• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸ್ಥಳಾವಕಾಶದ ಕೊರತೆ: ಭೀಮಾ ಕೋರೆಗಾಂವ್ ವಿಚಾರಣೆ ಮುಂದೂಡಿದ ಆಯೋಗ

Shivakumar A by Shivakumar A
November 2, 2021
in ದೇಶ
0
ಸ್ಥಳಾವಕಾಶದ ಕೊರತೆ: ಭೀಮಾ ಕೋರೆಗಾಂವ್ ವಿಚಾರಣೆ ಮುಂದೂಡಿದ ಆಯೋಗ
Share on WhatsAppShare on FacebookShare on Telegram

ಜನವರಿ 2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ತನಿಖೆ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿದೆ. ವಿಚಾರಣೆ ನಡೆಸಲು ಸೂಕ್ತವಾದ ಸ್ಥಳಾವಕಾಶವನ್ನು ಮಹಾರಾಷ್ಟ್ರ ಸರ್ಕಾರ ನೀಡುವವರೆಗೆ ಪ್ರಕರಣದ ಕುರಿತ ಯಾವುದೇ ತನಿಖೆಯನ್ನು ಮುಂದುವರೆಸಲು ಸಾಧ್ಯವಿಲ್ಲ ಎಂದು ಆಯೋಗವು ಹೇಳಿದೆ. 

ADVERTISEMENT

ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಜೆ ಎನ್ ಪಟೇಲ್ ನೇತೃತ್ವದ ದ್ವಿಸದಸ್ಯ ಆಯೋಗವು, ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಕೋವಿಡ್ ಕಾರಣದಿಂದ ಕಳೆದ ವರ್ಷ ಮುಚ್ಚಲ್ಪಟ್ಟಿದ್ದ ತನಿಖೆಯು ಹದಿನಾಲ್ಕು ತಿಂಗಳ ನಂತರ ಆಗಸ್ಟ್ 2021ರಲ್ಲಿ ಆರಂಭವಾಗಿತ್ತು. ಈ ವೇಳೆ ಮುಂಬೈನ ರಾಜ್ಯ ಮಾಹಿತಿ ಆಯೋಗದ ಕಚೇರಿಯಲ್ಲಿ ವಿಚಾರಣೆ ನಡೆಸಲು ಸ್ಥಳ ನೀಡಲಾಗಿತ್ತು. ಈ ಕಚೇರಿಯು ಅತ್ಯಂತ ಇಕ್ಕಟ್ಟಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಪಾಲಿಸಲು ಸಾಧ್ಯವಾಗುತ್ತಿಲ್ಲ ಎಂದು ತನಿಖಾ ಆಯೋಗ ದೂರಿದೆ. 

ಅಕ್ಟೋಬರ್ 31ರಂದು ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಇತರ ಸರ್ಕರಿ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ, ಆಯೋಗದ ಕಾರ್ಯದರ್ಶಿಯಾಗಿರುವ ವಿ ವಿ ಪಳ್ನೀತ್ಕರ್ ಅವರು, ತನಿಖೆ ಮುಂದುವರೆಸಲು ಉತ್ತಮ ಕಚೇರಿಯನ್ನು ಶೀಘ್ರದಲ್ಲಿ ನೀಡುವಂತೆ ಕೋರಿದ್ದಾರೆ. 

“ಅಕ್ಟೋಬರ್ 28ರಂದು ನಡೆದ ಸಭೆಯಲ್ಲಿ, ತನಿಖಾ ಆಯೋಗವು ಎದುರಿಸುತ್ತಿರುವ ಸ್ಥಳಾವಕಾಶದ ಕೊರತೆಯನ್ನು ನೇರವಾಗಿ ಮುಖ್ಯಮಂತ್ರಿ ಕಾರ್ಯಲಯದೊಂದಿಗೆ ಚರ್ಚಿಸಲು ಆಯೋಗದ ಅಧ್ಯಕ್ಷರಾಗಿರುವ ಜಸ್ಟೀಸ್ ಪಟೇಲ್ ಅವರು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಲಹೆ ನೀಡಿದ್ದರು. ತುರ್ತಾಗಿ ಬೇರೆ ಸ್ಥಳವನ್ನು ಆಯೋಗಕ್ಕೆ ನೀಡುವಂತೆ ಹೇಳಿದ್ದರು. ಅಕ್ಟೋಬರ್ 29,2021ರ ಒಳಗೆ ಆಯೋಗಕ್ಕೆ ಯಾವುದೇ ಉತ್ತಮ ಕಚೇರಿ ನೀಡದಿದ್ದಲ್ಲಿ ಮುಂಬರುವ ವಿಚಾರಣೆಗಳನ್ನು ಆಯೋಗವು ಅಮಾನತಿನಲ್ಲಿಡುವುದು,” ಎಂದು ಪತ್ರದಲ್ಲಿ ಬರೆಯಲಾಗಿದೆ. 

ಆದರೆ, ಅಕ್ಟೋಬರ್ 31ರವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲ ಎಂದು ಆಯೋಗವು ಹೇಳಿದೆ. ಹೀಗಾಗಿ, ಮುಂದಿನ ವಿಚಾರಣೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿ ಇರಿಸಲಾಗಿದೆ. ಸರ್ಕಾರ ಆಯೋಗದ ಕಚೇರಿಯನ್ನು ಬೇರೆಡೆ ಸ್ಥಳಾಂತರಿಸುವವರೆಗೂ ತನಿಖೆ ಮುಂದುವರೆಯುವುದಿಲ್ಲ ಎಂದು ಆಯೋಗ ಹೇಳಿದೆ. 

ಜನವರಿ 1, 2018ರಲ್ಲಿ ಭೀಮಾ ಕೋರೆಗಾಂವ್  ವಿಜಯೋತ್ಸವ ಆಚರಿಸುವ ವೇಳೆ ಉಂಟಾದ ಹಿಂಸಾಚಾರದ ಕುರಿತು ಆಯೋಗವು ತನಿಖೆ ನಡೆಸುತ್ತಿದೆ. ವಿಜಯೋತ್ಸವ ನಡೆಯುವ  ಒಂದು ದಿನ ಮುನ್ನ ಎಲ್ಗರ್  ಪರಿಷದ್ ಸಮಾವೇಷದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದೇ ಹಿಂಸಾಚಾರಕ್ಕೆ ಕಾರಣವಾಯಿತು. ಎಲ್ಗರ್ ಪರಿಷದ್ ಒಂದು ಮಾವೋವಾದಿ ಬೆಂಬಲಿತ ಸಂಘಟನೆ ಎಂದು ಪುಣೆ ಪೊಲೀಸರು ಆರೋಪಿಸಿದ್ದರು. ಅಲ್ಲಿಂದ ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವರನ್ನು ಬಂಧಿಸಲಾಗಿದೆ. 

ತನಿಖಾ ವರದಿಯನ್ನು ಸಲ್ಲಿಸಲು ಸರ್ಕಾರವು ಆಯೋಗಕ್ಕೆ ನೀಡಿದ್ದ ಗಡುವನ್ನು ಹಲವು ಬಾರಿ ಮುಂದೂಡಿದ್ದರೂ, ಇನ್ನೂ ವರದಿ ಸಲ್ಲಿಕೆಯಾಗಿಲ್ಲ. 

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಭೀಮಾ ಕೋರೆಗಾಂವ್
Previous Post

ಉಪ ಚುನಾವಣೆ ಮತ ಎಣಿಕೆ ಆರಂಭ: ಮತದಾರ ತೀರ್ಪು ಯಾರಿಗೆ ವರ? ಯಾರಿಗೆ ಶಾಪ?

Next Post

ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದರೆ ಪ್ರಧಾನಿ ಮನೆ ಮುಂದೆ ಪ್ರತಿಭಟಿಸುತ್ತೇವೆ : ರೈತ ಮುಖಂಡ ಗುರ್ನಾಮ್ ಸಿಂಗ್ ಚದುನಿ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದರೆ ಪ್ರಧಾನಿ ಮನೆ ಮುಂದೆ ಪ್ರತಿಭಟಿಸುತ್ತೇವೆ : ರೈತ ಮುಖಂಡ ಗುರ್ನಾಮ್ ಸಿಂಗ್ ಚದುನಿ

ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದರೆ ಪ್ರಧಾನಿ ಮನೆ ಮುಂದೆ ಪ್ರತಿಭಟಿಸುತ್ತೇವೆ : ರೈತ ಮುಖಂಡ ಗುರ್ನಾಮ್ ಸಿಂಗ್ ಚದುನಿ

Please login to join discussion

Recent News

Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada