• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ ಮರಗಳ ಮಾರಣಹೋಮ!

Any Mind by Any Mind
October 27, 2021
in ಕರ್ನಾಟಕ
0
ಬೆಂಗಳೂರಿನಲ್ಲಿ ಮರಗಳ ಮಾರಣಹೋಮ!
Share on WhatsAppShare on FacebookShare on Telegram

ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಪರಿಸರದ ಮೇಲಾಗುವ ದುಷ್ಟರಿಣಾಮಗಳು ಏರುಗತಿಯಲ್ಲಿ ಸಾಗುತ್ತಿವೆ. ಬೃಹತ್ ಗಾತ್ರದ ಕಟ್ಟಡಗಳು, ರಸ್ತೆ ಕಾಮಗಾರಿಗಳಿಗೆ ಮರಗಳನ್ನು ಕಡಿಯುತ್ತಿರುವುದು ಹೆಚ್ಚಾಗಿದೆ. ಬೆಂಗಳೂರಿನ ಸರ್ಜಾಪುರ-ಅತ್ತಿಬೆಲೆ ರಸ್ತೆ ಅಗಲೀಕರಣಕ್ಕೋಸ್ಕರ ರಸ್ತೆ ಬದಿಯಿರುವ ಸುಮಾರು ಎರಡೂವರೆ ಸಾವಿರಕ್ಕೂ ಅಧಿಕ ಮರಗಳನ್ನು ಕಡಿಯಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು ಮುಂದಾಗಿದ್ದು, ಈ ನಿರ್ಧಾರದ ಕುರಿತು ಪರಿಸರ ಕಾರ್ಯಕರ್ತರು ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ADVERTISEMENT

ಸರ್ಜಾಪುರ-ಅತ್ತಿಬೆಲೆ ರಸ್ತೆ ಅಗಲೀಕರಣಕ್ಕೆಂದು ಸುಮಾರು ಐದು ಸಾವಿರ ಮರಗಳನ್ನು ಕಡಿಯಲು ಪ್ರಸ್ತಾವನೆ ಮಾಡಲಾಗಿತ್ತು. ಈ ವಿಚಾರಕ್ಕೆ ಪರಿಸರವಾದಿಗಳಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದರ ನಡುವೆಯು ಕೆಆರ್‌ಡಿಸಿಎಲ್ ಈಗಾಗಲೇ 2300ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಿದೆ.

ಪರಿಸರವಾದಿಗಳು ಮರಗಳ ಉಳಿವಿಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಅಕ್ಟೋಬರ್‌ ೨೯ ರಂದು ಅರ್ಜಿಯ ವಿಚಾರಣೆ ನಿಗದಿಯಾಗಿತ್ತು, ಆದರೆ, ವಿಚಾರಣೆಗೆ ಮೊದಲೇ ಕೆಆರ್‌ಡಿಸಿಎಲ್ ಮರಗಳನ್ನು ಕಡಿಯಲು ಮುಂದಾಗಿದೆ. ಆದರೆ ಅರ್ಜಿಯ  ವಿಚಾರಣೆಯು ಇನ್ನೂ ನ್ಯಾಯಾಲಯದಲ್ಲಿರುವಾಗಲೇ ಕೆಆರ್‌ಡಿಸಿಎಲ್ ಮರ ಕಡಿಯಲು ಮುಂದಾಗಿರುವುದಕ್ಕೆ ಪರಿಸರವಾದಿಗಳು ಆಕ್ರೋಶಗೊಂಡಿದ್ದು, ಅರಣ್ಯ ಇಲಾಖೆಯ ಬೇಜಾವಾಬ್ದಾರಿತನಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮರವನ್ನು ಕಡಿದ ಒಂದು ಸಾಂಧಾರ್ಭಿಕ ಚಿತ್ರ

ಶಾಸಕರ ಮೋಜು ಮಸ್ತಿನ ಕ್ಲಬ್ ಗೆ ಮರಗಳ ನಾಶ

ಬೆಂಗಳೂರು ನಗರದಲ್ಲಿ ಮರಗಳ ನಾಶಕ್ಕೆ ಮುಂದಾಗಿರುವುದು ಇದೇ ಮೊದಲಲ್ಲ, ಕೆಲ ದಿನಗಳ ಹಿಂದೆ ನಗರದಲ್ಲಿರುವ ಐತಿಹಾಸಿಕ  ಬಾಲಬ್ರೂಯಿ ಅತಿಥಿಗೃಹವನ್ನು ಕೆಡವಿ ಶಾಸಕರ ಕ್ಲಬ್ ಆಗಿ ಪರಿವರ್ತಿಸಲು ನಿರ್ಧರಿಸಲಾಗಿತ್ತು. ಈ ಅತಿಥಿಗೃಹದ ಆವರಣದಲ್ಲಿ ನೂರಕ್ಕೂ ಹೆಚ್ಚು ಔಷದೀಯ ಸಸ್ಯಗಳು ಹಾಗೂ ಇತರ ಗಿಡಮೂಲಿಕೆಗಳಿದ್ದು, ಬಿಬಿಎಂಪಿ ಈ ಪ್ರದೇಶದಲ್ಲಿ ಕ್ಲಬ್ ನಿರ್ಮಾಣ ಮಾಡಲು ನಿರ್ಧರಿಸಿರುವುದನ್ನು ಪರಿಸರವಾದಿಗಳು ಖಂಡಿಸಿದ್ದರು. ಸದ್ಯಕ್ಕೆ ಈ ಪ್ರಕರಣ ಇತ್ಯರ್ಥಗೊಳ್ಳದೆ ಕೋರ್ಟ್ ಮುಂದಿದೆ.

ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ರಾತ್ರೋರಾತ್ರಿ ಮರಗಳಿಗೆ ಕೊಡಲಿ ಏಟು!

ನಗರದ ಹೃದಯ ಭಾಗದಲ್ಲಿರುವ ಶಿವಾನಂದ ವೃತ್ತದ ಬಳಿ ಸ್ಟೀಲ್ ಬ್ರಿಡ್ಜ್ ಕಾಮಗಾರಿಯಿಂದ ಈಗಾಗಲೇ 500 ರಿಂದ 600 ಮರಗಳ ಮಾರಣ ಹೋಮ ನಡೆದಿತ್ತು. ಈ ಕಾಮಗಾರಿಗೆ 2017ರ ಜೂನ್ನಲಲ್ಲೇ ಆದೇಶಿಸಲಾಗಿತ್ತು. ಆರಂಭದಲ್ಲಿ ಬಿಬಿಎಂಪಿ 19.85 ಕೋಟಿ ರೂ. ವೆಚ್ಚದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮತ್ತು 32 ಕೋಟಿ ರೂ. ಭೂ ಸ್ವಾಧೀನ ವೆಚ್ಚ ಸೇರಿ ಒಟ್ಟು 50 ಕೋಟಿಯಷ್ಟು ಗಾತ್ರದ ಯೋಜನೆಯನ್ನು ರೂಪಿಸಿತ್ತು. ಆದರೆ, ಯೋಜನೆಯ ಕಾರ್ಯರೂಪಕ್ಕೆ ನೂರಾರು ಮರಗಳ ನಾಶವಾಗಬಹುದು ಎಂದು ಅರಿತ ಸ್ಥಳೀಯರು ಹಾಗೂ ಪರಿಸರವಾದಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಕೊನೆಗೆ ನೂರಾರು ಮರಗಳ ಮಾರಣ ಹೋಮ ನಡೆದು ಸ್ಟೀಲ್ ಬ್ರಿಡ್ಜ್ ಗೆ ಬುನಾದಿ ಹಾಕಲಾಯಿತು.

ಬಾಲಬ್ರೂಯಿ ಅತಿಥಿಗೃಹದ ಸುತ್ತ ಔಷದಿಗೆ ಸಂಬಂಧಪಟ್ಟ ಗಿಡಗಳು ಹೆಚ್ಚಾಗಿವೆ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕಟ್ಟಿಸಿದ ಅತಿಥಿಗೃಹ ಇದಾಗಿದ್ದು, ಅಲ್ಲಿ ಹಲವು ಜಾತಿಯ ಪಕ್ಷಿಗಳು ಬರುತ್ತವೆ. ಇಂತಹ ಸಮೃದ್ಧವಾದ ಪರಿಸರವನ್ನು ಹಾಳುಕೆಡವುತ್ತಿರುವುದು ಬೇಸರ ತಂದಿತ್ತು, ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಶಾಸಕರ ಕ್ಲಬ್ ಮಾಡುತ್ತಿರುವುದು ನನಗೆ ಬೇಸರವಿಲ್ಲ ಆದರೆ, ಈ ಆವರಣದಲ್ಲಿರುವ ಮರಗಿಡಗಳನ್ನು ಕೆಡವಿ ಕ್ಲಬ್ ಆರಂಭಿಸುವುದು ಯಾಕೆ? ಎಂದು  ಬೆಂಗಳೂರು ಪರಿಸರ ಟ್ರಸ್ಟ್ ಅಧ್ಯಕ್ಷ ಯಲ್ಲಪ್ಪ ರೆಡ್ಡಿ ಪ್ರತಿಧ್ವನಿಗೆ ತಿಳಿಸಿದ್ದಾರೆ.

Tags: Bangalore Metro Rail CorporationBangloreBJPbmrclCovid 19Karnataka Governmentnamma metroTree Censustrees cutಕೋವಿಡ್-19ಬಿಜೆಪಿ
Previous Post

ಹಾನಗಲ್‌ ಉಪಚುನಾವಣೆ: ‘ಮತದಾರರಿಗೆ ಮೋಡಿ’ ಮಾಡಿದ ಕ್ಷೇತ್ರ ಉಸ್ತುವಾರಿ ಮುರುಗೇಶ್ ನಿರಾಣಿ

Next Post

ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್' ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada