• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

BDA ಮೇಲೆ ACB ದಾಳಿ : ಕೋಟಿ ಕೋಟಿ ಮೌಲ್ಯದ ದಾಖಲಾತಿ ವಶ!

ಕರ್ಣ by ಕರ್ಣ
November 20, 2021
in ಕರ್ನಾಟಕ
0
BDA ಮೇಲೆ ACB ದಾಳಿ : ಕೋಟಿ ಕೋಟಿ ಮೌಲ್ಯದ ದಾಖಲಾತಿ ವಶ!
Share on WhatsAppShare on FacebookShare on Telegram

ಕಳೆದ ಎರಡು ದಿನಗಳಿಂದ ಭ್ರಷ್ಟಾರ ನಿಗ್ರಹ ದಳ (ACB) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದ ಮೇಲೆ ದಾಳಿ ನಡೆಸಿ ಭ್ರಷ್ಟಾಚಾರ ಸಂಬಂಧ ದಾಖಲೆ ಪರಿಶೀಲನೆ ನಡೆಸುತ್ತಿದೆ. ಸುದೀರ್ಘವಾದ ಪರಿಶೀಲನೆ ಬಳಿಕ ACB ಮಾಧ್ಯಮಕ್ಕೆ ಸುದೀರ್ಘವಾದ ವಿವರಣೆ ಪತ್ರವನ್ನು ಬಿಡುಗಡೆ ಮಾಡಿದೆ.

ADVERTISEMENT

BDA ಮೇಲೆ ACB ದಾಳಿ ವೇಳೆ ಏನೆಲ್ಲಾ ವಶಪಡಿಸಿಕೊಳ್ಳಲಾಗಿದೆ.!?

·         ಬಿ.ಡಿ.ಎ ಅರ್ಕಾವತಿ ಬಡಾವಣೆ, ಕೆಂಪೇಗೌಡ ಬಡಾವಣೆ ಹಾಗೂ ವಿಶ್ವೇಶ್ವರಯ್ಯ ಬಡಾವಣೆಗಳಲ್ಲಿ  ಸುಮಾರು ರೂ.75 ಕೋಟಿ ಬೆಲೆ ಬಾಳುವ 6 ನಿವೇಶನಗಳನ್ನು ಸುಳ್ಳು ಮಾಹಿತಿ ನೀಡಿ ಖೊಟ್ಟಿ  ದಾಖಲಾತಿಗಳನ್ನು ಸೃಷ್ಟಿಸಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಶಾಮಿಲಾಗಿ ಬೆಲೆ ಬಾಳುವ  ನಿವೇಶನಗಳನ್ನು ಅನರ್ಹ ವ್ಯಕ್ತಿಯೊಬ್ಬರಿಗೆ ಸಿಗುವಂತೆ ಮಾಡಲಾಗಿರುತ್ತದೆ. ಈ ಬಗ್ಗೆ ಮೂಲ  ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

·         ಕೆಂಗೇರಿ ಹೋಬಳಿ ಉಳ್ಳಾಲ ಗ್ರಾಮದಲ್ಲಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ ವ್ಯಕ್ತಿ  ಮತ್ತು ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಸದರಿ ವ್ಯಕ್ತಿಯಿಂದ ಯಾವುದೇ ಜಮೀನನ್ನ  ಸ್ವಾದೀನ ಪಡಿಸಿಕೊಳ್ಳದೆ ಇದ್ದರು ಸಹ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಬದಲಿ ನಿವೇಶನವಾಗಿ  1800 ಚ.ಅ ಅಳತೆಯ ಸುಮಾರು ರೂ.1.5 ಕೋಟಿ ಮೌಲ್ಯದ ನಿವೇಶನವನ್ನು ಅಕ್ರಮವಾಗಿ  ಮಂಜೂರು ಮಾಡಿರುತ್ತಾರೆ. ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ. 

·         ಕೆಂಗೇರಿ ಸ್ಯಾಟಿಲೈಟ್‌ ಟೌನ್ ಬಳಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ ವ್ಯಕ್ತಿ ಮತ್ತು  ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಖೊಟ್ಟಿ ದಾಖಲಾತಿಗಳನ್ನು ಹಾಜರುಪಡಿಸಿ 1000 ಚ.ಅ  ಅಳತೆಯ ಸುಮಾರು ರೂ.80 ಲಕ್ಷ ಮೌಲ್ಯದ ನಿವೇಶನವನ್ನು ಅಕ್ರಮವಾಗಿ ಮಂಜೂರು  ಮಾಡಿರುತ್ತಾರೆ. ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ. 

·         ಬೆಂಗಳೂರು ನಗರ ಚಂದ್ರಲೇಔಟ್ ಪ್ರದೇಶದಲ್ಲಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ  ವ್ಯಕ್ತಿ ಮತ್ತು ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಖೊಟ್ಟಿ ದಾಖಲಾತಿಗಳನ್ನು ಹಾಜರುಪಡಿಸಿ  ರೂ.5 ಕೋಟಿ ಮೌಲ್ಯದ 2400 ಚ.ಅ ನಿವೇಶನವನ್ನು ಅಕ್ರಮವಾಗಿ ಮಂಜೂರು ಮಾಡಿರುತ್ತಾರೆ.  ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ. 

·         ನಾಡ ಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲ ನಿವೇಶನ ಫಲಾನುಭವಿಯವರ ಮೂಲ  ದಾಖಲಾತಿಗಳನ್ನು ತಿದ್ದುಪಡಿಗೊಳಿಸಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ ವ್ಯಕ್ತಿ ಮತ್ತು  ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಖೊಟ್ಟಿ ದಾಖಲಾತಿಗಳನ್ನು ಹಾಜರುಪಡಿಸಿ ರೂ.30 ಲಕ್ಷ ಬೆಲೆ ಬಾಳುವ ನಿವೇಶನವನ್ನು ಅಕ್ರಮವಾಗಿ ಅನರ್ಹ ವ್ಯಕ್ತಿಗೆ  ಮಂಜೂರು ಮಾಡಿರುತ್ತಾರೆ. ಬೆಂಗಳೂರು ನಗರ ಚಂದ್ರಲೇಔಟ್ ಪ್ರದೇಶದಲ್ಲಿ ಬಿ.ಡಿ.ಎ ಅಧಿಕಾರಿ ಮತ್ತು ಸಿಬ್ಬಂದಿಗಳು ಖಾಸಗಿ  ವ್ಯಕ್ತಿ ಮತ್ತು ಮದ್ಯವರ್ತಿಗಳೊಂದಿಗೆ ಶಾಮೀಲಾಗಿ ಖೊಟ್ಟಿ ದಾಖಲಾತಿಗಳನ್ನು ಹಾಜರುಪಡಿಸಿ  ರೂ.5 ಕೋಟಿ ಮೌಲ್ಯದ 2400 ಚ.ಅ ನಿವೇಶನವನ್ನು ಅಕ್ರಮವಾಗಿ ಮಂಜೂರು ಮಾಡಿರುತ್ತಾರೆ.  ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ. 

·         ಕೆಲವೊಂದು ಪ್ರಕರಣಗಳಲ್ಲಿ ಒಂದೇ ನಿವೇಶನವನ್ನು ಒಂದಕಿಂತ ಹೆಚ್ಚಿನ ವ್ಯಕ್ತಿಗಳಿಗೆ ನೋಂದಣಿ   ಮಾಡಿಕೊಟ್ಟು ಫಲಾನುಭವಿಗಳು ಅನವಶ್ಯಕವಾಗಿ ನ್ಯಾಯಾಲಯದ ಮಟ್ಟಿಲು ಏರುವಂತೆ  ಮಾಡಿರುತ್ತಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕಾಗಿರುತ್ತದೆ. 

·         ಬಿ.ಡಿ.ಎ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಮೂಲ ಫಲಾನುಭವಿಗೆ ಮಂಜೂರಾದ ರೂ.52 ಲಕ್ಷ  ಮೌಲ್ಯದ ನಿವೇಶನವನ್ನು ಅನರ್ಹ ವ್ಯಕ್ತಿಗೆ ನೀಡಲಾಗಿದೆ. ಈ ಬಗ್ಗೆ ಮೂಲ ದಾಖಲಾತಿಗಳನ್ನು  ವಶ ಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ. 

·         ಅರ್ಕಾವತಿ ಬಡಾವಣೆಯಲ್ಲಿ ಫಲಾನುಭವಿಯೊಬ್ಬರಿಗೆ ನಿವೇಶನ ಮಂಜೂರಾಗಿದ್ದರು, ಸಹ  ಯಾವುದೇ ಕಾರಣ ಇಲ್ಲದೆ ದುರುದ್ದೇಶದಿಂದ ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನವನ್ನು  ಮಂಜೂರು ಮಾಡಲಾಗಿರುತ್ತದೆ. ಈ ಬಗ್ಗೆ ಮೂಲ ದಾಖಲಾಗಳನ್ನು ವಶ ಪಡಿಸಿಕೊಂಡು ತನಿಖೆ  ಮುಂದುವರೆಸಲಾಗಿದೆ.

·         ಬಿ.ಡಿ.ಎ ಭೂ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ಬೀಮನಕುಪ್ಪೆ ಗ್ರಾಮ, ನಾಡಪ್ರಭು ಕೆಂಪೇಗೌಡ  ಬಡಾವಣೆ ಹಾಗೂ ಡಾ.ಕೆ.ಶಿವರಾಮಕಾರಂತ್ ಬಡಾವಣೆ ಮೊದಲಾದ ಕಡೆಗಳಲ್ಲಿ ಬಿ.ಡಿ.ಎ  ಅಧಿಕಾರಿ ಮತ್ತು ಸಿಬ್ಬಂದಿಗಳು ಮಧ್ಯವರ್ತಿಗಳೊಂದಿಗೆ ಶ್ಯಾಮಿಲಾಗಿ ಹಲವಾರು ಅಕ್ರಮಗಳನ್ನು  ನಡೆಸಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದ್ದು ಈ ಬಗ್ಗೆ ದೊಡ್ಡ ಸಂಖ್ಯೆಯಲ್ಲಿ ದಾಖಲಾತಿಗಳನ್ನು  ಮತ್ತು ನೋಂದಣಿ  ವಹಿಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ  ನಡೆಸಲಾಗುವುದು.

·         ಬಿ.ಡಿ.ಎ ಭೂ ಸ್ವಾದೀನಕ್ಕೆ ಸಂಬಂಧಪಟ್ಟಂತೆ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು  ಮಾಲಿಕತ್ವ ಹೊಂದಿರುವಂತೆ ಅಕ್ರಮ ದಾಖಲಾತಿಗಳನ್ನು ಸೃಷ್ಟಿಸಿ ಬಿ.ಡಿ.ಎ ಅಧಿಕಾರಿ ಮತ್ತು  ಸಿಬ್ಬಂದಿಗಳು ಖಾಸಗಿ ವ್ಯಕ್ತಿಗಳೊಂದಿಗೆ ಶಾಮೀಲಾಗಿ ಕೊಟ್ಯಂತರ ರೂ ಮೌಲ್ಯದ ಪರಿಹಾರ  ಧನವನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲಾಗಿದೆ. 

·         ಬಿ.ಡಿ.ಎ ಅಂಜನಾಪುರ ಬಡಾವಣೆಯಲ್ಲಿ ಫಲಾನುಭವಿಯವರಿಗೆ ಸೇರಿದ ನಿವೇಶನ ಒಂದು  ಒತ್ತುವರಿಯಾಗಿದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವ ಬದಲಾಗಿ ಸದರಿಯವರಿಗೆ  ಬೇರೆ ಬಡಾವಣೆಯಲ್ಲಿ ನಿವೇಶನವನ್ನು ನೀಡಿ ಸದರಿ ನಿವೇಶನವನ್ನು ಸಹ ಇತರೆ ಮೂರನೇ ವ್ಯಕ್ತಿಗೆ  ಮಂಜೂರು ಮಾಡಿ ಅಕ್ರಮ ಮಾಡಲಾಗಿದೆ. ಈ ಬಗ್ಗೆ ಮೂಲ ದಾಖಲಾತಿಗಳನ್ನು ವಶ  ಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

·         ಅರ್ಕಾವತಿ ಬಡಾವಣೆ ಮತ್ತು ಇನ್ನು ಕೆಲವು ಬಡಾವಣೆಗಳಲ್ಲಿ, ಕೆಲವು ಅರ್ಜಿದಾರರು ನಿವೇಶನ  ಮಂಜೂರಾತಿ ಪಡೆದು ನಿಗಧಿತ ಸಮಯದಲ್ಲಿ ಹಣ ಸಂದಾಯ ಮಾಡಿದ್ದರು ಸಹ ಅವರಿಗೆ ಲೀಸ್  ಕಂ ಸೇಲ್ ಡೀಡ್ (LCSD) ಗಳನ್ನು ಮಾಡಿ ನಿಗಧಿತ ಅವಧಿಯೊಳಗೆ ಮನೆಗಳನ್ನು  ಕಟ್ಟಿಕೊಂಡಿದ್ದರು ಸಹ ಸದರಿಯವರಿಗೆ ಅಬ್ಸ್ ಲ್ಯೂಟ್ ಸೇಲ್ ಡೀಡ್ (ASD)ಗಳನ್ನು ಮಾಡಿ ಕೊಡದೆ ದುರುದ್ದೇಶದಿಂದ ಅನಗತ್ಯ ವಿಳಂಬ ನೀತಿಯನ್ನು ಅನುಸರಿಸಿ ತೊಂದರೆ ಕೊಡಲಾಗಿದೆ.  ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. 

·         ಇದೇ ರೀತಿ ನಿಗಧಿತ ಅವಧಿಯೊಳಗೆ ಬಿ.ಡಿ.ಎ ನಿಗಧಿ ಪಡಿಸಿರುವ ಹಣವನ್ನು ಸಂದಾಯ ಮಾಡಿದ  ಅರ್ಜಿದಾರರಿಗೆ ನಿವೇಶನ ಹಂಚಿಕೆ ಪತ್ರ ನೀಡದೆ ಅನವ್ಯಶಕ ವಿಳಂಭ ನೀತಿ ಅನುಸರಿಸಲಾಗಿದ್ದು ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. 

ಈರೀತಿಯಲ್ಲಿ 2 ದಿನಗಳ ಬಿ.ಡಿ.ಎ ಕಛೇರಿಗಳ ದಾಳಿ ಅವಧಿಯಲ್ಲಿ ಹಲವಾರು  ಅಕ್ರಮಗಳು ಕಂಡು ಬಂದಿದ್ದು ಈ ಬಗ್ಗೆ ಅಕ್ರಮವೆಸಗಿರುವ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು  ಮಧ್ಯವರ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಎಸಿಬಿ ತಿಳಿಸಿದೆ. ಇನ್ನು ನಾಳೆ ಭಾನುವಾರವಾಗಿರುವ ಹಿನ್ನೆಲೆ ಸರ್ಕಾರಿ ಕಚೇರಿಗಳೆಲ್ಲಾ ರಜೆ ಇರುವುದರಿಂದಾಗಿ ಸೋಮವಾರ ಈ ಬಗ್ಗೆಯ ವಿಸ್ತ್ರವಾದ ತನಿಖೆಯನ್ನು ಎಸಿಬಿ ಕೈಗೊಳ್ಳಲಿದೆ.

20-11-2020.pdf-FDownload
Tags: ACBBDABJPCovid 19ಬಿಜೆಪಿಭ್ರಷ್ಟಾಚಾರ ನಿಗ್ರಹದಳ
Previous Post

ತಾಲಿಬಾನಿಗೆ ಪ್ರಧಾನಿ ಮೋದಿ ನೀಡಿದ 4 ಸಲಹೆಗಳೇನು? ಯಾಕೆ?

Next Post

ಬಿಜೆಪಿಯ 25 MLC ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಿಂದಿಯಲ್ಲೇ ಎಲ್ಲಾ, ಕನ್ನಡ ಎಲ್ಲೂ ಇಲ್ಲ!

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Next Post
ಬಿಜೆಪಿಯ 25 MLC ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಿಂದಿಯಲ್ಲೇ ಎಲ್ಲಾ, ಕನ್ನಡ ಎಲ್ಲೂ ಇಲ್ಲ!

ಬಿಜೆಪಿಯ 25 MLC ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಿಂದಿಯಲ್ಲೇ ಎಲ್ಲಾ, ಕನ್ನಡ ಎಲ್ಲೂ ಇಲ್ಲ!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada