• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದಲಿತರು, ಹಿಂದುಳಿದವರು ಸಮಾಜವಾದಿ ಪಕ್ಷದಿಂದ ಏನನ್ನೂ ಸಹ ನಿರೀಕ್ಷಿಸಬಾರದು: ಮಾಯಾವತಿ

Any Mind by Any Mind
November 9, 2021
in ದೇಶ, ರಾಜಕೀಯ
0
ದಲಿತರು, ಹಿಂದುಳಿದವರು ಸಮಾಜವಾದಿ ಪಕ್ಷದಿಂದ ಏನನ್ನೂ ಸಹ ನಿರೀಕ್ಷಿಸಬಾರದು: ಮಾಯಾವತಿ
Share on WhatsAppShare on FacebookShare on Telegram

ಉತ್ತರ ಪ್ರದೇಶ ಚುನಾವಣೆಗೆ ಇನ್ನು ಕೆಲವೇ ಕೆಲವು ತಿಂಗಳುಗಳ ಕಾಲ ಬಾಕಿ ಇರುವ ಸಮಯದಲ್ಲಿ ರಾಜಕೀಯ ನಾಯಕರು ಆರೋಪ, ಪ್ರತ್ಯಾರೋಪಗಳ ಸುರಿಮಳೆಗೈಯುತ್ತಿದ್ದಾರೆ. ಇದೀಗ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಬಿಎಸ್‌ಪಿ ವರಿಷ್ಠೆ ಮಾಯಾವತಿ ಸಮಾಜವಾದಿ ಪಕ್ಷದ ವಿರುದ್ದ ಹರಿಹಾಯ್ದಿದ್ದಾರೆ.

ADVERTISEMENT

ಸಮಾಜವಾದಿ ಪಕ್ಷವು ದಲಿತರು ಮತ್ತು ಹಿಂದುಳಿದ ಜಾತಿಯಲ್ಲಿ ಹುಟ್ಟಿದ ಮಹಾನ್‌ ಪುರುಷರನ್ನ ಅವಹೇಳನ ಮಾಡುತ್ತಿದೆ ಎಂದು ಸೋಮವಾರ ಬಿಎಸ್‌ಪಿ ವರಿಷ್ಠೆ ಮಾಯಾವತಿ ಆರೋಪಿಸಿದ್ದಾರೆ. ಈ ಸಮುದಾಯಗಳು ಅಖಿಲೇಶ್‌ ಯಾದವ ನೇತೃತ್ವದ ಎಸ್‌ಪಿ ಪಕ್ಷದಿಂದ ಏನನ್ನೂ ಸಹ ನಿರೀಕ್ಷಿಸಬಾರದು ಎಂದು ಹೇಳಿದ್ದಾರೆ.

ಜಾತಿಯ ವಿರುದ್ಧದ ದ್ವೇಷದ ಕಾರಣಕ್ಕೆ ರಾಜ್ಯದಲ್ಲಿರುವ ಅನೇಕ ಸಂಘ-ಸಂಸ್ಥೆಗಳು ಮತ್ತು ಯೋಜನೆಗಳ ಹೆಸರನ್ನು ಬದಲಾಯಿಸಲಾಗಿದೆ ಎಂದು ಮಾಯಾವತಿ ಕಿಡಿಕಾರಿದ್ದಾರೆ.

ದಲಿತರು ಹಾಗೂ ಹಿಂದುಳಿದ ಜನಾಂಗದಲ್ಲಿ ಹುಟ್ಟಿದ ಮಹಾನ್‌ ಸಂತರು, ಗುರುಗಳು, ಮಹಾನ್‌ ಪುರುಷರ ಬಗ್ಗೆ ಎಸ್ಪಿ ಮೊದಲಿನಿಂದಲೂ ಅವಹೇಳನ ಮಾಡುತ್ತಾ ಬಂದಿದೆ. ಇದಕ್ಕೆ ಉತ್ತಮ ಉದಾಹರಣೆ ನಮ್ಮ(ಬಿಎಸ್‌ಪಿ) ಸರ್ಕಾರ ಅಧಿಕಾರದಲ್ಲಿದ್ದಾಗ  ಫೈಜಾಬಾದ್‌ ಜಿಲ್ಲೆಯನ್ನು ಅಂಬೇಡ್ಕರ್‌ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಿದ್ದು. ಆದರೆ, ಸಮಾಜವಾದಿ ಪಕ್ಷದವರು ಭದೋಹಿಯನ್ನು ಹೊಸ ಜಿಲ್ಲೆಯನ್ನಾಗಿ ಮಾಡುವುದನ್ನು ವಿರೋಧಿಸಿದರು ಮತ್ತು ಆ ಜಿಲ್ಲೆಯ ಹೆಸರನ್ನು ಸಹ ಎಸ್‌ಪಿ ಬದಲಾಯಿಸಿದೆ ಎಂದು ಟ್ವೀಟ್‌ ಮಾಡುವ ಮೂಲಕ ಕಿಡಿಕಾರಿದ್ದಾರೆ.

1. सपा शुरू से ही दलितों व पिछड़ों में जन्मे महान संतों, गुरुओं व महापुरुषों की तिरस्कारी रही है जिसका खास उदाहरण फैजाबाद जिले में से बनाया गया नया अम्बेडकर नगर जिला है। भदोही को नया जिला संत रविदास नगर बनाने का भी इन्होंने विरोध किया तथा इसका नाम तक भी सपा सरकार ने बदल दिया।

— Mayawati (@Mayawati) November 8, 2021

ಉತ್ತರ ಪ್ರದೇಶದಲ್ಲಿ ಹಲವು ಸಂಸ್ಥೆ ಮತ್ತು ಯೋಜನೆಗಳ ಹೆಸರುಗಳನ್ನು ಜಾತಿಯ ಮೇಲಿನ ದ್ವೇಷದಿಂದ ಬದಲಾಯಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಆ ಪಕ್ಷದ ಕಾರ್ಯಕರ್ತರು ಜನರ ಬಳಿ ಮತಕ್ಕಾಗಿ ಎಷ್ಟೇ ನಾಟಕವಾಡಿದರೂ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಇತ್ತೀಚಿಗಷ್ಟೇ ಬಿಎಸ್‌ಪಿಯ ಆರು ಜನ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಭಾನುವಾರ ಅಂಬೇಡ್ಕರ್‌ ನಗರ ಜಿಲ್ಲೆಯಲ್ಲಿ ಎಸ್‌ಪಿ ನಡೆಸಿದ ʻಜನಾದೇಶ ಮಹಾರ್‍ಯಾಲಿʼಯಲ್ಲಿ ಬಿಎಸ್‌ಪಿ ಪಕ್ಷದ ಹಿರಿಯ ನಾಯಕರಾದ ಲಾಲ್‌ಜಿ ವರ್ಮಾ ಮತ್ತು ರಾಮಚಲ್‌ ರಾಜ್‌ಭರ್‌ ಅವರು ಬಿಎಸ್‌ಪಿ ತೊರೆದು ಎಸ್‌ಪಿ ಸೇರ್ಪಡೆಯಾದರು.

ವರ್ಮಾ ಉತ್ತರ ಪ್ರದೇಶ ಬಿಎಸ್‌ಪಿ ಶಾಸಕಾಂಗ ಪಕ್ಷದ ನಾಯಕರಾಗಿದ್ದರು ಮತ್ತು ರಾಜ್‌ಭರ್‌ ಉತ್ತರ ಪ್ರದೇಶ ಬಿಎಸ್‌ಪಿ ರಾಜ್ಯಧ್ಯಕ್ಷರಾಗಿದ್ದರು. ಅವರಿಬ್ಬರು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದಿಂದ ಉಚ್ಛಾಟಿಸುವ ಮೊದಲು ಬಿಎಸ್‌ಪಿ ತೊರೆದು ಎಸ್‌ಪಿ ಸೇರಿದ್ದಾರೆ.

Tags: BJPBSPMayawatisamajawadiPartyUttarPradeshನರೇಂದ್ರ ಮೋದಿಬಿಜೆಪಿ
Previous Post

ವಾಸ್ತವಗಳಿಗೆ ಮುಖಾಮುಖಿಯಾಗಿಸುವ ಜೈ ಭೀಮ್

Next Post

2020ರಲ್ಲಿ ಆತ್ಮಹತ್ಯೆಗೆ ಶರಣಾದ 11,716 ಉದ್ಯಮಿಗಳು ; ಕರ್ನಾಟಕದಲ್ಲಿ ಅತೀ ಹೆಚ್ಚು!

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
2020ರಲ್ಲಿ ಆತ್ಮಹತ್ಯೆಗೆ ಶರಣಾದ 11,716 ಉದ್ಯಮಿಗಳು ; ಕರ್ನಾಟಕದಲ್ಲಿ ಅತೀ ಹೆಚ್ಚು!

2020ರಲ್ಲಿ ಆತ್ಮಹತ್ಯೆಗೆ ಶರಣಾದ 11,716 ಉದ್ಯಮಿಗಳು ; ಕರ್ನಾಟಕದಲ್ಲಿ ಅತೀ ಹೆಚ್ಚು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada