• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಭಗ್ನ; ಬೇಸರ ವ್ಯಕ್ತಪಡಿಸಿದ ಪ್ರಧಾನಿ ಸ್ಕಾಟ್ ಮಾರಿಸನ್

Shivakumar A by Shivakumar A
November 15, 2021
in ವಿದೇಶ
0
ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಭಗ್ನ; ಬೇಸರ ವ್ಯಕ್ತಪಡಿಸಿದ ಪ್ರಧಾನಿ ಸ್ಕಾಟ್ ಮಾರಿಸನ್
Share on WhatsAppShare on FacebookShare on Telegram

ಭಾರತವು ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತ ಸರ್ಕಾರವು ಆಸ್ಟ್ರೇಲಿಯಾ ಸರ್ಕಾರಕ್ಕೆ ಮಹಾತ್ಮ ಗಾಂಧಿಯ ಕಂಚಿನ ಪ್ರತಿಮೆಯನ್ನು ಕೊಡುಗೆಯಾಗಿ ನೀಡಿತ್ತು. ಪ್ರತಿಮೆ ಉದ್ಘಾಟನೆಗೊಂಡ ಕೆಲವೇ ಗಂಟೆಗಳ ಬಳಿಕ ಕಿಡಿಗೇಡಿಗಳು ಪ್ರತಿಮೆಯನ್ನು ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ. 

ADVERTISEMENT

ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿರುವ Australian Indian Community Centre, Rowvilleನಲ್ಲಿ ಶುಕ್ರವಾರದಂದು ಪ್ರಧಾನಿ ಸ್ಕಾಟ್ ಮಾರಿಸನ್ ಹಾಗೂ ಸಿಜಿಐ (Consul General of India) ರಾಜ್ ಕುಮಾರ್ ಅವರು ಕಂಚಿನ ಪ್ರತಿಮೆಯನ್ನು ಉದ್ಘಾಟಿಸಿದ್ದರು. 

ಇದಾದ ಕೆಲವೇ ಗಂಟೆಗಳ ಬಳಿಕ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಆಸ್ಟ್ರೇಲಿಯಾದ ಪ್ರಧಾನಿಯೇ ಉದ್ಘಾಟಿಸಿದ್ದ ಪ್ರತಿಮೆ ಭಗ್ನಗೊಳಿಸಿರುವುದು ಸರ್ಕಾರಕ್ಕೆ ಭಾರಿ ಮುಜುಗರ ಉಂಟುಮಾಡಿದೆ. 

“ಈ ಮಟ್ಟದ ಅಗೌರವ ತೋರಿಸಿರುವುದು ಅವಮಾನಕರ ಹಾಗೂ ಬೇಸರ ಮೂಡಿಸುವಂತಹ ವಿಚಾರ. ದೇಶದಲ್ಲಿರುವ ಸಾಂಸ್ಕೃತಿಕ ಸ್ಮಾರಕಗಳನ್ನು ಧ್ವಂಸಗೊಳಿಸುವುದನ್ನು ಸಹಿಸಲಾಗುವುದಿಲ್ಲ. ಆಸ್ಟ್ರೇಲಿಯಾದಲ್ಲಿ ವಿವಿಧ ಸಂಸ್ಕೃತಿಯ ಹಾಗೂ ದೇಶಗಳ ಜನರು ಅನ್ಯೋನ್ಯತೆಯಿಂದ ಬದುಕುತ್ತಿದ್ದಾರೆ. ಇದನ್ನು ಯಾರೇ ಮಾಡಿದ್ದರೂ, ಅವರು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಅಗೌರವ ತೋರಿದ್ದಾರೆ,” ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ಹೇಳಿದ್ದಾರೆ. 

ಘಟನೆಯ ಕುರಿತು ಮಾಹಿತಿ ನೀಡಿರುವ ವಿಕ್ಟೋರಿಯಾ ಪೊಲೀಸ್, ಅತ್ಯಂತ ಬಲಶಾಲಿಯಾದ ಯಂತ್ರೋಪಕರಣಗಳನ್ನು ಬಳಸಿ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲು ಯತ್ನಿಸಲಾಗಿದೆ. ಶುಕ್ರವಾರ ಸಂಜೆ 5.30ರಿಂದ ಶನಿವಾರ ಸಂಜೆ 5.30ರ ಒಳಗಾಗಿ ಈ ಘಟನೆ ನಡೆದಿದೆ. ನೋಕ್ಸ್ ಅಪರಾಧ ತನಿಖಾ ದಳವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಯಾರಾದರೂ ಸಾಕ್ಷಿಗಳಿದ್ದಲ್ಲಿ ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು, ಎಂದು ವಿನಂತಿಸಿಕೊಂಡಿದ್ದಾರೆ. 

ಗಾಂಧಿ ಪ್ರತಿಮೆ ಭಗ್ನಗೊಳಿಸಿರುವ ಕುರಿತು ತೀವ್ರವಾದ ಬೇಸರ ವ್ಯಕ್ತಪಡಿಸಿರುವ ಆಸ್ಟ್ರೇಲಿಯಾದ ಭಾರತೀಯ ಸಮುದಾಯ, ಇದೊಂದು ಕೀಳು ಮಟ್ಟದ ಕೃತ್ಯ ಎಂದು ಜರೆದಿದೆ. 

“ಸಂಪೂರ್ಣ ಸಮುದಾಯಕ್ಕೆ ಆಘಾತ ಹಾಗೂ ಬೇಸರವಾಗಿದೆ. ಪ್ರತಿಮೆಯನ್ನು ಧ್ವಂಸಗೊಳಿಸುವಂತಹ ಕೀಳುಮಟ್ಟದ ಕೃತ್ಯವನ್ನು ಏಕೆ ಮಾಡುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ,” ಎಂದು ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್ ಆಫ್ ವಿಕ್ಟೋರಿಯಾದ ಅಧ್ಯಕ್ಷ ಸೂರ್ಯ ಪ್ರಕಾಶ್ ಸೋನಿ ಅವರು ಹೇಳಿದ್ದಾರೆ. 

ಆಸ್ಟ್ರೇಲಿಯಾದಲ್ಲಿ 3,00,000ಕ್ಕೂ ಅಧಿಕ ಭಾರತೀಯರು ನೆಲೆಸಿದ್ದು ವಿಕ್ಟೋರಿಯಾದಲ್ಲಿ ಇಂತಹ ಘಟನೆ ನಡೆಯಬಹುದೆಂದು ಊಹಿಸಿಯೂ ಇರಲಿಲ್ಲ. ಪ್ರತಿಮೆಯ ತಲೆಯನ್ನು ಒಡೆದು ಹಾಕಲಾಗಿದೆ, ಎಂದು ವಾಸನ್ ಶ್ರೀನಿವಾಸನ್ ಎಂಬವರು ಹೇಳಿದ್ದಾರೆ. 

Tags: AustraliaMahathmaGandhijiscott morrisonVandalisingಮಹಾತ್ಮ ಗಾಂಧೀಜಿ
Previous Post

ರಾಜ್ಯದ ಕೆಳಮನೆ-ಮೇಲ್ಮನೆ ಎರಡರಲ್ಲೂ ಮಹಿಳಾ ಶಾಸಕರ ಸಂಖ್ಯೆ ನಗಣ್ಯ

Next Post

ಬೆಂಗಳೂರು: ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಮತ್ತೆ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

Related Posts

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
0

ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ...

Read moreDetails
US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

January 11, 2026
ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

January 10, 2026
ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

January 6, 2026
Next Post
ಬೆಂಗಳೂರು: ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಮತ್ತೆ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

ಬೆಂಗಳೂರು: ತೆರಿಗೆ ಪಾವತಿಸದ ಹಿನ್ನಲೆಯಲ್ಲಿ ಮತ್ತೆ ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ ಅಧಿಕಾರಿಗಳು

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada