• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸೋನಿಯಾಗೆ ಟಕ್ಕರ್; ಹೊಸ ಪಕ್ಷ ಶುರು ಮಾಡಿದ ಅಮರೀಂದರ್ ಸಿಂಗ್ ಮುಂದಿನ ನಡೆಯೇನು?

ನಚಿಕೇತು by ನಚಿಕೇತು
November 6, 2021
in ದೇಶ, ರಾಜಕೀಯ
0
ಸೋನಿಯಾಗೆ ಟಕ್ಕರ್; ಹೊಸ ಪಕ್ಷ ಶುರು ಮಾಡಿದ ಅಮರೀಂದರ್ ಸಿಂಗ್ ಮುಂದಿನ ನಡೆಯೇನು?
Share on WhatsAppShare on FacebookShare on Telegram

ಪಂಜಾಬ್ ರಾಜಕೀಯದಲ್ಲಿ ಮಾಜಿ ಸಿಎಂ ಅಮರೀಂದರ್ ಸಿಂಗ್ ಹೊಸ ಮನ್ವಂತರ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದ ಕ್ಯಾಪ್ಟನ್ ಮುಂದಿನ ನಡೆಯ ಗೊಂದಲಗಳಿಗೆ ಕರೆಗೂ ತೆರೆ ಬಿದ್ದಿದೆ. ಕಾಂಗ್ರೆಸ್ಗೆ ಸೆಡ್ಡು ಹೊಡೆಯುವಂತೆ ಅಮರೀಂದರ್ ಸಿಂಗ್ ಲೋಕ ಕಾಂಗ್ರೆಸ್ ಎಂಬ ಹೊಸ ಪಕ್ಷ ಸ್ಥಾಪಿಸಿದ್ದಾರೆ.

ADVERTISEMENT

ಇತ್ತೀಚೆಗೆ ಪಂಜಾಬ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕೈ ಪಡೆಯ ವಿರುದ್ಧ ಅಮರಿಂದರ್ ಸಿಂಗ್ ಸಮರ ಸಾರಿದ್ರು. ಜೊತೆಗೆ ಕಾಂಗ್ರೆಸ್ ಪಕ್ಷ ತೊರೆದ ಮೇಲೆ ಬಿಜೆಪಿ ಸೇರ್ತಾರೆ ಎಂಬ ಊಹಾಪೋಹಗಳು ಸಹ ಕೇಳಿ ಬಂದಿದ್ದವು. ಆದ್ರೆ ಈಗ ಅಮರಿಂದರ್ ಸಿಂಗ್ ಲೋಕ ಕಾಂಗ್ರೆಸ್ ಎಂಬ ತಮ್ಮದೇ ಒಂದು ಪಕ್ಷ ಸ್ಥಾಪಿಸುವ ಮೂಲಕ ಎಲ್ಲಾ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಅಮರಿಂದರ್ ಸಿಂಗ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ತಡ, ಕೈ ಪಡೆಯ ವಿರುದ್ಧ ಸಿಂಗ್ ಸಿಡಿದೆದ್ದಿರು. ಇನ್ನೂ ಕಾಂಗ್ರೆಸ್ ತೊರೆಯುವುದಾಗಿ ಹೇಳಿಕೆ ನೀಡಿದ್ರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲಿ ಅಮಿತ್ ಶಾ, ಮೋದಿಯವರನ್ನು ಕೂಡ ಭೇಟಿ ಮಾಡಿದ್ರು. ಈ ಭೇಟಿಯಿಂದ ಅಮರಿಂದರ್ ಸಿಂಗ್ ಕಮಲಕ್ಕೆ ಸೇರ್ಪಡೆ ಆಗ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಗೆ ಸ್ವತಃ ಅಮರಿಂದರ್ ನಾನು ಕಾಂಗ್ರೆಸ್ ತೊರೆಯುವುದು ಮಾತ್ರ ಸತ್ಯ. ಆದ್ರೆ ಬಿಜೆಪಿ ಸೇರುತ್ತೇನೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟನೆ ನೀಡಿದ್ರು.

ಪಕ್ಷ ತೊರೆದು ಈಗ ಲೋಕ ಕಾಂಗ್ರೆಸ್ ಎಂಬ ಪಕ್ಷವನ್ನು ಸ್ಥಾಪಿಸಿದ್ದಾರೆ. ಪಕ್ಷ ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಅಧಿಕೃತ ಸದಸ್ಯತ್ವಕ್ಕೆ 7 ಪುಟಗಳ ರಾಜೀನಾಮೆ ಪತ್ರವನ್ನು ಸೋನಿಯಾಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನೂ ಸಿಂಗ್ ತಮ್ಮ ಹೊಸ ಪಕ್ಷದ ಬಗ್ಗೆ ಟ್ವಿಟರ್ ಪೋಸ್ಟ್‌ ಮಾಡಿದ್ದು, ಪಕ್ಷದ ನೋಂದಣಿಗೆ ಅನುಮೋದನೆಯೊಂದೇ ಭಾರತದ ಚುನಾವಣಾ ಆಯೋಗದಲ್ಲಿ ಬಾಕಿ ಉಳಿದಿದೆ. ಕೆಲವೇ ದಿನಗಳಲ್ಲಿ ಪಕ್ಷದ ಚಿಹ್ನೆಯನ್ನು ಅಧಿಕೃತಗೊಳಿಸುವುದಾಗಿ ತಿಳಿಸಿದ್ದಾರೆ.

‘ಲೋಕ’ದ ಮುಂದಿನ ನಡೆ ಏನು?

ನಮ್ಮ ಪಕ್ಷ ಸಮಸ್ಯೆ ಆಧಾರಿತ ಬೆಂಬಲ ನೀಡುತ್ತದೆ
3 ಹೊಸ ಕೃಷಿ ಕಾನೂನುಗಳನ್ನು ರದ್ದು ಮಾಡುತ್ತೇವೆ
ಬಿಜೆಪಿ ಜೊತೆ ಹೊಂದಾಣಿಕೆ ಮಾತಿನ ಬಗ್ಗೆ ನಾ ಹೇಳಿಲ್ಲ ಪಕ್ಷ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳುತ್ತದೆ ಅಷ್ಟೇ ಆದರೆ ಈ ಬಗ್ಗೆ ಬಿಜೆಪಿಯೊಂದಿಗೆ ಇನ್ನೂ ಮಾತನಾಡಿಲ್ಲ ನಮ್ಮ ಪಕ್ಷ ಸಮಸ್ಯೆ ಆಧಾರಿತ ಬೆಂಬಲ ನೀಡುತ್ತದೆ.

ಜೊತೆಗೆ 3 ಹೊಸ ಕೃಷಿ ಕಾನೂನುಗಳನ್ನು ರದ್ದಿನ ಬಗ್ಗೆ ಮಾತುಕತೆ ನಡೆಸುತ್ತೇವೆ. ನಮ್ಮ ಪಕ್ಷ ಬಿಜೆಪಿ ಜೊತೆ ಹೊಂದಾಣಿಕೆ ಮಾತಿನ ಬಗ್ಗೆ ನಾನು ಚರ್ಚೆ ಮಾಡಿಲ್ಲ. ಇನ್ನೂ ಪಕ್ಷ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳುತ್ತದೆ ಅಷ್ಟೇ. ಆದರೆ ಈ ಬಗ್ಗೆ ಇನ್ನೂ ಬಿಜೆಪಿ ಜೊತೆ ಮಾತಾನಾಡಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ತೊರೆದ ಕೂಡಲೇ ಹೊಸ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದ ಅಮರಿಂದರ್, ಈಗ ಕೈ ಪಡೆಗೆ ಠಕ್ಕರ್ ನೀಡಲು ಲೋಕ ಕಾಂಗ್ರೆಸ್ ಪಾರ್ಟಿಯನ್ನು ಘೋಷಣೆ ಮಾಡಿದ್ದಾರೆ. ಜೊತೆಗೆ ಸೀಟು ಹಂಚಿಕೆ ಬಗ್ಗೆ ಬಿಜೆಪಿ ಮಾತಾಡುವುದಾಗಿ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಲೋಕ ಕಾಂಗ್ರೆಸ್ ಪಕ್ಷ ಒಂದಾಗಲಿದ್ದು, ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಅಮರೀಂದರ್ ಸೇಡು ತೀರಿಸಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ.

Tags: Amarendar singhBJPCongress PartyCovid 19Sonia Gandhiಅಮರಿಂದರ್ ಸಿಂಗ್ನರೇಂದ್ರ ಮೋದಿಬಿಜೆಪಿ
Previous Post

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ

Next Post

ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! – AIIMS

Related Posts

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ
Top Story

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

by ಪ್ರತಿಧ್ವನಿ
June 9, 2026
0

ನವದೆಹಲಿ : ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಪಶ್ಚಿಮ ಬಂಗಾಳದ ಟಿಎಂಸಿ ಪಕ್ಷದಲ್ಲಿ ಬಂಡಾಯ ಸ್ಫೋಟವಾಗುತ್ತಿದೆ. ವಿಪಕ್ಷ ನಾಯಕನ ಆಯ್ಕೆಯ ವಿಚಾರದಲ್ಲಿ ಪಕ್ಷ ಹೋಳಾಗಿ ಬಂಡಾಯ...

Read moreDetails
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

June 9, 2026
ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

ಮಹಿಳೆಯರ ಕಣ್ಣೀರಿನ ಮೇಲೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಮೋದಿ ಸರ್ಕಾರ ಅಧಿಕಾರದ ಅಮಲಿನಲ್ಲಿದೆ : ಖರ್ಗೆ ವಾಗ್ದಾಳಿ

June 9, 2026
ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

ಡಿಸಿಎಂ ಪರಮೇಶ್ವರ್‌ಗೆ ಮತ್ತೊಂದು ಹೆಚ್ಚುವರಿ ಖಾತೆ..? ಮುಜರಾಯಿ ಇಲಾಖೆ ಹೊಣೆಗಾರಿಕೆ ಕುರಿತು ಹೊಸ ಚರ್ಚೆ..?

June 9, 2026
ವಿಶಾಖಪಟ್ಟಣಂ ಕಾರ್ಖಾನೆ ದುರಂತ ಕಾರಣ ಪತ್ತೆಗೆ ಸ್ವತಂತ್ರ ತನಿಖೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ವಿಶಾಖಪಟ್ಟಣಂ ಕಾರ್ಖಾನೆ ದುರಂತ ಕಾರಣ ಪತ್ತೆಗೆ ಸ್ವತಂತ್ರ ತನಿಖೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

June 9, 2026
Next Post
ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! – AIIMS

ದೀಪಾವಳಿ ಬಳಿಕ ಹಲವೆಡೆ ವಾಯುಮಾಲಿನ್ಯ ಹೆಚ್ಚಳ : ಕರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ! - AIIMS

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada