• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜೆಡಿಎಸ್‌ ಮತ್ತು ನಮ್ಮ ಕುಟುಂಬದ ವಿರುದ್ಧ ಒಳಸಂಚು: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 26, 2021
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಜೆಡಿಎಸ್‌ ಬೆಳವಣಿಗೆಯನ್ನು ಸಹಿಸಲಾಗದೇ ಉಪ ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್‌ ನಾಯಕರು ಒಳಸಂಚು ಮಾಡಿ ನಮ್ಮ ಕುಟುಂಟ ಮತ್ತು ಜೆಡಿಎಸ್‌ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ADVERTISEMENT

ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಹೆಚ್ಡಿಕೆ; ತಮ್ಮ ವಿರುದ್ಧ ಟೀಕೆ ಟಿಪ್ಪಣಿ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಮೀರ್‌ ಅಹ್ಮದ್‌ ಮೇಲೆ ವಾಗ್ದಾಳಿ ನಡೆಸಿರಲ್ಲದೆ ಸಿದ್ದರಾಮಯ್ಯ ನನ್ನ ಬಗ್ಗೆ ನೇರವಾಗಿ ಮಾತನಾಡಲಾಗದೇ ಇನ್ನೊಬ್ಬರ ಮೂಲಕ ಮಾತನಾಡಿಸುತ್ತಿದ್ದಾರೆಂದು ದೂರಿದ್ದಾರೆ.

ರಾಜ್ಯದಲ್ಲಿ ನಡೆದ ಆಪರೇಷನ್‌ ಕಮಲ, ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಹಾಗೂ ಜಾತ್ಯತೀತ ಶಕ್ತಿಗಳು ದುರ್ಬಲವಾಗಿ ಬಿಜೆಪಿ ಪುಟಿದೇಳಲು ಸಿದ್ದರಾಮಯ್ಯ ಅವರೇ ನೇರ ಕಾರಣ; ರಾಜ್ಯದಲ್ಲಿ ಬಿಜೆಪಿ ಈ ಪ್ರಮಾಣದಲ್ಲಿ ಬೆಳೆಯಲು ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಆರೋಪಿಸಿದ್ದಾರೆ.

ಜತೆಗೆ; ತಮ್ಮ ಬಗ್ಗೆ ಕೀಳಾಗಿ ಟೀಕಿಸಿರುವ ಜಮೀರ್‌ ಅಹ್ಮದ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ; ಕೊಚ್ಚೆ ಮೇಲೆ ಕಲ್ಲು ಹಾಕಿ ಮೈಮೇಲೆ ಕೆಸರು ಹಾಕಿಕೊಳ್ಳಲಾರೆ ಎಂದು ತಿರುಗೇಟು ನೀಡಿದ್ದಾರೆ.

ಯಡಿಯೂರಪ್ಪ ಕೊಟ್ಟ ಸೂಟ್‌ʼಕೇಸ್‌ ಪಡೆದವರು ಯಾರು?

2008-13ರ ನಡುವಿನ ರಾಜಕೀಯ ಬೆಳವಣಿಗೆಗಳನ್ನು ಒಮ್ಮೆ ಮೆಲುಕು ಹಾಕಿ. ಆಪರೇಷನ್‌ ಕಮಲದ ಮೂಲಕ ತೆರವಾದ ಇಪ್ಪತ್ತು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಾಗ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಒಳಸಂಚು ರೂಪಿಸಿದ್ದರು. ಆಗ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಗೆ ಹಿನ್ನಡೆಯಾಗಿ ಎಲ್ಲಡೆ ಬಿಜೆಪಿಯೇ ಗೆದ್ದಿತ್ತು ಎಂದು ಹೆಚ್‌ಡಿಕೆ ಹೇಳಿದ್ದಾರೆ.

ತಮ್ಮ ಆತ್ಮೀಯ ಸ್ನೇಹಿತರೊಬ್ಬರನ್ನು ಯಡಿಯೂರಪ್ಪ ಅವರ ಬಳಿಗೆ ಕಳಿಸಿ ಸಿದ್ದರಾಮಯ್ಯ ಎಷ್ಟು ಕೋಟಿ ಪಡೆದುಕೊಂಡರು ಎಂಬುದು ಗೊತ್ತಿದೆ. ನನ್ನ ಬಗ್ಗೆ ಸೂಟ್‌ʼಕೇಸ್‌ ಆರೋಪ ಮಾಡಿಸುತ್ತಾರಲ್ಲಾ? ಇಪ್ಪತ್ತು ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಎಷ್ಟು ಕಡೆ ಗೆದ್ದಿತು ಆಗ? ಆಗ ಬಿಜೆಪಿ ಗೆಲುವಿನಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಬಹಳ ದೊಡ್ಡದು. ಯಡಿಯೂರಪ್ಪ ಅವರಿಂದ ಅವರು ಕೋಟ್ಯಂತರ ರೂಪಾಯಿ ಪಡೆದರು. ಯಾರು ಯಡಿಯೂರಪ್ಪ ಅವರ ಬಳಿ ಹೋಗಿ ಹಣ ತೆಗೆದುಕೋಂಡು ಬಂದರೋ ಅವರೇ ನನ್ನ ಬಳಿ ಈ ವಿಷಯವನ್ನು ಹತ್ತಾರು ಸಲ ಹೇಳಿದ್ದಾರೆ. ಎಷ್ಟು ಹಣ ತಂದಿವೀ ಅಂತ ಕೂಡ ಹೇಳಿದ್ದಾರೆ. ನಾನು ಜಾತ್ಯತೀತ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರ ನಿಜವಾದ ಜಾತ್ಯತೀತ ಬಣ್ಣ ಇದು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

2013ರಲ್ಲಿ ಕೇವಲ 40 ಸೀಟು ಪಡೆದಿದ್ದ ಬಿಜೆಪಿ ಅದೇ 2018ರಲ್ಲಿ 105 ಸೀಟು ಪಡೆಯಲು ಸಾಧ್ಯವಾಗಿದ್ದು ಹೇಗೆ? ಅದಾದ ಮೇಲೆ ಅಧಿಕಾರಕ್ಕೆ ಬಂದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಅಭದ್ರಗೊಳಿಸಿದ್ದು ಯಾರು? ಭೈರತಿ ಬಸವರಾಜು, ಮುನಿರತ್ನ, ಸೋಮಶೇಖರ್‌ ಅವರಂಥ ನಿಷ್ಠರು ಬಿಜೆಪಿಗೆ ಹೋಗಿದ್ದು ಯಾಕೆ? ಅಂದಿನ ಸಚಿವ ಜಾರ್ಜ್‌ ಮತ್ತು ಭೈರತಿ ಬಸವರಾಜ್‌ ನಡುವಿನ ಗಲಾಟೆಯನ್ನು ಸಿಎಲ್‌ಪಿ ನಾಯಕರಾಗಿಯೂ ಸರಿ ಮಾಡಲಿಲ್ಲ ಯಾಕೆ? ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿಗೆ ಉಂಟಾದ ಅಸಮಾಧಾನವನ್ನು ಶಮನ ಮಾಡಲಿಲ್ಲ, ಕಾರಣವೇನು? ಎಂದು ಸಿದ್ದರಾಮಯ್ಯ ಮೇಲೆ ಗುಡುಗಿದ್ದಾರೆ.

ಕಾರ್ಯಾಗಾರ ಆದ ಮೇಲೆ ಜೆಡಿಎಸ್‌ ಪಕ್ಷವು ಜನರಿಗೆ ಹತ್ತಿರವಾಗುತ್ತಿದೆ ಮಾತ್ರವಲ್ಲದೆ, ಉಪ ಚುಣಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡುತ್ತಿದೆ. ಇದನ್ನು ಸಹಿಸಿಕೊಳ್ಳುವುದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ನಾಯಕರಿಗೆ ಆಗುತ್ತಿಲ್ಲ. ಈ ಕಾರಣಕ್ಕೆ ನಮ್ಮ ಮೇಲೆ ಸೂಟ್‌ʼಕೇಸ್‌ ಆರೋಪ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.

ಆಡಿಯೋ ಬಿಡಲು ಸವಾಲು:

ಅವರು ನನ್ನ ಬಳಿ ಆಡಿಯೋ ಇದೆ ಎಂದು ಹೇಳಿದ್ದಾರಲ್ಲ, ಅದನ್ನು ಹೊರಗೆ ಬಿಡಲಿ. ಯಾವ ಯಾವ ಆಡಿಯೋಗಳು ಇವೆ ಎಂಬುದನ್ನು ಬಹಿರಂಗ ಮಾಡಲಿ ಎಂದು ಶಾಸಕ ಜಮೀರ್‌ಗೆ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇವರು ಈಗ ಫಾರೂಕ್‌ ಬಗ್ಗೆ ಮಾತನಾಡುತ್ತಿದ್ದಾರೆ, ಅದೇ ಫಾರೂಕ್‌ ಅವರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಕಾಂಗ್ರೆಸ್‌ ಅಭ್ಯರ್ಥಿ ಕೆಸಿ ರಾಮಮೂರ್ತಿ ಅವರನ್ನು ಗೆಲ್ಲಿಸಲು ಮಾತೃಪಕ್ಷಕ್ಕೆ ದ್ರೋಹ ಮಾಡಿದವರು ಯಾರು? ಈಗ ರಾಮಮೂರ್ತಿ ಅವರು ಎಲ್ಲಿದ್ದಾರೆ? ಇದಕ್ಕೆ ಉತ್ತರ ನೀಡಲಿ ಎಂದು ಹೆಚ್‌ಡಿಕೆ ಚಾಟಿ ಬೀಸಿದ್ದಾರೆ.

ಹೌದು. ನಾನು ಕಸ ತೆಗೆಸುತ್ತಿದ್ದೆ. ಓದುವಾಗಲೇ ಈ ಕೆಲಸ ಮಾಡುತ್ತಿದ್ದೆ. ಇದರಲ್ಲಿ ಅವಮಾನ ಏನಿದೆ? ಆಮೇಲೆ ನಮ್ಮ ತಂದೆಯವರು ಬೇಡವೆಂದರು. ಆ ಕೆಲಸವನ್ನು ಅಲ್ಲಿಗೇ ಬಿಟ್ಟೆ. ಆಮೇಲೆ ಓದು ಮುಗಿದ ಮೇಲೆ ಸಿನಿಮಾ ಹಂಚಿಕೆದಾರನಾದೆ. ನಾನು ನನ್ನ ಸ್ವಂತ ದುಡಿಮೆಯಿಂದ ಮೇಲೆ ಬಂದಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Tags: BJPCongress PartyCovid 19JDSJDS Karnatakaಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಂದಗಿ ಉಪಚುನಾವಣೆ : ದೇವಸ್ಥಾನಕ್ಕೆ ಭೇಟಿ ನೀಡಿ, ಜನರ ಜೊತೆ ಮಾತನಾಡಿದ ಎಚ್.ಡಿ ಕುಮಾರ್‌ ಸ್ವಾಮಿ

Next Post

ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಸಂವಿಧಾನ ದ್ರೋಹ?: ಸುಪ್ರೀಂಕೋರ್ಟ್ ಎದುರು 300ಕ್ಕೂ ಹೆಚ್ಚು ಪಿಟಿಷನ್!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಸಂವಿಧಾನ ದ್ರೋಹ?: ಸುಪ್ರೀಂಕೋರ್ಟ್ ಎದುರು 300ಕ್ಕೂ ಹೆಚ್ಚು ಪಿಟಿಷನ್!

ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಸಂವಿಧಾನ ದ್ರೋಹ?: ಸುಪ್ರೀಂಕೋರ್ಟ್ ಎದುರು 300ಕ್ಕೂ ಹೆಚ್ಚು ಪಿಟಿಷನ್!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada