• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅನೈತಿಕ ಪೊಲೀಸ್ ಗಿರಿ ಬೆಂಬಲಿಸಿದ ಮುಖ್ಯಮಂತ್ರಿ ವಿರುದ್ಧ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ: ರಕ್ಷಾ ರಾಮಯ್ಯ ಆಕ್ರೋಶ

Any Mind by Any Mind
October 15, 2021
in ಕರ್ನಾಟಕ
0
ಅನೈತಿಕ ಪೊಲೀಸ್ ಗಿರಿ ಬೆಂಬಲಿಸಿದ ಮುಖ್ಯಮಂತ್ರಿ ವಿರುದ್ಧ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ: ರಕ್ಷಾ ರಾಮಯ್ಯ ಆಕ್ರೋಶ
Share on WhatsAppShare on FacebookShare on Telegram

ಸಂವಿಧಾನಕ್ಕೆ ಬದ್ಧರಾಗಿ ರಾಜ್ಯದ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ನೋಡುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಅನೈತಿಕ ಪೊಲೀಸ್ ಗಿರಿಯನ್ನು ಬೆಂಬಲಿಸಿ ಒಂದು ವರ್ಗದ ಜನರನ್ನು ಓಲೈಕೆ ಮಾಡುತ್ತಿರುವ ಧೋರಣೆ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ADVERTISEMENT

ಕೆಪಿವೈಸಿಸಿ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಕೋಮುವಾದಿ ಸಂಘಟನೆಗಳಿಂದ ನಡೆಯುತ್ತಿರುವ ಅನೈತಿಕ ಪೋಲಿಸ್ ಗಿರಿಯನ್ನು ಬೆಂಬಲಿಸಿದ ಬಸವರಾಜ ಬೊಮ್ಮಾಯಿ ಅವರ ಧೋರಣೆ ಖಂಡಿಸಿ ಮುಖ್ಯಮಂತ್ರಿ ಅವರ ಪ್ರತಿಕೃತಿ ದಹಿಸಿ ಯುವ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಗೃಹ ಸಚಿವರಾಗಿದ್ದ ಬೊಮ್ಮಾಯಿ ಇದೀಗ ಮುಖ್ಯಮಂತ್ರಿಯಾಗಿದ್ದಾರೆ. ಎಲ್ಲರನ್ನು ರಕ್ಷಣೆ ಮಾಡುವುದು ಅವರ ಜವಾಬ್ದಾರಿ. ಆದರೆ ಸಂಘ ಪರಿವಾರದವರು ನಡೆಸುವ ಕಾನೂನು ಬಾಹಿರ, ಸಮಾಜದ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ನಡಾವಳಿಕೆಯನ್ನು ಬಹಿರಂಗವಾಗಿ ಬೆಂಬಲಿಸಿ ತಾವು ಕೋಮುವಾದಿಗಳ ಪರ ಎಂದು ಬಹಿರಂಗವಾಗಿ ಒಪ್ಪಿಕೊಂಡಿರುವುದನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿದರು.

ರಾಜ್ಯದಲ್ಲಿ ಬಿಜೆಪಿ ಗೂಂಡಾರಾಜ್ಯ ಸೃಷ್ಟಿಸುತ್ತಿದ್ದು ಸಮಾಜದ ಶಾಂತಿ ಮತ್ತು ಸಹಬಾಳ್ವೆಗೆ ಧಕ್ಕೆ ತರುತ್ತಿದೆ. ಕೋಮುವಾದಿ ಸಂಘಟನೆಗಳಿಂದ ಅಲ್ಪಸಂಖ್ಯಾತರು, ವಿದ್ಯಾರ್ಥಿಗಳು, ಮಹಿಳೆಯರು, ಯುವ ಜನರ ಮೇಲೆ ನಡೆಯುತ್ತಿರುವ ಅನೈತಿಕ ಪೋಲಿಸ್ ಗಿರಿಯನ್ನು ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಸಮರ್ಥಿಸಿದ ಬೆನ್ನೆಲ್ಲಾ ಇದರಿಂದ ಹುರುಪುಗೊಂಡ ಹಿಂದೂ ಮಹಾಸಭಾ, ಆಯುಧಪೂಜೆ ನೆಪವಿಟ್ಟುಕೊಂಡು ಶಸ್ತ್ರಾಸ್ತ್ರಗಳನ್ನು ಹಂಚಿದೆ. ಈ ಸಂಘಟನೆಗಳ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿರುವುದೇ ಇದಕ್ಕೆಲ್ಲ ಮುಖ್ಯ ಕಾರಣ. ಆದ್ದರಿಂದ ಸಮಾಜಘಾತುಕ ಸಂಘಟನೆಗಳ ಕೃತ್ಯವನ್ನು ಸಮರ್ಥಿಸಿದ ಮೊಮ್ಮಾಯಿ ಅವರ ಧೋರಣೆ ಖಂಡನೀಯ ಎಂದು ಯುವ ಕಾರ್ಯಕರ್ತರು ಘೋಷಣೆ ಕೂಗಿದರು.

ಕೆಪಿವೈಸಿಸಿ ಅಧ್ಯಕ್ಷ ರಕ್ಷಾ ರಾಮಯ್ಯ ಮಾತನಾಡಿ, ಮಂಗಳೂರು, ಬೆಂಗಳೂರು, ಕಲಬುರಗಿ, ಬೆಳಗಾವಿ ಮತ್ತಿತರ ಕಡೆಗಳಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಯುತ್ತಿದ್ದು, ಇದನ್ನು ಮುಖ್ಯಮಂತ್ರಿಯಾದವರು ಖಂಡಿಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಆದರೆ ಅವರೇ ಇದನ್ನು ಸಮರ್ಥಿಸಿಕೊಂಡು ಮಾತನಾಡಿರುವುದು ಆತಂಕಕಾರಿ ಬೆಳವಣಿಗೆ. ಇದರಿಂದ ಸಾಮರಸ್ಯದ ಸಂಸ್ಕೃತಿಗೆ ಆತಂಕ ಎದುರಾಗಿದೆ. ಕೇವಲ ಸಂಘಪರಿವಾದವರ ಮುಖ್ಯಮಂತ್ರಿಯಂತೆ ಬಸವರಾಜ ಬೊಮ್ಮಾಯಿ ಅವರು ವರ್ತಿಸಿದ್ದಾರೆ ಎಂದರು.

ಪ್ರತಿಯೊಂದು ಸಂವಿಧಾನಬದ್ಧವಾಗಿ ನಡೆಯಬೇಕು. ನೈತಿಕ ಪೊಲೀಸ್ ಗಿರಿ ಸರ್ಕಾರದ ಜವಾಬ್ದಾರಿಯಲ್ಲ. ಕಾನೂನಿನ ಪ್ರಕಾರ ಜನರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಅನೈತಿಕ ಪೊಲೀಸ್ ಗಿರಿ ಮನೆಗೆ ಮಾತ್ರ ಸೀಮಿತಬಾಗಿರಬೇಕು. ರಸ್ತೆಯಲ್ಲಿ ಇದನ್ನು ಪ್ರದರ್ಶಿಸುವುದು, ಹಾದಿ ಬೀದಿಯಲ್ಲಿ ಜನರಿಗೆ ಧರ್ಮಬೋಧನೆ ಮಾಡುವುದು ಸರಿಯಲ್ಲ. ಇದನ್ನು ನಾವು ಸಹಿಸುವುದಿಲ್ಲ ಎಂದು ರಕ್ಷಾ ರಾಮಯ್ಯ ಎಚ್ಚರಿಕೆ ನೀಡಿದರು.

Tags: Basavaraj BommaiBJPCovid 19Rakshaನರೇಂದ್ರ ಮೋದಿಬಿಜೆಪಿ
Previous Post

ಬಂಗಾರಪ್ಪ ಸಹೋದರರ ಕುಬಟೂರು ಮಾತುಕತೆ ಮತ್ತು ಸಿದ್ದರಾಮಯ್ಯ ಭೇಟಿ

Next Post

ನಮ್ಮ‌ ಸಾರ್ವಜನಿಕ ವಲಯದ ಶಾಲಾ ವ್ಯವಸ್ಥೆಯನ್ನು ತುರ್ತಾಗಿ ವಿಸ್ತರಿಸುವ ಅಗತ್ಯವಿದೆ!

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ನಮ್ಮ‌ ಸಾರ್ವಜನಿಕ ವಲಯದ ಶಾಲಾ ವ್ಯವಸ್ಥೆಯನ್ನು ತುರ್ತಾಗಿ ವಿಸ್ತರಿಸುವ ಅಗತ್ಯವಿದೆ!

ನಮ್ಮ‌ ಸಾರ್ವಜನಿಕ ವಲಯದ ಶಾಲಾ ವ್ಯವಸ್ಥೆಯನ್ನು ತುರ್ತಾಗಿ ವಿಸ್ತರಿಸುವ ಅಗತ್ಯವಿದೆ!

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada