• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಲಿಕಾನ್ ಸಿಟಿಗೆ ಮತ್ತೆ ಕಂಟಕವಾಗುತ್ತಾ ರೂಪಾಂತರಿ AY.4.2 ವೈರಸ್?

Any Mind by Any Mind
October 26, 2021
in ಕರ್ನಾಟಕ
0
ಸಿಲಿಕಾನ್ ಸಿಟಿಗೆ ಮತ್ತೆ ಕಂಟಕವಾಗುತ್ತಾ ರೂಪಾಂತರಿ AY.4.2 ವೈರಸ್?
Share on WhatsAppShare on FacebookShare on Telegram

ದೇಶದಾದ್ಯಂತ ಕರೋನಾ ಎಂಬ ಮಹಾಮಾರಿಯಿಂದ ಬೇಸತ್ತ ಜನರು ನಿಟ್ಟುಸಿರು ಬಿಡುವ ಹೊತ್ತಿಗೆ ರಾಜ್ಯದಲ್ಲಿ ಮತ್ತೆ ಕರೋನಾ ರೂಪಾಂತರಿ AY.4.2 ಎಂಬ ಹೊಸ ವೈರೆಸ್ ಪತ್ತೆಯಾಗಿದೆ.

ADVERTISEMENT

ರಾಜ್ಯದಲ್ಲಿ ಏಳು ಮಂದಿಯಲ್ಲಿ AY.4.2 ಕಾಣಿಸಿಕೊಂಡಿದ್ದು, ಬೆಂಗಳೂರಿನಲ್ಲಿಯೇ ಮೂರು ಜನರಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ರೂಪಾಂತರಿ ಕರೋನಾ ಡೆಲ್ಟಾಗಿಂತ ಅತೀ ವೇಗವಾಗಿ ಹರಡುತ್ತಿದೆ.

ಕರೋನಾ ಎಂಬ ಮಹಾಮಾರಿಯಿಂದ ದೇಶದ ಪರಿಸ್ಥಿತಿಯು ಅಧೋಗತಿಯಾಗಿದ್ದು, ವರ್ಷಗಳಿಂದಲೇ ಜನರು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಪುನಃ ಚೇತರಿಸಿಕೊಳ್ಳಲು ಸಂದರ್ಭದಲ್ಲಿಯೇ ಹೊಸ ರೂಪಾಂತರಿ ವೈರೆಸ್ ಜನರ ಜೀವ ಹಿಂಡಲು ತಯಾರಾಗಿರುವುದು ರಾಜ್ಯದ ಜನರಿಗೆ ಭಯ ಶುರುವಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ , ರಾಜ್ಯದಲ್ಲಿ ಮೂರನೇ ಅಲೆ ಬರುವ ಎಲ್ಲಾ ಸಾಧ್ಯತೆಗಳಿವೆ. ಈಗಾಗಲೇ ಪತ್ತೆಯಾದ AY.4.2 ನಿಂದ ಯಾರೂ ಮೃತಪಟ್ಟಿಲ್ಲ ಎಂದಿದ್ದಾರೆ.

ಬ್ರಿಟನ್, ಯೂರೋಪ್, ರಷ್ಯಾ, ಅಮೆರಿಕದಲ್ಲಿ ‘AY.4.2 ರೂಪಾಂತರಿಯಿಂದ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಭಾರತದಲ್ಲಿಯೂ ಕೋವಿಡ್-19 ಜಿನೋಮಿಕ್ ಕಣ್ಗಾವಲು ಯೋಜನೆ ಹೈ ಅಲರ್ಟ್ ನಲ್ಲಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ಹೆಚ್ಚು ಮಾದರಿಗಳನ್ನು ಸಂಗ್ರಹಿಸಿಕೊಂಡು ಈ ಮೂಲಕ ಎವೈ 4.2 ನಿಂದ ಬರುವ ಸೋಂಕುಗಳ ಪತ್ತೆ ಸಾಧ್ಯತೆಯನ್ನು ತಪ್ಪಿಸುವುದಿಲ್ಲ ಇದರಿಂದ ಸೋಂಕಿತರಾದವರನ್ನು ತ್ವರಿತವಾಗಿ ಗುರುತಿಸಲಾಗುತ್ತದೆ ಎಂದು ಐಎನ್ ಎಸ್ಎ ಸಿಒಜಿಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಷ್ಯಾದಲ್ಲಿ 37 ಸಾವಿರಕ್ಕೂ ಹೆಚ್ಚು ‘AY.4.2 ‘ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ನವೆಂಬರ್ 7ರವರೆಗೆ ಕಚೇರಿಗಳಿಗೆ ತೆರಳದಂತೆ ಸೂಚನೆ ನವೆಂಬರ್ 7ರ ತನಕ ಕೆಲಸಕ್ಕೆ ಹೋಗದಂತೆ ಆದೇಶ ಹೊರಡಿಸಲಾಗಿದೆ.

ಡೆಲ್ಟಾದ ಹೊಸ ಪ್ರಭೇದ AY.4.2 ವೈರಸ್

AY.4.2 ರೂಪಾಂತರವು ಡೆಲ್ಟಾ ರೂಪಾಂತರಕ್ಕಿಂತ ಗಣನೀಯವಾಗಿ ಹೆಚ್ಚು ಹರಡುತ್ತಿದ್ದು, AY.4.2 ವೈರಸ್ ಡೆಲ್ಟಾದಿಂದ ಉಂಟಾಗಿರುವ ರೂಪಾಂತರಿ ತಳಿಯಾಗಿದ್ದು, ಇದರ ಹರಡುವಿಕೆ ಶೇ 6 ರಷ್ಟಿದೆ ಎಂದು ಆರೋಗ್ಯ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. ‘ಡೆಲ್ಟಾ ಪ್ರಧಾನ ರೂಪಾಂತರವಾಗಿದೆ . AY.4.2 ಎಂದು ಹೊಸದಾಗಿ ಗೊತ್ತುಪಡಿಸಿದ ಡೆಲ್ಟಾ ಉಪ ವಂಶವು ಇಂಗ್ಲೆಂಡಿನಲ್ಲಿ ವಿಸ್ತರಿಸುತ್ತಿರುವುದನ್ನು ಗುರುತಿಸಲಾಗಿದೆ ಎಂದು ವರದಿ ಹೇಳಿದೆ.

ಬ್ರಿಟನ್ ನಲ್ಲಿ AY.4.2 ರೂಪಾಂತರಿಯನ್ನು “ವೇರಿಯೆಂಟ್ ಅಂಡರ್ ಇನ್ವೆಸ್ಟಿಗೇಷನ್” ಎಂದು ಘೋಷಿಸಲಾಗಿದೆ. . ಈಗಾಗಲೇ, 68,000 ಸ್ಯಾಂಪಲ್ ಗಳನ್ನು ಕೋವಿಡ್-19 ಸೋಂಕಿತರಿಂದ ಸಂಗ್ರಹಿಸಲಾಗಿದ್ದು, ಜಿನೋಮ್ ಸೀಕ್ವೆನ್ಸಿಂಗ್ ಗೆ ಒಳಪಟ್ಟಿದೆ. ಕಳೆದ ವಾರ ಬ್ರಿಟನ್ ಆರೋಗ್ಯ ಭದ್ರತಾ ಏಜೆನ್ಸಿ ಡೆಲ್ಟಾ ರೂಪಾಂತರಿಯ ಸಬ್ ಟೈಪ್ ಕೊರೋನಾ ವೈರಾಣು ದೇಶದಲ್ಲಿ ಹರಡುತ್ತಿರುವುದನ್ನು ಘೋಷಿಸಿತ್ತು.

ಏನಿದು ಜಿನೋಟಿಕ್ ಸೀಕ್ವೆನ್ಸಿಸ್?

ಎರಡು ಅಥವಾ ಮೂರು ಬಾರಿ ಕರೋನಾ ಕಂಡುಬಂದ ವ್ಯಕ್ತಿಗಳನ್ನು ರಕ್ತಪರೀಕ್ಷೆಗೆ ಒಳಪಡಿಸಲಾಗುತ್ತದೆ. ಈ ವ್ಯಕ್ತಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನ ನಡೆಸುವ ಪ್ರಕ್ರೀಯೆಯನ್ನು ಜಿನೋಟಿಕ್ ಸೀಕ್ವೆನ್ಸಿಸ್ ಪರೀಕ್ಷೆ ಎಂದು ಕರೆಯಲಾಗುತ್ತದೆ.

ಕರೊನಾ ಬಿಕ್ಕಟ್ಟಿನ ಕ್ರಮಗಳ ಕುರಿತು ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡುವ ತಾಂತ್ರಿಕ ಸಲಹಾ ಸಮಿತಿಯು ಈ ವರ್ಷ ಜೂನ್ ನಲ್ಲಿ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೊಸೈನ್ಸಸ್ ನ ವೈರಾಲಜಿಯ ಮಾಜಿ ಪ್ರಾಧ್ಯಾಪಕ ಸೇರಿದಂತೆ ಎಂಟು ಸದಸ್ಯರ ಜೀನೋಮಿಕ್ ಸರ್ವೇಲೆನ್ಸ್ ಕಮಿಟಿಯನ್ನು ರಚನೆ ಮಾಡಿತ್ತು. ಇಲ್ಲಿ ಕೊರೊನಾ ಪೀಡಿತ ವ್ಯಕ್ತಿಗಳ ಮಾದರಿಗಳಲ್ಲಿ(ಸ್ಯಾಂಪಲ್) ಜೀನ್ ಅನುಕ್ರಮಗಳನ್ನು ಅಧ್ಯಯನ ಮಾಡಲು ಆದೇಶಿಸಲಾಗಿತ್ತು. ಇದರಿಂದ ಕೊರೋನಾ ರೋಗವನ್ನು ಪತ್ತೆಹಚ್ಚಲಾಗುತ್ತದೆ.

Tags: Basavaraj BommaiBJPCovid 19ಕರೋನಾಕರೋನಾ ವೈರಸ್‌ಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿರೂಪಾಂತರಿ AY.4.2ಸಿಲಿಕಾನ್ ಸಿಟಿ
Previous Post

ಕೋಪಗೊಂಡ ರೈತರನ್ನು ಸಹನೆಯಿಂದ ಎದುರಿಸಲು ಕರೆ; 2022ರ ಯುಪಿ ಚುನಾವಣೆ ಗೆಲ್ಲಲು ಬಿಜೆಪಿʼಯಿಂದ ಹೊಸ ರಣತಂತ್ರ

Next Post

ಆರ್ಯನ್ ಖಾನ್ ಕೇವಲ ಡ್ರಗ್ಸ್ ಗ್ರಾಹಕರಲ್ಲ, ಅಕ್ರಮ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ – ಹೈಕೊರ್ಟ್‌ಗೆ NCB ವರದಿ

Related Posts

Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
0

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ್ದನ್ನು ವಿರೋಧಿಸಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗೋಪಿನಾಥನ್ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್...

Read moreDetails

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
Next Post
ಆರ್ಯನ್ ಖಾನ್ ಕೇವಲ ಡ್ರಗ್ಸ್ ಗ್ರಾಹಕರಲ್ಲ, ಅಕ್ರಮ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ – ಹೈಕೊರ್ಟ್‌ಗೆ NCB  ವರದಿ

ಆರ್ಯನ್ ಖಾನ್ ಕೇವಲ ಡ್ರಗ್ಸ್ ಗ್ರಾಹಕರಲ್ಲ, ಅಕ್ರಮ ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ - ಹೈಕೊರ್ಟ್‌ಗೆ NCB ವರದಿ

Please login to join discussion

Recent News

Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada