಫೇಸ್‌ಬುಕ್ ಸಿಬ್ಬಂದಿಯನ್ನು ಉಲ್ಲೇಖಿಸಿದ್ದು, ಇವರಿಬ್ಬರು ಫೇಸ್ಬುಕ್ ವೇದಿಕೆಯು ಹಿಂಸಾಚಾರವನ್ನು ಪ್ರಚೋದಿಸುವ ಬಿಜೆಪಿ ಶಾಸಕರ ಪೋಸ್ಟ್‌ಗಳನ್ನು ಪರೀಕ್ಷಿಸದೆ ಅನುಮತಿಸಿದೆ ಎಂದು ಹೇಳಿದ್ದರೆಂತಲು, ಹಾಗು ಈ ಕಾರ್ಯವು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿರುವ ದಕ್ಷಿಣ ಮತ್ತು ಮಧ್ಯ ಏಷ್ಯಾದ ಸಾರ್ವಜನಿಕ ನೀತಿ ನಿರ್ದೇಶಕರಾದ ಆಂಖಿ ದಾಸ್ ಅವರ ಸಲಹೆಯ ಮೇರೆಗೆ ಮಾಡಲಾಗಿತ್ತು ಎನ್ನುವ ಸ್ಪೋಟಕ ಮಾಹಿತಿ ದಿ ಟೆಲಿಗ್ರಾಫ್ ಪತ್ರಿಕೆ ಹೊರಗೆಡವಿದೆ. ಫೇಸ್‌ಬುಕ್ಕಿನ ದಿನಾಂಕವಿಲ್ಲದ ಆಂತರಿಕ ಸಮೀಕ್ಷೆಯೊಂದನ್ನು ಹೌಗೆನ್ ಉಲ್ಲೇಖಿಸಿ ಆ ತರಹದ ದ್ವೇಷ ಬಿತ್ತುವ ಫೇಸ್ಬುಕ್ ಬರಹ/ದೃಶ್ಯಗಳಿಗೆ ಅತಿ ಹೆಚ್ಚು ವೀಕ್ಷಣೆಗಳು ಬಂದಿರುವುದು ನಕಲಿ ಎಂದು ಬಹಿರಂಗಗೊಂಡ ಬಗ್ಗೆ ದಿ ಟೆಲಿಗ್ರಾಫ್ ವರದಿ ಮಾಡಿದೆ.

ಹೌಗೆನ್ ಅವರ ಪ್ರಕಾರ ಸಂಘ ಪರಿವಾರ ಬೆಂಬಲಿಗರು ಫೇಸ್ಬುಕ್ ಮೂಲಕ ಹರಡುವ ದ್ವೇಷಪೂರಿತ ಪೋಸ್ಟ್ ಗಳು ಎಷ್ಟು ಜನರು ವಿಕ್ಷಿಸಿದರು ಎನ್ನುವ ಅಂಕಿ ಸಂಖ್ಯೆಗಳು ಸಂಪೂರ್ಣ ನಕಲಿ ಎನ್ನಲಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿನ ಸಿವಿಕ್ ಪೋಸ್ಟರ್‌ಗಳು 40% ನಕಲಿ/ಅನಧಿಕೃತ ಉನ್ನತ ವಿಪಿವಿ (ವಿವ್ಸ್ ಪೋರ್ಟ್ ವಿವ್ಸ್  ಅಥವಾ ಇಂಪ್ರೆಸ್ಸೆನ್ಸ್) ಆಗಿರುತ್ತವೆ ಎನ್ನುತ್ತವೆ ಮೂಲಗಳು. ಫೇಸ್ಬುಕ್ಕಿನ ಈ ಎಲ್ಲ ತಿರುಚುವಿಕೆಗಳನ್ನು ಹೌಗೆನ್ ಅವರು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ. ಭಾರತೀಯ ರಾಜಕಾರಣಿಯೊಬ್ಬರು ಹಾಕಲಾಗಿದ್ದ ಮುಸ್ಲಿಮ್ ವಿರೋಧಿ ಹಾಗು ಪಾಕಿಸ್ತಾನ ವಿರೋಧಿ “ಔಟ್-ಆಫ್-ಕಾಂಟೆಕ್ಸ್ಟ್”  ವೀಡಿಯೊ ವಿಪರೀತ ಜನರು ವೈರಲ್ ಆಗಿ ಹಂಚಿಕೊಂಡಿದ್ದಾರೆ ಎನ್ನುವ ಫೇಸ್ಬುಕ್ ದಾಖಲೆಗಳು ಕೂಡ ನಕಲಿ ಎನ್ನಲಾಗುತ್ತಿದೆ. “ಲೋಟಸ್ ಮಹಲ್” ಎಂಬ ಇನ್ನೊಂದು ಸೋರಿಕೆಯಾದ ಫೇಸ್ಬುಕ್ಕಿನ ಆಂತರಿಕ ದಾಖಲೆಯನ್ನು ಉಲ್ಲೇಖಿಸಿ ಬಿಜೆಪಿ ತನ್ನ ಸದಸ್ಯರಿಗೆ ಒಂದಕ್ಕಿಂತ ಹೆಚ್ಚು ಫೇಸ್‌ಬುಕ್ ಖಾತೆಗಳನ್ನು ಹೊಂದಲು ಪ್ರೋತ್ಸಾಹಿಸುತ್ತದೆ ಎನ್ನುವುದನ್ನು ಬಹಿರಂಗಗೊಳಿಸಿದೆ ಎನ್ನಲಾಗುತ್ತವೆ ಮೂಲಗಳು.

ಹೌಗೆನ್ ನೀಡಿದ ದೂರಿನ ಆಯ್ದ ಭಾಗವು ಹೇಳುವುದೇನೆಂದರೆ ಭಾರತದಲ್ಲಿ ಬಿಜೆಪಿ ಐಟಿ ಸೆಲ್ ಸಂಯೋಜಚರು ತಯ್ಯಾರಿಸಿ ತನ್ನ ಕಾರ್ಯಕರ್ತರಿಗೆ ಹಂಚುವ ಈ ಬಗೆಯ ದ್ವೇಷಪೂರಿತ ಪೋಸ್ಟಗಳ ಅಭಿಯಾನವು ಫೇಸ್ಬುಕ್ಕಿನಲ್ಲಿ ಬಿಜೆಪಿ ಬೆಂಬಲಿಗರು ಐಟಿ ಸೆಲ್ನ ಸಂದೇಶ ಹಾಗು ಸೂಚನೆಗಳಂತೆ ಅವುಗಳನ್ನು ಸಾಮೂಹಿಕವಾಗಿ ಕಾಪಿ ಪೇಸ್ಟ್ ಮಾಡುತ್ತಾರೆ. ಈ ಪೋಸ್ಟಗಳು ಬಹುತೇಕ ರಾಜಕೀಯ ಸೂಕ್ಷ್ಮ ಸಂಗತಿಗಳನ್ನು ಕೆರಳಿಸುವಂತವಾಗಿರುತ್ತವೆ ಹಾಗು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿರುತ್ತವೆ ಎಂದು ಟೆಲಿಗ್ರಾಫ್ ವರದಿಗಳು ಬಹಿರಂಗಪಡಿಸಿವೆ. ಆದರೆ ಫೇಸ್‌ಬುಕ್ ವಕ್ತಾರರು ಟೆಲಿಗ್ರಾಫ್ ಪತ್ರಿಕೆಗೆ ನೀಡಿದ ಹೇಳಿಕೆಯಲ್ಲಿ; “ಕಳೆದ ಕೆಲವು ವರ್ಷಗಳಲ್ಲಿ, ನಾವು ತಂತ್ರಜ್ಞಾನದಲ್ಲಿ ಗಣನೀಯವಾಗಿ ಹೂಡಿಕೆ ಮಾಡಿದ್ದೇವೆˌ ದ್ವೇಷಪೂರಿತ ಬರಹ/ಭಾಷಣವನ್ನು ಜನರು ನಮಗೆ ರಿಪೋರ್ಟ್ ಮಾಡುವ ಮೊದಲೇ ಪತ್ತೆ ಹಚ್ಚುವ ಕಾರ್ಯ ಫೇಸ್ಬುಕ್ ಮಾಡುತ್ತಿದೆ. ಹಿಂದಿ ಹಾಗು ಬೆಂಗಾಲಿ ಭಾಷೆಗಳನ್ನೊಳಗೊಂಡಂತೆ ಜಾಗತಿಕವಾಗಿ 40 ಭಾಷೆಗಳಲ್ಲಿ ಹಾಕಲಾಗುವ ಪೋಸ್ಟಗಳ ಫೇಸ್ಬುಕ್ ನಿಯಮ ಉಲ್ಲಂಘಿಸುವ ವಿಷಯವನ್ನು ಪತ್ತೆಹಚ್ಚಲು ನಾವು ಈಗ ಈ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ.

ಇದರ ಪರಿಣಾಮವಾಗಿ, ನಾವು ಜಾಗತಿಕವಾಗಿ ದ್ವೇಷ ಹರಡುವ ಬರಹ/ಭಾಷಣಗಳ ಪ್ರಮಾಣವನ್ನು ಕಡಿಮೆ ಮಾಡಿದ್ದೇವೆ” ಎಂದು ಹೇಳಿರುವ ಕುರಿತು ದಿ ಟೆಲಿಗ್ರಾಫ್ ವರದಿ ಮಾಡಿದೆ. ಮುಂದುವರೆದು ಹೇಳಿಕೆ ನೀಡಿರುವ ಫೇಸ್ಬುಕ್ ವಕ್ತಾರರು: “ಹೆಚ್ಚುವರಿಯಾಗಿ, ನಮ್ಮಲ್ಲಿ 20 ಭಾರತೀಯ ಭಾಷೆಗಳನ್ನು ಒಳಗೊಂಡ ವಿಷಯ ವಿಮರ್ಶಕರ ತಂಡವಿದೆ. ಮುಸ್ಲಿಮರು ಸೇರಿದಂತೆ ಶೋಷಿತರ ವಿರುದ್ಧ ದ್ವೇಷ ಹರಡುವ ಪೋಸ್ಟಗಳು ಜಾಗತಿಕವಾಗಿ ಹೆಚ್ಚುತ್ತಲೇ ಇರುವುದರಿಂದ, ನಾವು ಇದನ್ನು ತಡೆಯಲು ಕಟ್ಟುನಿಟ್ಟಿನ ತಂತ್ರಗಳನ್ನು ಅನುಸರಿಸುವುದು  ಮುಂದುವರಿಸುತ್ತೇವೆ ಮತ್ತು ಫೇಸ್ಬುಕ್ ಆನ್‌ಲೈನ್‌ನಲ್ಲಿ ಬರುವ ದ್ವೇಷದ ಮಾತುಗಳನ್ನು ಕೂಡ ತಡೆಯಲು ನಮ್ಮ ಈಗಿರುವ ನೀತಿಗಳನ್ನು ನವೀಕರಿಸಲು ಬದ್ಧರಾಗಿದ್ದೇವೆ” ಎಂದದ್ದನ್ನು ದಿ ಟೆಲಿಗ್ರಾಫ್ ವರದಿ ಮಾಡಿದೆ.

ಮಾರ್ಕ್ ಜುಕರ್‌ಬರ್ಗ್ ಈ ವಾರದ ಆರಂಭದಲ್ಲಿ ತನ್ನ ಫೇಸ್ಬುಕ್ ಕಂಪನಿಯ ಉದ್ಯೋಗಿಗಳಿಗೆ ಪತ್ರ ಬರೆದಿದ್ದಾರಂತೆ. ಅದರಲ್ಲಿ ಅವರು “ಹಾನಿಕಾರಕ ವಿಷಯದ ವಿರುದ್ಧ ಹೋರಾಡುವ ಬಗ್ಗೆ ನಾವು ಕಾಳಜಿ ವಹಿಸದಿದ್ದರೆ, ಕಂಪನಿ ಇಷ್ಟೊಂದು ಜನ ಕೆಲಸಗಾರರನ್ನು ಇಟ್ಟುಕೊಂಡು ಏನು ಪ್ರಯೋಜನ ಎಂದು ಪ್ರಶ್ನೆ ಹಾಕಿದ್ದಾರೆಂದು ದಿ ಟೆಲಿಗ್ರಾಫ್ ವರದಿ ಮಾಡಿದೆ. ಒಟ್ಟಾರೆಯಾಗಿ ಬಿಜೆಪಿ ಮತ್ತು ಸಂಘ ಪರಿವಾರ ಭಾರತೀಯ ಸಾಂಪ್ರದಾಯಿಕ ಮಾಧ್ಯಮಗಳ ಮೇಲೆ ಹೊಂದಿದ ನಿಯಂತ್ರಣದಂತೆ ಸೋಷಲ್ ಮೇಡಿಯಾ ಮೇಲೆ ಕೂಡ ನಿಯಂತ್ರಣ ಹೊಂದಲು ಮತ್ತು ಅವುಗಳನ್ನು ತನ್ನ ರಾಜಕೀಯ ಲಾಭಗಳಿಗಾಗಿ ದುರ್ಬಳಕೆ ಮಾಡಿಕೊಳ್ಳಲು ಎಲ್ಲ ಬಗೆಯ ವಾಮ ಮಾರ್ಗಗಳನ್ನು ಬಳಸಿಕೊಳ್ಳುತ್ತಿದೆ ಎನ್ನುವುದು ಜಾಗತಿಕ ಮಟ್ಟದಲ್ಲಿ ಬಟಾ ಬಯಲಾದ ಸಂಗತಿ. ಇದು ಭಾರತೀಯರೆಲ್ಲರು ಬಿಜೆಪಿ ಮತ್ತು ಸಂಘ ಪರಿವಾರದ ಕುಕತ್ಯಗಳಿಂದ ಜಾಗತಿಕ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ ಎನ್ನಲೇಬೇಕಿದೆ.

~ ಡಾ. ಜೆ ಎಸ್ ಪಾಟೀಲ.

ಬರಹ : ಡಾ. ಜೆ ಎಸ್ ಪಾಟೀಲ.

Tags: BJPCivi Integrity TramCongress PartyCovid 19RSSನರೇಂದ್ರ ಮೋದಿಫೇಸ್ಬುಕ್ಬಿಜೆಪಿ
Previous Post

ಪೋಸ್ಟ್‌ ಕೋವಿಡ್‌ ಎಫೆಕ್ಟ್ – ಗ್ರಾಮೀಣ ಜನತೆಗೆ ಕಾಡುತಿದೆ ಮಾನಸಿಕ ಸಮಸ್ಯೆ, ಸುಸ್ತು!

Next Post

ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎಂದ ಹೆಚ್‌ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎಂದ ಹೆಚ್‌ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

ಪುಟಗೋಸಿ ವಿಪಕ್ಷ ನಾಯಕ ಸ್ಥಾನ ಎಂದ ಹೆಚ್‌ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada