• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಳೆಯ ಅಬ್ಬರಕ್ಕೆ ಕಣ್ಣೀರಾದ ದೇವರನಾಡು!

Any Mind by Any Mind
October 18, 2021
in ದೇಶ
0
ಮಳೆಯ ಅಬ್ಬರಕ್ಕೆ ಕಣ್ಣೀರಾದ ದೇವರನಾಡು!
Share on WhatsAppShare on FacebookShare on Telegram

ಕೇರಳದಲ್ಲಿ ಮಳೆಯ ಅಬ್ಬರ ಜೋರಾಗಿದೆ. ೨೦೧8 ರಲ್ಲಿ ನಡೆದ ಪ್ರವಾಹದ ಕಹಿ ಘಟನೆಯು ಜನರ ಮನಸ್ಸಿನಿಂದ ಮಾಸಿ ಹೋಗದ ಸಮಯದಲ್ಲಿ ಇದೀಗ ಪುನಃ ಪ್ರವಾಹದ ಭೀತಿ ಎದುರಾಗಿದೆ. ಕೇರಳದಲ್ಲಿ ಪ್ರವಾಹ ಭೀತಿಯಿಂದ ಹಲವಾರು ಮನಕಲುಕುವ ಘಟನೆಗಳು ಕಣ್ಣಮುಂದಿವೆ.

ADVERTISEMENT

ವಾಯುಭಾರ ಕುಸಿತದಿಂದಾಗಿ ಸಂಭವಿಸುತ್ತಿರುವ ಭೀಕರ ಮಳೆಗೆ, ಕೇರಳದ ಇಡುಕ್ಕಿ ಜಿಲ್ಲೆಯ ಕೊಕಗಕಯಾರ್ ಗ್ರಾಮದಲ್ಲಿ ಜಲ ಪ್ರಳಯ ಉಂಟಾಗಿದೆ. ಈ ಘಟನೆಯಲ್ಲಿ ತಾಯಿ ಹಾಗೂ ಮಗ ಇಬ್ಬರೂ ನಾಪತ್ತೆಯಾಗಿದ್ದರು. ಭೂಕುಸಿತದಿಂದ ಮಣ್ಣುಪಾಲಾದ ಇಬ್ಬರನ್ನು ಹುಡುಕಿದರೂ ಸಿಕ್ಕಿರಲಿಲ್ಲ, ಆದರೆ, ಸೋಮವಾರದಂದು ತಾಯಿ ಹಾಗೂ ಮಗ ಪರಸ್ಪರ ಅಪ್ಪಿಕೊಂಡಂತೆ ಮಣ್ಣಿನಡಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ತಾಯಿ ತನ್ನ ಮಗನನ್ನು ಬಿಗಿದಪ್ಪುವಂತ ಸ್ಥಿತಿಯಲ್ಲಿ ಕಂಡುಬಂದಿದೆ. ಮೃತಪಟ್ಟವರನ್ನು ಪೌಸಿಯಾ ಮತ್ತು ಅಮೀನ್ ಎಂದು ಗುರುತಿಸಲಾಗಿದೆ. ಈ ದೃಶ್ಯ ದೇವರ ನಾಡಿನಲ್ಲಿ ಘನಘೋರ ಸ್ಥಿತಿಯನ್ನು ಬಿಂಬಿಸುತ್ತಿದೆ. ಇಂತಹ ಪ್ರಕೃತಿಯ ಮುನಿಸಿನಿಂದ ಕೇರಳದ ಜನರನ್ನು ಕಂಗಾಲಾಗಿಸಿದೆ.

ಕೇರಳದ ಕೂಟ್ಟಿಕಲ್ ನಲ್ಲಿ ಮನೆಯೊಂದು ಕೊಚ್ಚಿಹೋಗಿದ್ದು, ಮೂವರು ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ ಆರು ಜನರು ಮೃತಪಟ್ಟಿದ್ದಾರೆ. ಆ ಪೈಕಿ ಮೂವರ ಮೃತದೇಹಗಳು ಶನಿವಾರ ಸಿಕ್ಕಿದ್ದರೆ, ಉಳಿದವರ ಮೃತದೇಹಗಳು ಭಾನುವಾರ ಪತ್ತೆಯಾಗಿವೆ. ಕೆಸರಿನಲ್ಲಿ ಹೂತು ಹೋದ ಮೂರು ಮಕ್ಕಳ ಮೃತದೇಹಗಳು ಪರಸ್ಪರ ಕೈ ಹಿಡಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದವು.

ಭಾರೀ ಮಳೆಗೆ ಕಾರಣವೇನು?


ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತವುಂಟಾಗಿತ್ತು, ಈ ಹಿನ್ನಲೆ ಕೇರಳದಲ್ಲಿ ಭಾರಿ ಮಳೆಯಾಗಿತ್ತು. ಇದರಿಂದಾಗಿ ಅಪಾರ ಪ್ರಮಾಣದ ಆಸ್ತಿ,ಪಾಸ್ತಿ ನಾಶವಾಗಿದೆ.
ಮೊದಲ ಬಾರಿಗೆ 2018 ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ೪೦೮೩೦ ಜನ ಮೃತಪಟ್ಟಿದ್ದಾರೆ, ೧೪೯೦ ಜನರು ಕಾಣೆಯಾಗಿದಾರೆ. ನಲ್ವತ್ತು ಸಾವಿರ ಕೋಟಿ ರುಪಾಯಿ ಆಸ್ತಿಪಾಸ್ತಿ ನಷ್ಟವಾಗಿತ್ತು.

ರಾಜ್ಯದಲ್ಲಿ ಒಟ್ಟು ಹದಿನಾಲ್ಕು ಜಿಲ್ಲೆಗಳಿದ್ದು, ಐದು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಟ್ಟಾಯಾಂ, ಪಥನಮ್ತಿಿಟ್ಟಾ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶ್ಯೂರ್ ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹವಾಮಾನ ಇಲಾಖೆ ಹನ್ನೊಂದು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಬಹುತೇಕ ಕೇರಳ ರಾಜ್ಯದಾದ್ಯಂತ ಪ್ರವಾಹ ಸೃಷ್ಟಿಯಾಗಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ಪ್ರವಾಹದ ತೀವ್ರತೆಯನ್ನು ಅನಾವರಣಗೊಳಿಸುತ್ತಿದೆ. ರಸ್ತೆಗಳಲ್ಲಿ ನೀರು ಹೊಳೆಯಂತೆ ಹರಿಯುತ್ತಿದ್ದು, ವಾಹನ ಸವಾರರು ರಸ್ತೆ ದಾಟಲು ಪರದಾಡುತ್ತಿದ್ದಾರೆ. KSRTC (ಕೇರಳ ಸಾರಿಗೆ) ಬಸ್ಗಳು ನೆರೆಯಲ್ಲಿ ಸಿಲುಕಿದ್ದು, ಪ್ರಯಾಣಿಕರು ಹರಸಾಹಸಪಟ್ಟು ಹೊರ ಬರುತ್ತಿರುವುದು ವಿಡಿಯೋಗಳಲ್ಲಿ ಚಿತ್ರಣಗೊಂಡಿವೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಪ್ರಧಾನಿ ನರೇಂದ್ರ ಮೋದಿಯವರೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ ಪ್ರಾಕೃತಿಕ ವಿಕೋಪದ ಕುರಿತಾಗಿ ಅವಲೋಕನವನ್ನು ಮಾಡಿದ್ದಾರೆ. ಭೂಕುಸಿತದಿಂದ ಹಲವಾರು ಜನರು ಪ್ರಾಣವನ್ನು ಕಳೆದುಕೊಂಡಿರುವುದು ಬೇಸರ ಸಂಗತಿಯಾಗಿದೆ. ಗಾಯಾಳುಗಳು ಮತ್ತು ಮಳೆ ಪ್ರವಾಹದಿಂದ ಸಂಕಷ್ಟಕ್ಕೀಡಾದವರಿಗೆ ನೆರವಾಗಲು ಅಧಿಕಾರಿಗಳು ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲರ ಸುರಕ್ಷತೆ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Spoke to Kerala CM Shri @vijayanpinarayi and discussed the situation in the wake of heavy rains and landslides in Kerala. Authorities are working on the ground to assist the injured and affected. I pray for everyone’s safety and well-being.

— Narendra Modi (@narendramodi) October 17, 2021

ಪ್ರತೀ ಬಾರಿಯೂ ಮಳೆಗಾಲದ ಸಂದರ್ಭದಲ್ಲಿ ನೆರೆ ಬಂದು ಜನರು ಮನೆ ಮಠಗಳನ್ನು ಕಳೆದುಕೊಳ್ಳುವ ಘಟನೆಗಳು ಪುನರಾವರ್ತನೆಯಾಗುತ್ತಿದೆ. ಕಳೆದ ವರ್ಷಗಳ ಹಿಂದೆಯೂ ಕೇರಳದಲ್ಲಿ ಉಂಟಾದ ಪ್ರವಾಹದಿಂದ ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿತ್ತು. ಅದೆಲ್ಲಿ ನೋಡಿದರೂ ಗುಡ್ಡ ಕುಸಿತ, ಪಶು, ಪಕ್ಷಿಗಳ ಮಾರಣ ಹೋಮವೇ ನಡೆದು ಹೋದಂತಹ ಪರಿಸ್ಥಿತಿ ಕಂಡುಬಂದಿತ್ತು.
ಸರ್ಕಾರವು ನೆರೆಪ್ರದೇಶಗಳಿಗೆ ವಾಸಿಸಲು ಯೋಗ್ಯವಾದ ವಾಸಸ್ಥಳ ಹಾಗೂ ದಿನಸಿ ಸಾಮಾಗ್ರಿಗಳನ್ನು ನೀಡಿತ್ತು. ಆದರೂ ಕಲವು ನಿರಾಶ್ರಿತರಾಗಿಯೇ ಉಳಿದುಕೊಂಡಿದ್ದರು. ಈ ಭಾರಿಯೂ ಕೇರಳದಲ್ಲಿ ಪ್ರವಾಹ ಉಂಟಾಗಿದ್ದು, ಜನರ ಪರದಾಡುವ ಸ್ಥಿತಿ ಉಂಟಾಗಿದೆ. ಇಂತಹ ಪ್ರವಾಹ ಪರಿಸ್ಥಿತಿಯಿಂದ ಕೇರಳದದ ಜನರು ಆತಂಕದಿಂದ ದಿನಕಳೆಯುತ್ತಿದ್ದಾರೆ.

Tags: BJPCongress PartyCovid 19FloodFlood ComepnsationFlood ReliefFlood Rlief Fundflood situationFlood Vicitimsflood victimsfloodsgovt of keralaKeralaKerala FloodsKerala GovernmentKerala Stateಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

Next Post

ʻಅನೈತಿಕ ಪೊಲೀಸ್‌ʼಗಿರಿಗೆ ಸಮಜಾಯಿಷಿ: ಸಿಎಂ ಬೊಮ್ಮಾಯಿಗೆ ನೋಟಿಸ್‌

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ʻಅನೈತಿಕ ಪೊಲೀಸ್‌ʼಗಿರಿಗೆ ಸಮಜಾಯಿಷಿ: ಸಿಎಂ ಬೊಮ್ಮಾಯಿಗೆ ನೋಟಿಸ್‌

ʻಅನೈತಿಕ ಪೊಲೀಸ್‌ʼಗಿರಿಗೆ ಸಮಜಾಯಿಷಿ: ಸಿಎಂ ಬೊಮ್ಮಾಯಿಗೆ ನೋಟಿಸ್‌

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada