• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆ್ಯಪ್ ಆಧಾರಿತ ಡಿಜಿಟಲ್ ಪ್ಲಾಟ್ಫಾರ್ಮ್ ನೌಕರರಿಗೂ ಇನ್ನು ಮುಂದೆ ಸಿಗಲಿದೆ ವಾರದ ರಜೆ!

ಫಾತಿಮಾ by ಫಾತಿಮಾ
October 26, 2021
in ದೇಶ
0
ಆ್ಯಪ್ ಆಧಾರಿತ ಡಿಜಿಟಲ್ ಪ್ಲಾಟ್ಫಾರ್ಮ್ ನೌಕರರಿಗೂ ಇನ್ನು ಮುಂದೆ ಸಿಗಲಿದೆ ವಾರದ ರಜೆ!
Share on WhatsAppShare on FacebookShare on Telegram

ಡಿಜಿಟಲ್ ಮಾರ್ಕೆಟಿಂಗ್ ಮತ್ತು ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಪ್ರವರ್ಧಮಾನಕ್ಕೆ ಬಂದ ನಂತರ ಗ್ರಾಹಕರ ಶಾಪಿಂಗ್ ಬೆರಳ ತುದಿಯಲ್ಲೇ ಇರುವಂತಾಗಿದೆ. Uberಗಳಂತಹ ಪ್ರಯಾಣ ಸೇವೆ ಒದಗಿಸುವ ಸಂಸ್ಥೆಗಳಾಗಿರಬಹುದು, ಅಮೆಜಾನ್‌ನಂತಹ ಬೃಹತ್ ಆನ್‌ಲೈನ್ ಶಾಪಿಂಗ್ ಸೆಂಟರ್‌ಗಳೇ ಇರಬಹುದು ಅಥವಾ ಜೊಮ್ಯಾಟೋ, ಸ್ವಿಗ್ಗಿಯಂತಹ ಆಹಾರ ವಸ್ತುಗಳನ್ನು ಮನೆಗೆ ತಲುಪಿಸುವ ಸಂಸ್ಥೆಗಳೇ ಇರಬಹುದು, ಗ್ರಾಹಕರ ಸಂತೃಪ್ತಿ, ಅನುಕೂಲಗಳನ್ನೇ ಗುರಿಯಾಗಿಸಿ ಕಾರ್ಯನಿರ್ವಹಿಸುತ್ತಿವೆ.

ADVERTISEMENT

ಆದರೆ ಇಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮಾಡುವ ಕೆಲಸಗಾರರ ಬದುಕು ಅಷ್ಟು ಸುಲಭವಲ್ಲ. ಬೇಕಾದಾಗ ಮಾತ್ರ ಕೆಲಸ ಮಾಡುವ ಅನುಕೂಲ ಅವರಿಗೆ ಇದ್ದರೂ ಸರಿಯಾದ ವೇತನ, ಹಕ್ಕುಗಳು ಮತ್ತು ಬೇರೆ ಕೆಲಸಗಾರರಿಗೆ ಇರುವ ಅನುಕೂಲಗಳು ಸಿಗುವುದಿಲ್ಲ . ತಮ್ಮ ಕೆಲಸಗಾರರನ್ನು ‘ಸ್ವಯಂ ಉದ್ಯೋಗಿ ಗುತ್ತಿಗೆದಾರರು’ ಎಂದು ವರ್ಗೀಕರಿಸುವ ಮೂಲಕ ಉದ್ಯೋಗದಾತರು ಅವರ ಜವಾಬ್ದಾರಿಗಳಿಂದ ಜಾಣತನದಿಂದ ನುಣುಚಿಕೊಳ್ಳುವ ಅವಕಾಶವಿದೆ .

ಈ ಕೆಲಸಗಾರರಿಗೆ ಪಿಂಚಣಿ, ಅನಾರೋಗ್ಯ ವೇತನ, ರಜೆಯ ಹಕ್ಕು ಅಥವಾ ಹೆರಿಗೆ ರಜೆ‌ ದೊರೆಯುವುದಿಲ್ಲ.  ಈ ಕೆಲಸಗಾರರಿಗೆ ಗ್ರಾಹಕರು ಕಂಪೆನಿಗೆ ನೀಡುವ ಆರ್ಡರ್‌ನ್ನು ಅವಲಂಬಿಸಿ ಕಮಿಷನ್ ಪಾವತಿಸಲಾಗುತ್ತದೆ. ಅಂದರೆ ಅನೇಕ ಜನರು ಗಂಟೆಯ ಕನಿಷ್ಠ ವೇತನಕ್ಕಿಂತ ಕಡಿಮೆ ಗಳಿಸುತ್ತಿದ್ದಾರೆ ಮತ್ತು ಆರ್ಥಿಕ ಭದ್ರತೆ ಇಲ್ಲವೇ ಇಲ್ಲ ಅನ್ನಬಹುದು.

ಒಟ್ಟಾರೆಯಾಗಿ‌ ಅಗತ್ಯವಾದ ಹಣಕಾಸಿನ ಖಾತರಿಗಳು, ಉದ್ಯೋಗ ಭದ್ರತೆ, ಉದ್ಯೋಗ ಹಕ್ಕುಗಳು ಇಲ್ಲದಿರುವುದು ಕೆಲಸದ ಸಂರಚನೆಯಲ್ಲಿನ ಒತ್ತಡ ದೈಹಿಕ ಮತ್ತು ಮಾನಸಿಕ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಕರ್ನಾಟಕವೊಂದರಲ್ಲೇ 1.6 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ.

ಇದೀಗ ಉದ್ಯೋಗದ ವ್ಯಾಖ್ಯಾನವನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ ಕಾರ್ಮಿಕ ಇಲಾಖೆಯು ಅಸಂಘಟಿತ ವಲಯದ ಕಾರ್ಮಿಕರ ಸಮೀಕ್ಷೆಯನ್ನು ನಡೆಸಲು ಯೋಜಿಸುತ್ತಿದೆ. ಇದರಲ್ಲಿ ಮೊಬೈಲ್ ಆ್ಯಪ್ ಆಧಾರಿತ ಕ್ಯಾಬ್ ಪ್ಲಾಟ್‌ಫಾರ್ಮ್‌ಗಳು, ವಿತರಣಾ ಏಜೆಂಟ್‌ಗಳು ಮತ್ತು ಆಹಾರ ವಿತರಣಾ ಏಜೆಂಟ್‌ಗಳು ಸಾಪ್ತಾಹಿಕ ರಜೆ ಮತ್ತು ಕನಿಷ್ಠ ವೇತನದಂತಹ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾನೂನು ರೂಪಿಸಲಾಗುತ್ತದೆ.

ಉದ್ಯೋಗಿಗಳಿಗೆ ನ್ಯಾಯಯುತವಾದ ಹಕ್ಕು ದೊರೆಯುವುದನ್ನು ಖಾತ್ರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಉದ್ಯೋಗ ನೀತಿಯ ಅಡಿಯಲ್ಲಿ  ತಾತ್ಕಾಲಿಕ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್ ಕೆಲಸಗಾರರು ಹಾಗೂ ಅಂಗನವಾಡಿ ಕಾರ್ಯಕರ್ತರ ಒಳಗೊಂಡಂತೆ ಹೊಸ ಸುಧಾರಣಾ ನೀತಿಗಳನ್ನು ಹೊರತರಲು ಉದ್ದೇಶಿಸಿದೆ.  ಈ ನೀತಿಯ ಅಡಿಯಲ್ಲಿ ಕಾರ್ಮಿಕರು ಕನಿಷ್ಟ ವೇತನ, ವಾರದ ರಜೆ ಮತ್ತು ಇತರ ಎಲ್ಲಾ ಹಕ್ಕುಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಭವಿಷ್ಯನಿಧಿ ಮತ್ತು ಇಎಸ್‌ಐ ಸೌಲಭ್ಯದಂತಹ ಇತರ ಪ್ರಯೋಜನಗಳನ್ನೂ ಪಡೆಯಲಿದ್ದಾರೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿರುವ ರಾಜ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ “ಕೇಂದ್ರವು ಇನ್ನೂ ನೀತಿಯನ್ನು ಅಂತಿಮಗೊಳಿಸದಿದ್ದರೂ, ಕರ್ನಾಟಕವು ಮೊಬೈಲ್ ಆಧಾರಿತ ಟ್ಯಾಕ್ಸಿ / ಆಟೋರಿಕ್ಷಾ ಚಾಲಕರು, ಡೆಲಿವರಿ ಏಜೆಂಟ್‌ಗಳು ಮತ್ತು ಆಹಾರದ ಜಿಲ್ಲಾವಾರು ಸಮೀಕ್ಷೆಯನ್ನು ನಡೆಸಲಿದೆ” ಎಂದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಕ್ಟೋಬರ್ 30ರ ಉಪಚುನಾವಣೆ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಹೇಳಿದ್ದಾರೆ.  ಕಳೆದ ತಿಂಗಳು ಪ್ರಾರಂಭಿಸಲಾದ ಅಸಂಘಟಿತ ಕಾರ್ಮಿಕರ ಇ-ಶ್ರಮ್ ಪೋರ್ಟಲ್‌ನಲ್ಲಿ ಕರ್ನಾಟಕದ 7 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ. 

Previous Post

ಲಸಿಕೆ ತಯಾರಕ ಕಂಪನಿಗಳೊಂದಿಗೆ ಮೋದಿ ಮಹತ್ವದ ಸಭೆ; ಭಾರತ ವ್ಯಾಕ್ಸಿನ್ ಮಾಡಿದೆ ಎಂದ ಪ್ರಧಾನಿ

Next Post

ತೈಲ ಬೆಲೆ ಏರಿಕೆ ಖಂಡಿಸಿ ಲಾರಿ ಮಾಲೀಕ & ಚಾಲಕರ ಸಂಘದಿಂದ ಮುಷ್ಕರದ ಎಚ್ಚರಿಕೆ!

Related Posts

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
0

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

ಸೈನಿಕ ತಂದೆಯ ಸಾವಿನ ಕೆಲವೇ ಹೊತ್ತಿನಲ್ಲಿ ಮಗಳ ಜನನ: ಕೊಲ್ಲಾಪುರದಲ್ಲಿ ಹೃದಯವಿದ್ರಾವಕ ಘಟನೆ

January 12, 2026
WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

January 12, 2026
Next Post
ತೈಲ ಬೆಲೆ ಏರಿಕೆ ಖಂಡಿಸಿ ಲಾರಿ ಮಾಲೀಕ & ಚಾಲಕರ ಸಂಘದಿಂದ ಮುಷ್ಕರದ ಎಚ್ಚರಿಕೆ!

ತೈಲ ಬೆಲೆ ಏರಿಕೆ ಖಂಡಿಸಿ ಲಾರಿ ಮಾಲೀಕ & ಚಾಲಕರ ಸಂಘದಿಂದ ಮುಷ್ಕರದ ಎಚ್ಚರಿಕೆ!

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada