• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಲೀಂ ಅವರ ಹೇಳಿಕೆ ತಿರುಚುವುದು ಬೇಡ, ಡಿ.ಕೆ.ಶಿವಕುಮಾರ್‌ ಭ್ರಷ್ಟರಲ್ಲ: ವಿ.ಎಸ್.ಉಗ್ರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
October 13, 2021
in ಕರ್ನಾಟಕ, ರಾಜಕೀಯ
0
ಸಲೀಂ ಅವರ ಹೇಳಿಕೆ ತಿರುಚುವುದು ಬೇಡ, ಡಿ.ಕೆ.ಶಿವಕುಮಾರ್‌ ಭ್ರಷ್ಟರಲ್ಲ: ವಿ.ಎಸ್.ಉಗ್ರಪ್ಪ
Share on WhatsAppShare on FacebookShare on Telegram

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಸೇರಿದಂತೆ ಎಲ್ಲ ನಾಯಕರು ಒಗ್ಗಟ್ಟಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಇದರಲ್ಲಿ ರಾಜಕಾರ ಮಾಡುತ್ತಿಲ್ಲ. ಕೆಲವು ಮಾಧ್ಯಮಗಳು ಬಿಂಬಿಸುವ ರೀತಿ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು 3-4 ದಶಕಗಳಿಂದ ಬಲ್ಲೆ. ಅವರು ಕ್ರಿಯಾಶೀಲ, ರಾಜ್ಯದ ಬಗ್ಗೆ ಬದ್ಧತೆ ಇರುವ ರಾಜಕಾರಣಿ. ರೈತಪರ ಕುಟುಂಬದಲ್ಲಿ ಹುಟ್ಟಿ, ಜನಪರ ಹಾಗೂ ಅಭಿವೃದ್ಧಿ ಪರ ಕೆಲಸ ಮಾಡುವ ನಾಯಕ. ಅದಕ್ಕೆ ಉದಾಹರಣೆ ತುಮಕೂರಿನ ಪಾವಗಡದ ಸೋಲಾರ್ ಕೇಂದ್ರದಲ್ಲಿ ಜಮೀನು ಖರೀದಿ ಮಾಡದೇ ಜಮೀನನ್ನು ಲೀಸ್ ಮೂಲಕ ತೆಗೆದುಕೊಂಡಿರುವುದೇ ಶಿವಕುಮಾರ್ ಅವರ ಜನಪರ ಹಾಗೂ ಅಭಿವೃದ್ಧಿ ಕೆಲಸಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಸಂಚಾಲಕ ಸಲೀಂ ಅವರು ನಾನು ಪತ್ರಿಕಾಗೋಷ್ಠಿಗೆ ಆಗಮಿಸಿದಾಗ ನನ್ನ ಕಿವಿಯಲ್ಲಿ ಜನ ಹೀಗೆ ಮಾತನಾಡುತ್ತಿದ್ದಾರೆ. ಈ ಮಧ್ಯೆ ನೀರಾವರಿ ಇಲಾಖೆ ಹಗರಣ ವಿಚಾರವಾಗಿ ಬಿಜೆಪಿ ಅವರು ನಮ್ಮ ಪಕ್ಷದ ನಾಯಕರ ವಿರುದ್ಧ ಗೂಬೆ ಕೂರಿಸಲು ಈ ರೀತಿ ಆರೋಪ ಮಾಡಿದ್ದಾರೆ ಎಂದು ಹೇಳಿದರು. ನಾನು ಅದನ್ನು ಅಲ್ಲಿಗೆ ನಿಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿದೆ. ಅದನ್ನು ಮಾಧ್ಯಮಗಳು ಬೇರೆ ರೀತಿ ಬಿಂಬಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಉತ್ತಮ ಆಡಳಿತಗಾರ, ಜನಪರ ಚಿಂತನೆಯುಳ್ಳ ನಾಯಕ. ಅವರು ಸಂಪಾದಿಸಿರುವ ಹಣ ರಾಜಕಾರಣದಿಂದ ಅಲ್ಲ. ಅವರು ತಮ್ಮ ವ್ಯಾಪಾರ ವ್ಯವಹಾರಗಳಿಂದ ಸಂಪಾದನೆ ಮಾಡಿದ್ದಾರೆ ಅವರು ಎಂದಿಗೂ ಪರ್ಸೆಂಟೇಜ್ ರಾಜಕಾರಣ ಮಾಡಿಲ್ಲ ಎಂದು ಹೇಳಿದ್ದಾರೆ.

ನೀರಾವರಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ಆಯನೂರು ಉಮೇಶ್ ಅವರು ನನ್ನ ಜಿಲ್ಲೆಯವರು ನಮ್ಮ ನಾಯಕರ ಮೇಲೆ ಆರೋಪ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಲು ಮುಂದಾಗಿದ್ದರು.

ನಮ್ಮ ಪಕ್ಷದ ಅಧ್ಯಕ್ಷರಾಗಲಿ, ನಾಯಕರಾಗಲಿ ಅಧಿಕಾರದಲ್ಲಿದ್ದಾಗ ಪರ್ಸೆಂಟೇಜ್ ಪಡೆಯುವ ಸಂಸ್ಕೃತಿ ಬೆಳೆಸಿಲ್ಲ. ಹೀಗಾಗಿ ಆ ಪಿಸುಗುಟಿದ ಮಾತು ವೈಭವೀಕರಣ ಮಾಡಿ ಬಿಂಬಿಸುವ ಕೆಲಸ ಮಾಧ್ಯಮ ಮೌಲ್ಯಗಳಿಗೆ ಸಮಂಜಸವಲ್ಲ ಎಂದು ಹೇಳಿದ್ದಾರೆ.

ಕಮಿಷನ್, ಭ್ರಷ್ಟಾಚಾರದಿಂದ ಕಾಂಗ್ರೆಸ್ ಗೆ ದೂರ; ಅದರಲ್ಲೂ ಪಕ್ಷದ ಅಧ್ಯಕ್ಷರು ಇನ್ನೂ ದೂರ.

ಮೋದಿ ಅವರು ಕಳೆದ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಕಮಿಷನ್ ರಾಮಯ್ಯ ಎಂದಾಗ 100 ಕೋಟಿ ಮಾನಹಾನಿ ಕೇಸ್ ಹಾಕಿದಾಗ ಅದಕ್ಕೆ ಮೋದಿ ಅವರು ಉತ್ತರ ನೀಡಲಿಲ್ಲ. ಭ್ರಷ್ಟಾಚಾರ ಗಂಗೋತ್ರಿ ಹರಿಸುತ್ತಿರುವುದು ಬಿಜೆಪಿ ನಾಯಕರು ಎಂದು ಆರೋಪಿಸಿದ್ದಾರೆ.

ಇಡಿ ಹಾಗೂ ಆದಾಯ ತೆರಿಗೆ ಅಧಿಕಾರಿಗಳು ರಾಜ್ಯದಲ್ಲಿ ದಾಳಿ ನಡೆಸಿದ ನಂತರ ನಾವು ಆಗ್ರಹಿಸಿದಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿ 750 ಕೋಟಿ ಲೆಕ್ಕದ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ. ಇದು ಯಾರ ಆಡಳಿತದಲ್ಲಿ ನಡೆದಿದೆ? ಇದಕ್ಕೆ ಹೊಣೆ ಯಾರು? ಈ ಬಗ್ಗೆ ಮೋದಿ, ಬಿಜೆಪಿ ಅವರು ಮಾತನಾಡುತ್ತಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರ ಯಾರೇ ಮಾಡಿದರೂ ತಪ್ಪೇ, ಯಡಿಯೂರಪ್ಪ ಮಾಡಿದರೂ ತಪ್ಪೇ, ಪ್ರಧಾನಿ ಮಾಡಿದರೂ ತಪ್ಪೇ.ನಮ್ಮ ಪಕ್ಷದವರು ಮಾಡಿದರೂ ತಪ್ಪೇ. ಭ್ರಷ್ಟಾಚಾರ ಮುಕ್ತ ರಾಜ್ಯ ಕಟ್ಟಲು ಕಾಂಗ್ರೆಸ್ ಬದ್ಧ. ಅದರಲ್ಲೂ ಡಿ.ಕೆ ಶಿವಕುಮಾರ್ ಅವರು ಬದ್ಧ. ಅವರು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಿನ್ನೆ ಸಲೀಂ ಅವರ ಹೇಳಿಕೆ ತಿರುಚುವುದು ಬೇಡ ಎಂದು ವಿನಂತಿಸಿದ್ದಾರೆ.

Tags: BJPCongress PartyCovid 19D K ShivakumarUgrappaVS Ugrappaಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋವಿಡ್ ನಿವಾರಣೆಗೆ ದೇವರ ಮೊರೆ ಹೋದ ರಾಜ್ಯ ಸರ್ಕಾರ – ವಿಜಯದಶಮಿಯಂದು ವಿಶೇಷ ಪೂಜೆಗೆ ಸಿದ್ದತೆ!

Next Post

ಕನ್ನಡ ಕಡೆಗಣಸಿದ ಎರಡು ಆರೋಗ್ಯ ಸಂಸ್ಥೆಗಳಿಗೆ ಕರವೇ ಎಚ್ಚರಿಕೆ : ತಪ್ಪನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕನ್ನಡ ಕಡೆಗಣಸಿದ ಎರಡು ಆರೋಗ್ಯ ಸಂಸ್ಥೆಗಳಿಗೆ ಕರವೇ ಎಚ್ಚರಿಕೆ : ತಪ್ಪನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು

ಕನ್ನಡ ಕಡೆಗಣಸಿದ ಎರಡು ಆರೋಗ್ಯ ಸಂಸ್ಥೆಗಳಿಗೆ ಕರವೇ ಎಚ್ಚರಿಕೆ : ತಪ್ಪನ್ನು ಒಪ್ಪಿಕೊಂಡು‌‌ ಕ್ಷಮೆ ಯಾಚಿಸಿದ ನಿರ್ದೇಶಕರು

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada