• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೇಶದಲ್ಲಿ ₹150 ದಾಟಲಿದೆ ಪೆಟ್ರೋಲ್, ಡೀಸೆಲ್ ಬೆಲೆ : ಗೋಲ್ಡ್‌ಮನ್ ಸ್ಯಾಚ್ಸ್ ವರದಿ!

ಕರ್ಣ by ಕರ್ಣ
October 29, 2021
in ದೇಶ
0
ದೇಶದಲ್ಲಿ ₹150 ದಾಟಲಿದೆ ಪೆಟ್ರೋಲ್, ಡೀಸೆಲ್ ಬೆಲೆ : ಗೋಲ್ಡ್‌ಮನ್ ಸ್ಯಾಚ್ಸ್ ವರದಿ!
Share on WhatsAppShare on FacebookShare on Telegram

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನದತ್ತ ಏರುತ್ತಲೇ ಇದೆ. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಜನಸಾಮಾನ್ಯರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಗೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಈಗ ಪ್ರಸಿದ್ಧ ಜಾಗತಿಕ ಹಣಕಾಸು ಕಂಪನಿ ಗೋಲ್ಡ್‌ಮನ್ ಸ್ಯಾಚ್ಸ್ ಮುಂಬರುವ ಸಮಯದಲ್ಲಿ, ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 150 ರೂ. ತಲುಪಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ADVERTISEMENT

ಮುಂದಿನ ವರ್ಷದ ವೇಳೆಗೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 110 ಡಾಲರ್ ಏರಬಹುದು ಎಂದು ಗೋಲ್ಡ್‌ಮನ್ ಸ್ಯಾಚ್ಸ್ ಇತ್ತೀಚಿನ ತನ್ನ ವರದಿಯಲ್ಲಿ ಹೇಳಿದೆ. ಪ್ರಸ್ತುತ, ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 85 ಡಾಲರ್‌ನಷ್ಟಿದೆ. ಹೀಗಾಗಿ, ಬ್ರೆಂಟ್ ಕಚ್ಚಾ ತೈಲದ ಬೆಲೆಗಳು ಈಗಿನ ಬೆಲೆಗೆ ಹೋಲಿಸಿದರೆ ಮುಂದಿನ ವರ್ಷದ ವೇಳೆಗೆ ಶೇ.30 ರಷ್ಟು ಹೆಚ್ಚಾಗಬಹುದು. ಜಾಗತಿಕ ಬೇಡಿಕೆ ಮತ್ತು ಪೂರೈಕೆಯು ಅಸಮತೋಲನಗೊಂಡಿದೆ ಎಂದು ಗೋಲ್ಡ್‌ಮನ್ ಸ್ಯಾಚ್ಸ್‌ನ ತೈಲ ವಿಶ್ಲೇಷಕರು ಹೇಳುತ್ತಾರೆ. ಈ ಸಮಯದಲ್ಲಿ ಕಚ್ಚಾ ಬೇಡಿಕೆಯು ಕೋವಿಡ್ ಪೂರ್ವದ ಮಟ್ಟವನ್ನು ತಲುಪಿದೆ. ಇದರಿಂದ ಮುಂದಿನ ವರ್ಷ ಕಚ್ಚಾತೈಲ ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ.

ಕಚ್ಚಾ ತೈಲ ಬೆಲೆಯ ಹೆಚ್ಚಳವು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಗೋಲ್ಡ್‌ಮನ್ ಸ್ಯಾಚ್ಸ್ ಹೇಳುವಂತೆ ಕಚ್ಚಾ ತೈಲ ಬೆಲೆಯಲ್ಲಿ ಶೇಕಡಾ 30 ರಷ್ಟು ಹೆಚ್ಚಳವಾಗಿಲಿದೆ. ಶೇ 30ರಷ್ಟು ಹೆಚ್ಚಳವಾದರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 150 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 140 ರೂ. ಆಗಲಿದೆ. ಪ್ರಸ್ತುತ, ರಾಜಧಾನಿ ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 107.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 96.97 ರೂ. ಆಗಿದೆ.

ಜಾಗತಿಕ ಕಚ್ಚಾ ಬೇಡಿಕೆಯು ದಿನಕ್ಕೆ 99 ಮಿಲಿಯನ್ ಬ್ಯಾರೆಲ್‌ಗಳನ್ನು ದಾಟಿದೆ ಎಂದು ಗೋಲ್ಡ್‌ಮನ್ ಸ್ಯಾಚ್ಸ್ ಅಂದಾಜಿಸಿದೆ. ಶೀಘ್ರದಲ್ಲೇ ಇದು ದಿನಕ್ಕೆ 100 ಮಿಲಿಯನ್ ಬ್ಯಾರೆಲ್‌ಗಳ ಪೂರ್ವ ಕೋವಿಡ್ ಮಟ್ಟವನ್ನು ದಾಟಬಹುದು. ಇದಕ್ಕೆ ಕಾರಣ ಏಷ್ಯಾದ ಬಹುತೇಕ ದೇಶಗಳು ಕೊರೋನಾ ಡೆಲ್ಟಾ ರೂಪಾಂತರದಿಂದ ಚೇತರಿಸಿಕೊಳ್ಳುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಪ್ರಕ್ರಿಯೆ ಮುಂದುವರೆದಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂ ಅಕ್ಟೋಬರ್ 27 ಬುಧವಾರದಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 35-35 ಪೈಸೆಗಳಷ್ಟು ಹೆಚ್ಚಿಸಿವೆ. ಈ ಏರಿಕೆಯೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.94 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 96.67 ರೂ ತಲುಪಿದೆ. ಅದೇ ಸಮಯದಲ್ಲಿ ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ 113.45 ರೂ ಮತ್ತು ಡೀಸೆಲ್ ಲೀಟರ್‌ಗೆ 104.75 ರೂ.ಇದೆ. ಹಾಗೂ ಬೆಂಗಳೂರಿನಲ್ಲಿ ಡಿಸೆಲ್ ಬೆಲೆ 102.98 ರೂ. ಮತ್ತು‌ ಪೆಟ್ರೋಲ್ ಬೆಲೆ 112.06 ರೂ. ಆಗಿದೆ.

ಅಡುಗೆ ಅನಿಲವೂ ದುಬಾರಿ!

ಮುಂದಿನ ದಿನಗಳಲ್ಲಿ ಅಡುಗೆ ಅನಿಲ ದರ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ. ಪ್ರಸ್ತುತ ತೈಲ ಕಂಪನಿಗಳು ಎಲ್‌ಪಿಜಿ ಪೂರ್ಣ ಪ್ರಮಾಣದ ದರ ಏರಿಕೆಯನ್ನು ತಡೆ ಹಿಡಿದಿದ್ದು, ಸರಕಾರದ ಅನುಮತಿಸಿದರೆ ನವೆಂಬರ್ 1ಕ್ಕೆ ಏರಿಕೆ ಪ್ರಕಟಿಸುವ ಸಾಧ್ಯತೆಯಿದೆ. ಈ ಏರಿಕೆಯೊಂದಿಗೆ ವರ್ಷದಲ್ಲಿ 5ನೇ ಬಾರಿ ಎಲ್‌ಪಿಜಿ ದರ ಹೆಚ್ಚಳವಾದಂತಾಗಲಿದೆ. ಕಳೆದ ಜುಲೈನಿಂದ ಗೃಹ ಬಳಕೆ ಸಿಲಿಂಡರ್‌ ದರ 90 ರೂ. ಹೆಚ್ಚಳವಾಗಿದ್ದು, 900 ರೂ. ದಾಟಿದೆ. ಸದ್ಯದಲ್ಲೇ 1,000ಗೆ ತಲುಪಿದರೆ ಅಚ್ಚರಿಯಿಲ್ಲ.

Tags: BJPCovid 19ಡೀಸೆಲ್ ದರಪೆಟ್ರೋಲ್ಬಿಜೆಪಿ
Previous Post

ಬಿಟ್ ಕಾಯಿನ್ ಕೇಸಲ್ಲಿ ದೊಡ್ಡವರ ಹೆಸರು ಕೇಳಿಬರುತ್ತಿದೆ, ಈ ಪ್ರಕರಣವನ್ನು ಮುಚ್ಚಿಹಾಕ್ತಾರೆ – ಡಿ.ಕೆ.ಶಿ

Next Post

ಜನರಿಗೆ ನೀರುಣಿಸದ ಬುಂದೇಲ್‌ಖಂಡ ಯೋಜನೆಯ ಅಸಲಿ ಕಥೆಯೇನು?

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025

CM Siddaramaiah: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ..

October 29, 2025
Next Post
ಜನರಿಗೆ ನೀರುಣಿಸದ ಬುಂದೇಲ್‌ಖಂಡ ಯೋಜನೆಯ ಅಸಲಿ ಕಥೆಯೇನು?

ಜನರಿಗೆ ನೀರುಣಿಸದ ಬುಂದೇಲ್‌ಖಂಡ ಯೋಜನೆಯ ಅಸಲಿ ಕಥೆಯೇನು?

Please login to join discussion

Recent News

Top Story

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

November 3, 2025
ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada